Homeಮುಖಪುಟಹಿಂದಿ ವಿದ್ವಾಂಸೆ ಫ್ರಾನ್ಸೆಸ್ಕಾ ಓರ್ಸಿನಿ ಭಾರತ ಪ್ರವೇಶಿಸದಂತೆ ವಿಮಾನ ನಿಲ್ದಾಣದಲ್ಲಿ ತಡೆ: ವರದಿ

ಹಿಂದಿ ವಿದ್ವಾಂಸೆ ಫ್ರಾನ್ಸೆಸ್ಕಾ ಓರ್ಸಿನಿ ಭಾರತ ಪ್ರವೇಶಿಸದಂತೆ ವಿಮಾನ ನಿಲ್ದಾಣದಲ್ಲಿ ತಡೆ: ವರದಿ

- Advertisement -
- Advertisement -

ಲಂಡನ್‌ನ ಸ್ಕೂಲ್ ಆಫ್ ಓರಿಯೆಂಟಲ್ ಮತ್ತು ಆಫ್ರಿಕನ್ ಸ್ಟಡೀಸ್‌ನ (ಎಸ್‌ಒಎಎಸ್‌) ವಿಶ್ವಪ್ರಸಿದ್ಧ ಹಿಂದಿ ವಿದ್ವಾಂಸೆ ಮತ್ತು ಪ್ರಾಧ್ಯಾಪಕಿ ಫ್ರಾನ್ಸೆಸ್ಕಾ ಓರ್ಸಿನಿ ಅವರನ್ನು, ಐದು ವರ್ಷಗಳ ಮಾನ್ಯ ವೀಸಾ ಹೊಂದಿದ್ದರೂ ಭಾರತಕ್ಕೆ ಪ್ರವೇಶಿಸದಂತೆ ಸೋಮವಾರ (ಅ.20) ತಡೆಯಲಾಗಿದೆ ಎಂದು ವರದಿಗಳು ಹೇಳಿವೆ.

ಭಾರತ ಪ್ರವೇಶದಂತೆ ತಡೆಯಲು ಯಾವುದೇ ಕಾರಣವನ್ನು ತಿಳಿಸಿಲ್ಲ ಎಂದು ಓರ್ಸಿನಿ ಹೇಳಿದ್ದಾರೆ.

“ಲಂಡನ್ ವಿಶ್ವವಿದ್ಯಾಲಯದ ಎಸ್‌ಒಎಎಸ್‌ನಲ್ಲಿ ಹಿಂದಿ ವಿದ್ವಾಂಸೆಯಾಗಿರುವ ಪ್ರೊಫೆಸರ್ ಫ್ರಾನ್ಸೆಸ್ಕಾ ಓರ್ಸಿನಿ ಅವರನ್ನು 5 ವರ್ಷಗಳ ಮಾನ್ಯ ಇ-ವೀಸಾ ಇದ್ದರೂ ಇಂದು ರಾತ್ರಿ ಭಾರತ ಪ್ರವೇಶಿಸದಂತೆ ತಡೆಯಲಾಗಿದೆ ಎಂದು ನಾನು ದೃಢೀಕರಿಸಬಲ್ಲೆ. ಅವರು ಹಾಂಗ್ ಕಾಂಗ್‌ನಿಂದ ದೆಹಲಿಗೆ ಆಗಮಿಸಿದ್ದರು. ಈ ವೇಳೆ ಅವರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ತಡೆಯಲಾಗಿದೆ ಎಂದು ಹಿರಿಯ ಪತ್ರಕರ್ತ ಮತ್ತು ದಿ ವೈರ್‌ನ ಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

“ನನ್ನನ್ನು ಗಡಿಪಾರು ಮಾಡಲಾಗುತ್ತಿದೆ, ನನಗೆ ಗೊತ್ತಿರುವುದು ಇಷ್ಟೆ” ಎಂದು ಓರ್ಸಿನಿ ಹೇಳಿರುವುದಾಗಿ ‘ದಿ ವೈರ್’ ವರದಿ ಮಾಡಿದೆ.

ಪ್ರಸ್ತುತ ಎಸ್‌ಒಎಎಸ್‌ನ ಭಾಷೆ, ಸಂಸ್ಕೃತಿ ಮತ್ತು ಭಾಷಾಶಾಸ್ತ್ರ ಸಂಸ್ಥೆಯ ಹಿಂದಿ ಮತ್ತು ದಕ್ಷಿಣ ಏಷ್ಯಾ ಸಾಹಿತ್ಯದ ಗೌರವ ಪ್ರಾಧ್ಯಾಪಕರಾಗಿರುವ ಓರ್ಸಿನಿ, ನವದೆಹಲಿಯಲ್ಲಿ ಸೆಂಟ್ರಲ್ ಇನ್‌ಸ್ಟಿಟ್ಯೂಟ್ ಆಫ್ ಹಿಂದಿ ಮತ್ತು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡಿದ್ದಾರೆ. ಓರ್ಸಿನಿ ಅವರು ಲಂಡನ್ ವಿಶ್ವವಿದ್ಯಾಲಯದ ಭಾಗವಾಗಿರುವ ಎಸ್‌ಒಎಸ್‌ನಲ್ಲಿ ತಮ್ಮ ಪಿಎಚ್‌ಡಿ ಪೂರ್ಣಗೊಳಿಸಿದ್ದಾರೆ.

‘ಈಸ್ಟ್ ಆಫ್ ದೆಹಲಿ: ಬಹುಭಾಷಾ ಸಾಹಿತ್ಯ ಸಂಸ್ಕೃತಿ ಮತ್ತು ವಿಶ್ವ ಸಾಹಿತ್ಯ’, ‘ಪ್ರಿಂಟ್ ಅಂಡ್ ಪ್ಲೆಷರ್: ವಸಾಹತುಶಾಹಿ ಉತ್ತರ ಭಾರತದಲ್ಲಿ ಜನಪ್ರಿಯ ಸಾಹಿತ್ಯ ಮತ್ತು ಮನರಂಜನಾ ಕಾದಂಬರಿಗಳು ಮತ್ತು ‘ದಿ ಹಿಂದಿ ಪಬ್ಲಿಕ್ ಸ್ಪಿಯರ್ 1920-1940: ರಾಷ್ಟ್ರೀಯತೆಯ ಯುಗದಲ್ಲಿ ಭಾಷೆ ಮತ್ತು ಸಾಹಿತ್ಯ ಓರ್ಸಿನಿ ಅವರ ಪ್ರಮುಖ ಕೃತಿಗಳಾಗಿವೆ.

“ಪ್ರೊಫೆಸರ್ ಫ್ರಾನ್ಸೆಸ್ಕಾ ಓರ್ಸಿನಿ ಭಾರತೀಯ ಸಾಹಿತ್ಯದ ಮಹಾನ್ ವಿದ್ವಾಂಸರಾಗಿದ್ದು, ಅವರ ಕೃತಿಗಳು ನಮ್ಮ ಸ್ವಂತ ಸಾಂಸ್ಕೃತಿಕ ಪರಂಪರೆಯ ಬಗ್ಗೆ ನಮ್ಮ ತಿಳುವಳಿಕೆಯನ್ನು ಸಮೃದ್ಧವಾಗಿ ಬೆಳಗಿಸಿದೆ. ಯಾವುದೇ ಕಾರಣವಿಲ್ಲದೆ ಅವರನ್ನು ಗಡಿಪಾರು ಮಾಡುವುದು ಅಸುರಕ್ಷಿತ, ಸಂಶಯಗ್ರಸ್ತ ಮತ್ತು ಮೂರ್ಖತನದ ಸರ್ಕಾರದ ಲಕ್ಷಣವಾಗಿದೆ” ಎಂದು ಲೇಖಕ ರಾಮಚಂದ್ರ ಗುಹಾ ಅವರು ಎಕ್ಸ್ ಪೋಸ್ಟ್‌ನಲ್ಲಿ ಹೇಳಿದ್ದಾರೆ.

“ಎಂತಹ ನಾಚಿಕೆಗೇಡಿನ ವಿಷಯ! ಓರ್ಸಿನಿ ಹಿಂದಿ/ಹಿಂದೂಸ್ತಾನಿ ಭಾಷೆಯ ಪ್ರಸಿದ್ಧ ವಿದ್ವಾಂಸರು; ಹಿಂದಿ ಬೆಲ್ಟ್-ಹಿಂದುತ್ವವಾದಿಗಳಿಗೆ ಒರ್ಸಿನಿಯವರ ಸಿದ್ಧಾಂತಗಳು ಮತ್ತು ಬರವಣಿಗೆಗಳು ತುಂಬಾ ಸಂಕೀರ್ಣವಾಗಿವೆಯೇ?” ಶಿಕ್ಷಣ ತಜ್ಞೆ ಅರ್ಪಿತಾ ದಾಸ್ ಪ್ರಶ್ನಿಸಿದ್ದಾರೆ.

ನಿಜಾಮಾಬಾದ್ ‘ಎನ್‌ಕೌಂಟರ್’ ಕುರಿತು ನ್ಯಾಯಾಂಗ ತನಿಖೆಗೆ ಮಾನವ ಹಕ್ಕುಗಳ ವೇದಿಕೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...