Homeಮುಖಪುಟ'ಗಾಝಾದಲ್ಲಿ ಪ್ರತಿದಿನವೂ ದೀಪಾವಳಿ': ನರಮೇಧವನ್ನು ಸಂಭ್ರಮಿಸಿ ವಿಕೃತಿ ಮೆರೆದ ರಾಮ್‌ ಗೋಪಾಲ್ ವರ್ಮಾ

‘ಗಾಝಾದಲ್ಲಿ ಪ್ರತಿದಿನವೂ ದೀಪಾವಳಿ’: ನರಮೇಧವನ್ನು ಸಂಭ್ರಮಿಸಿ ವಿಕೃತಿ ಮೆರೆದ ರಾಮ್‌ ಗೋಪಾಲ್ ವರ್ಮಾ

- Advertisement -
- Advertisement -

“ಭಾರತದಲ್ಲಿ ಕೇವಲ ಒಂದು ದಿನ ಮಾತ್ರ ದೀಪಾವಳಿ, ಗಾಝಾದಲ್ಲಿ ಪ್ರತಿದಿನವೂ ದೀಪಾವಳಿ” ಎಂದು ನಿರ್ದೇಶಕ ರಾಮ್‌ಗೋಪಾಲ್ ವರ್ಮಾ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸೋಮವಾರ (ಅ.20) ಪೋಸ್ಟ್ ಹಾಕಿದ್ದು, ಈ ಮೂಲಕ ಗಾಝಾ ನರಮೇಧವನ್ನು ಸಂಭ್ರಮಿಸಿ ವಿಕೃತಿ ಮೆರೆದಿದ್ದಾರೆ.

ವರ್ಮಾ ಅವರ ಈ ವಿಕೃತ ಪೋಸ್ಟ್‌ಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಪ್ರಶಸ್ತಿ ವಿಜೇತ ಪತ್ರಕರ್ತೆ ರಾಣಾ ಅಯ್ಯೂಬ್ ವರ್ಮಾ ಅವರ ಪೋಸ್ಟ್ ಅನ್ನು ರೀಪೋಸ್ಟ್ ಮಾಡಿದ್ದು, “ಪುನರುಚ್ಚರಿಸುತ್ತಿದ್ದೇನೆ: ನೈತಿಕವಾಗಿ ಭ್ರಷ್ಟಗೊಂಡಿರುವ ರಾಷ್ಟ್ರದಲ್ಲಿ ವೈರಸ್‌ಗೆ ಕೊಲ್ಲಲು ಏನು ಉಳಿದಿದೆ?” ಬರೆದುಕೊಂಡಿದ್ದಾರೆ.

“ಭಾರತದ ಹೊರಗಿನ ಜನರು ಭಾರತದಲ್ಲಿ ಮುಖ್ಯವಾಹಿನಿಯಲ್ಲಿರುವ ಮತ್ತು ಭಾರತೀಯ ಸೆಲೆಬ್ರಿಟಿಗಳು ಹೆಚ್ಚು ಪ್ರತಿಪಾದಿಸುವ ರಾಜಕೀಯದ ಕೀಳು ಮಟ್ಟವನ್ನು ಗ್ರಹಿಸಿಲೂ ಸಾಧ್ಯವಿಲ್ಲ” ಎಂದು ಪತ್ರಕರ್ತೆ ಮತ್ತು ಅಂಕಣಗಾರ್ತಿ ಸಾರಾ ಅಥರ್ ಆಕ್ರೋಶ ಹೊರ ಹಾಕಿದ್ದಾರೆ.

ಶಿಕ್ಷಣ ತಜ್ಞೆ ಮತ್ತು ಹೋರಾಟಗಾರ್ತಿ ರಾಖಿ ತ್ರಿಪಾಠಿ ಅವರು ರಾಮ್‌ ಗೋಪಾಲ್ ವರ್ಮಾ ಅವರ ಸಹಾನುಭೂತಿಯ ಕೊರತೆಯನ್ನು ಖಂಡಿಸಿದ್ದು, “ದೀಪಾವಳಿ ಅಂದರೆ ಭರವಸೆ, ಬೆಳಕು ಮತ್ತು ಹೊಸತನ. ಗಾಝಾ ಅಂದರೆ ಬದುಕಿನ ಹೋರಾಟ. ಈ ಮನುಷ್ಯನಿಗೆ ಆಚರಣೆ ಮತ್ತು ವಿನಾಶದ ನಡುವಿನ ವ್ಯತ್ಯಾಸ ತಿಳಿದಿಲ್ಲ, ಈತ ಕ್ರೂರಿ” ಎಂದು ಕಿಡಿಕಾರಿದ್ದಾರೆ.

ವರ್ಮಾ ಅವರ ಹೇಳಿಕೆ ನಿಜವಾಗಿಯೂ ಅಸಹ್ಯಕರ ಸಮಾಜದ ಪ್ರತಿಬಿಂಬ ಎಂದ ಅಲಿ ಅಸಾದ್, “ಇವರು ಝಿಯೋನಿಸ್ಟ್ ಗುಲಾಮರಾಗಲು ಮುಂದಾಗುವ ಜನರು, ಇಸ್ರೇಲಿಗಳಿಗಿಂತ ಕೆಟ್ಟವರಾಗಿರುವ ವಿಶ್ವದ ಏಕೈಕ ಜನರು” ಎಂದಿದ್ದಾರೆ.

ವರ್ಮಾ ಅವರ ಪೋಸ್ಟ್‌ಗೆ ಪ್ರತಿಕ್ರಿಯೆ ಕೊಟ್ಟಿರುವ ದೀಕ್ಷಾ ಕಂಡ್ಪಾಲ್ ಎಂಬ ಎಕ್ಸ್‌ ಬಳಕೆದಾರರೊಬ್ಬರು, “ದೀಪಾವಳಿ ಎಂದರೆ ಶ್ರೀರಾಮನು ತನ್ನ ರಾಜ್ಯಕ್ಕೆ ಮರಳುವುದನ್ನು ನಾವು ಆಚರಿಸುವ ಹಬ್ಬ. ಇದು ಬೆಳಕು, ಸಮೃದ್ಧಿ, ಸಕಾರಾತ್ಮಕತೆಯ ಹಬ್ಬ. ನೀವು ಗಾಝಾದಲ್ಲಿ ಪ್ರತಿದಿನ ದೀಪಾವಳಿ ಎಂದು ಹೇಳುವ ಮೂಲಕ ದೀಪಾವಳಿಯನ್ನು ಸಾವು ಮತ್ತು ಯುದ್ಧದೊಂದಿಗೆ ಸಂಯೋಜಿಸುತ್ತಿದ್ದೀರಿ” ಎಂದು ಹೇಳಿದ್ದಾರೆ.

ಮುಂದುವರಿದು, “ದೀಪಾವಳಿಯಂದು ನಾವು ಸಾವನ್ನು ಸಂಭ್ರಮಿಸುತ್ತೇವೆಯೇ? ಈ ರೀತಿಯ ಪೋಸ್ಟ್‌ಗಳಿಂದಾಗಿ ನಾವು ಭಾರತೀಯರು ಮತ್ತು ಹಿಂದೂಗಳು ಹೆಚ್ಚು ದ್ವೇಷವನ್ನು ಪಡೆಯುತ್ತೇವೆ. ವಿದೇಶಗಳಲ್ಲಿ ಜನರು ಕಿರುಕುಳಕ್ಕೊಳಗಾಗುವ ನೈಜ ಉದಾಹರಣೆಗಳಿವೆ. ಇದನ್ನು ಅಳಿಸಿ” ಎಂದು ಬರೆದುಕೊಂಡಿದ್ದಾರೆ.

ಗಾಝಾದ ಕದನ ವಿರಾಮವನ್ನು ಮುರಿದಿರುವ ಇಸ್ರೇಲ್ ಅಮಾಯಕರ ಹತ್ಯೆಯನ್ನು ಮುಂದುವರಿಸಿರುವ ನಡುವೆ ರಾಮ್ ಗೋಪಾಲ್ ವರ್ಮಾ ವಿಕೃತ ಪೋಸ್ಟ್ ಹಾಕಿದ್ದಾರೆ.

ವರ್ಮಾ ಅವರ ದ್ವೇಷ ಹರಡುವ ಮತ್ತು ಸಾಮೂಹಿಕ ಹತ್ಯೆಗಳನ್ನು ಅಣಕಿಸುವ ಪೋಸ್ಟ್‌ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಲವರು ಎಕ್ಸ್‌ ಅನ್ನು ಒತ್ತಾಯಿಸಿದ್ದಾರೆ.

ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ವರ್ಮಾ ಹಾಕಿರುವ ಪೋಸ್ಟ್ ಈಗಾಲೂ ಇದೆ. ಅವರು ಇದುವರೆಗೆ ಪೋಸ್ಟ್ ಅಳಿಸಿಲ್ಲ, ಕ್ಷಮೆಯೂ ಕೇಳಿಲ್ಲ.

ಹಿಂದಿ ವಿದ್ವಾಂಸೆ ಫ್ರಾನ್ಸೆಸ್ಕಾ ಓರ್ಸಿನಿ ಭಾರತ ಪ್ರವೇಶಿಸದಂತೆ ವಿಮಾನ ನಿಲ್ದಾಣದಲ್ಲಿ ತಡೆ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...