Homeಮುಖಪುಟಆರ್‌ಎಸ್‌ಎಸ್ ಕಾರ್ಯಕ್ರಮದಲ್ಲಿ ಮದ್ರಾಸ್ ಹೈಕೋರ್ಟ್ ನ್ಯಾ. ಸ್ವಾಮಿನಾಥನ್ ಸಂವಿಧಾನದ ವಿರುದ್ದ ಮಾತನಾಡಿದ್ದಾರೆ: ನಿವೃತ್ತ ನ್ಯಾ. ಕೆ....

ಆರ್‌ಎಸ್‌ಎಸ್ ಕಾರ್ಯಕ್ರಮದಲ್ಲಿ ಮದ್ರಾಸ್ ಹೈಕೋರ್ಟ್ ನ್ಯಾ. ಸ್ವಾಮಿನಾಥನ್ ಸಂವಿಧಾನದ ವಿರುದ್ದ ಮಾತನಾಡಿದ್ದಾರೆ: ನಿವೃತ್ತ ನ್ಯಾ. ಕೆ. ಚಂದ್ರು

- Advertisement -
- Advertisement -

ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರು ಜಾತ್ಯತೀತತೆ ಮತ್ತು ಕಾನೂನಿನ ನಿಯಮಕ್ಕೆ ವಿರುದ್ಧವಾದ ವಿಚಾರಗಳ ಪರವಾಗಿ ಬ್ಯಾಟಿಂಗ್ ಮಾಡುವ ಮೂಲಕ ಸಂವಿಧಾನಕ್ಕೆ ಮತ್ತು ತಮ್ಮ ಪ್ರಮಾಣವಚನಕ್ಕೆ ದ್ರೋಹ ಎಸಗಿದ್ದಾರೆ ಎಂದು ನಿವೃತ್ತ ನ್ಯಾಯಮೂರ್ತಿ ಕೆ. ಚಂದ್ರು ಅಕ್ಟೋಬರ್ 22ರಂದು ಚೆನ್ನೈನಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

ಹಾಲಿ ನ್ಯಾಯಾಧೀಶರ ವಿರುದ್ಧ ಕಟು ಟೀಕೆ ಮಾಡಿದ ನ್ಯಾಯಮೂರ್ತಿ ಚಂದ್ರು, ನ್ಯಾಯಮೂರ್ತಿ ಸ್ವಾಮಿನಾಥನ್ ಅವರನ್ನು ಒಬ್ಬ ‘ವಿಚಿತ್ರ ವ್ಯಕ್ತಿ’ ಎಂದಿದ್ದು, ಅವರು ನ್ಯಾಯಾಧೀಶರಾಗಿ ಸಂವಿಧಾನವನ್ನು ಎತ್ತಿಹಿಡಿಯುವುದಾಗಿ ಪ್ರಮಾಣವಚನ ಸ್ವೀಕರಿಸಿದ್ದರೂ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಕಾರ್ಯಕ್ರಮದಲ್ಲಿ ಸಂವಿಧಾನದ ವಿರುದ್ಧ ಮಾತನಾಡಿದ್ದಾರೆ ಎಂದು ತಿಳಿಸಿದ್ದಾರೆ.

“ಸಂವಿಧಾನ ಮತ್ತು ಸುಪ್ರೀಂ ಕೋರ್ಟ್‌ನ ರಕ್ಷಣೆ” ಎಂಬ ಶೀರ್ಷಿಕೆಯಡಿ ವಿಡುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ವಕೀಲರ ವಿಭಾಗ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನ್ಯಾಯಮೂರ್ತಿ ಚಂದ್ರು ಗಂಭೀರ ಆರೋಪಗಳನ್ನು ಮಾಡಿದ್ದಾರೆ.

“ಆ ಜಿ.ಆರ್. ಸ್ವಾಮಿನಾಥನ್ ಒಬ್ಬ ವಿಚಿತ್ರ ವ್ಯಕ್ತಿ. ನಾನು ಇದನ್ನು ಹೇಳಲು ಕಾರಣ ಸಂವಿಧಾನದ ಪ್ರಕಾರ ನಾವು ನ್ಯಾಯಾಧೀಶರಾದಾಗ ‘ನಾನು ಭಯ ಅಥವಾ ಪಕ್ಷಪಾತವಿಲ್ಲದೆ, ದ್ವೇಷವಿಲ್ಲದೆ ಸಂವಿಧಾನವನ್ನು ಎತ್ತಿಹಿಡಿಯುತ್ತೇನೆ’ ಎಂದು ನಾವು ದೃಢವಾಗಿ ಪ್ರಮಾಣ ವಚನ ಸ್ವೀಕರಿಸಬೇಕು. ಆದರೆ, ಸ್ವಾಮಿನಾಥನ್ ಅದನ್ನು ಉಲ್ಲಂಘಿಸಿದ್ದಾರೆ. ಅವರ ಹೇಳಿಕೆಗಳು ಪ್ರಮಾಣ ವಚನಕ್ಕೆ ವಿರುದ್ಧವಾಗಿದೆ” ಎಂದು ಚಂದ್ರು ಹೇಳಿದ್ದಾರೆ. 

ನ್ಯಾಯಮೂರ್ತಿ ಸ್ವಾಮಿನಾಥನ್ ಅವರು ಆರ್‌ಎಸ್‌ಎಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ ಮತ್ತು ಭಾರತದ ಸಂವಿಧಾನದ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. “ನಮ್ಮ ಸಂವಿಧಾನ 1935ರ ಭಾರತ ಸರ್ಕಾರಿ ಕಾಯ್ದೆಯಿಂದ ನಕಲು ಮಾಡಿ ಪುಸ್ತಕವಾಗಿದೆ” ಎಂದು ಹೇಳಿದ್ದಾರೆ ಎಂದು ಚಂದ್ರು ಆರೋಪಿಸಿದ್ದಾರೆ.

“ಹರಿಯಾಣದಲ್ಲಿ ನಡೆದ ಆರ್‌ಎಸ್‌ಎಸ್ ಸಭೆಯಲ್ಲಿ, ಭಾರತದ ಸಂವಿಧಾನವನ್ನು 1935ರ ಕಾನೂನಿನಿಂದ ನಕಲು ಮಾಡಲಾಗಿದೆ ಮತ್ತು ನಮ್ಮ ಸಂವಿಧಾನದಲ್ಲಿ ಯಾವುದೇ ಸ್ವಂತಿಕೆ ಇಲ್ಲ ಎಂದು ಸ್ವಾಮಿನಾಥನ್ ಹೇಳಿದ್ದಾರೆ. ಅಂತಹ ಜನರಿಗೆ ಪ್ರತಿಕ್ರಿಯಿಸಲು ಸಮಯ ವ್ಯರ್ಥ ಮಾಡುವುದಿಲ್ಲ ಎಂದು ಡಾ. ಅಂಬೇಡ್ಕರ್ ಅವರೇ ಹೇಳಿದ್ದಾರೆ. ಆದರೂ, ಹಾಲಿ ಹೈಕೋರ್ಟ್ ನ್ಯಾಯಾಧೀಶರು ಈ ರೀತಿ ಮಾತನಾಡುತ್ತಾರೆ. ಅವರ ವಿರುದ್ದ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ” ಎಂದು ಚಂದ್ರು ಬೇಸರ ವ್ಯಕ್ತಪಡಿಸಿದ್ದಾರೆ.

ಹಾಲಿ ನ್ಯಾಯಾಧೀಶರ ಇಂತಹ ಮಾತುಗಳು ಡಾ. ಬಿ.ಆರ್. ಅಂಬೇಡ್ಕರ್ ರೂಪಿಸಿದ ಸಂವಿಧಾನದ ಮೂಲ ಉದ್ದೇಶವನ್ನೇ ಕೆಡಿಸುತ್ತವೆ. ಸಂವಿಧಾನವು ಎಲ್ಲರಿಗೂ ಸಮಾನತೆಯನ್ನು ನೀಡಿ, ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸುವ ಗುರಿಯನ್ನು ಹೊಂದಿದೆ ಎಂದು ನ್ಯಾಯಮೂರ್ತಿ ಚಂದ್ದು ಹೇಳಿದ್ದಾರೆ.

“ಕಾನೂನಿನ ನಿಯಮವನ್ನು ಉಲ್ಲಂಘಿಸುವ ಮತ್ತು ಅಂಬೇಡ್ಕರ್ ಅವರ ಪರಂಪರೆಯನ್ನು ನಿರಾಕರಿಸುವವರನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ” ಎಂದು ಚಂದ್ರು ಗುಡುಗಿದ್ದಾರೆ

“ಸಮಾನತೆ ಮತ್ತು ಶ್ರೇಣಿಕೃತ ವ್ಯವಸ್ಥೆಯ ನಡುವಿನ ದೊಡ್ಡ ಸೈದ್ಧಾಂತಿಕ ಹೋರಾಟ”ಕ್ಕೆ ಸಿದ್ಧರಾಗುವಂತೆ ಅವರು ವಕೀಲರು ಮತ್ತು ನಾಗರಿಕರಿಗೆ ಕರೆ ನೀಡಿದ್ದಾರೆ.

ನ್ಯಾಯಮೂರ್ತಿ ಚಂದ್ರು ಅವರು ಭಾಗವಹಿಸಿದ್ದ ಕಾರ್ಯಕ್ರಮ ಚೆನ್ನೈನ ವಲ್ಲುವರ್ ಕೊಟ್ಟಂನಲ್ಲಿ ನಡೆದಿದೆ. ಇದನ್ನು ‘ಸಮತುವ ವಾಝ್ಕಾರಿಣ್ಯರ್ ಸಂಗಮ್’ ಮತ್ತು ‘ವಿಸಿಕೆ ವಕೀಲರ ವಿಭಾಗ’ ಜಂಟಿಯಾಗಿ ಆಯೋಜಿಸಿತ್ತು. ಲೋಕಸಭಾ ಸಂಸದ ಥೋಲ್ ತಿರುಮಾವಲವನ್ ನೇತೃತ್ವದ ವಿಸಿಕೆ, ಆಡಳಿತಾರೂಢ ಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡ ದಲಿತ-ಹಕ್ಕುಗಳ ರಾಜಕೀಯ ಪಕ್ಷವಾಗಿದೆ.

ಮಾಜಿ ನ್ಯಾಯಾಧೀಶರಾದ ನ್ಯಾಯಮೂರ್ತಿ ಡಿ ಹರಿಪರಂತಮನ್ ಮತ್ತು ನ್ಯಾಯಮೂರ್ತಿ ಕೆ ಚಂದ್ರು ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿದ್ದರು. ವಿಸಿಕೆ ಜೊತೆ ಸಂಯೋಜಿತವಾಗಿರುವ ಎಳಿಲ್ ಕ್ಯಾರೋಲಿನ್, ಪಿ ತಮಿಳಿನಿಯನ್ ಮತ್ತು ಎಸ್‌ಎ ರಜನಿಕಾಂತ್ ಸೇರಿದಂತೆ ಇತರರು ಭಾಗವಹಿಸಿದ್ದರು.

ಕುತೂಹಲಕಾರಿಯಾಗಿ, ಕಾರ್ಯಕ್ರಮದ ಪ್ರಚಾರಕ್ಕಾಗಿ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿಆರ್ ಗವಾಯಿ ಅವರ ಫೋಟೋ ಮತ್ತು ವಿಸಿಕೆ ಲೋಗೋವನ್ನು ಒಳಗೊಂಡ ಪೋಸ್ಟರ್ ಅನ್ನು ಮದ್ರಾಸ್ ಹೈಕೋರ್ಟ್‌ನ ಹೊರಗೆ ಪ್ರದರ್ಶಿಸಲಾಗಿತ್ತು. ಆದರೆ, ಸಿಜೆಐ ಕಾರ್ಯಕ್ರಮದಲ್ಲಿ ಭಾಗವಹಿಸುವ ಯಾವುದೇ ಸೂಚನೆ ಇರಲಿಲ್ಲ. ಯೂಟ್ಯೂಬ್‌ನಲ್ಲಿ ಅಪ್ಲೋಡ್ ಮಾಡಲಾದ ವಿಡಿಯೋ ಸಿಜೆಐ ಗವಾಯಿ ಅವರು ಕಾರ್ಯಕ್ರಮಕ್ಕೆ ಹಾಜರಾಗಿಲ್ಲ ಎಂಬುವುದನ್ನು ದೃಢಪಡಿಸಿದೆ.

ನ್ಯಾಯಮೂರ್ತಿ ಚಂದ್ರು ಅವರ ತನ್ನ ಭಾಷಣದಲ್ಲಿ ಪರಿಶಿಷ್ಟ ಜಾತಿ ಸಮುದಾಯದವರಾದ ಸಿಜೆಐ ಬಿ.ಆರ್ ಗವಾಯಿ ಅವರ ಮೇಲಿನ ದಾಳಿ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ. ನ್ಯಾಯಾಂಗದ ಉನ್ನತ ಹಂತಗಳಲ್ಲಿಯೂ ಕೂಡ ದಲಿತರಿಗೆ ಗೌರವ ಇಲ್ಲ ಎನ್ನುವುದನ್ನು ಚಂದ್ರು ಖಂಡಿಸಿದ್ದಾರೆ.

ಜಾತಿ ವಿರೋಧಿ ಚಳವಳಿಯಲ್ಲಿ ಪಾದರಕ್ಷೆ ಅಥವಾ ಚಪ್ಪಲಿ ಸಾಂಸ್ಕೃತಿಕ ಮಹತ್ವವನ್ನು ಹೊಂದಿದ್ದು, ಅದನ್ನು ಕೇವಲ ಅವಮಾನವೆಂದು ನೋಡಬಾರದು ಎಂದು ಚಂದ್ರು ಪ್ರತಿಪಾದಿಸಿದ್ದಾರೆ.

“ಒಂದು ವೇಳೆ ಪಾದರಕ್ಷೆಯನ್ನು ಎಸೆದರೆ ಅದು ಅಗೌರವವಲ್ಲ. ಪಾದರಕ್ಷೆಗಳನ್ನು ಅಗೌರವಿಸುವವರು ಪ್ರಬಲ ಜಾತಿಯ ಜನರು. ನಾವು ಪಾದರಕ್ಷೆಗಳನ್ನು ಧರಿಸುತ್ತೇವೆ; ಅದರಿಂದ ನಾವು ಏನು ಬೇಕಾದರೂ ಮಾಡುತ್ತೇವೆ” ಎಂದು ಪೆರಿಯಾರ್ ಇ.ವಿ ರಾಮಸಾಮಿ ಮೇಲೆ ಚಪ್ಪಲಿ ಎಸೆದಾಗ ರಾಮಸ್ವಾಮಿ ನೀಡಿದ ಹೇಳಿಕೆಯನ್ನು ಚಂದ್ರು ಉಲ್ಲೇಖಿಸಿದ್ದಾರೆ.

ಚಪ್ಪಲಿ ಎಸೆದಾಗ ಅದನ್ನು ಎತ್ತಿಕೊಂಡು ಇನ್ನೊಂದು ಜೋಡಿ ಧರಿಸುವುದಾಗಿ ಪೆರಿಯಾರ್ ಹೇಳಿದರು ಎಂದು ನೆನಪಿಸಿದ “ಚಂದ್ರು, ಪಾದರಕ್ಷೆಗಳ ಸಂಕೇತವು ಅವಮಾನಕ್ಕಿಂತ ಸಮಾನತೆ ಮತ್ತು ಪ್ರತಿರೋಧವನ್ನು ಪ್ರತಿನಿಧಿಸುತ್ತದೆ” ಎಂದಿದ್ದಾರೆ. 

“ಭಾರತದ ಹಾಲಿ ಮುಖ್ಯ ನ್ಯಾಯಮೂರ್ತಿಯೊಬ್ಬರ ಮೇಲೆ ನ್ಯಾಯಾಲಯದೊಳಗಡೆಯೇ ಶೂ ಎಸೆದಾಗ, ಅದು ಮೌನವಾಗುವ ಬದಲು ರಾಷ್ಟ್ರೀಯ ಆಕ್ರೋಶಕ್ಕೆ ಕಾರಣವಾಗಬೇಕಿತ್ತು. ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠದ ಬಳಿ ಅವರ ಮೇಲೆಯೇ ಶೂ ಎಸೆಯುವಾಗ ನಾವು ಸುಮ್ಮನಿದ್ದರೆ, ಅದು ನ್ಯಾಯಾಂಗದ ಮೇಲೆ ನಮಗಿರುವ ಗೌರವದ ಕುರಿತು ಯಾವ ಸಂದೇಶ ನೀಡುತ್ತದೆ” ಎಂದು ಚಂದ್ರು ಪ್ರಶ್ನಿಸಿದ್ದಾರೆ.

ಈ ವರ್ಷದ ಆರಂಭದಲ್ಲಿ ಸಿಜೆಐ ಗವಾಯಿ ಅವರು ಮಹಾರಾಷ್ಟ್ರಕ್ಕೆ ಭೇಟಿ ನೀಡಿದಾಗ ಅಧಿಕೃತ ಶಿಷ್ಟಾಚಾರದ ವೈಫಲ್ಯವನ್ನು ಚಂದ್ರು ಟೀಕಿಸಿದ್ದಾರೆ. ಹಿರಿಯ ಅಧಿಕಾರಿಗಳು ಅವರನ್ನು ವಿಮಾನ ನಿಲ್ದಾಣದಲ್ಲಿ ಸ್ವೀಕರಿಸಿಲ್ಲ ಎಂದು ದೂರಿದ್ದಾರೆ.

“ಪರಿಶಿಷ್ಟ ಜಾತಿಯ ವ್ಯಕ್ತಿಯೊಬ್ಬರು ಭಾರತದ ಮುಖ್ಯ ನ್ಯಾಯಾಧೀಶರಾದರೂ, ಅವರನ್ನು ಅವರ ಹುದ್ದೆಗೆ ಸಲ್ಲುವ ಘನತೆಯಿಂದ ನಡೆಸಿಕೊಳ್ಳುತ್ತಿಲ್ಲ” ಎಂದಿದ್ದಾರೆ.

Courtesy: barandbench.com

ಮುಂದಿನ ಸಿಜೆಐ ನೇಮಕ ಪ್ರಕ್ರಿಯೆಗೆ ಚಾಲನೆ; ನ.3 ರಂದು ಬಿ.ಆರ್. ಗವಾಯಿ ನಿವೃತ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...