ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ “ಮೋಂತಾʼ ಚಂಡಮಾರುತ ರೂಪುಗೊಂಡಿದ್ದು ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಒಡಿಶಾದಲ್ಲಿ ಭಾರಿ ಮಳೆ ಬರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಹವಾಮಾನ ಇಲಾಖೆಯು ದಕ್ಷಿಣ ರಾಜ್ಯಗಳು ಸೇರಿದಂತೆ ಒಡಿಶಾ ಮುಂತಾದ ರಾಜ್ಯಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.
ನಾಳೆ ಆಂದ್ರ ಪ್ರದೇಶ ಮೂಲಕ ಭಾರತ ಪ್ರವೇಶಸಲಿರುವ “ಮೋಂತಾ” ಚಂಡಮಾರುತವು ದಕ್ಷಿಣ ರಾಜ್ಯಗಳು ಸೇರಿದಂತೆ ಒಡಿಶಾ ಕಡೆಗೆ ಸಾಗಲಿದೆ. ಗಂಟೆಗೆ 90-100ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಚಂಡಮಾರುತ ಮೊಂತಾ ಆಂಧ್ರಪ್ರದೇಶದ ಕಾಕಿನಾಡ ಬಳಿ ಅಕ್ಟೋಬರ್ 28 ರ ಸಂಜೆ ಅಥವಾ ರಾತ್ರಿ ಭಾರಿ ಮಳೆಯಾಗಲಿದೆ. ಆಗ ಗಾಳಿಯ ವೇಗ 90-100 ಕಿಮೀ/ಗಂಟೆಯಿಂದ 110 ಕಿಮೀ/ಗಂಟೆಯವರೆಗೆ ಇರಬಹುದು. ಕಾಕಿನಾಡ, ಕೊನಸೀಮ, ಪಶ್ಚಿಮ ಗೋದಾವರಿ, ಕೃಷ್ಣ, ಬಾಪಟ್ಲ, ಪ್ರಕಾಶಂ ಮತ್ತು ನೆಲ್ಲೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿಗೂ ಮೋಂತಾ ಎಫೆಕ್ಟ್
ಇಂದು (ಅಕ್ಟೋಬರ್ 27) ಮುಂದಿನ 12 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಲಘುವಿನಿಂದ ಸಾಧಾರಣ ಮಳೆಯಾಗಲಿದೆ. ಮೋಡ ಕವಿದ ವಾತಾವರಣದೊಂದಿಗೆ ಗರಿಷ್ಠ ತಾಪಮಾನ 29°C ಮತ್ತು ಕನಿಷ್ಠ ತಾಪಮಾನ 21°C ಇರಲಿದೆ. ಈ ವಾರದುದ್ದಕ್ಕೂ ನಗರದಲ್ಲಿ ಇಂತಹ ಮಳೆ ಮುಂದುವರಿಯಲಿದೆ. ಅಕ್ಟೋಬರ್ 28ಕ್ಕೆ ಕರ್ನಾಟಕದ ಕೆಲವು ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.


