Homeಅಂತರಾಷ್ಟ್ರೀಯಆಕ್ರಮಿತ ಪಶ್ಚಿಮ ದಂಡೆ ಸ್ವಾಧೀನ ಮಸೂದೆಗೆ ಇಸ್ರೇಲ್ ಸಂಸತ್ತು ಪ್ರಾಥಮಿಕ ಅನುಮೋದನೆ

ಆಕ್ರಮಿತ ಪಶ್ಚಿಮ ದಂಡೆ ಸ್ವಾಧೀನ ಮಸೂದೆಗೆ ಇಸ್ರೇಲ್ ಸಂಸತ್ತು ಪ್ರಾಥಮಿಕ ಅನುಮೋದನೆ

- Advertisement -
- Advertisement -

ಆಕ್ರಮಿತ ಪಶ್ಚಿಮ ದಂಡೆಯನ್ನು ಅಧಿಕೃತವಾಗಿ ಸ್ವಾಧೀನಪಡಿಸಿಕೊಳ್ಳುವ ಅಥವಾ ಕಾನೂನು ಹೇರುವ ವಿವಾದಾತ್ಮಕ ಮಸೂದೆಗೆ ಇಸ್ರೇಲ್ ಸಂಸತ್ (ನೆಸೆಟ್) ಬುಧವಾರ (ಅ.22) ಪ್ರಾಥಮಿಕ ಅನುಮೋದನೆ ನೀಡಿದೆ.

“ಜೂಡಿಯಾ ಮತ್ತು ಸಮರಿಯಾದಲ್ಲಿ ಇಸ್ರೇಲಿ ಸಾರ್ವಭೌಮತ್ವದ ಅನ್ವಯ, 2025” ಎಂಬ ಶೀರ್ಷಿಕೆಯ ಈ ಮಸೂದೆಯನ್ನು ನೋಮ್ ಪಕ್ಷವನ್ನು ಪ್ರತಿನಿಧಿಸುವ ತೀವ್ರ ಬಲಪಂಥೀಯ ಸಂಸದ ಅವಿ ಮಾವೋಜ್ ಅವರು ಸಂಸತ್‌ನಲ್ಲಿ ಮಂಡಿಸಿದ್ದರು.

ಇಸ್ರೇಲಿ ಸಂಸತ್ತಿನ 120 ಶಾಸಕರಲ್ಲಿ 25-24 ಮತಗಳಿಂದ ಮಸೂದೆಯನ್ನು ಅಂಗೀಕರಿಸಲಾಗಿದೆ. ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಲಿಕುಡ್ ಪಕ್ಷವು ಮಸೂದೆಯನ್ನು ಬೆಂಬಲಿಸದಿದ್ದರೂ, ಅವರ ಒಕ್ಕೂಟದ ಕೆಲವು ಸದಸ್ಯರು, ರಾಷ್ಟ್ರೀಯ ಭದ್ರತಾ ಸಚಿವ ಇಟಮಾರ್ ಬೆನ್-ಗ್ವಿರ್ ಅವರ ಯಹೂದಿ ಶಕ್ತಿ ಪಕ್ಷ ಮತ್ತು ಹಣಕಾಸು ಸಚಿವ ಬೆಜಲೆಲ್ ಸ್ಮೋಟ್ರಿಚ್ ಅವರ ರಿಲೀಜಿಯಸ್ ಜಿಯೋನಿಸಂ ಪಕ್ಷದ ಸದಸ್ಯರು ಮಸೂದೆ ಪರ ಮತ ಚಲಾಯಿಸಿದ್ದಾರೆ.

ಇನ್ನು ಮಾಲೆ ಅಡುಮಿಮ್ ಪ್ರದೇಶವನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಸ್ತಾಪವನ್ನು ಹೊಂದಿರುವ ವಿರೋಧ ಪಕ್ಷದ ಎರಡನೇ ಮಸೂದೆಯು 31-9 ಮತಗಳಿಂದ ಅಂಗೀಕಾರಗೊಂಡಿದೆ.

ಮಸೂದೆಯು ಆರಂಭಿಕ ಮತದಾನದಲ್ಲಿ ಅಂಗೀಕಾರವಾಗಿದ್ದರೂ, ಅಂತಿಮ ಅಂಗೀಕಾರ ಪಡೆಯಲು ಇನ್ನೂ ಮೂರು ಸುತ್ತುಗಳನ್ನು ಒಳಗೊಂಡ ದೀರ್ಘ ಶಾಸಕಾಂಗ ಪ್ರಕ್ರಿಯೆನ್ನು ಹಾದು ಹೋಗಬೇಕಿದೆ.

ಇಸ್ರೇಲ್ ಬೈಬಲ್ ಮತ್ತು ಐತಿಹಾಸಿಕ ಸಂಬಂಧಗಳನ್ನು ಉಲ್ಲೇಖಿಸುವ ಪ್ರದೇಶವಾದ ಪಶ್ಚಿಮ ದಂಡೆಯ ಕೆಲವು ಭಾಗಗಳನ್ನು ಅಧಿಕೃತವಾಗಿ ಸ್ವಾಧೀನಪಡಿಸಿಕೊಳ್ಳಬೇಕೆಂದು ನೆತನ್ಯಾಹು ಅವರ ಒಕ್ಕೂಟದ ಸದಸ್ಯರು ವರ್ಷಗಳಿಂದ ಇಸ್ರೇಲ್‌ಗೆ ಕರೆ ನೀಡುತ್ತಿದ್ದಾರೆ.

1967ರ ಯುದ್ಧದಲ್ಲಿ ವಶಪಡಿಸಿಕೊಂಡ ಪ್ರದೇಶಗಳು ವಿವಾದಿತ ಭೂಮಿಯಲ್ಲಿ ಇರುವುದರಿಂದ ಅವುಗಳನ್ನು ಕಾನೂನುಬದ್ಧವಾಗಿ ಆಕ್ರಮಿಸಲಾಗಿಲ್ಲ ಎಂದು ಇಸ್ರೇಲ್ ವಾದಿಸುತ್ತಿದೆ. ಆದರೆ, ವಿಶ್ವಸಂಸ್ಥೆ ಸೇರಿದಂತೆ ಹೆಚ್ಚಿನ ಅಂತಾರಾಷ್ಟ್ರೀಯ ಸಮುದಾಯವು ಅವುಗಳನ್ನು ಆಕ್ರಮಿತವೆಂದು ಪರಿಗಣಿಸಿದೆ.

2024ರಲ್ಲಿ ವಿಶ್ವಸಂಸ್ಥೆಯ ಅತ್ಯುನ್ನತ ನ್ಯಾಯಾಲಯವು ಪಶ್ಚಿಮ ದಂಡೆ ಸೇರಿದಂತೆ ಪ್ಯಾಲೆಸ್ತೀನ್ ಪ್ರದೇಶಗಳ ಮೇಲಿನ ಇಸ್ರೇಲ್‌ನ ಆಕ್ರಮಣ ಮತ್ತು ಅಲ್ಲಿನ ಅದರ ವಸಾಹತುಗಳು ಕಾನೂನುಬಾಹಿರವಾಗಿದ್ದು, ಸಾಧ್ಯವಾದಷ್ಟು ಬೇಗ ಅದನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದೆ.

ಒಂದು ವೇಳೆ ಪಶ್ಚಿಮ ದಂಡೆಯ ಮಸೂದೆ ಅಂಗೀಕಾರವಾದರೂ, ಅದಕ್ಕೆ ಅಂತಾರಾಷ್ಟ್ರೀಯ ಮನ್ನಣೆ ಪಡೆಯಲು ಇಸ್ರೇಲ್ ಹೆಣಗಾಡಬೇಕಾಗುತ್ತದೆ. ಏಕೆಂದರೆ, ಜೆರುಸಲೆಮ್‌ನ ಅತ್ಯಂತ ನಿರ್ಣಾಯಕ ಬೆಂಬಲಿಗ ಅಮೆರಿಕವು ಈಗಾಗಲೇ ಪಶ್ಚಿಮ ದಂಡೆಯನ್ನು ಸ್ವಾಧೀನಪಡಿಸಿಕೊಳ್ಳಲು ಅವಕಾಶ ನೀಡುವುದಿಲ್ಲ ಎಂದು ಹೇಳಿದೆ.

ಪಶ್ಚಿಮ ದಂಡೆಯ ಸ್ವಾಧೀನವು ಇಸ್ರೇಲ್‌ಗೆ ತನ್ನ ನೆರೆಯ ರಾಷ್ಟ್ರಗಳೊಂದಿಗಿನ ಸಂಬಂಧದಲ್ಲಿ ಋಣಾತ್ಮಕ ಪರಿಣಾಮ ಬೀರಬಹುದು ಎಂದು ಹೇಳಲಾಗುತ್ತಿದೆ. ವಿಶೇಷವಾಗಿ, ಟ್ರಂಪ್‌ ಅವರ ಮೊದಲ ಅಧಿಕಾರಾವಧಿಯಲ್ಲಿ ನಡೆದ ಅಬ್ರಹಾಂ ಒಪ್ಪಂದದ ಮೂಲಕ ಇಸ್ರೇಲ್‌ನೊಂದಿಗೆ ರಾಜತಾಂತ್ರಿಕ ಸಂಬಂಧ ಹೊಂದಿರುವ ಪ್ರಮುಖ ಅರಬ್ ರಾಷ್ಟ್ರವಾದ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಪಶ್ಚಿಮ ದಂಡೆಯ ಸ್ವಾಧೀನವನ್ನು ತಾನು ಸಹಿಸುವುದಿಲ್ಲ ಎಂದು ಘೋಷಿಸಿದೆ. ಇದು ಯುಎಇಗೆ ಒಂದು ಗಂಭೀರ ಸಮಸ್ಯೆಯಾಗಿದೆ ಎಂದು ಎಚ್ಚರಿಕೆ ನೀಡಿದೆ.

ಪಶ್ಚಿಮ ದಂಡೆ ಮತ್ತು ಮಾಲೆ ಅದುಮಿಮ್ ಸಂಬಂಧಿತ ಮಸೂದೆಗಳಿಗೆ ಇಸ್ರೇಲ್‌ ಮತ ಚಲಾಯಿಸಿರುವುದನ್ನು ಹಮಾಸ್ ತೀವ್ರವಾಗಿ ಖಂಡಿಸಿದೆ. ಇದು ವಸಾಹತುಗಾರಿಕೆ ಆಕ್ರಮಣದ ಅತ್ಯಂತ ಕೆಟ್ಟ ಸ್ವರೂಪ ಎಂದು ಹಮಾಸ್ ಕಿಡಿಕಾರಿದೆ. ಪಶ್ಚಿಮ ದಂಡೆಯ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಇಸ್ರೇಲ್‌ನ ಪ್ರಯತ್ನಗಳು ಕಾನೂನುಬಾಹಿರ ಮತ್ತು ಅಮಾನ್ಯವೆಂದು ಹಮಾಸ್ ಒತ್ತಿ ಹೇಳಿದೆ.

ಪಶ್ಚಿಮ ದಂಡೆಯ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ವಿಷಯವು ಇಸ್ರೇಲ್‌ನಲ್ಲಿ ದೀರ್ಘಕಾಲದಿಂದ ಚರ್ಚೆಯಲ್ಲಿದೆ. ಏಕೆಂದರೆ ಈ ಭೂಮಿಯನ್ನು ಪ್ಯಾಲೆಸ್ತೀನ್‌ನವರು ತಮ್ಮ ಭವಿಷ್ಯದ ರಾಷ್ಟ್ರಕ್ಕಾಗಿ ಬಯಸುತ್ತಿದ್ದಾರೆ. 2020ರ ಚುನಾವಣೆಯಲ್ಲಿ ಈ ಭೂಮಿಯ ಸ್ವಾಧೀನದ ಭರವಸೆಯನ್ನು ನೀಡಿದ್ದ ಇಸ್ರೇಲ್ ಪ್ರಧಾನಿ ನೆತನ್ಯಾಹು, ಯುಎಇ ಮತ್ತು ಬಹ್ರೇನ್‌ನೊಂದಿಗೆ ರಾಜತಾಂತ್ರಿಕ ಸಂಬಂಧ ಸ್ಥಾಪಿಸುವ ಒಪ್ಪಂದಕ್ಕೆ ಒಲವು ತೋರಿದ್ದಾರೆ. ಆದರೆ, ಸೆಪ್ಟೆಂಬರ್‌ನಲ್ಲಿ ಕೆಲವು ಪಾಶ್ಚಿಮಾತ್ಯ ದೇಶಗಳು ಪ್ಯಾಲೆಸ್ತೀನ್‌ಗೆ ಪ್ರತ್ಯೇಕ ರಾಷ್ಟ್ರದ ಸ್ಥಾನಮಾನ ನೀಡಿದ್ದರು. ಆ ಬಳಿಕ ನೆತನ್ಯಾಹು ಈ ವಿಷಯವನ್ನು ಮತ್ತೆ ಚರ್ಚೆಗೆ ತಂದಿದ್ದಾರೆ.

ಕಾಗದಕ್ಕೆ ಸೀಮಿತವಾದ ಕದನ ವಿರಾಮ : ಗಾಝಾ ಮೇಲೆ ಅಕ್ರಮಣ ಮುಂದುವರಿಸಿದ ಇಸ್ರೇಲ್; ನೂರಾರು ಪ್ಯಾಲೆಸ್ತೀನಿಯರ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...

44 ಲಕ್ಷ ಮತದಾರರಿಗೆ ನೋಟಿಸ್: BLA ಗಳಿಗೆ ಪಟ್ಟಿ ನೀಡಿ, ಪಾರದರ್ಶಕತೆ ಕಾಯ್ದುಕೊಳ್ಳಲು ‘ಜಾಗೃತ ಕರ್ನಾಟಕ’ ಒತ್ತಾಯ

ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಪ್ರಕಟಗೊಳ್ಳುತ್ತಿರುವ ಕರಡು ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಹಾಗೂ ನೋಟಿಸ್ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಆಗ್ರಹಿಸಿ ‘ಜಾಗೃತ...

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...

ಎಸ್‌ಐಆರ್‌ ಕರಡು ತಿರಸ್ಕರಿಸಿದ ನಾಗರಿಕ ಸಂಘಟನೆಗಳು; ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ

ಆಗಸ್ಟ್ 24 ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮತದಾರರ ಎಸ್‌ಐಆರ್‌ ಕರಡು ಪಟ್ಟಿಯನ್ನು ಕರ್ನಾಟಕದ ನಾಗರಿಕ ಸಂಘಟನೆಗಳು ತಿರಸ್ಕರಿಸಿದ್ದು, ಲಕ್ಷಾಂತರ ಮತದಾರರಿಗೆ ನೋಟಿಸ್‌ ಕೊಡಲು ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ...

‘ಕೇಂದ್ರ ಸರ್ಕಾರ ಜಾತಿ ಗಣತಿಗೆ ರೂಪಿಸಿರುವ ಪ್ರಶ್ನಾವಳಿ ವಿಧಾನ ದಾರಿತಪ್ಪಿಸುವಂತಿವೆ’: ಹೊಸ ಪ್ರಶ್ನಾವಳಿ ರಚಿಸಲು ಪ್ರಧಾನಿ ಮೋದಿಗೆ ಖರ್ಗೆ-ರಾಹುಲ್ ಪತ್ರ

ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ದತ್ತಾಂಶ ಸಂಗ್ರಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ರೂಪಿಸಿರುವ ಪ್ರಶ್ನಾವಳಿಯ ವಿಧಾನವು ಅತ್ಯಂತ ದಾರಿತಪ್ಪಿಸುವಂತಿದೆ ಎಂದು ಗಂಭೀರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ...

ಪತ್ರಕರ್ತ ಅಭಿಷೇಕ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಸುಪ್ರೀಂ ಕೋರ್ಟ್ ಆದೇಶ

ರಾಮ ಮಂದಿರ ದೇಣಿಗೆ ಅಕ್ರಮದ ಕುರಿತು ವರದಿ ಮಾಡಿದ್ದ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ಅವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದ್ದು,...

2027ರ ಜನಗಣತಿಯಲ್ಲಿ ಪೋಷಕರ ಧರ್ಮ, ಜನ್ಮಸ್ಥಳದ ವಿವರ ಏಕೆ? ಕೇಂದ್ರದ ವಿರುದ್ಧ ಸಿಪಿಐ(ಎಂ) ಆಕ್ರೋಶ

2027ರ ಜನಗಣತಿ ಪ್ರಶ್ನಾವಳಿಯಲ್ಲಿ ಪೋಷಕರ ಧರ್ಮ ಹಾಗೂ ಜನ್ಮಸ್ಥಳದ ಕುರಿತಾದ ವಿವರಗಳನ್ನು ಸಂಗ್ರಹಿಸಲು ಉದ್ದೇಶಿಸಿರುವುದರ ವಿರುದ್ಧ ಸಿಪಿಐ(ಎಂ) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಈ ಕ್ರಮವು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಗೆ ತರುವ...

ಟಿಎಂಸಿ ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಶಾಕ್: 20 ಎಂಪಿಗಳಿಗೆ ನೋಟಿಸ್ ಜಾರಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು, ಎನ್‌ಸಿಪಿಐ (NCPI) ಎಂಬ ಅಷ್ಟಾಗಿ ಜನಪ್ರಿಯವಲ್ಲದ ಪಕ್ಷದೊಂದಿಗೆ ವಿಲೀನಗೊಂಡು ಎನ್‌ಡಿಎ ಒಕ್ಕೂಟವನ್ನು ಸೇರಿಕೊಂಡಿರುವ 20 ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಟಿಎಂಸಿ ಪ್ರಧಾನ...