Homeಅಂತರಾಷ್ಟ್ರೀಯಕಾಗದಕ್ಕೆ ಸೀಮಿತವಾದ ಕದನ ವಿರಾಮ : ಗಾಝಾ ಮೇಲೆ ಅಕ್ರಮಣ ಮುಂದುವರಿಸಿದ ಇಸ್ರೇಲ್; ನೂರಾರು ಪ್ಯಾಲೆಸ್ತೀನಿಯರ...

ಕಾಗದಕ್ಕೆ ಸೀಮಿತವಾದ ಕದನ ವಿರಾಮ : ಗಾಝಾ ಮೇಲೆ ಅಕ್ರಮಣ ಮುಂದುವರಿಸಿದ ಇಸ್ರೇಲ್; ನೂರಾರು ಪ್ಯಾಲೆಸ್ತೀನಿಯರ ಹತ್ಯೆ

- Advertisement -
- Advertisement -

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತನ್ನ ಬೆನ್ನನ್ನು ತಾನೇ ತಟ್ಟಿಕೊಂಡ, ಅರಬ್ ದೇಶದವರೂ ಸೇರಿದಂತೆ ಜಾಗತಿಕ ನಾಯಕರು ಟ್ರಂಪ್ ಅವರನ್ನು ‘ಶಾಂತಿಯ ರಾಯಭಾರಿ’ಯಾಗಿಸಿದ ಗಾಝಾ ಕದನ ವಿರಾಮ ಒಪ್ಪಂದಕ್ಕೆ ವಾರದೊಳಗೆ ಇಸ್ರೇಲ್ ಎಳ್ಳು ನೀರು ಬಿಟ್ಟಿದೆ.

ಅರ್ಥಾತ್, ಹಮಾಸ್ ಮತ್ತು ಇಸ್ರೇಲ್ ನಡುವಿನ ‘ಗಾಝಾ ಶಾಂತಿ ಒಪ್ಪಂದ’ ಕೇವಲ ಕಾಗದಕ್ಕೆ ಸೀಮಿತವಾಗಿದೆ. ಗಾಝಾದಲ್ಲಿ ಅಮಾಯಕರ ನರಮೇಧವನ್ನು ಇಸ್ರೇಲ್ ರಾಜಾರೋಷವಾಗಿ ಮುಂದುವರಿಸಿದೆ.

ಅಕ್ಟೋಬರ್ 9ರಂದು ಇಸ್ರೇಲ್-ಹಮಾಸ್ ಗಾಝಾ ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ಟ್ರಂಪ್ ಘೋಷಿಸಿದ್ದರು. ಅಂದಿನಿಂದ ಇಂದಿನವರೆಗೆ (ಅ.21) ಕನಿಷ್ಠ 97 ರಿಂದ 100 ಪ್ಯಾಲೆಸ್ತೀನಿಯರನ್ನು ಇಸ್ರೇಲ್ ಹತ್ಯೆ ಮಾಡಿದೆ. ಸಾವೀಗೀಡಾದವರ ಸಂಖ್ಯೆ ಇನ್ನೂ ಹೆಚ್ಚಿರುವ ಸಾಧ್ಯತೆ ಇದೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ.

ಇಸ್ರೇಲ್ ಕದನ ವಿರಾಮ ಒಪ್ಪಂದ ಮುರಿದು ಅಮಾಯಕರ ಹತ್ಯೆ ಮಾಡುತ್ತಿದ್ದರೂ, ಅಮೆರಿಕ ಹಮಾಸ್‌ನತ್ತ ಕೈ ತೋರಿಸುತ್ತಿದೆ. “ಹಮಾಸ್‌ ಅನ್ನು ನಿರ್ಣಾಮ ಮಾಡುತ್ತೇವೆ, ನರಕ ತೋರಿಸುತ್ತೇವೆ” ಎಂದು ಟ್ರಂಪ್ ಪುನರುಚ್ಚರಿಸಿದ್ದಾರೆ.

ಕದನ ವಿರಾಮ ಒಪ್ಪಂದದ ಮೊದಲ ಹಂತವಾಗಿ ಹಮಾಸ್ ಜೀವಂತ ಇಸ್ರೇಲಿ ಒತ್ತೆಯಾಳುಗಳನ್ನು ಹಸ್ತಾಂತರಿಸಿದೆ. ಇದಕ್ಕೆ ಪ್ರತಿಯಾಗಿ 2 ಸಾವಿರ ಪ್ಯಾಲೆಸ್ತೀನಿಯರನ್ನು ಇಸ್ರೇಲ್ ಬಿಡುಗಡೆ ಮಾಡಬೇಕಿತ್ತು.

ವರದಿಗಳ ಪ್ರಕಾರ, ಇಸ್ರೇಲ್ ಸುಮಾರು 1, 950ರಷ್ಟು ಬಂಧಿತ ಪ್ಯಾಲೆಸ್ತೀನಿಯರನ್ನು ಬಿಡುಗಡೆ ಮಾಡಿದೆ. ಆದರೆ, ಅವರಲ್ಲಿ ಕೆಲವರನ್ನು ಬೇರೆ ಬೇರೆ ದೇಶಗಳಲ್ಲಿ ಕರೆದೊಯ್ದು ಬಿಡುವ ಮೂಲಕ ಅಮಾನವೀಯ ಕೃತ್ಯವೆಸಗಿದ ಆರೋಪವಿದೆ.

ಹಮಾಸ್ ಬಿಡುಗಡೆ ಮಾಡಿದ ಒತ್ತೆಯಾಳುಗಳು ಆರೋಗ್ಯವಂತರಾಗಿದ್ದರೆ, ಇಸ್ರೇಲ್ ಬಿಡುಗಡೆ ಮಾಡಿದ ಪ್ಯಾಲೆಸ್ತೀನಿಯರ ಪರಿಸ್ಥಿತಿ ಶೋಚಣೀಯವಾಗಿದೆ. ಇಸ್ರೇಲಿ ಬಂಧಿಖಾನೆಗಳಲ್ಲಿ ಅವರು ತೀವ್ರ ಹಿಂಸೆಗೆ ಒಳಗಾಗಿರುವುದನ್ನು ಅವರ ದೇಹದ ಸ್ಥಿತಿ ತೋರಿಸುತ್ತಿದೆ ಎಂದು ಹಲವಾರು ವರದಿಗಳು ಹೇಳಿವೆ.

ಹಮಾಸ್ 28 ಮೃತ ಒತ್ತೆಯಾಳುಗಳ ಪೈಕಿ, ಬಹುತೇಕರ ದೇಹಗಳನ್ನು ಇಸ್ರೇಲ್‌ಗೆ ಹಸ್ತಾಂತರಿಸಿದೆ. ಈ ನಡುವೆ ಹಮಾಸ್ ಮೃತದೇಹ ಹಸ್ತಾಂತರಿಸಲು ವಿಳಂಬ ಮಾಡುತ್ತಿದೆ ಎಂದು ಇಸ್ರೇಲ್ ಆರೋಪಿಸಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಹಮಾಸ್, ಇಸ್ರೇಲ್ ಇಡೀ ಗಾಝಾ ಪಟ್ಟಿಯನ್ನು ನಾಶ ಮಾಡಿರುವ ಪರಿಣಾಮ ಮೃತದೇಹಗಳ ಹಸ್ತಾಂತರಕ್ಕೆ ಅಡೆತಡೆಗಳು ಉಂಟಾಗಿವೆ ಎಂದಿದೆ.

ಇನ್ನು, ಇಸ್ರೇಲ್ ಕದನ ವಿರಾಮ ಮುರಿದು ಈಗಾಗಲೇ ದಾಳಿ ಆರಂಭಿಸಿರುವ ಹಿನ್ನೆಲೆ, ಎಲ್ಲಾ ಮೃತದೇಹಗಳನ್ನು ಹಸ್ತಾಂತರಿಸಿದರೆ ಅಮೆರಿಕ ಮತ್ತು ಇಸ್ರೇಲ್ ಸೇರಿಕೊಂಡು ಮಾತು ಬದಲಿಸುವ ಆತಂಕವನ್ನು ಹಮಾಸ್ ವ್ಯಕ್ತಪಡಿಸಿದೆ. ಇವೆಲ್ಲದರ ಪರಿಣಾಮ ಗಾಝಾದ ಅಮಾಯಕರ ನಾಗರಿಕರು ನರಳುವಂತಾಗಿದೆ.

ಇಸ್ರೇಲ್-ಹಮಾಸ್ ನಡುವಿನ ಗಾಝಾ ಕದನ ವಿರಾಮ ಒಪ್ಪಂದವನ್ನು ಮತ್ತೆ ಹಳಿಗೆ ತರಲು ಅಮೆರಿಕ ಪ್ರಯತ್ನಿಸುತ್ತಿದೆ ಎಂದು ವರದಿಗಳು ಹೇಳಿವೆ.

ಈ ನಡುವೆ ಸೋಮವಾರ ಪೂರ್ವ ಗಾಝಾ ನಗರದ ತುಫಾ ಸಮೀಪದ ಅಲ್-ಶಾಫ್ ಪ್ರದೇಶದಲ್ಲಿ ಎರಡು ಪ್ರತ್ಯೇಕ ದಾಳಿಗಳಲ್ಲಿ ನಾಲ್ವರು ಪ್ಯಾಲೆಸ್ತೀನಿಯರನ್ನು ಇಸ್ರೇಲ್ ಹತ್ಯೆ ಮಾಡಿದೆ. ಎರಡೂ ಬಾರಿಯೂ ಅಮಾಯಕರ ಜನರು ತಮ್ಮ ಮನೆಗಳನ್ನು ಪರಿಶೀಲಿಸಲು ವಾಪಾಸ್ ಬಂದಾಗ ಇಸ್ರೇಲ್ ಗುಂಡಿನ ದಾಳಿ ಮಾಡಿದೆ ಎಂದು ಗಾಝಾದ ನಾಗರಿಕ ರಕ್ಷಣಾ ಸಂಸ್ಥೆ ತಿಳಿಸಿದೆ.

ಹಳದಿ ಗಡಿ ರೇಖೆ ಅಥವಾ ಯೆಲ್ಲೋ ಲೇನ್ ದಾಟಿ ತುಫಾಹ್‌ಗೆ ಹೊಂದಿಕೊಂಡಿರುವ ಶುಜಾಯೆಯಾ ಸಮೀಪ ಸೈನಿಕರನ್ನು ಸಮೀಪಿಸಿದ ಉಗ್ರಗಾಮಿಗಳ ಮೇಲೆ ಗುಂಡು ಹಾರಿಸಿರುವುದಾಗಿ ಇಸ್ರೇಲ್ ಸಮರ್ಥಿಸಿಕೊಂಡಿದೆ.

ಅಕ್ಟೋಬರ್ 4ರಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡ ನಕ್ಷೆಯಲ್ಲಿ ಸೂಚಿಸಲಾದ ಹಳದಿ ರೇಖೆಯು, ಇಸ್ರೇಲಿ ಪಡೆಗಳು ಹಿಂದೆ ಸರಿದು ಹಮಾಸ್ ಜೊತೆಗಿನ ಕದನ ವಿರಾಮ ಒಪ್ಪಂದದ ಅಡಿಯಲ್ಲಿ ನೆಲೆಗೊಂಡಿರುವ ಗಡಿಯಾಗಿದೆ.

ಗಾಝಾ ನಗರದ ನಿವಾಸಿಗಳು ಈ ಹಳದಿ ಗಡಿ ರೇಖೆಯ ಬಗ್ಗೆ ಗೊಂದಲ ವ್ಯಕ್ತಪಡಿಸಿದ್ದಾರೆ. “ಇಲ್ಲಿ ಕಣ್ಣಿಗೆ ಗೋಚರಿಸುವ ಯಾವುದೇ ಗಡಿ ರೇಖೆ ಗುರುತುಗಳಿಲ್ಲ. ಇಡೀ ಪ್ರದೇಶ ಹಾಳಾಗಿದೆ. ಹೀಗಿರುವಾಗ ಗಡಿರೇಖೆ ಎಲ್ಲಿದೆ ಎಂದು ನಮಗೆ ಗೊತ್ತಿಲ್ಲ” ಗಾಝಾ ನಗರದ ಪೂರ್ವದಲ್ಲಿರುವ ತುಫಾದಲ್ಲಿ ವಾಸಿಸುವ 50 ವರ್ಷದ ಸಮೀರ್ ಹೇಳಿದ್ದಾರೆ ಎಂದು ಅಲ್‌-ಜಝೀರಾ ವರದಿ ವಿವರಿಸಿದೆ.

ತೈಲ ಆಮದು: ರಷ್ಯಾದಿಂದ ತೈಲ ಖರೀದಿ ಮುಂದುವರಿಸಿದರೆ ‘ಭಾರಿ ಸುಂಕ’ ಭಾರತಕ್ಕೆ ಟ್ರಂಪ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...