Homeಮುಖಪುಟಹಿಂದಿ ವಿದ್ವಾಂಸೆ ಫ್ರಾನ್ಸೆಸ್ಕಾ ಓರ್ಸಿನಿ ಭಾರತ ಪ್ರವೇಶಿಸದಂತೆ ವಿಮಾನ ನಿಲ್ದಾಣದಲ್ಲಿ ತಡೆ: ವರದಿ

ಹಿಂದಿ ವಿದ್ವಾಂಸೆ ಫ್ರಾನ್ಸೆಸ್ಕಾ ಓರ್ಸಿನಿ ಭಾರತ ಪ್ರವೇಶಿಸದಂತೆ ವಿಮಾನ ನಿಲ್ದಾಣದಲ್ಲಿ ತಡೆ: ವರದಿ

- Advertisement -
- Advertisement -

ಲಂಡನ್‌ನ ಸ್ಕೂಲ್ ಆಫ್ ಓರಿಯೆಂಟಲ್ ಮತ್ತು ಆಫ್ರಿಕನ್ ಸ್ಟಡೀಸ್‌ನ (ಎಸ್‌ಒಎಎಸ್‌) ವಿಶ್ವಪ್ರಸಿದ್ಧ ಹಿಂದಿ ವಿದ್ವಾಂಸೆ ಮತ್ತು ಪ್ರಾಧ್ಯಾಪಕಿ ಫ್ರಾನ್ಸೆಸ್ಕಾ ಓರ್ಸಿನಿ ಅವರನ್ನು, ಐದು ವರ್ಷಗಳ ಮಾನ್ಯ ವೀಸಾ ಹೊಂದಿದ್ದರೂ ಭಾರತಕ್ಕೆ ಪ್ರವೇಶಿಸದಂತೆ ಸೋಮವಾರ (ಅ.20) ತಡೆಯಲಾಗಿದೆ ಎಂದು ವರದಿಗಳು ಹೇಳಿವೆ.

ಭಾರತ ಪ್ರವೇಶದಂತೆ ತಡೆಯಲು ಯಾವುದೇ ಕಾರಣವನ್ನು ತಿಳಿಸಿಲ್ಲ ಎಂದು ಓರ್ಸಿನಿ ಹೇಳಿದ್ದಾರೆ.

“ಲಂಡನ್ ವಿಶ್ವವಿದ್ಯಾಲಯದ ಎಸ್‌ಒಎಎಸ್‌ನಲ್ಲಿ ಹಿಂದಿ ವಿದ್ವಾಂಸೆಯಾಗಿರುವ ಪ್ರೊಫೆಸರ್ ಫ್ರಾನ್ಸೆಸ್ಕಾ ಓರ್ಸಿನಿ ಅವರನ್ನು 5 ವರ್ಷಗಳ ಮಾನ್ಯ ಇ-ವೀಸಾ ಇದ್ದರೂ ಇಂದು ರಾತ್ರಿ ಭಾರತ ಪ್ರವೇಶಿಸದಂತೆ ತಡೆಯಲಾಗಿದೆ ಎಂದು ನಾನು ದೃಢೀಕರಿಸಬಲ್ಲೆ. ಅವರು ಹಾಂಗ್ ಕಾಂಗ್‌ನಿಂದ ದೆಹಲಿಗೆ ಆಗಮಿಸಿದ್ದರು. ಈ ವೇಳೆ ಅವರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ತಡೆಯಲಾಗಿದೆ ಎಂದು ಹಿರಿಯ ಪತ್ರಕರ್ತ ಮತ್ತು ದಿ ವೈರ್‌ನ ಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

“ನನ್ನನ್ನು ಗಡಿಪಾರು ಮಾಡಲಾಗುತ್ತಿದೆ, ನನಗೆ ಗೊತ್ತಿರುವುದು ಇಷ್ಟೆ” ಎಂದು ಓರ್ಸಿನಿ ಹೇಳಿರುವುದಾಗಿ ‘ದಿ ವೈರ್’ ವರದಿ ಮಾಡಿದೆ.

ಪ್ರಸ್ತುತ ಎಸ್‌ಒಎಎಸ್‌ನ ಭಾಷೆ, ಸಂಸ್ಕೃತಿ ಮತ್ತು ಭಾಷಾಶಾಸ್ತ್ರ ಸಂಸ್ಥೆಯ ಹಿಂದಿ ಮತ್ತು ದಕ್ಷಿಣ ಏಷ್ಯಾ ಸಾಹಿತ್ಯದ ಗೌರವ ಪ್ರಾಧ್ಯಾಪಕರಾಗಿರುವ ಓರ್ಸಿನಿ, ನವದೆಹಲಿಯಲ್ಲಿ ಸೆಂಟ್ರಲ್ ಇನ್‌ಸ್ಟಿಟ್ಯೂಟ್ ಆಫ್ ಹಿಂದಿ ಮತ್ತು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡಿದ್ದಾರೆ. ಓರ್ಸಿನಿ ಅವರು ಲಂಡನ್ ವಿಶ್ವವಿದ್ಯಾಲಯದ ಭಾಗವಾಗಿರುವ ಎಸ್‌ಒಎಸ್‌ನಲ್ಲಿ ತಮ್ಮ ಪಿಎಚ್‌ಡಿ ಪೂರ್ಣಗೊಳಿಸಿದ್ದಾರೆ.

‘ಈಸ್ಟ್ ಆಫ್ ದೆಹಲಿ: ಬಹುಭಾಷಾ ಸಾಹಿತ್ಯ ಸಂಸ್ಕೃತಿ ಮತ್ತು ವಿಶ್ವ ಸಾಹಿತ್ಯ’, ‘ಪ್ರಿಂಟ್ ಅಂಡ್ ಪ್ಲೆಷರ್: ವಸಾಹತುಶಾಹಿ ಉತ್ತರ ಭಾರತದಲ್ಲಿ ಜನಪ್ರಿಯ ಸಾಹಿತ್ಯ ಮತ್ತು ಮನರಂಜನಾ ಕಾದಂಬರಿಗಳು ಮತ್ತು ‘ದಿ ಹಿಂದಿ ಪಬ್ಲಿಕ್ ಸ್ಪಿಯರ್ 1920-1940: ರಾಷ್ಟ್ರೀಯತೆಯ ಯುಗದಲ್ಲಿ ಭಾಷೆ ಮತ್ತು ಸಾಹಿತ್ಯ ಓರ್ಸಿನಿ ಅವರ ಪ್ರಮುಖ ಕೃತಿಗಳಾಗಿವೆ.

“ಪ್ರೊಫೆಸರ್ ಫ್ರಾನ್ಸೆಸ್ಕಾ ಓರ್ಸಿನಿ ಭಾರತೀಯ ಸಾಹಿತ್ಯದ ಮಹಾನ್ ವಿದ್ವಾಂಸರಾಗಿದ್ದು, ಅವರ ಕೃತಿಗಳು ನಮ್ಮ ಸ್ವಂತ ಸಾಂಸ್ಕೃತಿಕ ಪರಂಪರೆಯ ಬಗ್ಗೆ ನಮ್ಮ ತಿಳುವಳಿಕೆಯನ್ನು ಸಮೃದ್ಧವಾಗಿ ಬೆಳಗಿಸಿದೆ. ಯಾವುದೇ ಕಾರಣವಿಲ್ಲದೆ ಅವರನ್ನು ಗಡಿಪಾರು ಮಾಡುವುದು ಅಸುರಕ್ಷಿತ, ಸಂಶಯಗ್ರಸ್ತ ಮತ್ತು ಮೂರ್ಖತನದ ಸರ್ಕಾರದ ಲಕ್ಷಣವಾಗಿದೆ” ಎಂದು ಲೇಖಕ ರಾಮಚಂದ್ರ ಗುಹಾ ಅವರು ಎಕ್ಸ್ ಪೋಸ್ಟ್‌ನಲ್ಲಿ ಹೇಳಿದ್ದಾರೆ.

“ಎಂತಹ ನಾಚಿಕೆಗೇಡಿನ ವಿಷಯ! ಓರ್ಸಿನಿ ಹಿಂದಿ/ಹಿಂದೂಸ್ತಾನಿ ಭಾಷೆಯ ಪ್ರಸಿದ್ಧ ವಿದ್ವಾಂಸರು; ಹಿಂದಿ ಬೆಲ್ಟ್-ಹಿಂದುತ್ವವಾದಿಗಳಿಗೆ ಒರ್ಸಿನಿಯವರ ಸಿದ್ಧಾಂತಗಳು ಮತ್ತು ಬರವಣಿಗೆಗಳು ತುಂಬಾ ಸಂಕೀರ್ಣವಾಗಿವೆಯೇ?” ಶಿಕ್ಷಣ ತಜ್ಞೆ ಅರ್ಪಿತಾ ದಾಸ್ ಪ್ರಶ್ನಿಸಿದ್ದಾರೆ.

ನಿಜಾಮಾಬಾದ್ ‘ಎನ್‌ಕೌಂಟರ್’ ಕುರಿತು ನ್ಯಾಯಾಂಗ ತನಿಖೆಗೆ ಮಾನವ ಹಕ್ಕುಗಳ ವೇದಿಕೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...