Homeಮುಖಪುಟಸರ್ಕಾರಿ ಸ್ಥಳ ಬಳಕೆಯ ಪೂರ್ವಾನುಮತಿ ಕಡ್ಡಾಯ ನಿರ್ದೇಶನಕ್ಕೆ ತಡೆ: ಹೊಸ ಪ್ರಶ್ನೆ ಹುಟ್ಟು ಹಾಕಿದ ಹೈಕೋರ್ಟ್...

ಸರ್ಕಾರಿ ಸ್ಥಳ ಬಳಕೆಯ ಪೂರ್ವಾನುಮತಿ ಕಡ್ಡಾಯ ನಿರ್ದೇಶನಕ್ಕೆ ತಡೆ: ಹೊಸ ಪ್ರಶ್ನೆ ಹುಟ್ಟು ಹಾಕಿದ ಹೈಕೋರ್ಟ್ ಮಧ್ಯಂತರ ಆದೇಶ

- Advertisement -
- Advertisement -

ಯಾವುದೇ ಖಾಸಗಿ ಸಂಘ, ಸಂಸ್ಥೆ ಅಥವಾ ವ್ಯಕ್ತಿಗಳ ಗುಂಪು ಸರ್ಕಾರಿ ಆಸ್ತಿ ಅಥವಾ ಆವರಣವನ್ನು ಬಳಸಲು ‘ಪೂರ್ವಾನುಮತಿ’ ಕಡ್ಡಾಯಗೊಳಿಸಿದ್ದ ರಾಜ್ಯ ಸರ್ಕಾರದ ಇತ್ತೀಚಿನ ಆದೇಶಕ್ಕೆ ತಡೆ ನೀಡಿ ಹೈಕೋರ್ಟ್‌ನ ಧಾರವಾಡ ಪೀಠವು ಮಂಗಳವಾರ (ಅ.28) ಆದೇಶಿಸಿದೆ.

ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಸರ್ಕಾರದ ನಿರ್ದೇಶನಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ, ಮುಂದಿನ ವಿಚಾರಣೆಯನ್ನು ನವೆಂಬರ್ 17ಕ್ಕೆ ಮುಂದೂಡಿದೆ ಎಂದು ವರದಿಯಾಗಿದೆ.

ಅರ್ಜಿದಾರರ ಪರ ನ್ಯಾಯಾಲಯಕ್ಕೆ ಹಾಜರಾದ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ, ಈ ಆದೇಶವು ನಾಗರಿಕರ ಮೂಲಭೂತ ಹಕ್ಕುಗಳ ಮೇಲೆ ನಿರ್ಬಂಧ ಹೇರುತ್ತದೆ ಎಂದು ವಾದಿಸಿದ್ದಾರೆ.

“ಹತ್ತಕ್ಕಿಂತ ಹೆಚ್ಚು ಜನರು ಸೇರುವ ಸಭೆಗಳಿಗೆ ಅನುಮತಿ ಪಡೆಯಬೇಕೆಂದು ಸರ್ಕಾರ ಆದೇಶಿಸಿದೆ. ಇದು ಸಂವಿಧಾನದಲ್ಲಿ ಒದಗಿಸಲಾದ ಮೂಲಭೂತ ಹಕ್ಕಿನ ಮೇಲಿನ ನಿರ್ಬಂಧವಾಗಿದೆ. ಉದ್ಯಾನವನದಲ್ಲಿ ಪಾರ್ಟಿ ನಡೆಸಿದರೂ, ಸರ್ಕಾರಿ ಆದೇಶದ ಪ್ರಕಾರ ಅದು ಕಾನೂನುಬಾಹಿರ ಸಭೆಯಾಗುತ್ತದೆ” ಎಂದು ವಕೀಲ ಹಾರನಹಳ್ಳಿ ವಿಚಾರಣೆಯ ಸಂದರ್ಭದಲ್ಲಿ ಹೇಳಿದ್ದಾರೆ.

ಆರ್‌ಎಸ್‌ಎಸ್ ಸಂಬಂಧಿತ ಚಟುವಟಿಕೆಗಳನ್ನು ನಿರ್ಬಂಧಿಸುವ ಗುರಿಯನ್ನು ಹೊಂದಿದೆ ಎಂದು ಹಲವರು ಭಾವಿಸಿದ್ದ ಈ ಆದೇಶವು ಮುಂದಿನ ವಿಚಾರಣೆಯವರೆಗೆ ತಡೆಹಿಡಿಯಲ್ಪಟ್ಟಿದೆ.

ಸರ್ಕಾರದ ಆದೇಶವನ್ನು ಪ್ರಶ್ನಿಸಿ ಹುಬ್ಬಳ್ಳಿಯ ಪುನಃಶ್ಚೇತನ ಸೇವಾ ಸಂಸ್ಥೆ ಅಧ್ಯಕ್ಷ ವಿನಾಯಕ ಮತ್ತು ವಿ ಕೇರ್ ಫೌಂಡೇಶನ್ ಅಧ್ಯಕ್ಷ ಗಂಗಾಧರಯ್ಯ, ಧಾರವಾಡದ ರಾಜೀವ ಮಲ್ಹಾರ ಕುಲಕರ್ಣಿ ಹಾಗೂ ಬೆಳಗಾವಿಯ ಉಮಾ ಸತ್ಯಜಿತ್‌ ಚವಾಣ್ ಅರ್ಜಿ ಸಲ್ಲಿಸಿದ್ದರು. ಸರ್ಕಾರದ ಕ್ರಮವು ಖಾಸಗಿ ಸಂಸ್ಥೆಗಳು ಕಾನೂನುಬದ್ಧ ಚಟುವಟಿಕೆಗಳನ್ನು ನಡೆಸುವ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ವಾದಿಸಿದ್ದರು.

ಈ ತಿಂಗಳ ಆರಂಭದಲ್ಲಿ ಹೊರಡಿಸಲಾದ, ಈಗ ತಡೆಹಿಡಿಯಲಾದ ಸರ್ಕಾರಿ ಆದೇಶ (ಜಿಒ)ವು ಸಾರ್ವಜನಿಕ ಮತ್ತು ಸರ್ಕಾರಿ ಸ್ವಾಮ್ಯದ ಆಸ್ತಿಗಳನ್ನು ಹೇಗೆ ಬಳಸಬಹುದು ಎಂಬುದರ ಕುರಿತು ವಿವರವಾದ ಮಾರ್ಗಸೂಚಿಗಳನ್ನು ರೂಪಿಸಿತ್ತು.

ಯಾವುದೇ ಖಾಸಗಿ ಅಥವಾ ಸಾಮಾಜಿಕ ಸಂಸ್ಥೆಗಳು ಸರ್ಕಾರಿ ಶಾಲೆಗಳು, ಕಾಲೇಜು ಮೈದಾನಗಳು ಅಥವಾ ಇತರ ಸರ್ಕಾರಿ ಸ್ಥಳಗಳಲ್ಲಿ ಆಯಾ ಇಲಾಖೆಗಳ ಮುಖ್ಯಸ್ಥರ ಲಿಖಿತ ಅನುಮತಿಯಿಲ್ಲದೆ ಕಾರ್ಯಕ್ರಮಗಳು, ಸಭೆಗಳು ಅಥವಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ ಎಂದು ಸರ್ಕಾರದ ಆದೇಶ ಹೇಳಿತ್ತು.

ಕರ್ನಾಟಕ ಭೂ ಕಂದಾಯ ಮತ್ತು ಶಿಕ್ಷಣ ಕಾಯ್ದೆಗಳ ಅಡಿಯಲ್ಲಿ ಯಾವುದೇ ಉಲ್ಲಂಘನೆಗಳ ವಿರುದ್ಧ ಕ್ರಮ ಕೈಗೊಳ್ಳಲು ಮತ್ತು ಅನುಸರಣೆಯನ್ನು ಮೇಲ್ವಿಚಾರಣೆ ಮಾಡಲು ಜಿಲ್ಲಾಡಳಿತಗಳಿಗೆ ನಿರ್ದೇಶನ ನೀಡಿತ್ತು.

ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಅವರು ಸರ್ಕಾರದ ಈ ಕ್ರಮವು ಯಾವುದೇ ನಿರ್ದಿಷ್ಟ ಸಂಸ್ಥೆಯನ್ನು ಗುರಿಯಾಗಿರಿಸಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಸಿಎಂ ಸಿದ್ದರಾಮಯ್ಯ ಕೂಡ ಆರ್‌ಎಸ್‌ಎಸ್‌ ಅನ್ನು ಗುರಿಯಾಗಿಸಿ ಆದೇಶ ಹೊರಡಿಸಿಲ್ಲ ಎಂದು ಹೇಳಿದ್ದರು.

ಹೈಕೋರ್ಟ್ ಪೀಠದ ಇಂದಿನ ಆದೇಶದ ಬಗ್ಗೆ ಸಾರ್ವಜನಿಕರು ಗೊಂದಲ ವ್ಯಕ್ತಪಡಿಸಿದ್ದಾರೆ. ನ್ಯಾಯಾಲಯ ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿರುವ ಹಿನ್ನೆಲೆ, ಮುಂದಿನ ಆದೇಶದವರೆಗೆ ಖಾಸಗಿ ಸಂಘ, ಸಂಸ್ಥೆಗಳು ಸರ್ಕಾರಿ ಆಸ್ತಿ ಅಥವಾ ಆವರಣವನ್ನು ತಮ್ಮ ಚಟುವಟಿಕೆಗಳಿಗೆ ಬಳಸಿಕೊಳ್ಳಬಹುದೇ? ಎಂಬ ಪ್ರಶ್ನೆಯನ್ನು ಮುಂದಿಟ್ಟಿದ್ದಾರೆ.  

ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾಗಿದ್ದ ಡಾ. ಶ್ರೀಧರ್; ಯಶಸ್ವಿನಿ ಟ್ರಸ್ಟ್‌ನಿಂದ ಹೆಸರು ಕೈಬಿಟ್ಟ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...