Homeಮುಖಪುಟ'ನಮಗೆ ಪಿತೂರಿಯ ಶಂಕೆಯಿದೆ': ತಮಿಳುನಾಡು ಎಸ್‌ಐಆರ್ ವಿರುದ್ದ ಸರ್ವಪಕ್ಷ ಸಭೆ ಕರೆದ ಡಿಎಂಕೆ ಮೈತ್ರಿಕೂಟ

‘ನಮಗೆ ಪಿತೂರಿಯ ಶಂಕೆಯಿದೆ’: ತಮಿಳುನಾಡು ಎಸ್‌ಐಆರ್ ವಿರುದ್ದ ಸರ್ವಪಕ್ಷ ಸಭೆ ಕರೆದ ಡಿಎಂಕೆ ಮೈತ್ರಿಕೂಟ

- Advertisement -
- Advertisement -

ತಮಿಳುನಾಡಿನ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುಂದಾಗಿರುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ಕ್ರಮಲ್ಲಿ ‘ಪಿತೂರಿ’ಯ ಶಂಕೆ ವ್ಯಕ್ತಪಡಿಸಿರುವ ಡಿಎಂಕೆ ಅಧ್ಯಕ್ಷ ಹಾಗೂ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್, ನವೆಂಬರ್ 2ರಂದು ಚೆನ್ನೈನಲ್ಲಿ ನಡೆಯಲಿರುವ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸುವಂತೆ ಎಲ್ಲಾ ರಾಜಕೀಯ ಪಕ್ಷಗಳ ನಾಯಕರಿಗೆ ಮನವಿ ಮಾಡಿದ್ದಾರೆ.

ತಮಿಳುನಾಡು ಸೇರಿದಂತೆ ಒಂಬತ್ತು ರಾಜ್ಯಗಳಲ್ಲಿ ಮುಂದಿನ ಹಂತದ ಎಸ್‌ಐಆರ್ ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗ ಸೋಮವಾರ ಘೋಷಿಸಿದೆ. ಈ ಬೆನ್ನಲ್ಲೇ ಚೆನ್ನೈನ ಅಣ್ಣಾ ಅರಿವಾಲಯಂನಲ್ಲಿ ಜಾತ್ಯತೀತ ಪ್ರಗತಿಪರ ಒಕ್ಕೂಟದ ನಾಯಕರ ಸಮಾಲೋಚನಾ ಸಭೆ ನಡೆದಿದೆ. ಸಭೆಯ ಬಳಿಕ ನವೆಂಬರ್ 2ರ ಸರ್ವಪಕ್ಷ ಸಭೆಗೆ ಆಹ್ವಾನ ನೀಡಲಾಗಿದೆ.

ಜಂಟಿ ಹೇಳಿಕೆಯಲ್ಲಿ, ಎಲ್ಲಾ ರಾಜಕೀಯ ಪಕ್ಷಗಳು ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಸರ್ವಪಕ್ಷ ಸಭೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಲಾಗಿದೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ನಿರಂತರವಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ನಾಶಪಡಿಸುತ್ತಿದೆ. ಸ್ವತಂತ್ರ ಸಂಸ್ಥೆಗಳನ್ನು ತನ್ನ ಇಚ್ಛೆಯಂತೆ ದುರುಪಯೋಗಪಡಿಸಿಕೊಳ್ಳುತ್ತಿದೆ. ಚುನಾವಣಾ ಆಯೋಗದ ಕಾರ್ಯನಿರ್ವಹಣೆ ವಿವಾದಾತ್ಮಕ ಮಾತ್ರವಲ್ಲದೆ, ಅನುಮಾನಾಸ್ಪದವಾಗಿದೆ ಎಂದು ಡಿಎಂಕೆ ಮೈತ್ರಿಕೂಟದ ನಾಯಕರು ಹೇಳಿದ್ದಾರೆ.

ಬಿಹಾರದಲ್ಲಿ ನಡೆಸಲಾದ ಎಸ್‌ಐಆರ್ ಅನ್ನು ಉಲ್ಲೇಖಿಸಿದ ನಾಯಕರು, “ಬಿಹಾರದಲ್ಲಿ ನಡೆದ ಎಸ್‌ಐಆರ್ ವಾಸ್ತವವಾಗಿ ನಿಜವಾದ ಮತದಾರರನ್ನು ಪಟ್ಟಿಯಿಂದ ತೆಗೆದುಹಾಕುವ ಸಂಚು ಎಂಬುವುದು ನಮಗೆ ಗೊತ್ತಾಗಿದೆ. ಚುನಾವಣಾ ಆಯೋಗ ಸುಪ್ರೀಂ ಕೋರ್ಟ್‌ನ ನಿರ್ದೇಶನಗಳನ್ನು ಕೂಡ ಪಾಲಿಸಿಲ್ಲ. ಈ ಪ್ರಜಾಪ್ರಭುತ್ವ ವಿರೋಧಿ ಚಟುವಟಿಕೆಯನ್ನು ನಡೆಸಲು ಬಿಜೆಪಿ ಸರ್ಕಾರ ಚುನಾವಣಾ ಆಯೋಗವನ್ನು ಪ್ರಚೋದಿಸಿದೆ” ಎಂದು ಆರೋಪಿಸಿದ್ದಾರೆ.

ನವೆಂಬರ್ ಮತ್ತು ಡಿಸೆಂಬರ್ ಮಳೆಗಾಲದ ತಿಂಗಳುಗಳಲ್ಲಿ ತಮಿಳುನಾಡಿನಲ್ಲಿ ಎಸ್‌ಐಆರ್ ನಡೆಸುವುದು ತುಂಬಾ ಕಷ್ಟಕರ ಮತ್ತು ಪ್ರಾಯೋಗಿಕವಾಗಿ ಅಸಾಧ್ಯ. ಚುನಾವಣಾ ಆಯೋಗ ಘೋಷಿಸಿದ ಕಾರ್ಯವಿಧಾನಗಳು ಜನಸಂಖ್ಯೆಯ ಹೆಚ್ಚಿನ ಭಾಗಕ್ಕೆ ತೊಂದರೆಯನ್ನುಂಟುಮಾಡುತ್ತವೆ ಎಂದು ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸುಪ್ರೀಂ ಕೋರ್ಟ್ ತೀರ್ಪಿನ ನಂತರವೂ ಎಸ್‌ಐಆರ್‌ಗೆ ಆಧಾರ್ ಕಾರ್ಡ್ ಅನ್ನು ಏಕೆ ಸ್ವೀಕರಿಸಿಲ್ಲ? ಪದೇ ಪದೇ ಒತ್ತಾಯಿಸಿದರೂ ಪಡಿತರ ಚೀಟಿಯನ್ನು ಏಕೆ ಸ್ವೀಕರಿಸಿಲ್ಲ ಎಂದು ಡಿಎಂಕೆ ಮೈತ್ರಿಕೂಟದ ನಾಯಕರು ಪ್ರಶ್ನಿಸಿದ್ದಾರೆ.

ಮತದಾರರ ಪಟ್ಟಿಯನ್ನು ಪರಿಷ್ಕರಿಸುವ ಅಗತ್ಯವನ್ನು ಒಪ್ಪಿಕೊಂಡರೂ, ಆತುರದಿಂದ ಈ ಪ್ರಕ್ರಿಯೆ ನಡೆಸಬಾರದು ಎಂದಿದ್ದಾರೆ.

“ಏಪ್ರಿಲ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವಾಗ, ಈಗ ಎಸ್‌ಐಆರ್ ಘೋಷಿಸುವುದು ಅನ್ಯಾಯ. ತಮಿಳುನಾಡಿನ ಜನರ ಹಕ್ಕುಗಳನ್ನು ಕಸಿದುಕೊಳ್ಳುವ ಪಿತೂರಿ ನಡೆಯುತ್ತಿದೆ ಎಂಬ ಅನುಮಾನ ನಮಗಿದೆ. ಬಿಹಾರದಲ್ಲಿ ಮುಸ್ಲಿಮರು, ಪರಿಶಿಷ್ಟ ಜಾತಿ ಸಮುದಾಯಗಳು ಮತ್ತು ಮಹಿಳೆಯರನ್ನು ಹೆಸರು ತೆಗೆಯುವಿಕೆಗೆ ಗುರಿಯಾಗಿಸಲಾಗಿತ್ತು. ತಮಿಳುನಾಡು ಅಂತಹ ಸಂಚನ್ನು ಎಂದಿಗೂ ಅನುಮತಿಸುವುದಿಲ್ಲ. ಈ ವಿಷಯದಲ್ಲಿ ರಾಜ್ಯವು ಒಗ್ಗಟ್ಟಾಗಿ ವಿರೋಧ ವ್ಯಕ್ತಪಡಿಸಲಿದೆ” ಎಂದು ನಾಯಕರು ಹೇಳಿದ್ದಾರೆ.

ಇದೇ ವಿಷಯದ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಸಿಎಂ ಸ್ಟಾಲಿನ್, “ಮತದಾನದ ಹಕ್ಕು ಪ್ರಜಾಪ್ರಭುತ್ವದ ಅಡಿಪಾಯ. ತಮಿಳುನಾಡು ಅದನ್ನು ಕೊಲ್ಲುವ ಯಾವುದೇ ಪ್ರಯತ್ನದ ವಿರುದ್ಧ ಹೋರಾಡುತ್ತದೆ ಮತ್ತು ತಮಿಳುನಾಡು ಗೆಲ್ಲುತ್ತದೆ” ಎಂದು ಬರೆದುಕೊಂಡಿದ್ದಾರೆ.

“ಆತುರ ಮತ್ತು ಅಪಾರದರ್ಶಕ ರೀತಿಯಲ್ಲಿ ಎಸ್‌ಐಆರ್‌ ನಡೆಸುವುದು ನಾಗರಿಕರ ಹಕ್ಕುಗಳನ್ನು ಕಸಿದುಕೊಳ್ಳಲು ಮತ್ತು ಬಿಜೆಪಿಗೆ ಸಹಾಯ ಮಾಡಲು ಚುನಾವಣಾ ಆಯೋಗ ನಡೆಸುತ್ತಿರುವ ಪಿತೂರಿಯಲ್ಲದೆ ಬೇರೇನೂ ಅಲ್ಲ” ಎಂದು ಸ್ಟಾಲಿನ್ ಹೇಳಿದ್ದಾರೆ.

ಬಿಹಾರದ ಎಸ್‌ಐಆರ್‌ನಲ್ಲಿ ಉಂಟಾದ ಗೊಂದಲಗಳನ್ನು ಬೆಟ್ಟು ಮಾಡಿದ ಸ್ಟಾಲಿನ್, “ಎಸ್‌ಐಆರ್ ಪ್ರಕ್ರಿಯೆಯಲ್ಲಿನ ಪಾರದರ್ಶಕತೆಯ ಕೊರತೆಯು ಸಾರ್ವಜನಿಕ ಮನಸ್ಸಿನಲ್ಲಿ ಅನುಮಾನವನ್ನು ಹೆಚ್ಚಿಸಿದೆ ಎಂದಿದ್ದಾರೆ.

12 ರಾಜ್ಯಗಳಲ್ಲಿ ಎರಡನೇ ಹಂತದ ಮತದಾರರ ಪಟ್ಟಿ ಪರಿಷ್ಕರಣೆ: ಚುನಾವಣಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...

SIR ತಂದಿಟ್ಟ ಸಂಕಷ್ಟ : ದಾಖಲೆ ಹೊಂದಿಸಲು ಅಲೆಮಾರಿಗಳ ಅಲೆದಾಟ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಅನ್‌ಮ್ಯಾಪ್ಡ್ ಮತ್ತು ಅನಾಮಲಿಸ್ ಮತದಾರರಿಗೆ ನೋಟಿಸ್ ನೀಡಿ, ದಾಖಲೆಗಳ ಪರಿಶೀಲನೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ 23,45,428 ಅನ್‌ ಮ್ಯಾಪ್ಡ್ (ಪ್ರೊಜೆನಿ ಮ್ಯಾಪಿಂಗ್...

ಸಚಿವ ಸತೀಶ್ ಜಾರಕಿಹೊಳಿ, ಪುತ್ರಿ ಪ್ರಿಯಾಂಕಾ ನಿವಾಸಗಳ ಮೇಲೆ ಇಡಿ ದಾಳಿ: 18ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ

ಕರ್ನಾಟಕದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಪುತ್ರಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಸೇರಿದ ನಿವಾಸಗಳು ಮತ್ತು ಆಸ್ತಿಪಾಸ್ತಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ)...

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...