ಕೊಕೇನ್ ಸಾಗಣೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಮಿಳು ನಟರಾದ ಕೆ. ಶ್ರೀಕಾಂತ್, ಕೃಷ್ಣ ಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಅಕ್ಟೋಬರ್ 27 ರಂದು ಇ.ಡಿ. ವಲಯ ಕಚೇರಿ ಶ್ರೀಕಾಂತ್ (46) ಅವರಿಗೆ ಸಮನ್ಸ್ ಜಾರಿ ಮಾಡಿದ್ದರೆ, ಅಕ್ಟೋಬರ್ 28 ರಂದು ಕೇಂದ್ರ ತನಿಖಾ ಸಂಸ್ಥೆಯ ಮುಂದೆ ಹಾಜರಾಗುವಂತೆ ಕುಮಾರ್ ಅವರನ್ನು ಕೇಳಲಾಗಿದೆ ಎಂದು ಅವರು ಹೇಳಿದರು.
ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಇಬ್ಬರು ನಟರ ಹೇಳಿಕೆಗಳನ್ನು ದಾಖಲಿಸಲಾಗುವುದು. ಜೂನ್ನಲ್ಲಿ ಚೆನ್ನೈ ಪೊಲೀಸರು ದಾಖಲಿಸಿದ ಎಫ್ಐಆರ್ನಿಂದ ಉದ್ಭವಿಸಿದ ಕೊಕೇನ್ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸರು ಬಂಧಿಸಿದ ಇತರ ಕೆಲವರ ಜೊತೆಗೆ ಇಬ್ಬರು ನಟರು ಜುಲೈನಲ್ಲಿ ಮದ್ರಾಸ್ ಹೈಕೋರ್ಟ್ನಿಂದ ಷರತ್ತುಬದ್ಧ ಜಾಮೀನು ಪಡೆದರು.
ಶ್ರೀಕಾಂತ್ ಮತ್ತು ಇತರರಿಗೆ ಕೊಕೇನ್ ಪೂರೈಸಿದ ಆರೋಪದ ಮೇಲೆ ಎಐಎಡಿಎಂಕೆಯ ಮಾಜಿ ಕಾರ್ಯಕಾರಿಣಿ ಟಿ. ಪ್ರಸಾದ್ ಅವರನ್ನು ಈ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಕೈಮೇಲೆ ಡೆತ್ ನೋಟ್ ಬರೆದುಕೊಂಡು ಸರ್ಕಾರಿ ವೈದ್ಯೆ ಆತ್ಮಹತ್ಯೆ; ಪೊಲೀಸ್ ಅಧಿಕಾರಿಗಳ ಮೇಲೆ ಅತ್ಯಾಚಾರ ಆರೋಪ


