Homeಮುಖಪುಟ'ಉಪನಾಮದ ಕಾರಣಕ್ಕೆ ಸರ್ಫರಾಝ್ ಖಾನ್ ಆಯ್ಕೆಯಾಗಿಲ್ಲವೇ?'..ಗಂಭೀರ್ ವಿರುದ್ಧ ಶಮಾ ಮೊಹಮ್ಮದ್ ಆಕ್ರೋಶ

‘ಉಪನಾಮದ ಕಾರಣಕ್ಕೆ ಸರ್ಫರಾಝ್ ಖಾನ್ ಆಯ್ಕೆಯಾಗಿಲ್ಲವೇ?’..ಗಂಭೀರ್ ವಿರುದ್ಧ ಶಮಾ ಮೊಹಮ್ಮದ್ ಆಕ್ರೋಶ

- Advertisement -
- Advertisement -

ಭಾರತ ಎ ತಂಡದಿಂದ ಸರ್ಫರಾಝ್ ಖಾನ್ ಅವರನ್ನು ಹೊರಗಿಟ್ಟಿರುವುದು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ರಾಷ್ಟ್ರೀಯ ಆಯ್ಕೆದಾರ ಅಜಿತ್ ಅಗರ್ಕರ್ ವಿರುದ್ದ ಜನರು ಧಾರ್ಮಿಕ ಪಕ್ಷಪಾತದ ಆರೋಪ ಮಾಡಿದ್ದಾರೆ.

ಅಕ್ಟೋಬರ್-ನವೆಂಬರ್ ಅವಧಿಯಲ್ಲಿ ಬೆಂಗಳೂರಿನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿರುವ ಭಾರತ ಎ ತಂಡದ ಆಯ್ಕೆ ಪ್ರಕ್ರಿಯೆಯಲ್ಲಿ ಗಂಭೀರ್ ಧಾರ್ಮಿಕ ಪಕ್ಷಪಾತ ಪ್ರದರ್ಶಿಸಿದ್ದಾರೆ ಎಂದು ಕಾಂಗ್ರೆಸ್ ರಾಷ್ಟ್ರೀಯ ವಕ್ತಾರೆ ಶಮಾ ಮೊಹಮ್ಮದ್ ಪರೋಕ್ಷವಾಗಿ ಆರೋಪಿಸಿದ್ದಾರೆ.

ಭಾರತ ಎ ತಂಡವನ್ನು ಮಂಗಳವಾರ ಪ್ರಕಟಿಸಲಾಗಿದೆ. ಇದರಲ್ಲಿ ಸರ್ಫರಾಝ್ ಖಾನ್‌ರನ್ನು ಕೈಬಿಡುವ ಮೂಲಕ ಬಿಸಿಸಿಐ ಟೀಕೆಗೆ ಗುರಿಯಾಗಿದೆ. ಈ ನಿರ್ಧಾರವು ದೇಶೀಯ ಕ್ರಿಕೆಟ್‌ನಲ್ಲಿ ಸ್ಥಿರವಾಗಿ ಉತ್ತಮ ಪ್ರದರ್ಶನ ನೀಡುತ್ತಿರುವ ಆಟಗಾರನೊಬ್ಬನಿಗೆ ಮಾಡಿರುವ ಅನ್ಯಾಯ ಎಂದು ಜನರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಬಿಸಿಸಿಐ ನಿರ್ಧಾರವು ಮುಂಬೈ ಬ್ಯಾಟ್ಸ್‌ಮನ್ ಸರ್ಫರಾಝ್ ಖಾನ್ ಎರಡನೇ ಶ್ರೇಣಿಯ ತಂಡದಲ್ಲಿ ಸ್ಥಾನಕ್ಕಾಗಿ ಪರಿಗಣನೆಯಲ್ಲಿಯೇ ಇದ್ದಾರೆಯೇ ಎಂಬ ಸಂಶಯವನ್ನು ಹುಟ್ಟುಹಾಕಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಕಾಂಗ್ರೆಸ್‌ನ ರಾಷ್ಟ್ರೀಯ ವಕ್ತಾರೆ ಶಮಾ ಮೊಹಮ್ಮದ್, ಸರ್ಫರಾಝ್ ಅವರನ್ನು ಉಪನಾಮದ ಕಾರಣಕ್ಕೆ ಕೈ ಬಿಡಲಾಗಿದೆಯೇ? ಎಂದು ಪ್ರಶ್ನಿಸಿದ್ದಾರೆ. “ಈ ವಿಷಯದಲ್ಲಿ ಗೌತಮ್ ಗಂಭೀರ್ ಅವರ ನಿಲುವು ನಮಗೆ ತಿಳಿದಿದೆ” ಎಂದಿದ್ದಾರೆ.

“ಅಗರ್ಕರ್ ಮತ್ತು ಗಂಭೀರ್ ಅವರಿಂದ ಮತ್ತೊಂದು ವೃತ್ತಿಜೀವನ ನಾಶವಾಯಿತು” ಎಂದು ಮತ್ತೊಬ್ಬರು ಎಕ್ಸ್‌ ಬಳಕೆದಾರರು ಬರೆದುಕೊಂಡಿದ್ದಾರೆ.

ದೇಶೀಯ ಕ್ರಿಕೆಟ್‌ನಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿದ್ದರೂ ಸರ್ಫರಾಝ್ ಅವರನ್ನು ಭಾರತ ಎ ತಂಡಕ್ಕೆ ಏಕೆ ಆಯ್ಕೆ ಮಾಡಿಲ್ಲ ಎಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಹಾಗೂ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಪ್ರಶ್ನಿಸಿದ್ದಾರೆ.

ಸರ್ಫರಾಝ್ ಕೊನೆಯ ಬಾರಿಗೆ ರಾಷ್ಟ್ರೀಯ ತಂಡದಲ್ಲಿ 2024 ರ ನವೆಂಬರ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧದ ತವರು ಸರಣಿಯಲ್ಲಿ ಕಾಣಿಸಿಕೊಂಡಿದ್ದರು. ಆಸ್ಟ್ರೇಲಿಯಾದಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಆಡಲು ಅವರಿಗೆ ಅವಕಾಶ ಸಿಕ್ಕಿರಲಿಲ್ಲ.

ದೈಹಿಕ ಬದಲಾವಣೆಗಳನ್ನು ಮಾಡಿಕೊಂಡಿದ್ದರೂ, ಅವರನ್ನು ಇಂಗ್ಲೆಂಡ್ ಪ್ರವಾಸಕ್ಕೆ ಕಡೆಗಣಿಸಲಾಗಿತ್ತು. ವೆಸ್ಟ್ ಇಂಡೀಸ್ ವಿರುದ್ಧದ ತವರು ಸರಣಿಗೆ ಪರಿಗಣಿಸಿರಲಿಲ್ಲ.

ಮುಂಬರುವ ಸರಣಿಗೆ ಭಾರತ ಎ ತಂಡದಲ್ಲಿ ಸರ್ಫರಾಝ್ ಹೆಸರು ಇಲ್ಲದಿರುವುದು ಕ್ರಿಕೆಟ್ ಅಭಿಮಾನಿಗಳಲ್ಲಿ ಸ್ವಾಭಾವಿಕವಾಗಿಯೇ ಆಶ್ಚರ್ಯ ಉಂಟು ಮಾಡಿದೆ.

ಬೇಸಿಗೆಯಲ್ಲಿ, ಸರ್ಫರಾಝ್ ಖಾನ್ 17 ಕೆ.ಜಿ ತೂಕ ಕಳೆದುಕೊಂಡು ಹೆಚ್ಚು ತೆಳ್ಳಗಾಗಿದ್ದಾರೆ ಮತ್ತು ತಾನೆಂದೂ ಇರದಷ್ಟು ಫಿಟ್ ಆಗಿದ್ದಾರೆ.

ಮಂಗಳವಾರ, ಬಿಸಿಸಿಐ ದಕ್ಷಿಣ ಆಫ್ರಿಕಾ ಎ ವಿರುದ್ಧದ ಎರಡು ಪ್ರಥಮ ದರ್ಜೆ ಪಂದ್ಯಗಳಿಗೆ 15 ಜನರ ಭಾರತ ಎ ತಂಡವನ್ನು ಹೆಸರಿಸಿದೆ.

ಮಂಗಳವಾರ, ಬಿಸಿಸಿಐ ದಕ್ಷಿಣ ಆಫ್ರಿಕಾ ಎ ವಿರುದ್ಧದ ಫಸ್ಟ್ ಕ್ಲಾಸ್ ಪಂದ್ಯಗಳಿಗಾಗಿ 15 ಸದಸ್ಯರ ಭಾರತ ಎ ತಂಡವನ್ನು ಪ್ರಕಟಿಸಿದೆ.

ದಿನಕ್ಕೆ 18 ಗಂಟೆ ಬಲವಂತವಾಗಿ ದುಡಿಸಿ, ಥಳಿಸುತ್ತಿದ್ದ ಮಾಲೀಕ : ಬಳೆ ಕಾರ್ಖಾನೆಯಿಂದ ತಪ್ಪಿಸಿಕೊಂಡ 7 ಮಕ್ಕಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...