Homeಮುಖಪುಟಬಿಹಾರ ವಿಧಾನಸಭೆ ಚುನಾವಣೆ : ಮಹಾಘಟಬಂಧನ್ ಪ್ರಣಾಳಿಕೆ ಬಿಡುಗಡೆ

ಬಿಹಾರ ವಿಧಾನಸಭೆ ಚುನಾವಣೆ : ಮಹಾಘಟಬಂಧನ್ ಪ್ರಣಾಳಿಕೆ ಬಿಡುಗಡೆ

- Advertisement -
- Advertisement -

ಬಿಹಾರದ ವಿರೋಧ ಪಕ್ಷಗಳ ‘ಮಹಾಘಟಬಂಧನ್’ ಮೈತ್ರಿಕೂಟವು ಮುಂಬರುವ ವಿಧಾನಸಭಾ ಚುನಾವಣೆಗೆ ಮಂಗಳವಾರ (ಅ.28) ತನ್ನ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಮಹಿಳೆಯರಿಗೆ ಆರ್ಥಿಕ ನೆರವು, ಸರ್ಕಾರಿ ಉದ್ಯೋಗ ಸೇರಿದಂತೆ ಭರಪೂರ ಭರವಸೆಗಳನ್ನು ನೀಡಿದೆ.

ಸರ್ಕಾರ ರಚನೆಯಾದ 20 ದಿನಗಳಲ್ಲಿ ಪ್ರತಿ ಕುಟುಂಬದ ಒಬ್ಬ ಸದಸ್ಯನಿಗೆ ಉದ್ಯೋಗ, ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ಮತ್ತು ಮಹಿಳೆಯರಿಗೆ ಮಾಸಿಕ 2,500 ರೂ. ಆರ್ಥಿಕ ನೆರವು ಪ್ರಣಾಳಿಕೆಯಲ್ಲಿ ಪ್ರಮುಖ ಅಂಶಗಳಾಗಿವೆ.

ಹಳೆಯ ಪಿಂಚಣಿ ಯೋಜನೆಯ (ಒಪಿಎಸ್‌) ಅನುಷ್ಠಾನದ ಭರವಸೆಯನ್ನು ಕೂಡ ಪ್ರಣಾಳಿಕೆ ನೀಡಿದೆ.

ಮಹಾಘಟಬಂಧನ್ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ತೇಜಸ್ವಿ ಯಾದವ್ ಅವರನ್ನು ಘೋಷಿಸಿದ ಬೆನ್ನಲ್ಲೇ, ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗಿದೆ. ವಿಕಾಸ್‌ಶೀಲ್ ಇನ್ಸಾನ್ ಪಕ್ಷದ ಮುಖ್ಯಸ್ಥ ಮುಖೇಶ್ ಸಹಾನಿ ಅವರನ್ನು ಮಹಾ ಮೈತ್ರಿಕೂಟದ ಉಪಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೊಷಣೆ ಮಾಡಲಾಗಿದೆ.

ಬಿಹಾರದ ಆಡಳಿತಾರೂಢ ಎನ್‌ಡಿಎ ಅಕ್ಟೋಬರ್ 30 ರಂದು ವಿಧಾನಸಭಾ ಚುನಾವಣೆಗೆ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ.

ಮಹಾಘಟಬಂಧನ್ (ಮಹಾ ಮೈತ್ರಿಕೂಟ) ಅಥವಾ ಇಂಡಿಯಾ ಒಕ್ಕೂಟದ ಪ್ರಣಾಳಿಕೆಯ ಮುಖ್ಯಾಂಶಗಳು ಹೀಗಿವೆ.

  • ಸರ್ಕಾರ ರಚನೆಯಾದ 20 ದಿನಗಳಲ್ಲಿ, ಪ್ರತಿ ಕುಟುಂಬದ ಒಬ್ಬ ಸದಸ್ಯರಿಗೆ ಉದ್ಯೋಗ ಸಿಗುವಂತೆ ಕಾನೂನು ರೂಪಿಸುವುದು, ಮುಂದಿನ 20 ತಿಂಗಳೊಳಗೆ ಉದ್ಯೋಗ ನೀಡುವ ಪ್ರಕ್ರಿಯೆಯನ್ನು ಪ್ರಾರಂಭಿಸುವುದು.
  • ಸರ್ಕಾರಿ ಮತ್ತು ಖಾಸಗಿ ವಲಯಗಳಲ್ಲಿ 5 ವರ್ಷಗಳಲ್ಲಿ 3 ಮಿಲಿಯನ್ ಹೊಸ ಉದ್ಯೋಗಗಳನ್ನು ಸೃಷ್ಟಿಸುವುದು. ಇದರಲ್ಲಿ 1 ವರ್ಷದೊಳಗೆ ಎಲ್ಲಾ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದು ಸೇರಿದೆ.
  • ರಾಜ್ಯದ ನಗರ ಪ್ರದೇಶದ ಯುವಕರಿಗೆ ಉದ್ಯೋಗಾವಕಾಶಗಳಿಗಾಗಿ ‘ಬಿಹಾರ ಉದ್ಯೋಗ ಖಾತರಿ ಮಿಷನ್’ ಮತ್ತು ಪದವೀಧರರು ಮತ್ತು ಡಿಪ್ಲೊಮಾ ಪೂರ್ಣಗೊಳಿಸಿದವರಿಗೆ ಮಾಸಿಕ 3 ಸಾವಿರ ರೂಪಾಯಿ ನಿರುದ್ಯೋಗ ಭತ್ಯೆ.
  • ‘ಮಾಯಿ-ಬಹಿನಿ ಯೋಜನೆ’ ಅಡಿಯಲ್ಲಿ ಮಹಿಳೆಯರಿಗೆ 2,500 ರೂಪಾಯಿ ಮಾಸಿಕ ಆರ್ಥಿಕ ಸಹಾಯ
  • ಸರ್ಕಾರಿ ಉದ್ಯೋಗಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ. 50 ರಷ್ಟು ಮೀಸಲಾತಿ
  • ಗ್ರಾಮೀಣ ಮಹಿಳಾ ಉತ್ಪಾದಕರನ್ನು ಬೆಂಬಲಿಸಲು ರಾಜ್ಯದ ಮದ್ಯ ನಿಷೇಧ ಕಾನೂನಿನಿಂದ ‘ಟೋಡಿ’ಗೆ (ತಾರಿ, ಸಾಂಪ್ರದಾಯಿಕ ತಾಳೆ ಮದ್ಯ) ವಿನಾಯಿತಿ
  • ಬಡ ಮತ್ತು ಮಧ್ಯಮ ವರ್ಗದ ಮನೆಗಳಿಗೆ ತಿಂಗಳಿಗೆ 200 ಯೂನಿಟ್ ಉಚಿತ ವಿದ್ಯುತ್
  • ಸಂಪೂರ್ಣ ಕೃಷಿ ಸಾಲ ಮನ್ನಾ
  • ಎಲ್ಲಾ ಬೆಳೆಗಳಿಗೆ ಇನ್ಪುಟ್ ವೆಚ್ಚಗಳು + 50 ಶೇಕಡ ಲಾಭವನ್ನು ಒಳಗೊಂಡ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಗ್ಯಾರಂಟಿ
  • ಪ್ರತಿ ಭೂಹೀನ ಕುಟುಂಬಕ್ಕೆ 5 ದಶಮಾಂಶ ಭೂಮಿ (ಸುಮಾರು 1/20 ಎಕರೆ)
  • ಶಿಶುವಿಹಾರದಿಂದ ಪದವಿ ವರೆಗೆ ಉಚಿತ ಶಿಕ್ಷಣ.
  • ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ (ಒಪಿಎಸ್‌) ಪುನಃಸ್ಥಾಪನೆ
  • ಜಾತಿ ಆಧಾರಿತ ಜನಗಣತಿ ಮತ್ತು ಹೊಸ ದತ್ತಾಂಶಗಳ ಆಧಾರದ ಮೇಲೆ ಮೀಸಲಾತಿ ಕೋಟಾಗಳ ಪರಿಶೀಲನೆ
  • ಹಿಂದುಳಿದ ವರ್ಗಗಳು, ದಲಿತರು ಮತ್ತು ಬುಡಕಟ್ಟು ವರ್ಗಕ್ಕೆ ಇನ್ನು ಹೆಚ್ಚಿನ ಸಮುದಾಯಗಳನ್ನು ಸೇರಿಸಲು ಮೀಸಲಾತಿ ಮೇಲಿನ ಶೇಕಡ 50ರ ಮಿತಿಯನ್ನು ತೆಗೆದುಹಾಕುವುದು.
  • ಎಲ್ಲಾ ಕುಟುಂಬಗಳಿಗೆ ಸಾರ್ವತ್ರಿಕ ಆರೋಗ್ಯ ರಕ್ಷಣೆ
  • ಹಸಿರು ಬಿಹಾರ ಮಿಷನ್ ಅಡಿ ಅರಣ್ಯೀಕರಣ, ವಿಸ್ತೃತ ನೀರಾವರಿ, ನವೀಕರಿಸಬಹುದಾದ ಇಂಧನ ಯೋಜನೆಗಳು ಮತ್ತು ಉದ್ಯೋಗಗಳನ್ನು ಸೃಷ್ಟಿಸಲು ಹಾಗೂ ವಲಸೆಯನ್ನು ತಡೆಯಲು ಹೊಸ ಕೈಗಾರಿಕಾ ಕಾರಿಡಾರ್‌ಗಳು
  • ಬಿಹಾರವನ್ನು ‘ಅಪರಾಧ ಮುಕ್ತ’ ಗೊಳಿಸಲು ವರ್ಧಿತ ಪೊಲೀಸ್ ವ್ಯವಸ್ಥೆ ಮತ್ತು ಕೋಮು ವಿರೋಧಿ ಉಪಕ್ರಮಗಳು ಸೇರಿದಂತೆ ಕಠಿಣ ಅಪರಾಧ ವಿರೋಧಿ ಕ್ರಮಗಳ ಜಾರಿ
  • ವಕ್ಫ್ ತಿದ್ದುಪಡಿ ಕಾಯ್ದೆಯು ರಾಜ್ಯದ ಹಕ್ಕುಗಳನ್ನು ಅತಿಕ್ರಮಿಸಿದರೆ ಅದನ್ನು ರದ್ದುಗೊಳಿಸುವುದು
  • ಯುವಜನರ ವಲಸೆ ನಿಲ್ಲಿಸಲು ಮತ್ತು ‘ಬಿಹಾರದ ಸ್ವಾಭಿಮಾನ’ವನ್ನು ಪುನಃಸ್ಥಾಪಿಸಲು ಕೈಗಾರಿಕೆಗಳಿಗೆ ಪ್ರೋತ್ಸಾಹ.

ಎರಡು ರಾಜ್ಯಗಳಲ್ಲಿ ಮತದಾರರಾಗಿ ನೋಂದಣಿ: ಪ್ರಶಾಂತ್ ಕಿಶೋರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...