Homeಮುಖಪುಟಸರ್ಕಾರಿ ಸ್ಥಳ ಬಳಕೆಯ ಪೂರ್ವಾನುಮತಿ ಕಡ್ಡಾಯ ನಿರ್ದೇಶನಕ್ಕೆ ತಡೆ: ಹೊಸ ಪ್ರಶ್ನೆ ಹುಟ್ಟು ಹಾಕಿದ ಹೈಕೋರ್ಟ್...

ಸರ್ಕಾರಿ ಸ್ಥಳ ಬಳಕೆಯ ಪೂರ್ವಾನುಮತಿ ಕಡ್ಡಾಯ ನಿರ್ದೇಶನಕ್ಕೆ ತಡೆ: ಹೊಸ ಪ್ರಶ್ನೆ ಹುಟ್ಟು ಹಾಕಿದ ಹೈಕೋರ್ಟ್ ಮಧ್ಯಂತರ ಆದೇಶ

- Advertisement -
- Advertisement -

ಯಾವುದೇ ಖಾಸಗಿ ಸಂಘ, ಸಂಸ್ಥೆ ಅಥವಾ ವ್ಯಕ್ತಿಗಳ ಗುಂಪು ಸರ್ಕಾರಿ ಆಸ್ತಿ ಅಥವಾ ಆವರಣವನ್ನು ಬಳಸಲು ‘ಪೂರ್ವಾನುಮತಿ’ ಕಡ್ಡಾಯಗೊಳಿಸಿದ್ದ ರಾಜ್ಯ ಸರ್ಕಾರದ ಇತ್ತೀಚಿನ ಆದೇಶಕ್ಕೆ ತಡೆ ನೀಡಿ ಹೈಕೋರ್ಟ್‌ನ ಧಾರವಾಡ ಪೀಠವು ಮಂಗಳವಾರ (ಅ.28) ಆದೇಶಿಸಿದೆ.

ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಸರ್ಕಾರದ ನಿರ್ದೇಶನಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ, ಮುಂದಿನ ವಿಚಾರಣೆಯನ್ನು ನವೆಂಬರ್ 17ಕ್ಕೆ ಮುಂದೂಡಿದೆ ಎಂದು ವರದಿಯಾಗಿದೆ.

ಅರ್ಜಿದಾರರ ಪರ ನ್ಯಾಯಾಲಯಕ್ಕೆ ಹಾಜರಾದ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ, ಈ ಆದೇಶವು ನಾಗರಿಕರ ಮೂಲಭೂತ ಹಕ್ಕುಗಳ ಮೇಲೆ ನಿರ್ಬಂಧ ಹೇರುತ್ತದೆ ಎಂದು ವಾದಿಸಿದ್ದಾರೆ.

“ಹತ್ತಕ್ಕಿಂತ ಹೆಚ್ಚು ಜನರು ಸೇರುವ ಸಭೆಗಳಿಗೆ ಅನುಮತಿ ಪಡೆಯಬೇಕೆಂದು ಸರ್ಕಾರ ಆದೇಶಿಸಿದೆ. ಇದು ಸಂವಿಧಾನದಲ್ಲಿ ಒದಗಿಸಲಾದ ಮೂಲಭೂತ ಹಕ್ಕಿನ ಮೇಲಿನ ನಿರ್ಬಂಧವಾಗಿದೆ. ಉದ್ಯಾನವನದಲ್ಲಿ ಪಾರ್ಟಿ ನಡೆಸಿದರೂ, ಸರ್ಕಾರಿ ಆದೇಶದ ಪ್ರಕಾರ ಅದು ಕಾನೂನುಬಾಹಿರ ಸಭೆಯಾಗುತ್ತದೆ” ಎಂದು ವಕೀಲ ಹಾರನಹಳ್ಳಿ ವಿಚಾರಣೆಯ ಸಂದರ್ಭದಲ್ಲಿ ಹೇಳಿದ್ದಾರೆ.

ಆರ್‌ಎಸ್‌ಎಸ್ ಸಂಬಂಧಿತ ಚಟುವಟಿಕೆಗಳನ್ನು ನಿರ್ಬಂಧಿಸುವ ಗುರಿಯನ್ನು ಹೊಂದಿದೆ ಎಂದು ಹಲವರು ಭಾವಿಸಿದ್ದ ಈ ಆದೇಶವು ಮುಂದಿನ ವಿಚಾರಣೆಯವರೆಗೆ ತಡೆಹಿಡಿಯಲ್ಪಟ್ಟಿದೆ.

ಸರ್ಕಾರದ ಆದೇಶವನ್ನು ಪ್ರಶ್ನಿಸಿ ಹುಬ್ಬಳ್ಳಿಯ ಪುನಃಶ್ಚೇತನ ಸೇವಾ ಸಂಸ್ಥೆ ಅಧ್ಯಕ್ಷ ವಿನಾಯಕ ಮತ್ತು ವಿ ಕೇರ್ ಫೌಂಡೇಶನ್ ಅಧ್ಯಕ್ಷ ಗಂಗಾಧರಯ್ಯ, ಧಾರವಾಡದ ರಾಜೀವ ಮಲ್ಹಾರ ಕುಲಕರ್ಣಿ ಹಾಗೂ ಬೆಳಗಾವಿಯ ಉಮಾ ಸತ್ಯಜಿತ್‌ ಚವಾಣ್ ಅರ್ಜಿ ಸಲ್ಲಿಸಿದ್ದರು. ಸರ್ಕಾರದ ಕ್ರಮವು ಖಾಸಗಿ ಸಂಸ್ಥೆಗಳು ಕಾನೂನುಬದ್ಧ ಚಟುವಟಿಕೆಗಳನ್ನು ನಡೆಸುವ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ವಾದಿಸಿದ್ದರು.

ಈ ತಿಂಗಳ ಆರಂಭದಲ್ಲಿ ಹೊರಡಿಸಲಾದ, ಈಗ ತಡೆಹಿಡಿಯಲಾದ ಸರ್ಕಾರಿ ಆದೇಶ (ಜಿಒ)ವು ಸಾರ್ವಜನಿಕ ಮತ್ತು ಸರ್ಕಾರಿ ಸ್ವಾಮ್ಯದ ಆಸ್ತಿಗಳನ್ನು ಹೇಗೆ ಬಳಸಬಹುದು ಎಂಬುದರ ಕುರಿತು ವಿವರವಾದ ಮಾರ್ಗಸೂಚಿಗಳನ್ನು ರೂಪಿಸಿತ್ತು.

ಯಾವುದೇ ಖಾಸಗಿ ಅಥವಾ ಸಾಮಾಜಿಕ ಸಂಸ್ಥೆಗಳು ಸರ್ಕಾರಿ ಶಾಲೆಗಳು, ಕಾಲೇಜು ಮೈದಾನಗಳು ಅಥವಾ ಇತರ ಸರ್ಕಾರಿ ಸ್ಥಳಗಳಲ್ಲಿ ಆಯಾ ಇಲಾಖೆಗಳ ಮುಖ್ಯಸ್ಥರ ಲಿಖಿತ ಅನುಮತಿಯಿಲ್ಲದೆ ಕಾರ್ಯಕ್ರಮಗಳು, ಸಭೆಗಳು ಅಥವಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ ಎಂದು ಸರ್ಕಾರದ ಆದೇಶ ಹೇಳಿತ್ತು.

ಕರ್ನಾಟಕ ಭೂ ಕಂದಾಯ ಮತ್ತು ಶಿಕ್ಷಣ ಕಾಯ್ದೆಗಳ ಅಡಿಯಲ್ಲಿ ಯಾವುದೇ ಉಲ್ಲಂಘನೆಗಳ ವಿರುದ್ಧ ಕ್ರಮ ಕೈಗೊಳ್ಳಲು ಮತ್ತು ಅನುಸರಣೆಯನ್ನು ಮೇಲ್ವಿಚಾರಣೆ ಮಾಡಲು ಜಿಲ್ಲಾಡಳಿತಗಳಿಗೆ ನಿರ್ದೇಶನ ನೀಡಿತ್ತು.

ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಅವರು ಸರ್ಕಾರದ ಈ ಕ್ರಮವು ಯಾವುದೇ ನಿರ್ದಿಷ್ಟ ಸಂಸ್ಥೆಯನ್ನು ಗುರಿಯಾಗಿರಿಸಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಸಿಎಂ ಸಿದ್ದರಾಮಯ್ಯ ಕೂಡ ಆರ್‌ಎಸ್‌ಎಸ್‌ ಅನ್ನು ಗುರಿಯಾಗಿಸಿ ಆದೇಶ ಹೊರಡಿಸಿಲ್ಲ ಎಂದು ಹೇಳಿದ್ದರು.

ಹೈಕೋರ್ಟ್ ಪೀಠದ ಇಂದಿನ ಆದೇಶದ ಬಗ್ಗೆ ಸಾರ್ವಜನಿಕರು ಗೊಂದಲ ವ್ಯಕ್ತಪಡಿಸಿದ್ದಾರೆ. ನ್ಯಾಯಾಲಯ ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿರುವ ಹಿನ್ನೆಲೆ, ಮುಂದಿನ ಆದೇಶದವರೆಗೆ ಖಾಸಗಿ ಸಂಘ, ಸಂಸ್ಥೆಗಳು ಸರ್ಕಾರಿ ಆಸ್ತಿ ಅಥವಾ ಆವರಣವನ್ನು ತಮ್ಮ ಚಟುವಟಿಕೆಗಳಿಗೆ ಬಳಸಿಕೊಳ್ಳಬಹುದೇ? ಎಂಬ ಪ್ರಶ್ನೆಯನ್ನು ಮುಂದಿಟ್ಟಿದ್ದಾರೆ.  

ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾಗಿದ್ದ ಡಾ. ಶ್ರೀಧರ್; ಯಶಸ್ವಿನಿ ಟ್ರಸ್ಟ್‌ನಿಂದ ಹೆಸರು ಕೈಬಿಟ್ಟ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...