Homeಮುಖಪುಟಬಿಹಾರ ವಿಧಾನಸಭೆ ಚುನಾವಣೆ : ಮಹಾಘಟಬಂಧನ್ ಪ್ರಣಾಳಿಕೆ ಬಿಡುಗಡೆ

ಬಿಹಾರ ವಿಧಾನಸಭೆ ಚುನಾವಣೆ : ಮಹಾಘಟಬಂಧನ್ ಪ್ರಣಾಳಿಕೆ ಬಿಡುಗಡೆ

- Advertisement -
- Advertisement -

ಬಿಹಾರದ ವಿರೋಧ ಪಕ್ಷಗಳ ‘ಮಹಾಘಟಬಂಧನ್’ ಮೈತ್ರಿಕೂಟವು ಮುಂಬರುವ ವಿಧಾನಸಭಾ ಚುನಾವಣೆಗೆ ಮಂಗಳವಾರ (ಅ.28) ತನ್ನ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಮಹಿಳೆಯರಿಗೆ ಆರ್ಥಿಕ ನೆರವು, ಸರ್ಕಾರಿ ಉದ್ಯೋಗ ಸೇರಿದಂತೆ ಭರಪೂರ ಭರವಸೆಗಳನ್ನು ನೀಡಿದೆ.

ಸರ್ಕಾರ ರಚನೆಯಾದ 20 ದಿನಗಳಲ್ಲಿ ಪ್ರತಿ ಕುಟುಂಬದ ಒಬ್ಬ ಸದಸ್ಯನಿಗೆ ಉದ್ಯೋಗ, ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ಮತ್ತು ಮಹಿಳೆಯರಿಗೆ ಮಾಸಿಕ 2,500 ರೂ. ಆರ್ಥಿಕ ನೆರವು ಪ್ರಣಾಳಿಕೆಯಲ್ಲಿ ಪ್ರಮುಖ ಅಂಶಗಳಾಗಿವೆ.

ಹಳೆಯ ಪಿಂಚಣಿ ಯೋಜನೆಯ (ಒಪಿಎಸ್‌) ಅನುಷ್ಠಾನದ ಭರವಸೆಯನ್ನು ಕೂಡ ಪ್ರಣಾಳಿಕೆ ನೀಡಿದೆ.

ಮಹಾಘಟಬಂಧನ್ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ತೇಜಸ್ವಿ ಯಾದವ್ ಅವರನ್ನು ಘೋಷಿಸಿದ ಬೆನ್ನಲ್ಲೇ, ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗಿದೆ. ವಿಕಾಸ್‌ಶೀಲ್ ಇನ್ಸಾನ್ ಪಕ್ಷದ ಮುಖ್ಯಸ್ಥ ಮುಖೇಶ್ ಸಹಾನಿ ಅವರನ್ನು ಮಹಾ ಮೈತ್ರಿಕೂಟದ ಉಪಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೊಷಣೆ ಮಾಡಲಾಗಿದೆ.

ಬಿಹಾರದ ಆಡಳಿತಾರೂಢ ಎನ್‌ಡಿಎ ಅಕ್ಟೋಬರ್ 30 ರಂದು ವಿಧಾನಸಭಾ ಚುನಾವಣೆಗೆ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ.

ಮಹಾಘಟಬಂಧನ್ (ಮಹಾ ಮೈತ್ರಿಕೂಟ) ಅಥವಾ ಇಂಡಿಯಾ ಒಕ್ಕೂಟದ ಪ್ರಣಾಳಿಕೆಯ ಮುಖ್ಯಾಂಶಗಳು ಹೀಗಿವೆ.

  • ಸರ್ಕಾರ ರಚನೆಯಾದ 20 ದಿನಗಳಲ್ಲಿ, ಪ್ರತಿ ಕುಟುಂಬದ ಒಬ್ಬ ಸದಸ್ಯರಿಗೆ ಉದ್ಯೋಗ ಸಿಗುವಂತೆ ಕಾನೂನು ರೂಪಿಸುವುದು, ಮುಂದಿನ 20 ತಿಂಗಳೊಳಗೆ ಉದ್ಯೋಗ ನೀಡುವ ಪ್ರಕ್ರಿಯೆಯನ್ನು ಪ್ರಾರಂಭಿಸುವುದು.
  • ಸರ್ಕಾರಿ ಮತ್ತು ಖಾಸಗಿ ವಲಯಗಳಲ್ಲಿ 5 ವರ್ಷಗಳಲ್ಲಿ 3 ಮಿಲಿಯನ್ ಹೊಸ ಉದ್ಯೋಗಗಳನ್ನು ಸೃಷ್ಟಿಸುವುದು. ಇದರಲ್ಲಿ 1 ವರ್ಷದೊಳಗೆ ಎಲ್ಲಾ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದು ಸೇರಿದೆ.
  • ರಾಜ್ಯದ ನಗರ ಪ್ರದೇಶದ ಯುವಕರಿಗೆ ಉದ್ಯೋಗಾವಕಾಶಗಳಿಗಾಗಿ ‘ಬಿಹಾರ ಉದ್ಯೋಗ ಖಾತರಿ ಮಿಷನ್’ ಮತ್ತು ಪದವೀಧರರು ಮತ್ತು ಡಿಪ್ಲೊಮಾ ಪೂರ್ಣಗೊಳಿಸಿದವರಿಗೆ ಮಾಸಿಕ 3 ಸಾವಿರ ರೂಪಾಯಿ ನಿರುದ್ಯೋಗ ಭತ್ಯೆ.
  • ‘ಮಾಯಿ-ಬಹಿನಿ ಯೋಜನೆ’ ಅಡಿಯಲ್ಲಿ ಮಹಿಳೆಯರಿಗೆ 2,500 ರೂಪಾಯಿ ಮಾಸಿಕ ಆರ್ಥಿಕ ಸಹಾಯ
  • ಸರ್ಕಾರಿ ಉದ್ಯೋಗಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ. 50 ರಷ್ಟು ಮೀಸಲಾತಿ
  • ಗ್ರಾಮೀಣ ಮಹಿಳಾ ಉತ್ಪಾದಕರನ್ನು ಬೆಂಬಲಿಸಲು ರಾಜ್ಯದ ಮದ್ಯ ನಿಷೇಧ ಕಾನೂನಿನಿಂದ ‘ಟೋಡಿ’ಗೆ (ತಾರಿ, ಸಾಂಪ್ರದಾಯಿಕ ತಾಳೆ ಮದ್ಯ) ವಿನಾಯಿತಿ
  • ಬಡ ಮತ್ತು ಮಧ್ಯಮ ವರ್ಗದ ಮನೆಗಳಿಗೆ ತಿಂಗಳಿಗೆ 200 ಯೂನಿಟ್ ಉಚಿತ ವಿದ್ಯುತ್
  • ಸಂಪೂರ್ಣ ಕೃಷಿ ಸಾಲ ಮನ್ನಾ
  • ಎಲ್ಲಾ ಬೆಳೆಗಳಿಗೆ ಇನ್ಪುಟ್ ವೆಚ್ಚಗಳು + 50 ಶೇಕಡ ಲಾಭವನ್ನು ಒಳಗೊಂಡ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಗ್ಯಾರಂಟಿ
  • ಪ್ರತಿ ಭೂಹೀನ ಕುಟುಂಬಕ್ಕೆ 5 ದಶಮಾಂಶ ಭೂಮಿ (ಸುಮಾರು 1/20 ಎಕರೆ)
  • ಶಿಶುವಿಹಾರದಿಂದ ಪದವಿ ವರೆಗೆ ಉಚಿತ ಶಿಕ್ಷಣ.
  • ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ (ಒಪಿಎಸ್‌) ಪುನಃಸ್ಥಾಪನೆ
  • ಜಾತಿ ಆಧಾರಿತ ಜನಗಣತಿ ಮತ್ತು ಹೊಸ ದತ್ತಾಂಶಗಳ ಆಧಾರದ ಮೇಲೆ ಮೀಸಲಾತಿ ಕೋಟಾಗಳ ಪರಿಶೀಲನೆ
  • ಹಿಂದುಳಿದ ವರ್ಗಗಳು, ದಲಿತರು ಮತ್ತು ಬುಡಕಟ್ಟು ವರ್ಗಕ್ಕೆ ಇನ್ನು ಹೆಚ್ಚಿನ ಸಮುದಾಯಗಳನ್ನು ಸೇರಿಸಲು ಮೀಸಲಾತಿ ಮೇಲಿನ ಶೇಕಡ 50ರ ಮಿತಿಯನ್ನು ತೆಗೆದುಹಾಕುವುದು.
  • ಎಲ್ಲಾ ಕುಟುಂಬಗಳಿಗೆ ಸಾರ್ವತ್ರಿಕ ಆರೋಗ್ಯ ರಕ್ಷಣೆ
  • ಹಸಿರು ಬಿಹಾರ ಮಿಷನ್ ಅಡಿ ಅರಣ್ಯೀಕರಣ, ವಿಸ್ತೃತ ನೀರಾವರಿ, ನವೀಕರಿಸಬಹುದಾದ ಇಂಧನ ಯೋಜನೆಗಳು ಮತ್ತು ಉದ್ಯೋಗಗಳನ್ನು ಸೃಷ್ಟಿಸಲು ಹಾಗೂ ವಲಸೆಯನ್ನು ತಡೆಯಲು ಹೊಸ ಕೈಗಾರಿಕಾ ಕಾರಿಡಾರ್‌ಗಳು
  • ಬಿಹಾರವನ್ನು ‘ಅಪರಾಧ ಮುಕ್ತ’ ಗೊಳಿಸಲು ವರ್ಧಿತ ಪೊಲೀಸ್ ವ್ಯವಸ್ಥೆ ಮತ್ತು ಕೋಮು ವಿರೋಧಿ ಉಪಕ್ರಮಗಳು ಸೇರಿದಂತೆ ಕಠಿಣ ಅಪರಾಧ ವಿರೋಧಿ ಕ್ರಮಗಳ ಜಾರಿ
  • ವಕ್ಫ್ ತಿದ್ದುಪಡಿ ಕಾಯ್ದೆಯು ರಾಜ್ಯದ ಹಕ್ಕುಗಳನ್ನು ಅತಿಕ್ರಮಿಸಿದರೆ ಅದನ್ನು ರದ್ದುಗೊಳಿಸುವುದು
  • ಯುವಜನರ ವಲಸೆ ನಿಲ್ಲಿಸಲು ಮತ್ತು ‘ಬಿಹಾರದ ಸ್ವಾಭಿಮಾನ’ವನ್ನು ಪುನಃಸ್ಥಾಪಿಸಲು ಕೈಗಾರಿಕೆಗಳಿಗೆ ಪ್ರೋತ್ಸಾಹ.

ಎರಡು ರಾಜ್ಯಗಳಲ್ಲಿ ಮತದಾರರಾಗಿ ನೋಂದಣಿ: ಪ್ರಶಾಂತ್ ಕಿಶೋರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...