Homeಕರ್ನಾಟಕಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾಗಿದ್ದ ಡಾ. ಶ್ರೀಧರ್; ಯಶಸ್ವಿನಿ ಟ್ರಸ್ಟ್‌ನಿಂದ ಹೆಸರು ಕೈಬಿಟ್ಟ ಸರ್ಕಾರ

ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾಗಿದ್ದ ಡಾ. ಶ್ರೀಧರ್; ಯಶಸ್ವಿನಿ ಟ್ರಸ್ಟ್‌ನಿಂದ ಹೆಸರು ಕೈಬಿಟ್ಟ ಸರ್ಕಾರ

- Advertisement -
- Advertisement -

ರಾಷ್ಟ್ರೀಯ ಸ್ವಯುಂ ಸೇವಕ ಸಂಘದ (ಆರ್‌ಎಸ್‌ಎಸ್‌) ಪಥಸಂಚಲನದಲ್ಲಿ ಗಣವಸ್ತ್ರ ಧರಿಸಿ ಭಾಗಿಯಾಗಿದ್ದ ತಿಪಟೂರಿನ ವೈದ್ಯ ಶ್ರೀಧರ್ ಹೆಸರನ್ನು ಸರ್ಕಾರದ ‘ಯಶಸ್ವಿನಿ ಟ್ರಸ್ಟ್‌’ನಿಂದ ತೆಗೆದುಹಾಕಲಾಗಿದೆ. ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾಗಿದ್ದ ವೈದ್ಯರಿಗೆ ಟ್ರಸ್ಟಿಯಾಗಿ ನೇಮಿಸಲಾಗಿತ್ತು; ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು.

ಇದು ಕಾಂಗ್ರೆಸ್‌ ಪಕ್ಷವು ಹೊಂದಿರುವ ಕೋಮುವಾದಿ ವಿರೋಧಿ ಮತ್ತು ಸಾಮರಸ್ಯ ನೀತಿಗೆ ವಿರುದ್ಧವಾಗಿದೆ. ತಕ್ಷಣವೇ ಡಾ. ಶ್ರೀಧರ್ ಅವರನ್ನು ಟ್ರಸ್ಟಿಯಾಗಿ ನೇಮಿಸಿ ಹೊರಡಿಸಿರುವ ಸುತ್ತೋಲೆಯನ್ನು ಹಿಂಪಡೆಯಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸಿ.ಬಿ ಶಶಿಧರ್ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಒತ್ತಾಯಿಸಿದ್ದರು.

ತೀವ್ರ ವಿರೋಧಗಳ ಬೆನ್ನಲ್ಲೇ ಯಶಸ್ವಿನಿ ಟ್ರಸ್ಟ್‌ನ ಟ್ರಸ್ಟಿ ಸ್ಥಾನದಿಂದ ವೈದ್ಯ ಶ್ರೀಧರ್ ಹೆಸರನ್ನು ಕೈಬಿಡಲಾಗಿದೆ. ಈ ಸಂಬಂಧ ಸರ್ಕಾರ ಆದೇಶವನ್ನು ಹೊರಡಿಸಿದ್ದು, “ಆಡಳಿತಾತ್ಮಕ ದೃಷ್ಟಿಯಿಂದ ಈ ಹಿಂದಿನ ಆದೇಶವನ್ನು ಮಾರ್ಪಡಿಸಿ, ಡಾ. ಶೀಧರ್ ಅವರ ಹೆಸರನ್ನು ಕೈಬಿಡಲಾಗಿದೆ” ಎಂದು ತಿಳಿಸಿದೆ.

ಈ ಹಿಂದಿನ ಆದೇಶ ಖಂಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಶಶಿಧರ್, “ಅಕ್ಟೋಬರ್ 12ರಂದು ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ ಆಯೋಜಿಸಿತ್ತು. ಆ ಕಾರ್ಯಕ್ರಮದಲ್ಲಿ ಕುಮಾರ್ ಆಸ್ಪತ್ರೆಯ ಡಾ. ಶ್ರೀಧರ್ ಅವರು ಗಣವೇಶ ಧರಿಸಿ ಭಾಗಿಯಾಗಿದ್ದರು. ಮಾತ್ರವಲ್ಲದೆ, ಆ್ಯಂಬುಲೆನ್ಸ್‌ಅನ್ನೂ ಕೊಂಡೊಯ್ದಿದ್ದರು. ಅವರನ್ನು ಸರ್ಕಾರದ ‘ಯಶಸ್ವಿನಿ ಟ್ರಸ್ಟ್‌’ಗೆ ಟ್ರಸ್ಟಿಯಾಗಿ ನೇಮಿಸುವಂತೆ ಕಾಂಗ್ರೆಸ್‌ ಶಾಸಕ ಪಡಕ್ಷರಿ ಅವರು ಶಿಫಾರಸು ಮಾಡಿದ್ದರು. ಅವರ ಶಿಫಾರಸಿನಂತೆ ಸರ್ಕಾರವು ಡಾ. ಶ್ರೀಧರ್ ಅವರನ್ನು ಟ್ರಸ್ಟಿಯಾಗಿ ನೇಮಿಸಿದೆ. ಇದು, ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಕಳವಳ ಹುಟ್ಟುಹಾಕಿದೆ” ಎಂದು ತಿಳಿಸಿದ್ದರು.

“ಕೋಮುವಾದಿ ಸಂಘ ಪರಿವಾರದ (ಆರ್ ಎಸ್ ಎಸ್) ವಿರುದ್ಧ ಕಾಂಗ್ರೆಸ್ ನಾಯಕತ್ವ ರಾಜ್ಯ ಮತ್ತು ದೇಶವ್ಯಾಪಿ ಸಮರ ಸಾರಿರುವ ಸಂದರ್ಭದಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿಯವರು ಪಕ್ಷದ ಸಿದ್ಧಾಂತಗಳಿಗೆ ವ್ಯತಿರಿಕ್ತ ಎನ್ನಿಸುವ ನಡೆಗಳನ್ನು ಅನುಸರಿಸುತ್ತಿರುವುದು ಆಘಾತಕಾರಿ” ಎಂದು ಅವರು ಬೇಸರ ವ್ಯಕ್ತಪಡಿಸಿದ್ದರು.

“ಇತ್ತೀಚೆಗೆ (ಅಕ್ಟೋಬರ್ 12 ರಂದು) ತಿಪಟೂರು ಪಟ್ಟಣದಲ್ಲಿ ಆರ್ ಎಸ್ ಎಸ್ ಗಣವೇಶಧಾರಿಯಾಗಿ ಪಥಸಂಚಲನದ ಮುಂಚೂಣಿಯಲ್ಲಿ ಭಾಗವಹಿಸಿದ ಡಾ. ಶ್ರೀಧರ್ ಅವರಿಗೆ ರಾಜ್ಯ ಸರ್ಕಾರದ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯ ಯಶಸ್ವಿ ಅನುಷ್ಟಾನಕ್ಕಾಗಿ ರೂಪಿಸಿದ ಸಹಕಾರ ಇಲಾಖೆಯ ಯಶಸ್ವಿನಿ‌ ಟ್ರಸ್ಟ್ ನ ಟ್ರಸ್ಟಿಯಾಗಿ ನೇಮಕ ಮಾಡಿದ್ದು, ಅವರ ಹೆಸರು ಶಿಫಾರಸ್ಸು ಮಾಡಿದ ಶಾಸಕ ಷಡಕ್ಷರಿ ಅವರ ಕ್ರಮದಿಂದ ಕಾಂಗ್ರೆಸ್ ಕಾರ್ಯಕರ್ತರಿಗೆ ತೀವ್ರ ಮುಜುಗರ ಉಂಟಾಗಿದೆ” ಎಂದು ಅವರು ಹೇಳಿದ್ದರು.

“ಸ್ವತಃ ಮುಖ್ಯಮಂತ್ರಿಗಳಾದ ತಾವು ಪ್ರಧಾನ ಪೋಷಕರಾಗಿರುವ ಈ ಟ್ರಸ್ಟ್ ಗೆ ಸಂಘ ಪರಿವಾರದ ಕಟ್ಟಾ ಕಾರ್ಯಕರ್ತ ಡಾ ಶ್ರೀಧರ್ ಅವರನ್ನು ಟ್ರಸ್ಟಿಯಾಗಿಸಿ ಹೊರಡಿಸಿದ ಇತ್ತೀಚಿನ ಸುತ್ತೋಲೆಯನ್ನು ಮುಖ್ಯಮಂತ್ರಿಗಳಾದ ತಾವು ಹಾಗೂ ಕೆಪಿಸಿಸಿ ಅಧ್ಯಕ್ಷ ಹಾಗು ಉಪ ಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್ ಅವರು ಗಮನಿಸಿಲ್ಲವೇ ಎನ್ನುವುದು ತಿಪಟೂರು ಮತ್ತು ತುಮಕೂರು ಜಿಲ್ಲೆಯ ನಿಷ್ಠಾವಂತ ಕಾಂಗ್ರೆಸ್ ಧುರೀಣರಲ್ಲಿ ಹಾಗೂ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸಿದೆ” ಎಂದು ಪತ್ರದಲ್ಲಿ ಬರೆದಿದ್ದಾರೆ.

“ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ಮುತುವರ್ಜಿ ವಹಿಸಿ ಸಂಘ ಪರಿವಾರಕ್ಕೆ ಸೇರಿದ ತಿಪಟೂರಿನ ಕುಮಾರ್ ಆಸ್ಪತ್ರೆಯ ಡಾ. ಶ್ರೀಧರ್ ಹೆಸರನ್ನು ಯಶಸ್ವಿನಿ ಟ್ರಸ್ಟ್ ಗೆ ಶಿಫಾರಸ್ಸು ಮಾಡಿದ್ದು ಈಗ ಗುಟ್ಟಾಗಿ ಉಳಿದಿಲ್ಲ. ಕೋಮುವಾದಿಗಳ ಪರ ಎನ್ನಿಸುವ ಶಾಸಕರ ಇಂಥ ಧೋರಣೆಯನ್ನು ಸಹಿಸಲು ಅಸಾಧ್ಯ ಎಂದು ಕಾಂಗ್ರೆಸ್ ಕಾರ್ಯಕರ್ತರು ನನ್ನ ಬಳಿ ದೂರಿ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿಯೂ ತಮ್ಮ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಇದರಿಂದ ಕಾಂಗ್ರೆಸ್ ಪಕ್ಷದ ಕೋಮುವಾದ ವಿರೋಧಿ ನಿಲುವಿಗೆ, ಸಾಮರಸ್ಯ ನೀತಿಗೆ ಮತ್ತು ಘನತೆಗೆ ಚ್ಯುತಿ ಬಂದಂತಾಗಿದೆ. ತಿಪಟೂರು ತಾಲ್ಲೂಕಿನ ಹಾಗೂ ತುಮಕೂರು ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರ ಇಂಥ ಆಕ್ರೋಶ ಮತ್ತು ಅಸಮಾಧಾನಗಳನ್ನು ಕೆಪಿಸಿಸಿಯ ಒಬ್ಬ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷದ ಹೈಕಮಾಂಡ್ ಗಮನಕ್ಕೆ ತರುವುದು ನನ್ನ ನೈತಿಕ ಹೊಣೆಗಾರಿಕೆ ಎಂದು ಭಾವಿಸಿದ್ದೇನೆ” ಎಂದು ಅವರು ಹೇಳಿದ್ದಾರೆ.

“ಕೂಡಲೇ ಈ ಸುತ್ತೋಲೆ ವಾಪಸ್ ಪಡೆದು ಕ್ಷೇತ್ರದ ಕಾರ್ಯಕರ್ತರನ್ನು ತೀವ್ರ ಮುಜುಗರದಿಂದ ಪಾರು ಮಾಡುವಂತೆ ತಮ್ಮಲ್ಲಿ ಕಳಕಳಿಯ ಮನವಿ ಮಾಡುತ್ತಿದ್ದೇನೆ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

“ಕಲ್ಲಡ್ಕ ಪ್ರಭಾಕರ್ ಭಟ್ ಕೆಣಕಿ ಉಳಿದ ಸರ್ಕಾರವಿಲ್ಲ, ಕರಾವಳಿ ಕಿಡಿಯಾದೀತು”: ಪ್ರಚೋದನಕಾರಿ ಪೋಸ್ಟ್ ವಿರುದ್ಧ ಕ್ರಮಕ್ಕೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...