Homeಮುಖಪುಟದೆಹಲಿ ಗಲಭೆ ಪ್ರಕರಣ | ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿ ವಿಚಾರಣೆ ಅ.31ಕ್ಕೆ...

ದೆಹಲಿ ಗಲಭೆ ಪ್ರಕರಣ | ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿ ವಿಚಾರಣೆ ಅ.31ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್

ಪ್ರಾಸಿಕ್ಯೂಷನ್‌ಗೆ ಹೆಚ್ಚುವರಿ ಸಮಯ ನೀಡಲು ನಿರಾಕರಿಸಿದ ನ್ಯಾಯಾಲಯ

- Advertisement -
- Advertisement -

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಮೀರನ್ ಹೈದರ್, ಗುಲ್ಫಿಶಾ ಫಾತಿಮಾ ಮತ್ತು ಶಿಫಾ ಉರ್ ರೆಹಮಾನ್ ಸಲ್ಲಿಸಿದ್ದ ಅರ್ಜಿಗಳಿಗೆ ಪ್ರತಿಯಾಗಿ ಅಫಿಡವಿಟ್‌ಗಳನ್ನು ಸಲ್ಲಿಸಲು ಎರಡು ವಾರಗಳ ಕಾಲಾವಕಾಶ ನೀಡಬೇಕೆಂಬ ದೆಹಲಿ ಪೊಲೀಸರ ಮನವಿಯನ್ನು ಸುಪ್ರೀಂ ಕೋರ್ಟ್ ಇಂದು (ಅಕ್ಟೋಬರ್ 27) ತಿರಸ್ಕರಿಸಿದೆ.

ಸಾಕಷ್ಟು ಸಮಯ ನೀಡಲಾಗಿದೆ ಎಂದು ಹೇಳಿದ ನ್ಯಾಯಮೂರ್ತಿ ಅರವಿಂದ್ ಕುಮಾರ್ ಮತ್ತು ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠ, ಪ್ರಕರಣದ ವಿಚಾರಣೆಯನ್ನು ಶುಕ್ರವಾರಕ್ಕೆ (ಅ.31) ಮುಂದೂಡಿ, ಈ ಮಧ್ಯೆ ಪ್ರತಿ ಅಫಿಡವಿಟ್ ಸಲ್ಲಿಸುವಂತೆ ದೆಹಲಿ ಪೊಲೀಸರಿಗೆ ಸೂಚಿಸಿದೆ.

ವಿಚಾರಣೆ ವೇಳೆ ದೆಹಲಿ ಪೊಲೀಸರ ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಎಸ್.ವಿ. ರಾಜು, ಪ್ರತಿ-ಅಫಿಡವಿಟ್ ಸಲ್ಲಿಸಲು ಸಮಯ ಕೋರಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಕುಮಾರ್ ಅವರು, “ನಾವು ನಿಮಗೆ ಸಾಕಷ್ಟು ಸಮಯ ನೀಡಿದ್ದೇವೆ. ನೀವು ಮೊದಲ ಬಾರಿಗೆ ಹಾಜರಾಗುತ್ತಿರಬಹುದು. ಕಳೆದ ಬಾರಿ ನಾವು ನೋಟಿಸ್ ಜಾರಿ ಮಾಡುವಂತೆ ಮತ್ತು ಮುಕ್ತ ನ್ಯಾಯಾಲಯದಲ್ಲಿ ಅಕ್ಟೋಬರ್ 27ರಂದು ಈ ವಿಷಯವನ್ನು ಆಲಿಸಿ ಇತ್ಯರ್ಥಪಡಿಸುವುದಾಗಿ ಹೇಳಿದ್ದೆವು” ಎಂದಿದ್ದಾರೆ.

ಇದೇ ವೇಳೆ ನ್ಯಾಯಮೂರ್ತಿ ಕುಮಾರ್ ಅವರು ಜಾಮೀನು ಪ್ರಕರಣದಲ್ಲಿ ಪ್ರತಿ-ಅಫಿಡವಿಟ್‌ನ ಮಹತ್ವವನ್ನು ಪ್ರಶ್ನಿಸಿದ್ದಾರೆ. ಎಎಸ್‌ಜಿ ಪ್ರತಿ ಅಫಿಡವಿಟ್ ದಾಖಲಿಸಲು ಎರಡು ವಾರಗಳ ಸಮಯ ಕೇಳಿದಾಗ ನ್ಯಾಯಾಧೀಶರು ಅದಕ್ಕೆ ಒಪ್ಪಿಲ್ಲ. ಒಂದು ವಾರದ ಕಾಲಾವಕಾಶ ಕೇಳಿದಾಗಲೂ ಒಪ್ಪಿಗೆ ನೀಡಿಲ್ಲ. ಇದು ತೀರ್ಪಿನ ತುರ್ತು ಸ್ವರೂಪವನ್ನು ತೋರಿಸುತ್ತದೆ.

ಉಮರ್ ಖಾಲಿದ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿ, ಅರ್ಜಿದಾರರು ಕಳೆದ 5 ವರ್ಷಗಳಿಗೂ ಹೆಚ್ಚು ಸಮಯದಿಂದ ಜೈಲಿನಲ್ಲಿದ್ದಾರೆ ಎಂಬುವುದನ್ನು ಎತ್ತಿ ತೋರಿಸಿದ್ದಾರೆ. ಹಿರಿಯ ವಕೀಲ ಎ.ಎಂ. ಸಿಂಘ್ವಿ ಅವರು ಇಡೀ ಪ್ರಕರಣದಲ್ಲಿ ವಿಳಂಬವನ್ನು ಉಲ್ಲೇಖಿಸಿದ್ದು, ಇನ್ನೂ ಹೆಚ್ಚಿನ ವಿಳಂಬ ಆಗಬಾರದು ಎಂದು ಮನವಿ ಮಾಡಿದ್ದಾರೆ.

ಅಂತಿಮವಾಗಿ, ನ್ಯಾಯಪೀಠ ಈ ವಿಷಯವನ್ನು ಶುಕ್ರವಾರಕ್ಕೆ ಮುಂದೂಡಲು ಒಪ್ಪಿತು. ಎಎಸ್‌ಜಿ ರಾಜು ಅವರಿಗೆ, “ನೀವು ಏನಾದರೂ ಯೋಚಿಸಬಹುದೇ ಎಂದು ಪರಿಶೀಲಿಸಿ” ಎಂದು ನ್ಯಾ. ಕುಮಾರ್ ಹೇಳಿದ್ದಾರೆ. ವಿಳಂಬದ ಆಧಾರದ ಮೇಲೆ ಜಾಮೀನು ನೀಡಬಹುದೇ ಎಂದು ಪರೋಕ್ಷವಾಗಿ ಸೂಚಿಸಿದ್ದಾರೆ.

ಈ ಸಂದರ್ಭದಲ್ಲಿ ಎಎಸ್‌ಜಿ ತಾವು ದಾಖಲೆಗಳನ್ನು ಪರಿಶೀಲಿಸುವುದಾಗಿ ಹೇಳಿದರೂ, “ಮೇಲ್ನೋಟಕ್ಕೆ ಕಾಣುವ ವಿಷಯಗಳು ಕೆಲವೊಮ್ಮೆ ತಪ್ಪು ತಿಳುವಳಿಕೆಗೆ ಕಾರಣವಾಗಬಹುದು” ಎಂದಿದ್ದಾರೆ. ಇದಕ್ಕೆ ನ್ಯಾ. ಕುಮಾರ್, “ತಾವು ಎಲ್ಲವನ್ನೂ ವಿವರವಾಗಿ ಓದಿಲ್ಲವಾದರೂ, ಇದು ಜಾಮೀನಿನ ಪ್ರಕರಣವಾಗಿದ್ದು, ಆರೋಪಿಗಳು ಈಗಾಗಲೇ ಐದು ವರ್ಷಗಳ ಕಾಲಾವಧಿಯನ್ನು ಜೈಲಿನಲ್ಲಿ ಪೂರ್ಣಗೊಳಿಸಿದ್ದಾರೆ” ಎಂದು ಹೇಳಿದ್ದಾರೆ. ಇದರಿಂದ ವಿಳಂಬದ ಆಧಾರದ ಮೇಲೆ ಜಾಮೀನು ಪರಿಗಣಿಸಬಹುದು ಎಂಬ ಸೂಚನೆಯಿದೆ.

ಹಿರಿಯ ವಕೀಲರಾದ ಕಪಿಲ್ ಸಿಬಲ್ (ಖಾಲಿದ್ ಪರವಾಗಿ), ಎ.ಎಂ. ಸಿಂಘ್ವಿ (ಫಾತಿಮಾ ಪರವಾಗಿ), ಸಿದ್ಧಾರ್ಥ್ ದೇವ್ (ಇಮಾಮ್ ಪರವಾಗಿ), ಸಿದ್ಧಾರ್ಥ್ ಅಗರ್ವಾಲ್ ಮುಂತಾದವರು ಅರ್ಜಿದಾರರ ಪರವಾಗಿ ವಾದ ಮಂಡಿಸಿದ್ದಾರೆ.

ಸೆಪ್ಟೆಂಬರ್ 19ರಂದು, ಈ ವಿಷಯವನ್ನು ನ್ಯಾಯಮೂರ್ತಿ ಕುಮಾರ್ ಮತ್ತು ನ್ಯಾಯಮೂರ್ತಿ ಮನಮೋಹನ್ ಅವರನ್ನೊಳಗೊಂಡ ಪೀಠದ ಮುಂದೆ ಇಡಲಾಗಿತ್ತು. ಆದರೆ, ಕಪಿಲ್ ಸಿಬಲ್ ಅವರು ಈ ಹಿಂದೆ ಅವರ ಕೊಠಡಿಯಲ್ಲಿ ಸಹವರ್ತಿಯಾಗಿದ್ದರಿಂದ ಅವರು ಹಿಂದೆ ಸರಿದಿದ್ದರು. ಅದಕ್ಕೂ ಮೊದಲು, ಸೆಪ್ಟೆಂಬರ್ 12 ರಂದು ಪ್ರಕರಣವನ್ನು ಮೊದಲು ಪಟ್ಟಿ ಮಾಡಿದಾಗ, ಪೀಠವು ಫೈಲ್‌ಗಳನ್ನು ತಡವಾಗಿ ಸ್ವೀಕರಿಸಿದ್ದರಿಂದ ನ್ಯಾಯಾಲಯವು ಪ್ರಕರಣವನ್ನು ಆಲಿಸಲು ಸಾಧ್ಯವಾಗಿರಲಿಲ್ಲ.

ದೆಹಲಿ ಹೈಕೋರ್ಟ್ ಸೆಪ್ಟೆಂಬರ್ 2ರಂದು ಜಾಮೀನು ಅರ್ಜಿಗಳನ್ನು ವಜಾಗೊಳಿಸಿ ನೀಡಿದ್ದ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ನ್ಯಾಯಮೂರ್ತಿ ನವೀನ್ ಚಾವ್ಲಾ ಮತ್ತು ನ್ಯಾಯಮೂರ್ತಿ ಶಾಲಿಂದರ್ ಕೌರ್ ಅವರನ್ನೊಳಗೊಂಡ ವಿಭಾಗೀಯ ಪೀಠವು ದೆಹಲಿ ಪೊಲೀಸರ ವಿಶೇಷ ಘಟಕವು ದಾಖಲಿಸಿರುವ 2020ರ ಎಫ್‌ಐಆರ್ ಸಂಖ್ಯೆ 59 ರಲ್ಲಿ ತೀರ್ಪು ಪ್ರಕಟಿಸಿತ್ತು.

ಮುಂದಿನ ಸಿಜೆಐ ಆಗಿ ನ್ಯಾ.ಸೂರ್ಯಕಾಂತ್ ಅವರನ್ನು ಶಿಫಾರಸು ಮಾಡಿದ ಸಿಜೆಐ ಬಿ.ಆರ್‌. ಗವಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...