Homeಮುಖಪುಟಹೊಸ ಐಟಿ ನಿಯಮಗಳು ಜಾರಿ : ಹಿರಿಯ ಅಧಿಕಾರಿಗಳಿಗೆ ಮಾತ್ರ ಕಂಟೆಂಟ್ ತೆಗೆದು ಹಾಕಲು ಆದೇಶಿಸುವ...

ಹೊಸ ಐಟಿ ನಿಯಮಗಳು ಜಾರಿ : ಹಿರಿಯ ಅಧಿಕಾರಿಗಳಿಗೆ ಮಾತ್ರ ಕಂಟೆಂಟ್ ತೆಗೆದು ಹಾಕಲು ಆದೇಶಿಸುವ ಅಧಿಕಾರ

- Advertisement -
- Advertisement -

ಕೇಂದ್ರ ಸರ್ಕಾರವು 2021ರ ಮಾಹಿತಿ ತಂತ್ರಜ್ಞಾನ ನಿಯಮಗಳನ್ನು ಬುಧವಾರ ಬದಲಾಯಿಸಿದೆ. ಈ ಬದಲಾವಣೆಯಿಂದ, ಇಂಟರ್‌ನೆಟ್‌ನಲ್ಲಿ ಹಾಕಲಾದ ವಿಷಯ (ಕಂಟೆಂಟ್) ಅನ್ನು ತೆಗೆದುಹಾಕಲು ಯಾವ ಸರ್ಕಾರಿ ಸಂಸ್ಥೆಗಳು ಅಥವಾ ಅಧಿಕಾರಿಗಳು ಆದೇಶಿಸಬಹುದು ಎಂಬುದನ್ನು ಸ್ಪಷ್ಟವಾಗಿ ತಿಳಿಸಿದೆ.

ಈ ಹಿಂದಿನ ನಿಯಮದಲ್ಲಿ ಸರ್ಕಾರ ಅಥವಾ ಅದರ ಸಂಸ್ಥೆ ಸಾಮಾಜಿಕ ಮಾಧ್ಯಮ ವೇದಿಕೆಗಳಿಂದ ವಿಷಯವನ್ನು ತೆಗೆದುಹಾಕಲು ನಿರ್ದೇಶಿಸಬಹುದು ಎಂದು ಹೇಳಲಾಗಿತ್ತು.

ತಿದ್ದುಪಡಿ ನಿಯಮ ಅಥವಾ ಹೊಸ ನಿಯಮದಲ್ಲಿ, ಸಾಮಾಜಿಕ ಮಾಧ್ಯಮ ವೇದಿಕೆಗಳ ವಿಷಯಗಳನ್ನು ತೆಗೆದುಹಾಕಲು ಅಥವಾ ಅದರ ಬಳಕೆಗೆ ನಿರ್ಬಂಧ ವಿಧಿಸಲು ಸಮರ್ಥ ನ್ಯಾಯವ್ಯಾಪ್ತಿಯ ನ್ಯಾಯಾಲಯದ ಆದೇಶದ ಮೂಲಕ ಅಥವಾ ಜಂಟಿ ಕಾರ್ಯದರ್ಶಿ ಅಥವಾ ನಿರ್ದೇಶಕರ ಹುದ್ದೆಗಿಂತ ಕಡಿಮೆಯಿಲ್ಲದ ಸರ್ಕಾರಿ ಅಧಿಕಾರಿಯ ಸೂಚನೆಯ ಮೂಲಕ ನಿರ್ದೇಶಿಸಬಹುದು ಎಂದು ಹೇಳಲಾಗಿದೆ.

ಪೊಲೀಸರಿಂದ ಟೇಕ್-ಡೌನ್ ನೋಟಿಸ್ (ತೆಗೆದು ಹಾಕುವ ಪತ್ರ) ಬಂದರೆ, ಅದನ್ನು ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ ಹುದ್ದೆಗಿಂತ ಕಡಿಮೆಯಿಲ್ಲದ ಅಧಿಕಾರಿ ಹೊರಡಿಸಿರಬೇಕು. ಅಲ್ಲದೆ, ಅಂತಹ ಸೂಚನೆಗಳು ‘ಲಿಖಿತ ರೂಪದಲ್ಲಿ ತಾರ್ಕಿಕ ಮಾಹಿತಿ’ ಆಗಿರಬೇಕು ಎಂದು ಕೇಂದ್ರ ಸರ್ಕಾರ ಆದೇಶಿಸಿದೆ.

ಮಾರ್ಚ್‌ನಲ್ಲಿ, ಸಾಮಾಜಿಕ ಮಾಧ್ಯಮ ಕಂಪನಿ ಎಕ್ಸ್‌ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 79ರ ಅಡಿಯಲ್ಲಿ ತನ್ನ ವೇದಿಕೆಯಲ್ಲಿ ಪೋಸ್ಟ್ ಮಾಡಲಾದ ವಿಷಯವನ್ನು ತೆಗೆದುಹಾಕಲು ಅಥವಾ ನಿರ್ಬಂಧಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆದೇಶಗಳನ್ನು ಹೊರಡಿಸುತ್ತಿರುವ ವಿಧಾನವನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಕಂಪನಿಯು ತನ್ನ ಅರ್ಜಿಯಲ್ಲಿ, ವಿಷಯವನ್ನು ತೆಗೆದುಹಾಕುವ ಸೂಚನೆಗಳು ಸಾಮಾನ್ಯವಾಗಿ ‘ಸರಿಯಾದ ತಾರ್ಕಿಕತೆಯನ್ನು ಹೊಂದಿರುವುದಿಲ್ಲ’ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಗೆ ಕಾರ್ಯವಿಧಾನಕ್ಕೆ ಅನುಗುಣವಾಗಿಲ್ಲ ಎಂದು ವಾದಿಸಿತ್ತು.

ಮಾಹಿತಿ ತಂತ್ರಜ್ಞಾನ ನಿಯಮ 3(1)(d) ಅಡಿಯಲ್ಲಿ, ನ್ಯಾಯಾಲಯದ ಆದೇಶ ಅಥವಾ ಸರ್ಕಾರಿ ಅಧಿಸೂಚನೆಯನ್ನು ಸ್ವೀಕರಿಸಿದ 36 ಗಂಟೆಗಳ ಒಳಗೆ ಸಾಮಾಜಿಕ ಮಾಧ್ಯಮ ವೇದಿಕೆಗಳು ವಿಷಯವನ್ನು ತೆಗೆದುಹಾಕಬೇಕಾಗುತ್ತದೆ.

ಸೆಪ್ಟೆಂಬರ್‌ನಲ್ಲಿ ಹೈಕೋರ್ಟ್ ಎಕ್ಸ್ ಅರ್ಜಿಯನ್ನು ವಜಾಗೊಳಿಸಿತ್ತು. ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ಅನಿಯಂತ್ರಿತ ಸ್ವಾತಂತ್ರ್ಯವನ್ನು ನೀಡಲು ಸಾಧ್ಯವಿಲ್ಲ ಎಂದು ಹೇಳಿತ್ತು. ಎಕ್ಸ್ ಈ ತೀರ್ಪನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲು ಸಿದ್ಧತೆ ನಡೆಸುತ್ತಿದೆ.

ವಿವರವಾದ ಕಾರಣವಿಲ್ಲದೆ ಅಧಿಕಾರಿಗಳು ಟೇಕ್-ಡೌನ್ ನೋಟಿಸ್‌ಗಳನ್ನು ಹೊರಡಿಸುತ್ತಿದ್ದಾರೆ. ಅವರ ಆದೇಶವನ್ನು 36 ಗಂಟೆಗಳಲ್ಲಿ ಪಾಲಿಸುವಂತೆ ಒತ್ತಾಯಿಸಲಾಗುತ್ತಿದೆ ಎಂದು ಎಕ್ಸ್ ಹೈಕೋರ್ಟ್‌ನಲ್ಲಿ ವಾದಿಸಿತ್ತು.

ಬುಧವಾರದ ಹೊಸ ತಿದ್ದುಪಡಿ ನಿಯಮಗಳ ಜಾರಿ ಮೂಲಕ ಕೇಂದ್ರ ಸರ್ಕಾರವು ಆನ್‌ಲೈನ್ ವಿಷಯವನ್ನು ತೆಗೆದುಹಾಕಲು ಆದೇಶಿಸಿ ನೋಟಿಸ್‌ಗಳನ್ನು ನೀಡುವ ಪರಿಶೀಲನಾ ಕಾರ್ಯವಿಧಾನವನ್ನು ಪರಿಚಯಿಸಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕನಿಷ್ಠ ಕಾರ್ಯದರ್ಶಿ ಹಂತದ ಅಧಿಕಾರಿಯನ್ನು ನೇಮಿಸಬೇಕು. ಈ ಅಧಿಕಾರಿಯು ಪ್ರತಿ ತಿಂಗಳು ಆನ್‌ಲೈನ್ ವಿಷಯವನ್ನು ತೆಗೆದುಹಾಕಲು ಕಳುಹಿಸಲಾದ ನೋಟಿಸ್‌ಗಳನ್ನು ಪರಿಶೀಲಿಸಬೇಕು. ಇದರಿಂದಾಗಿ ಈ ನೋಟಿಸ್‌ಗಳು ಅಗತ್ಯವಾಗಿವೆಯೇ, ಸೂಕ್ತವಾಗಿವೆಯೇ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಗೆ (ಐಟಿ ಕಾಯ್ದೆ) ಅನುಗುಣವಾಗಿವೆಯೇ ಎಂದು ಖಚಿತಪಡಿಸಿಕೊಳ್ಳಬೇಕು ಎಂದಿದೆ.

ಈ ತಿದ್ದುಪಡಿಯ ಪ್ರಕಾರ, ಅಧಿಕಾರಿಗಳು ಕಳುಹಿಸುವ ನೋಟಿಸ್‌ಗಳು, ಕಾನೂನು ಆಧಾರ ಮತ್ತು ಉಲ್ಲೇಖಿಸಲಾದ ಕಾನೂನು ನಿಬಂಧನೆ, ಕಾನೂನುಬಾಹಿರ ಕೃತ್ಯದ ಸ್ವರೂಪ ಮತ್ತು ತೆಗೆದುಹಾಕಬೇಕಾದ ಅಥವಾ ನಿಷ್ಕ್ರಿಯಗೊಳಿಸಬೇಕಾದ ಮಾಹಿತಿಯ ನಿರ್ದಿಷ್ಟ ಯುಆರ್‌ಎಲ್‌ ಗುರುತಿನ ಸಂಖ್ಯೆ ಅಥವಾ ಇತರ ಎಲೆಕ್ಟ್ರಾನಿಕ್ ಸ್ಥಳ, ದಿನಾಂಕ ಅಥವಾ ಸಂನಿವೇಶ ಸಂಪರ್ಕ ಸೇರಿದಂತೆ ಕೆಲವು ವಿಷಯಗಳನ್ನು ಸ್ಪಷ್ಟವಾಗಿ ಒಳಗೊಂಡಿರಬೇಕು.

ಡೀಪ್‌ಫೇಕ್ ದುರುಪಯೋಗ ತಡೆಗಟ್ಟಲು ಎಐ ಮೇಲೆ ನಿಯಂತ್ರಣ ಕೋರಿ ಸುಪ್ರೀಂ ಕೋರ್ಟ್‌ಗೆ ಪಿಐಎಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...