Homeಮುಖಪುಟ'ಗಾಝಾದಲ್ಲಿ ಪ್ರತಿದಿನವೂ ದೀಪಾವಳಿ': ನರಮೇಧವನ್ನು ಸಂಭ್ರಮಿಸಿ ವಿಕೃತಿ ಮೆರೆದ ರಾಮ್‌ ಗೋಪಾಲ್ ವರ್ಮಾ

‘ಗಾಝಾದಲ್ಲಿ ಪ್ರತಿದಿನವೂ ದೀಪಾವಳಿ’: ನರಮೇಧವನ್ನು ಸಂಭ್ರಮಿಸಿ ವಿಕೃತಿ ಮೆರೆದ ರಾಮ್‌ ಗೋಪಾಲ್ ವರ್ಮಾ

- Advertisement -
- Advertisement -

“ಭಾರತದಲ್ಲಿ ಕೇವಲ ಒಂದು ದಿನ ಮಾತ್ರ ದೀಪಾವಳಿ, ಗಾಝಾದಲ್ಲಿ ಪ್ರತಿದಿನವೂ ದೀಪಾವಳಿ” ಎಂದು ನಿರ್ದೇಶಕ ರಾಮ್‌ಗೋಪಾಲ್ ವರ್ಮಾ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸೋಮವಾರ (ಅ.20) ಪೋಸ್ಟ್ ಹಾಕಿದ್ದು, ಈ ಮೂಲಕ ಗಾಝಾ ನರಮೇಧವನ್ನು ಸಂಭ್ರಮಿಸಿ ವಿಕೃತಿ ಮೆರೆದಿದ್ದಾರೆ.

ವರ್ಮಾ ಅವರ ಈ ವಿಕೃತ ಪೋಸ್ಟ್‌ಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಪ್ರಶಸ್ತಿ ವಿಜೇತ ಪತ್ರಕರ್ತೆ ರಾಣಾ ಅಯ್ಯೂಬ್ ವರ್ಮಾ ಅವರ ಪೋಸ್ಟ್ ಅನ್ನು ರೀಪೋಸ್ಟ್ ಮಾಡಿದ್ದು, “ಪುನರುಚ್ಚರಿಸುತ್ತಿದ್ದೇನೆ: ನೈತಿಕವಾಗಿ ಭ್ರಷ್ಟಗೊಂಡಿರುವ ರಾಷ್ಟ್ರದಲ್ಲಿ ವೈರಸ್‌ಗೆ ಕೊಲ್ಲಲು ಏನು ಉಳಿದಿದೆ?” ಬರೆದುಕೊಂಡಿದ್ದಾರೆ.

“ಭಾರತದ ಹೊರಗಿನ ಜನರು ಭಾರತದಲ್ಲಿ ಮುಖ್ಯವಾಹಿನಿಯಲ್ಲಿರುವ ಮತ್ತು ಭಾರತೀಯ ಸೆಲೆಬ್ರಿಟಿಗಳು ಹೆಚ್ಚು ಪ್ರತಿಪಾದಿಸುವ ರಾಜಕೀಯದ ಕೀಳು ಮಟ್ಟವನ್ನು ಗ್ರಹಿಸಿಲೂ ಸಾಧ್ಯವಿಲ್ಲ” ಎಂದು ಪತ್ರಕರ್ತೆ ಮತ್ತು ಅಂಕಣಗಾರ್ತಿ ಸಾರಾ ಅಥರ್ ಆಕ್ರೋಶ ಹೊರ ಹಾಕಿದ್ದಾರೆ.

ಶಿಕ್ಷಣ ತಜ್ಞೆ ಮತ್ತು ಹೋರಾಟಗಾರ್ತಿ ರಾಖಿ ತ್ರಿಪಾಠಿ ಅವರು ರಾಮ್‌ ಗೋಪಾಲ್ ವರ್ಮಾ ಅವರ ಸಹಾನುಭೂತಿಯ ಕೊರತೆಯನ್ನು ಖಂಡಿಸಿದ್ದು, “ದೀಪಾವಳಿ ಅಂದರೆ ಭರವಸೆ, ಬೆಳಕು ಮತ್ತು ಹೊಸತನ. ಗಾಝಾ ಅಂದರೆ ಬದುಕಿನ ಹೋರಾಟ. ಈ ಮನುಷ್ಯನಿಗೆ ಆಚರಣೆ ಮತ್ತು ವಿನಾಶದ ನಡುವಿನ ವ್ಯತ್ಯಾಸ ತಿಳಿದಿಲ್ಲ, ಈತ ಕ್ರೂರಿ” ಎಂದು ಕಿಡಿಕಾರಿದ್ದಾರೆ.

ವರ್ಮಾ ಅವರ ಹೇಳಿಕೆ ನಿಜವಾಗಿಯೂ ಅಸಹ್ಯಕರ ಸಮಾಜದ ಪ್ರತಿಬಿಂಬ ಎಂದ ಅಲಿ ಅಸಾದ್, “ಇವರು ಝಿಯೋನಿಸ್ಟ್ ಗುಲಾಮರಾಗಲು ಮುಂದಾಗುವ ಜನರು, ಇಸ್ರೇಲಿಗಳಿಗಿಂತ ಕೆಟ್ಟವರಾಗಿರುವ ವಿಶ್ವದ ಏಕೈಕ ಜನರು” ಎಂದಿದ್ದಾರೆ.

ವರ್ಮಾ ಅವರ ಪೋಸ್ಟ್‌ಗೆ ಪ್ರತಿಕ್ರಿಯೆ ಕೊಟ್ಟಿರುವ ದೀಕ್ಷಾ ಕಂಡ್ಪಾಲ್ ಎಂಬ ಎಕ್ಸ್‌ ಬಳಕೆದಾರರೊಬ್ಬರು, “ದೀಪಾವಳಿ ಎಂದರೆ ಶ್ರೀರಾಮನು ತನ್ನ ರಾಜ್ಯಕ್ಕೆ ಮರಳುವುದನ್ನು ನಾವು ಆಚರಿಸುವ ಹಬ್ಬ. ಇದು ಬೆಳಕು, ಸಮೃದ್ಧಿ, ಸಕಾರಾತ್ಮಕತೆಯ ಹಬ್ಬ. ನೀವು ಗಾಝಾದಲ್ಲಿ ಪ್ರತಿದಿನ ದೀಪಾವಳಿ ಎಂದು ಹೇಳುವ ಮೂಲಕ ದೀಪಾವಳಿಯನ್ನು ಸಾವು ಮತ್ತು ಯುದ್ಧದೊಂದಿಗೆ ಸಂಯೋಜಿಸುತ್ತಿದ್ದೀರಿ” ಎಂದು ಹೇಳಿದ್ದಾರೆ.

ಮುಂದುವರಿದು, “ದೀಪಾವಳಿಯಂದು ನಾವು ಸಾವನ್ನು ಸಂಭ್ರಮಿಸುತ್ತೇವೆಯೇ? ಈ ರೀತಿಯ ಪೋಸ್ಟ್‌ಗಳಿಂದಾಗಿ ನಾವು ಭಾರತೀಯರು ಮತ್ತು ಹಿಂದೂಗಳು ಹೆಚ್ಚು ದ್ವೇಷವನ್ನು ಪಡೆಯುತ್ತೇವೆ. ವಿದೇಶಗಳಲ್ಲಿ ಜನರು ಕಿರುಕುಳಕ್ಕೊಳಗಾಗುವ ನೈಜ ಉದಾಹರಣೆಗಳಿವೆ. ಇದನ್ನು ಅಳಿಸಿ” ಎಂದು ಬರೆದುಕೊಂಡಿದ್ದಾರೆ.

ಗಾಝಾದ ಕದನ ವಿರಾಮವನ್ನು ಮುರಿದಿರುವ ಇಸ್ರೇಲ್ ಅಮಾಯಕರ ಹತ್ಯೆಯನ್ನು ಮುಂದುವರಿಸಿರುವ ನಡುವೆ ರಾಮ್ ಗೋಪಾಲ್ ವರ್ಮಾ ವಿಕೃತ ಪೋಸ್ಟ್ ಹಾಕಿದ್ದಾರೆ.

ವರ್ಮಾ ಅವರ ದ್ವೇಷ ಹರಡುವ ಮತ್ತು ಸಾಮೂಹಿಕ ಹತ್ಯೆಗಳನ್ನು ಅಣಕಿಸುವ ಪೋಸ್ಟ್‌ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಲವರು ಎಕ್ಸ್‌ ಅನ್ನು ಒತ್ತಾಯಿಸಿದ್ದಾರೆ.

ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ವರ್ಮಾ ಹಾಕಿರುವ ಪೋಸ್ಟ್ ಈಗಾಲೂ ಇದೆ. ಅವರು ಇದುವರೆಗೆ ಪೋಸ್ಟ್ ಅಳಿಸಿಲ್ಲ, ಕ್ಷಮೆಯೂ ಕೇಳಿಲ್ಲ.

ಹಿಂದಿ ವಿದ್ವಾಂಸೆ ಫ್ರಾನ್ಸೆಸ್ಕಾ ಓರ್ಸಿನಿ ಭಾರತ ಪ್ರವೇಶಿಸದಂತೆ ವಿಮಾನ ನಿಲ್ದಾಣದಲ್ಲಿ ತಡೆ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....