Homeಮುಖಪುಟಪಟಾಕಿ ಪರಿಣಾಮ : ದೆಹಲಿಯಲ್ಲಿ ತೀವ್ರ ಕಳಪೆಗಿಳಿದ ವಾಯು ಗುಣಮಟ್ಟ

ಪಟಾಕಿ ಪರಿಣಾಮ : ದೆಹಲಿಯಲ್ಲಿ ತೀವ್ರ ಕಳಪೆಗಿಳಿದ ವಾಯು ಗುಣಮಟ್ಟ

- Advertisement -
- Advertisement -

ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಸಮಯದ ನಿಯಮಗಳನ್ನು ಉಲ್ಲಂಘಿಸಿ ದೀಪಾವಳಿ ಪ್ರಯುಕ್ತ ಜನರು ಪಟಾಕಿ ಸಿಡಿಸಿದ ಪರಿಣಾಮ ರಾಷ್ಟ್ರ ರಾಜಧಾನಿ ದೆಹಲಿಯ ಗಾಳಿಯ ಗುಣಮಟ್ಟ ತೀವ್ರವಾಗಿ ಹದೆಗೆಟ್ಟಿದೆ.

ಸೋಮವಾರ (ನಿನ್ನೆ) ರಾತ್ರಿಯಿಡೀ ಜನರು ಪಟಾಕಿಗಳನ್ನು ಸಿಡಿಸಿದ ಪರಿಣಾಮ, ಮಂಗಳವಾರ (ಇಂದು) ಬೆಳಿಗ್ಗೆ ರಾಜಧಾನಿ ನಗರದಾದ್ಯಂತ ಮೋಡ ಮುಸುಕಿದ ವಾತಾವರಣ ಸೃಷ್ಟಿಯಾಗಿದೆ. ಗಾಳಿಯ ಗುಣಮಟ್ಟ ಸೂಚ್ಯಂಕ (ಎಕ್ಯೂಐ) ಬೆಳಿಗ್ಗೆ 7 ಗಂಟೆಯ ಸುಮಾರಿಗೆ 451 ತಲುಪಿತ್ತು. ಇದು ರಾಷ್ಟ್ರೀಯ ಸರಾಸರಿಗಿಂತ 1.8 ಪಟ್ಟು ಹೆಚ್ಚು ಮತ್ತು ತೀವ್ರ ವಾಯಮಾಲಿನ್ಯವನ್ನು ಸೂಚಿಸುತ್ತದೆ.

ದೀಪಾವಳಿ ರಾತ್ರಿ (ಸೋಮವಾರ ರಾತ್ರಿ) ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) ‘ತೀವ್ರ ಕಳಪೆ’ ಮಟ್ಟಕ್ಕೆ ಇಳಿದಿತ್ತು. ದೆಹಲಿಯ ಸ್ಯಾಟ್‌ಲೈಟ್ ನಗರಗಳಾದ ನೋಯ್ಡಾ ಮತ್ತು ಗುರ್‌ಗಾಂವ್‌ನಲ್ಲೂ ಪರಿಸ್ಥಿತಿ ತೀವ್ರವಾಗಿ ಹದೆಗೆಟ್ಟಿದೆ. ಮಂಗಳವಾರ ಬೆಳಿಗ್ಗೆ ಈ ನಗರಗಳಲ್ಲಿ ಕ್ರಮವಾಗಿ 407 ಮತ್ತು 402 ಎಕ್ಯೂಐ ದಾಖಲಾಗಿದೆ.

ದೆಹಲಿಯ ಬಹುತೇಕ ವಾಯು ಗುಣಮಟ್ಟ ಮಾಪನ ಕೇಂದ್ರಗಳಲ್ಲಿ ಗಾಳಿಯ ಗುಣಮಟ್ಟ ‘ರೆಡ್‌ಝೋನ್‌’ ತಲುಪಿರುವುದಾಗಿ ದಾಖಲಾಗಿದೆ. ವಝೀರ್‌ಪುರ (435), ದ್ವಾರಕಾ (422), ಅಶೋಕ್ ವಿಹಾರ್ (445), ಮತ್ತು ಆನಂದ್ ವಿಹಾರ್‌ (440)ಗಳಲ್ಲಿ ಗಾಳಿಯು ತೀವ್ರ ಕಳಪೆ ಮಟ್ಟಕ್ಕೆ ಇಳಿದಿದೆ. ಇದು ವಾಯು ಮಾಲಿನ್ಯದ ಗಂಭೀರ ಸ್ಥಿತಿಯನ್ನು ಸೂಚಿಸುತ್ತದೆ ಎಂದು ವರದಿಗಳು ವಿವರಿಸಿವೆ.

0 ಯಿಂದ 50ರ ನಡುವಿನ ವಾಯುಗುಟ್ಟವನ್ನು ‘ಉತ್ತಮ’, 51 ರಿಂದ 100 ‘ತೃಪ್ತಿದಾಯಕ’, 101 ರಿಂದ 200 ‘ಮಧ್ಯಮ’, 201 ರಿಂದ 300 ‘ಕಳಪೆ’, 301 ರಿಂದ 400 ‘ಅತೀ ಕಳಪೆ’ ಮತ್ತು 401 ರಿಂದ 500 ‘ತೀವ್ರ ಕಳಪೆ’ ಅಥವಾ ಗಂಭೀರ ಪರಿಸ್ಥಿತಿ ಎಂದು ಪರಿಗಣಿಸಲಾಗುತ್ತದೆ.

2020ರಿಂದ ದೆಹಲಿಯಲ್ಲಿ ದೀಪಾವಳಿಯಂದು ಪಟಾಕಿಗಳನ್ನು ಸಿಡಿಸುವುದನ್ನು ನಿಷೇಧಿಸಲಾಗಿದೆ.

ಈ ವರ್ಷ ಸುಪ್ರೀಂ ಕೋರ್ಟ್ ಅಕ್ಟೋಬರ್ 18 ರಿಂದ 20 ರವರೆಗೆ ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಹಸಿರು ಪಟಾಕಿಗಳನ್ನು ಸಿಡಿಸಲು ಅನುಮತಿ ನೀಡಿತ್ತು. ಬೆಳಿಗ್ಗೆ 6 ರಿಂದ ಬೆಳಿಗ್ಗೆ 7 ರವರೆಗೆ ಮತ್ತು ರಾತ್ರಿ 8 ರಿಂದ ರಾತ್ರಿ 10 ರವರೆಗೆ ಎರಡು ಸಮಯಗಳಲ್ಲಿ ಮಾತ್ರ ಪಟಾಕಿ ಸಿಡಿಸಲು ಅನುಮತಿಸಿತ್ತು. ಆದರೆ, ಜನರು ನಿಯಮ ಮೀರಿ ನಿಗದಿ ಸಮಯಕ್ಕಿಂತ ಮೊದಲು ಮತ್ತು ನಂತರ ಪಟಾಕಿಗಳು ಸಿಡಿಸಿದ್ದಾರೆ ಎನ್ನಲಾಗಿದೆ.

ಪ್ರತಿಕೂಲ ಹವಾಮಾನ ಪರಿಸ್ಥಿತಿ ಇರುವಾಗ ಹಸಿರು ಪಟಾಕಿಗಳನ್ನು ಸಿಡಿಸುವುದು ಕೂಡ ಸಮಂಜಸವಲ್ಲ. ಏಕೆಂದರೆ, ಅದೇನು ಕಡಿಮೆ ವಿಷಕಾರಿಯಲ್ಲ ಎಂದು ತಜ್ಞರು ಎಚ್ಚರಿಸಿದ್ದರು.

ದೀಪಾವಳಿ ರಾತ್ರಿ ದೆಹಲಿ ಅಗ್ನಿಶಾಮಕ ಸೇವೆಗಳಿಗೆ 269 ತುರ್ತು ಕರೆಗಳು ಬಂದಿವೆ ಎಂದು ಪಿಟಿಐ ವರದಿ ಮಾಡಿದೆ. ಆದಾಗ್ಯೂ, ಜೀವಹಾನಿ ಅಥವಾ ದೊಡ್ಡ ಮಟ್ಟದ ಗಾಯಗಳು ಸೇರಿದಂತೆ ಯಾವುದೇ ಪ್ರಮುಖ ಅವಘಡಗಳು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.

ಕಳೆದ ವಾರ ಗಾಳಿಯ ಗುಣಮಟ್ಟ ಕ್ಷೀಣಿಸುತ್ತಿದ್ದಾಗ ವಾಯು ಗುಣಮಟ್ಟ ನಿರ್ವಹಣಾ ಆಯೋಗ (ಸಿಎಕ್ಯೂಎಂ) ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್ (ಜಿಆರ್‌ಎಪಿ) ನ ಎರಡನೇ ಹಂತವನ್ನು ಜಾರಿಗೊಳಿಸಿತ್ತು. ಧೂಳು ನಿಯಂತ್ರಣವನ್ನು ತೀವ್ರಗೊಳಿಸುವುದು. ಸಾರ್ವಜನಿಕ ಸಾರಿಗೆ ಸೇವೆಗಳ ವಿಸ್ತರಣೆ ಮತ್ತು ಡೀಸೆಲ್ ಜನರೇಟರ್ ಸೆಟ್‌ಗಳ ಮೇಲಿನ ನಿರ್ಬಂಧಗಳು ಜಿಆರ್‌ಪಿಎ ಎರಡನೇ ಹಂತದಲ್ಲಿ ಸೇರಿವೆ.

ದೆಹಲಿ-ಎನ್‌ಸಿಆರ್‌ನ ಸ್ಥಳೀಯಾಡಳಿತ ಈಗಾಗಲೇ ಪ್ರತಿದಿನ ಯಂತ್ರಗಳ ಮೂಲಕ ಗುಡಿಸುವುದು ಮತ್ತು ರಸ್ತೆಗಳ ಮೇಲೆ ನೀರು ಚಿಮುಕಿಸುವುದನ್ನ ಪ್ರಾರಂಭಿಸಿವೆ.

ಬಲವಾದ ಗಾಳಿ ಬೀಸದ ಕಾರಣ ನಗರದಲ್ಲಿ ಹೊಗೆಯ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 31–33 ಡಿಗ್ರಿ ಮತ್ತು 20–22 ಡಿಗ್ರಿಗಳ ನಡುವೆ ಉಳಿಯುವ ಸಾಧ್ಯತೆಯಿದೆ. ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 1–3 ಡಿಗ್ರಿಗಳಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಆದರೆ ಗರಿಷ್ಠ ತಾಪಮಾನವು ಋತುಮಾನದ ಸರಾಸರಿಗೆ ಹತ್ತಿರದಲ್ಲಿದೆ.

ಬಿಹಾರ ಮಹಾಮೈತ್ರಿಯಲ್ಲಿ ಅಸಮಾಧಾನ : ಚುನಾವಣಾ ಕಣದಿಂದ ಹಿಂದೆ ಸರಿದ ಜೆಎಂಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...