Homeಫ್ಯಾಕ್ಟ್‌ಚೆಕ್FACT CHECK | ಆರ್‌ಎಸ್ಎಸ್ ಶತಮಾನೋತ್ಸವ ಪ್ರಯುಕ್ತ ನೆದರ್‌ಲ್ಯಾಂಡ್‌ ಸರ್ಕಾರ ಅಂಚೆ ಚೀಟಿ ಬಿಡುಗಡೆ ಮಾಡಿರುವುದು...

FACT CHECK | ಆರ್‌ಎಸ್ಎಸ್ ಶತಮಾನೋತ್ಸವ ಪ್ರಯುಕ್ತ ನೆದರ್‌ಲ್ಯಾಂಡ್‌ ಸರ್ಕಾರ ಅಂಚೆ ಚೀಟಿ ಬಿಡುಗಡೆ ಮಾಡಿರುವುದು ನಿಜಾನಾ?

- Advertisement -
- Advertisement -

ಆರ್‌ಎಸ್‌ಎಸ್‌ ಶತಮಾನೋತ್ಸವ ಪ್ರಯುಕ್ತ ನೆದರ್‌ಲ್ಯಾಂಡ್ ಸರ್ಕಾರ ಅಂಚೆ ಚೀಟಿ ಬಿಡುಗಡೆ ಮಾಡಿ ಗೌರವಿಸಿದೆ ಎಂದು ಪೋಸ್ಟರ್ ಒಂದನ್ನು ಹಂಚಿಕೊಳ್ಳಲಾಗ್ತಿದೆ.

ಆರ್‌ಎಸ್‌ಎಸ್‌ ನಿಸ್ವಾರ್ಥ ಸೇವೆಯ 100ನೇ ವರ್ಷಾಚರಣೆ ಸ್ಮರಣಾರ್ಥ ನೆದರ್‌ಲ್ಯಾಂಡ್ ಅಂಚೆ ಚೀಟಿ ಬಿಡುಗಡೆ ಮಾಡಿದೆ ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿದೆ. ಎರಡು ಅಂಚೆ ಚೀಟಿಗಳ ಫೋಟೋಗಳು ಅದರಲ್ಲಿವೆ. ಬೇಕಾದವರು ಸಂಪರ್ಕಿಸಿ ಎಂದು ಈ-ಮೇಲ್ ವಿಳಾಸ ಕೊಡಲಾಗಿದೆ.

ಬಿಜೆಪಿ ರಾಷ್ಟ್ರೀಯ ಘಟಕದ ಅಧಿಕೃತ ‘ಎಕ್ಸ್’ ಹ್ಯಾಂಡಲ್‌ನಲ್ಲಿ (@BJP4India) ಅಕ್ಟೋಬರ್ 10 ರಂದು ಮೇಲೆ ತಿಳಿಸಿದ ಪೋಸ್ಟರ್‌ ಅನ್ನು ಹಂಚಿಕೊಳ್ಳಲಾಗಿತ್ತು. “ಆರ್‌ಎಸ್‌ಎಸ್‌ನ 100 ವರ್ಷಗಳನ್ನು ಗುರುತಿಸಲು ನೆದರ್‌ಲ್ಯಾಂಡ್ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ ಮಾಡಿದೆ” ಎಂದು ಪೋಸ್ಟರ್ ಜೊತೆ ಬರೆಯಲಾಗಿತ್ತು.

ಈ ಹಿಂದೆ ಹಲವಾರು ಸುಳ್ಳು ಮತ್ತು ತಪ್ಪು ಮಾಹಿತಿಗಳನ್ನು ಹಂಚಿಕೊಂಡಿರುವ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಬಿಜೆಪಿ ಹ್ಯಾಂಡಲ್‌ನಲ್ಲಿ ಹಾಕಿದ್ದ ಅದೇ ಹೇಳಿಕೆಯೊಂದಿಗೆ ಅಕ್ಟೋಬರ್ 10ರಂದು ತನ್ನ ಎಕ್ಸ್‌ ಹ್ಯಾಂಡಲ್‌ನಲ್ಲಿ (@amitmalviya) ವೈರಲ್ ಪೋಸ್ಟರ್ ಹಂಚಿಕೊಂಡಿದ್ದರು.

ಅಕ್ಟೋಬರ್ 10ರಂದು ಟೈಮ್ಸ್ ನೌ ಸುದ್ದಿವಾಹಿನಿ ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಈ ಕುರಿತ ವಿಡಿಯೋ ವರದಿಯನ್ನು ಪ್ರಕಟಿಸಿತ್ತು. ಅದರಲ್ಲಿ “ನೆದರ್‌ಲ್ಯಾಂಡ್ ಆರ್‌ಎಸ್‌ಎಸ್‌ನ 100 ವರ್ಷಗಳನ್ನು ಗುರುತಿಸಲು ಸ್ಮರಣಾರ್ಥ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಿದೆ” ಎಂದು ಹೇಳಿತ್ತು.

ಪ್ರೀತಿ ಗಾಂಧಿ (@MrsGandhi, ಪ್ರಕಾಶ್ ಜಾವ್ಡೇಕರ್ (@PrakashJavdekar) ಮತ್ತು ರಮೇಶ್ ನಾಯ್ಡು ನಗೋತು (@RNagothu) ಮುಂತಾದ ಹಲವಾರು ಇತರ ಎಕ್ಸ್‌ ಬಳಕೆದಾರರು ಮತ್ತು ಬಿಜೆಪಿ ನಾಯಕರು ನೆದರ್‌ಲ್ಯಾಂಡ್‌ ಸರ್ಕಾರ ಆರ್‌ಎಸ್‌ಎಸ್‌ನ ಕೆಲಸವನ್ನು ಗುರುತಿಸಿ ಅಂಚೆ ಚೀಟಿ ಬಿಡುಗಡೆ ಮಾಡಿದೆ ಎಂದು ಹೇಳಿಕೊಳ್ಳುವ ವೈರಲ್ ಗ್ರಾಫಿಕ್ ಅನ್ನು ಹಂಚಿಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ಬಿಜೆಪಿ ಮತ್ತು ಅದರ ನಾಯಕರು ಹಂಚಿಕೊಂಡಿರುವ ಪೋಸ್ಟರ್‌ನ ಸತ್ಯಾಸತ್ಯತೆಯನ್ನು ನಾವು ಪರಿಶೀಲನೆ ನಡೆಸಿದ್ದೇವೆ. ಈ ವೇಳೆ ಆರ್‌ಎಸ್‌ಎಸ್‌ನ ಶತಮಾನೋತ್ಸವ ಪ್ರಯುಕ್ತ ನೆದರ್‌ಲ್ಯಾಂಡ್ ಸರ್ಕಾರ ಅಧಿಕೃತವಾಗಿ ಯಾವುದೇ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಿಲ್ಲ ಎಂದು ಗೊತ್ತಾಗಿದೆ.

ಈ ಬಗ್ಗೆ ತಿಳಿಯಲು ನಾವು ಮೊದಲು ಈ ಕುರಿತ ಮುಖ್ಯವಾಹಿನಿ ಮಾಧ್ಯಮ ಸುದ್ದಿಗಳನ್ನು ಹುಡುಕಾಡಿದ್ದೇವೆ. ಈ ವೇಳೆ ಯಾವುದೇ ಅಧಿಕೃತ ವರದಿಗಳು ನಮಗೆ ಲಭ್ಯವಾಗಿಲ್ಲ.

ಬಿಜೆಪಿ ನಾಯಕರು ಹಂಚಿಕೊಂಡಿರುವ ಪೋಸ್ಟರ್ ಅನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ, ಅದರಲ್ಲಿ “Stichting Hindu Swayamsevak Sangh” ಎಂಬ ಬ್ಯಾಂಕ್ ಖಾತೆಯ ಹೆಸರು ಉಲ್ಲೇಖಿಸಿರುದು ನಮ್ಮ ಗಮನಕ್ಕೆ ಬಂದಿದೆ. ಹಿಂದೂ ಸ್ವಯಂಸೇವಕ ಸಂಘ (HSS) ಆರ್‌ಎಸ್‌ಎಸ್‌ನ ಅಂತಾರಾಷ್ಟ್ರೀಯ ವಿಭಾಗವಾಗಿದ್ದು, ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕ (ಯುಎಸ್‌ಎ) ಯುನೈಟೆಡ್ ಕಿಂಗ್‌ಡಮ್ (ಯುಕೆ) ನೆದರ್‌ಲ್ಯಾಂಡ್ಸ್ ಮುಂತಾದ ಹಲವಾರು ದೇಶಗಳಲ್ಲಿ ಶಾಖೆಗಳನ್ನು ಹೊಂದಿದೆ.

‘Stichting’ಎಂಬ ಪದವು ಡಚ್ ಭಾಷೆಯಲ್ಲಿ ‘ಸ್ಥಾಪನೆ/ಪ್ರತಿಷ್ಠಾನ’ ಎಂಬ ಅರ್ಥವನ್ನು ನೀಡುತ್ತದೆ. ಈಗಾಗಲೇ ಹೇಳಿದಂತೆ ಪೋಸ್ಟರ್‌ನಲ್ಲಿ ಬಾಕ್ಸ್ ಒಳಗಡೆ ಅಂಚೆ ಚೀಟಿಯನ್ನು ಹೇಗೆ ಆರ್ಡರ್ ಮಾಡುವುದು ಮತ್ತು ಶಿಪ್ಪಿಂಗ್ ಶುಲ್ಕದ ವಿವರಗಳನ್ನು [email protected] ಎಂಬ ಈ-ಮೇಲ್ ಐಡಿಯೊಂದಿಗೆ ನೀಡಲಾಗಿದೆ.

Credit : altnews.in

ನಮ್ಮ ಪರಿಶೀಲನೆಯಲ್ಲಿ ಕಂಡು ಬಂದ ಮಾಹಿತಿಯನ್ನು ಆಧರಿಸಿ, ಸಂಬಂಧಿತ ಕೀವರ್ಡ್‌ಗಳ ಮೂಲಕ ಹೆಚ್ಚಿನ ಮಾಹಿತಿ ಹುಡುಕಿದಾಗ ಆರ್‌ಎಸ್‌ಎಸ್‌ನ ಮುಖವಾಣಿ ವಾರಪತ್ರಿಕೆ ‘ಆರ್ಗನೈಸರ್‌’ನ ವರದಿ ಲಭ್ಯವಾಗಿದೆ. ‘ಆರ್‌ಎಸ್‌ಎಸ್ 100ನೇ ವರ್ಷದಲ್ಲಿ: ಹಿಂದೂ ಸ್ವಯಂಸೇವಕ ಸಂಘ ನೆದರ್‌ಲ್ಯಾಂಡ್ ಸಂಘದ ಶತಮಾನೋತ್ಸವವನ್ನು ಗೌರವಿಸಲು ವಿಶೇಷ ಸ್ಮರಣಾರ್ಥ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದೆ” ಎಂದು ವರದಿಗೆ ಶೀರ್ಷಿಕೆ ಕೊಡಲಾಗಿತ್ತು ಮತ್ತು ವೈರಲ್ ಪೋಸ್ಟರ್‌ನಲ್ಲಿರುವ ಎರಡು ಅಂಚೆ ಚೀಟಿಗಳು ವರದಿಯಲ್ಲಿ ಇತ್ತು.

“ಈ ಸ್ಮರಣೀಯ ಮೈಲಿಗಲ್ಲನ್ನು ಗೌರವಿಸಲು, ಹಿಂದೂ ಸ್ವಯಂಸೇವಕ ಸಂಘ ನೆದರ್‌ಲ್ಯಾಂಡ್ (HSS NL) ವಿಶ್ವ ಅಂಚೆ ದಿನದಂದು ಹೆಮ್ಮೆಯಿಂದ ವಿಶೇಷ ಸ್ಮರಣಾರ್ಥ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದೆ- ಇದು ವಿಶ್ವದ ಸಾರ್ವತ್ರಿಕ ಧರ್ಮದ ನೂರು ವರ್ಷಗಳ ಏಕತೆ, ಶಿಸ್ತು ಮತ್ತು ಭಕ್ತಿಯ ಸಂಕೇತವಾಗಿದೆ” ಎಂದು ವರದಿ ಉಲ್ಲೇಖಿಸಿತ್ತು.

ಹೆಚ್ಚುವರಿಯಾಗಿ, ‘PostNl’ಎಂಬ ನೆದರ್‌ಲ್ಯಾಂಡ್ಸ್ ಅಂಚೆ ಸೇವೆಯು ಯಾವುದೇ ಚಿತ್ರವನ್ನು ಅಪ್‌ಲೋಡ್ ಮಾಡುವ ಮೂಲಕ ವೈಯಕ್ತಿಕ ಅಂಚೆ ಚೀಟಿಗಳನ್ನು ರಚಿಸಲು ಅವಕಾಶ ಮಾಡಿಕೊಟ್ಟಿದೆ ಎಂದು ನಾವು ಕಂಡುಕೊಂಡಿದ್ದೇವೆ.

ಆದ್ದರಿಂದ, ಆರ್‌ಎಸ್‌ಎಸ್‌ನ ಶತಮಾನೋತ್ಸವ ಗೌರವಿಸಲು ನೆದರ್‌ಲ್ಯಾಂಡ್‌ ಸರ್ಕಾರ ಅಧಿಕೃತವಾಗಿ ಯಾವುದೇ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿಲ್ಲ. ಬದಲಾಗಿ, ‘ಹಿಂದೂ ಸ್ವಯಂಸೇವಕ ಸಂಘ ನೆದರ್‌ಲ್ಯಾಂಡ್’ ಸಾರ್ವಜನಿಕರಿಗೆ ಇರುವ ಅವಕಾಶವನ್ನು ಬಳಸಿಕೊಂಡು ಸ್ವತಃ ಆರ್‌ಎಸ್‌ಎಸ್‌ ಅಂಚೆ ಚೀಟಿಯನ್ನು ರಚಿಸಿದೆ ಮತ್ತು ಅದನ್ನು ಮಾರಾಟ ಮಾಡುತ್ತಿದೆ ಎಂಬುದು ನಮ್ಮ ಪರಿಶೀಲನೆಯಲ್ಲಿ ಸ್ಪಷ್ಟವಾಗಿದೆ.

ವಸಾಹತುಶಾಹಿಗಿಂತ ‘ರಾಜಕೀಯ ಇಸ್ಲಾಂ’ ಸನಾತನಕ್ಕೆ ದೊಡ್ಡ ಹೊಡೆತ ನೀಡಿದೆ: ಯೋಗಿ ಆದಿತ್ಯನಾಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರಧಾನಿ ಮೋದಿಯವರ ವಿದೇಶಾಂಗ ನೀತಿಯ ಸಾರ ಮತ್ತು ಶೈಲಿ ಎರಡಕ್ಕೂ ರಾಷ್ಟ್ರವು ಭಾರಿ ಬೆಲೆ ತೆರುತ್ತಿದೆ’: ಕಾಂಗ್ರೆಸ್

ನವದೆಹಲಿ: ಇರಾನ್ ಮೇಲೆ ನಡೆದ ಯುದ್ಧಕ್ಕೆ ಸರ್ಕಾರದ ಪ್ರತಿಕ್ರಿಯೆಯು ಭಾರತದ ಮೌಲ್ಯಗಳು, ತತ್ವಗಳು ಮತ್ತು ಹಿತಾಸಕ್ತಿಗಳಿಗೆ ಮಾಡಿದ ದ್ರೋಹವಾಗಿದೆ ಎಂದು ಕಾಂಗ್ರೆಸ್ ಭಾನುವಾರ ಹೇಳಿದೆ, ಪ್ರಧಾನಿ ನರೇಂದ್ರ ಮೋದಿಯವರ ವಿದೇಶಾಂಗ ನೀತಿಯ ಸಾರ...

ಬಂಗಾಳ ಎಸ್‌ಐಆರ್| ಮುಸ್ಲಿಂ ಬಹುಸಂಖ್ಯಾತ ಮುರ್ಷಿದಾಬಾದ್-ಮಾಲ್ಡಾದಲ್ಲಿ ಅತ್ಯಧಿಕ ಮತದಾರರ ಪರಿಶೀಲನೆ ಬಾಕಿ

ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಚುನಾವಣಾ ಆಯೋಗ ಪ್ರಕಟಿಸಿದ ಅಂತಿಮ ಮತದಾರರ ಪಟ್ಟಿಯ ಪ್ರಕಾರ, ಪಶ್ಚಿಮ ಬಂಗಾಳದ ಮುಸ್ಲಿಂ ಪ್ರಾಬಲ್ಯದ ಮುರ್ಷಿದಾಬಾದ್ ಮತ್ತು ಮಾಲ್ಡಾ ಜಿಲ್ಲೆಗಳಲ್ಲಿ ದಾಖಲೆಗಳ ಪರಿಶೀಲನೆಗೆ...

‘ಪ್ರಜಾಪ್ರಭುತ್ವ ಜಗತ್ತಿನ ನಾಯಕರು, ಸಾರ್ವಭೌಮ ರಾಷ್ಟ್ರದ ನಾಯಕನನ್ನು ಹತ್ಯೆ ಮಾಡಿದ್ದು ಹೇಯ ಕೃತ್ಯ’: ಖಮೇನಿ ಹತ್ಯೆಗೆ ಪ್ರಿಯಾಂಕ ಗಾಂಧಿ ಖಂಡನೆ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ. "ಪ್ರಜಾಪ್ರಭುತ್ವ ಜಗತ್ತಿನ ನಾಯಕರು ಎಂದು ಕರೆಯಲ್ಪಡುವವರು" ಸಾರ್ವಭೌಮ ರಾಷ್ಟ್ರದ ನಾಯಕತ್ವವನ್ನು ಗುರಿಯಾಗಿಸಿಕೊಂಡು...

ದುಬೈ-ಅಬುಧಾಬಿ ಮೇಲೆ ದಾಳಿ; ಇರಾನ್‌ಗೆ ಯುಎಇ ಎಚ್ಚರಿಕೆ

ಇರಾನ್ ತನ್ನ ನೆರೆಹೊರೆಯವರನ್ನು ಗುರಿಯಾಗಿಸಿಕೊಳ್ಳಬಾರದು ಎಂದು ಯುಎಇ ಅಧ್ಯಕ್ಷರ ರಾಜತಾಂತ್ರಿಕ ಸಲಹೆಗಾರ ಅನ್ವರ್ ಗರ್ಗಶ್ ಎಚ್ಚರಿಕೆ ನೀಡಿದ್ದಾರೆ. "ಗಲ್ಫ್ ರಾಷ್ಟ್ರಗಳ ವಿರುದ್ಧ ಇರಾನ್ ಆಕ್ರಮಣವು ತಪ್ಪು ಲೆಕ್ಕಾಚಾರವಾಗಿದೆ. ಇದೇ ಬೆಳವಣಿಗೆ ನಿರ್ಣಾಯಕ ಹಂತದಲ್ಲಿ ಇರಾನ್...

ಇರಾನ್‌ ಹಂಗಾಮಿ ಸರ್ವೋಚ್ಚ ನಾಯಕರಾಗಿ ಅಯಾತೊಲ್ಲ ಅಲಿರೆಝಾ ಅರಾಫಿ ನೇಮಕ

ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾದ ಹಿನ್ನೆಲೆ, ಹಿರಿಯ ಧರ್ಮಗುರು ಅಯತೊಲ್ಲಾ ಅಲಿರೆಝಾ ಅರಾಫಿ ಅವರು ಇರಾನ್‌ನ ಹಂಗಾಮಿ ಸರ್ವೋಚ್ಚ ನಾಯಕರಾಗಿ ಆಯ್ಕೆ ಮಾಡಲಾಗಿದೆ ಎಂದು ಸರ್ಕಾರಿ-ಸಂಯೋಜಿತ...

ಖಮೇನಿ ಹತ್ಯೆ ವಿರೋಧಿಸಿ ಬೃಹತ್ ಪ್ರತಿಭಟನೆ; ಶ್ರೀನಗರದಲ್ಲಿ ಇಂಟರ್‌ನೆಟ್ ಸ್ತಬ್ಧ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ವಿರೋಧಿಸಿ ಕಾಶ್ಮೀರದಾದ್ಯಂತ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿವೆ. ಶ್ರೀನಗರದಲ್ಲಿರುವ ವಿಶ್ವಸಂಸ್ಥೆಯ ಮಿಲಿಟರಿ ವೀಕ್ಷಕರ ಗುಂಪು (UNMOGIP) ಪ್ರಧಾನ ಕಚೇರಿಯ ಮುಂದೆ ದೊಡ್ಡ ಜನಸಮೂಹ ಜಮಾಯಿಸಿತ್ತು....

ಅಮೆರಿಕಾ-ಇಸ್ರೇಲ್ ‘ಪುಂಡ ರಾಷ್ಟ್ರಗಳು’; ಇರಾನ್ ಮೇಲಿನ ದಾಳಿ ಖಂಡಿಸಿದ ಕೇರಳ ಸಿಎಂ; ಅನಿವಾಸಿ ಭಾರತೀಯರ ಆತಂಕ ಪರಿಹರಿಸಲು ಕೇಂದ್ರಕ್ಕೆ ಮನವಿ

ತಿರುವನಂತಪುರಂ: ಇಸ್ರೇಲ್ ಮತ್ತು ಅಮೆರಿಕ ಇರಾನ್ ಮೇಲೆ ನಡೆಸುತ್ತಿರುವ ದಾಳಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತೀವ್ರವಾಗಿ ಖಂಡಿಸಿದ್ದಾರೆ ಮತ್ತು ಗಲ್ಫ್ ರಾಷ್ಟ್ರಗಳಲ್ಲಿರುವ ಹಲವಾರು ಅನಿವಾಸಿ ಭಾರತೀಯರ ಆತಂಕವನ್ನು ಪರಿಹರಿಸಲು ಕೇಂದ್ರವು ತಕ್ಷಣ...

ಅಮೆರಿಕ-ಇಸ್ರೇಲಿ ಮಿಲಿಟರಿ ದಾಳಿಯಲ್ಲಿ ‘ಇರಾನ್‌ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಹತ್ಯೆ; ಇರಾನ್ ಮಾಧ್ಯಮಗಳ ವರದಿ 

ಟೆಹ್ರಾನ್: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಸಾವನ್ನಪ್ಪಿದ್ದಾರೆ ಎಂದು ದೇಶದ ಸರ್ಕಾರಿ ಸ್ವಾಮ್ಯದ ಐಆರ್‌ಐಬಿ ಟಿವಿ ಭಾನುವಾರ ವರದಿ ಮಾಡಿದೆ. ಟೆಹ್ರಾನ್ ಮೇಲಿನ ದಾಳಿಯಲ್ಲಿ...

ಕರಾಚಿ| ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ ವೇಳೆ ಘರ್ಷಣೆ : ಕನಿಷ್ಠ 9 ಸಾವು

ಪಾಕಿಸ್ತಾನದ ಕರಾಚಿಯಲ್ಲಿರುವ ಅಮೆರಿಕ ದೂತಾವಾಸದ ಬಳಿ ಭಾನುವಾರ (ಮಾ.1) ಇರಾನ್ ಪರ ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿಯ ನಡುವೆ ಘರ್ಷಣೆ ಉಂಟಾಗಿ ಕನಿಷ್ಠ ಒಂಭತ್ತು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. "ನಾವು ಕನಿಷ್ಠ ಎಂಟು...

ಇರಾನ್-ಇಸ್ರೇಲ್ ಯುದ್ಧ: ಭಾರತ ತಕ್ಷಣದ ಆರ್ಥಿಕ ಸವಾಲುಗಳನ್ನು ಎದುರಿಸುವ ಸಾಧ್ಯತೆಯಿದೆ; ವರದಿ

ಫೆಬ್ರವರಿ 28, 2026 ರಂದು ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಮುಷ್ಕರದ ನಂತರ ಇರಾನ್-ಇಸ್ರೇಲ್ ಸಂಘರ್ಷದಲ್ಲಿ ತೀವ್ರ ಏರಿಕೆಯು ಪಶ್ಚಿಮ ಏಷ್ಯಾದಲ್ಲಿ ಭೌಗೋಳಿಕ ರಾಜಕೀಯ ಅಪಾಯಗಳನ್ನು ತೀವ್ರಗೊಳಿಸಿದೆ ಮತ್ತು ಜಾಗತಿಕ ಇಂಧನ ಮಾರುಕಟ್ಟೆಗಳಿಗೆ ತಕ್ಷಣದ...