Homeಮುಖಪುಟರೈತ ಮಹಿಳೆಯ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ: ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್‌ಗೆ ಜಾಮೀನು

ರೈತ ಮಹಿಳೆಯ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ: ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್‌ಗೆ ಜಾಮೀನು

- Advertisement -
- Advertisement -

2021 ರ ಮಾನನಷ್ಟ ಪ್ರಕರಣದಲ್ಲಿ ನಟಿ, ಲೋಕಸಭೆ ಸದಸ್ಯೆ ಕಂಗನಾ ರಣಾವತ್‌ಗೆ ಪಂಜಾಬ್‌ನ ಭಟಿಂಡಾ ನಗರದ ನ್ಯಾಯಾಲಯ ಸೋಮವಾರ ಜಾಮೀನು ನೀಡಿದೆ.

81 ವರ್ಷದ ಮಹಿಳೆ ಮಹಿಂದರ್ ಕೌರ್ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಕಂಗನಾ ರನೌತ್ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನಿಂದ ಪರಿಹಾರ ಪಡೆಯಲು ವಿಫಲರಾಗಿದ್ದರು.

ರೈತರ ಪ್ರತಿಭಟನೆಯ ಸಂದರ್ಭದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದ ಮೇಲೆ 81 ವರ್ಷದ ರೈತ ಮಹಿಳೆ ಮಹಿಂದರ್ ಕೌರ್  2021 ರಲ್ಲಿ ಕಂಗನಾ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. 

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ರನೌತ್ ವರದಿಗಾರರಿಗೆ ತಪ್ಪು ತಿಳುವಳಿಕೆ ಉಂಟಾಗಿದೆ ಎಂದು ಹೇಳಿದರು, ಏನು ಚಿತ್ರಿಸಲಾಗಿದೆ ಎಂದು ನನಗೆ ಊಹಿಸಲೂ ಸಾಧ್ಯವಿಲ್ಲ ಎಂದರು. 

ಲೋಕಸಭೆಯಲ್ಲಿ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರವನ್ನು ಪ್ರತಿನಿಧಿಸುವ ರನೌತ್, ನ್ಯಾಯಾಲಯದಲ್ಲಿ ವೃದ್ಧ ರೈತ ಮಹಿಳೆಯ ಪತಿ ಲಾಭ್ ಸಿಂಗ್ ಅವರ ಬಳಿ ಕ್ಷಮೆಯಾಚಿಸಿದ್ದಾರೆ. 

“ತಾಯಿ ಹಿಮಾಚಲ ಪ್ರದೇಶದವರಾಗಿರಲಿ ಅಥವಾ ಪಂಜಾಬ್‌ನವರಾಗಿರಲಿ, ಅವರು ನನಗೆ ಗೌರವಾನ್ವಿತರು. ಎಲ್ಲರೂ ನನ್ನನ್ನು ಪ್ರೀತಿಸುತ್ತಾರೆ” ಎಂದು ಅವರು ಹೇಳಿದರು. “ಇದು ಮರುಟ್ವೀಟ್ ಮಾಡಲಾದ ಮೀಮ್ ಆಗಿತ್ತು. ನಾನು ತಾಯಿ ಮಹಿಂದರ್ ಜಿ ಅವರ ಪತಿಯೊಂದಿಗೆ ಈ ಬಗ್ಗೆ ಮಾತನಾಡಿದ್ದೆ. ನನಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ದೇಶದಲ್ಲಿ ಅನೇಕ ಚಳುವಳಿಗಳು ನಡೆಯುತ್ತಿದ್ದವು. ನಾನು ಅದರ ಬಗ್ಗೆ ಸಾಮಾನ್ಯ ಟ್ವೀಟ್ ಮಾಡಿದ್ದೆ. ಸಂಭವಿಸಿದ ತಪ್ಪು ತಿಳುವಳಿಕೆಗೆ ನಾನು ವಿಷಾದಿಸುತ್ತೇನೆ” ಎಂದು ಅವರು ಹೇಳಿದರು. ಈ ಪ್ರಕರಣದ ಮುಂದಿನ ವಿಚಾರಣೆ ನವೆಂಬರ್ 24 ರಂದು ನಡೆಯಲಿದೆ. 

ಮಹಿಂದರ್ ಕೌರ್ ಬದಲಿಗೆ ಅವರ ಪತಿ ನ್ಯಾಯಾಲಯಕ್ಕೆ ಹಾಜರಾಗಿದ್ದರು

ಸೋಮವಾರ ಬೆಳಗ್ಗೆ, ಪೊಲೀಸ್ ಅಧಿಕಾರಿಗಳ ಬೆಂಗಾವಲಿನೊಂದಿಗೆ ರಣಾವತ್ ಬಿಗಿ ಭದ್ರತೆಯಲ್ಲಿ ನ್ಯಾಯಾಲಯಕ್ಕೆ ಆಗಮಿಸಿದರು. ಭಟಿಂಡಾ ನಗರದ ಪೊಲೀಸ್ ವರಿಷ್ಠಾಧಿಕಾರಿ ನರಿಂದರ್ ಸಿಂಗ್ ಮಾತನಾಡಿ, ನ್ಯಾಯಾಲಯದ ಸಂಕೀರ್ಣದ ಸುತ್ತಲೂ ಪೊಲೀಸರು ಬ್ಯಾರಿಕೇಡ್‌ಗಳನ್ನು ಅಳವಡಿಸಿ ಭದ್ರತೆಯನ್ನು ಬಲಪಡಿಸಲಾಗಿದೆ. 

“ಯಾವುದೇ ಕಿಡಿಗೇಡಿತನವು ಯಾವುದೇ ಗೊಂದಲವನ್ನು ಸೃಷ್ಟಿಸಲು ಪ್ರಯತ್ನಿಸದಂತೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಭದ್ರವಾಗಿಡುವುದು ನಮ್ಮ ಮುಖ್ಯ ಗುರಿಯಾಗಿದೆ” ಎಂದು ಅವರು ಹೇಳಿದರು.

2020-21ರ ರೈತರ ಪ್ರತಿಭಟನೆಯ ಸಂದರ್ಭದಲ್ಲಿ ನಡೆದ ಘಟನೆಯಾಗಿದ್ದು, ಭಟಿಂಡಾದ ಬಹದ್ದೂರ್‌ಗಢ್ ಜಾಂಡಿಯನ್ ಗ್ರಾಮದ ಮಹಿಂದರ್ ಕೌರ್ ಅವರನ್ನು ಉಲ್ಲೇಖಿಸಿ ರನೌತ್ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಪೋಸ್ಟ್ ಅನ್ನು ಹಂಚಿಕೊಂಡಿದ್ದರು. 

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವೃದ್ಧ ಮಹಿಳೆಯೊಬ್ಬರ ಛಾಯಾಚಿತ್ರವನ್ನು ಒಳಗೊಂಡ ಪೋಸ್ಟ್‌ಗೆ ರನೌತ್ ಕಾಮೆಂಟ್ ಮಾಡಿದ್ದು, ಕೆಲವು ಭಾಗವಹಿಸುವವರಿಗೆ ಹಣ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ. ಆ ಮಹಿಳೆಯನ್ನು “ಭಾರತದ ಶಕ್ತಿಶಾಲಿ ಮಹಿಳೆಯರಲ್ಲಿ ಟೈಮ್ ನಿಯತಕಾಲಿಕೆಯಲ್ಲಿ ಕಾಣಿಸಿಕೊಂಡ ಅದೇ ದಾದಿ” ಎಂದು ಅವರು ಉಲ್ಲೇಖಿಸಿದ್ದರು. “ಅವರು 100 ರೂ.ಗೆ ಲಭ್ಯವಿದ್ದಾರೆ” ಎಂದು ಟ್ವಿಟ್ ಮಾಡಿದ್ದರು. ಈ ಪೋಸ್ಟ್ ರೈತ ಸಂಘದ ಮುಖಂಡರು ಸೇರಿದಂತೆ ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಆಕ್ರೋಶ ಮತ್ತು ಪ್ರಕರಣದ ದಾಖಲಾದ ನಂತರ ಅದನ್ನು ನಂತರ ಅಳಿಸಲಾಗಿತ್ತು. 

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಜನವರಿ 4, 2021 ರಂದು ಕಂಗನಾ ರನೌತ್ ವಿರುದ್ಧ ರೈತ ಮಹಿಳೆ ಮಹಿಂದರ್ ಕೌರ್  ಮಾನನಷ್ಟ ಮೊಕದ್ದಮೆ ಹೂಡಿದ್ದರು, ನಟಿಯ ಹೇಳಿಕೆಗಳು ತಮ್ಮನ್ನು ಅವಮಾನಿಸಿವೆ ಮತ್ತು ರೈತ ಚಳವಳಿಯಲ್ಲಿ ನನ್ನ ಪಾತ್ರವನ್ನು ತಪ್ಪಾಗಿ ನಿರೂಪಿಸಿದೆ ಎಂದು ಆರೋಪಿಸಿದರು. 

ಸುಮಾರು 13 ತಿಂಗಳ ವಿಚಾರಣೆಯ ನಂತರ, ಭಟಿಂಡಾ ನ್ಯಾಯಾಲಯವು ರನೌತ್ ಅವರಿಗೆ ಖುದ್ದಾಗಿ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತು. ತರುವಾಯ, ಪ್ರಕರಣದಲ್ಲಿ ಪರಿಹಾರ ಕೋರಿ ರನೌತ್ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ಗೆ ಮೊರೆ ಹೋದರು, ಆದರೆ ನ್ಯಾಯಾಲಯವು ಅದನ್ನು ಸ್ವೀಕರಿಸಲಿಲ್ಲ. ನಂತರ ಅವರು ಸುಪ್ರೀಂ ಕೋರ್ಟ್‌ಗೆ ಮೊರೆ ಹೋದರು ಆದರೆ ಅಲ್ಲಿಯೂ ಯಾವುದೇ ಪರಿಹಾರ ಸಿಗಲಿಲ್ಲ. ನ್ಯಾಯಾಲಯದ ನಿರ್ದೇಶನಗಳನ್ನು ಅನುಸರಿಸಿ, ಬಿಜೆಪಿ ಸಂಸದರು ಸೋಮವಾರ ಭಟಿಂಡಾ ನ್ಯಾಯಾಲಯದ ಮುಂದೆ ಹಾಜರಾಗಿದ್ದು, ನ್ಯಾಯಾಲಯ ಸೋಮವಾರ ಜಾಮೀನು ನೀಡಿದೆ.

ಪಕ್ಷ ವಿರೋಧಿ ಚಟುವಟಿಕೆ : ಇಬ್ಬರು ಹಾಲಿ ಶಾಸಕರು ಸೇರಿ 27 ಮಂದಿಯನ್ನು ಉಚ್ಚಾಟಿಸಿದ ಆರ್‌ಜೆಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...