Homeಮುಖಪುಟಒಬಿಸಿ ಮೀಸಲಾತಿ ಜಾರಿ ಬಳಿಕ ಜನಸಂಘವು ಕರ್ಪೂರಿ ಠಾಕೂರ್ ಸರ್ಕಾರವನ್ನು ಉರುಳಿಸಿತು: ಮೋದಿಯ...

ಒಬಿಸಿ ಮೀಸಲಾತಿ ಜಾರಿ ಬಳಿಕ ಜನಸಂಘವು ಕರ್ಪೂರಿ ಠಾಕೂರ್ ಸರ್ಕಾರವನ್ನು ಉರುಳಿಸಿತು: ಮೋದಿಯ ಕರ್ಪೂರಿ ಗ್ರಾಮ ಭೇಟಿಗೆ ಕಾಂಗ್ರೆಸ್ ಟೀಕೆ

- Advertisement -
- Advertisement -

ಸಮಾಜವಾದಿ ನಾಯಕ ಹಾಗೂ ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರ ಜನ್ಮಸ್ಥಳಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ, ಹಳೆ ವಿಷಯಗಳನ್ನು ಉಲ್ಲೇಖಿಸಿ ಕಾಂಗ್ರೆಸ್ ಪ್ರಶ್ನೆಗಳನ್ನು ಕೇಳಿದೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಶುಕ್ರವಾರ (ಅ.24) ಪೋಸ್ಟ್ ಹಾಕಿರುವ ರಾಷ್ಟ್ರೀಯ ಕಾಂಗ್ರೆಸ್ ವಕ್ತಾರ ಜೈರಾಮ್ ರಮೇಶ್, “1979ರ ಏಪ್ರಿಲ್‌ನಲ್ಲಿ ಜನಸಂಘವು ಕರ್ಪೂರಿ ಠಾಕೂರ್ ಅವರ ಬಿಹಾರ ಸರ್ಕಾರವನ್ನು ಉರುಳಿಸಿರುವುದು ಸತ್ಯ ಅಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಮುಂದುವರಿದು, “ಆಗ ಕರ್ಪೂರಿ ಠಾಕೂರ್ ಅವರನ್ನು ಆರ್‌ಎಸ್‌ಎಸ್‌ ಮತ್ತು ಜನಸಂಘದ ನಾಯಕರು ಅತ್ಯಂತ ಕೆಟ್ಟದಾಗಿ ನಿಂದಿಸಿದ್ದರು ಎಂಬುದು ಸತ್ಯವಲ್ಲವೇ? ಎಂದು ಜೈರಾಮ್ ರಮೇಶ್ ಕೇಳಿದ್ದಾರೆ.

“ಸಂವಿಧಾನದಡಿಯಲ್ಲಿ ಬಿಹಾರದ ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು, ಒಬಿಸಿಗಳು ಮತ್ತು ಇಬಿಸಿಗಳಿಗೆ ಶೇಕಡ 65ರಷ್ಟು ಮೀಸಲಾತಿ ಒದಗಿಸುವ ಕಾನೂನಿಗೆ ರಕ್ಷಣೆ ನೀಡಲು ಪ್ರಧಾನಿ ಮತ್ತು ರಾಜ್ಯದಲ್ಲಿನ ಅವರ ‘ಟ್ರಬಲ್ ಇಂಜಿನ್ ಸರ್ಕಾರ’ ಏನೂ ಮಾಡಿಲ್ಲ ಎಂಬುದು ಸತ್ಯವಲ್ಲವೇ? ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

“ಏಪ್ರಿಲ್ 28, 2024ರಂದು ಪ್ರಧಾನ ಮಂತ್ರಿಯವರು ಜಾತಿ ಗಣತಿಗಾಗಿ ಒತ್ತಾಯಿಸಿದವರನ್ನು ‘ನಗರ ನಕ್ಸಲರು’ ಎಂದಿರುವುದು ಸತ್ಯವಲ್ಲವೇ?, ಸಂಸತ್ತಿನಲ್ಲಿ (ಜುಲೈ 20, 2021) ಹಾಗೂ ಸುಪ್ರೀಂ ಕೋರ್ಟ್‌ನಲ್ಲಿ (ಸೆಪ್ಟೆಂಬರ್ 21, 2021) ಅವರ ಸರ್ಕಾರವು ಜಾತಿ ಗಣತಿಯನ್ನು ಸ್ಪಷ್ಟವಾಗಿ ತಿರಸ್ಕರಿಸಿತಲ್ಲವೇ? ಎಂದಿದ್ದಾರೆ.

“ಭಾರತದ ಸಂವಿಧಾನದಡಿಯಲ್ಲಿ ಬಿಹಾರದ ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು, ಒಬಿಸಿಗಳು ಮತ್ತು ಇಬಿಸಿಗಳಿಗೆ ಶೇಕಡ 65ರಷ್ಟು ಮೀಸಲಾತಿ ಕಾನೂನಿಗೆ ರಕ್ಷಣೆ ನೀಡಲು ಪ್ರಧಾನಿ ಮೋದಿ ಮತ್ತು ಬಿಹಾರದ ಅವರ ‘ಟ್ರಬಲ್ ಇಂಜಿನ್ ಸರ್ಕಾರ’ ಏನೂ ಮಾಡಿಲ್ಲ ಎಂಬುದು ಸತ್ಯವಲ್ಲವೇ. ಕಾಂಗ್ರೆಸ್ ಸರ್ಕಾರ ಸೆಪ್ಟೆಂಬರ್ 1994ರಲ್ಲೇ  ತಮಿಳುನಾಡಿನಲ್ಲಿ ಇದೇ ರೀತಿಯ ಕಾನೂನಿಗೆ ರಕ್ಷಣೆ ಒದಗಿಸಿದೆ” ಎಂದು ಜೈರಾಮ್ ರಮೇಶ್ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಬಿಹಾರದ ಸಮಸ್ತಿಪುರ ಮತ್ತು ಬೇಗುಸರಾಯ್ ಜಿಲ್ಲೆಗಳಲ್ಲಿ ಶುಕ್ರವಾರ ಎರಡು ಚುನಾವಣಾ ರ‍್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅದಕ್ಕೂ ಮುನ್ನ ಕರ್ಪೂರಿ ಠಾಕೂರ್ ಅವರ ಜನ್ಮಸ್ಥಳವಾದ ಕರ್ಪುರಿ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಬಿಹಾರದ ಪ್ರಸಿದ್ದ ರಾಜಕೀಯ ನಾಯಕ ಕರ್ಪೂರಿ ಠಾಕೂರ್ ಅವರಿಗೆ ಕಳೆದ ವರ್ಷ ಎನ್‌ಡಿಎ ಸರ್ಕಾರ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಿತ್ತು.

ಬಿಹಾರ ಚುನಾವಣೆ: ಆರ್‌ಜೆಡಿ ಬೆಂಬಲಿಸಿ ತಮ್ಮ ನಾಮಪತ್ರ ಹಿಂಪಡೆದ ನಾಲ್ವರು ಮಹಾಘಟಬಂಧನ ಅಭ್ಯರ್ಥಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....