Homeಮುಖಪುಟಕೇರಳ | 'ಬಡತನ ಮುಕ್ತ ಘೋಷಣೆ' ಕಾರ್ಯಕ್ರಮದಿಂದ ಹಿಂದೆ ಸರಿಯಿರಿ : ಹೋರಾಟ ನಿರತ ಆಶಾಗಳಿಂದ...

ಕೇರಳ | ‘ಬಡತನ ಮುಕ್ತ ಘೋಷಣೆ’ ಕಾರ್ಯಕ್ರಮದಿಂದ ಹಿಂದೆ ಸರಿಯಿರಿ : ಹೋರಾಟ ನಿರತ ಆಶಾಗಳಿಂದ ನಟರಿಗೆ ಮನವಿ

- Advertisement -
- Advertisement -

ಕೇರಳದ ಸಚಿವಾಲಯದಲ್ಲಿ ಪ್ರತಿಭಟನೆ ನಡೆಸುತ್ತಿರುವ ‘ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯರು (ಆಶಾಗಳು)’ ನವೆಂಬರ್ 1ರಂದು ಕೇರಳವನ್ನು ‘ತೀವ್ರ ಬಡತನ ಮುಕ್ತ’ ರಾಜ್ಯವೆಂದು ಘೋಷಿಸಲು ರಾಜ್ಯ ಸರ್ಕಾರ ಆಯೋಜಿಸಿರುವ ಅಧಿಕೃತ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ನಟರಾದ ಮೋಹನ್ ಲಾಲ್, ಮಮ್ಮುಟ್ಟಿ ಮತ್ತು ಕಮಲ್ ಹಾಸನ್ ಅವರನ್ನು ವಿನಂತಿಸಿದೆ.

“ದಿನಕ್ಕೆ 233 ರೂಪಾಯಿಯಲ್ಲಿ ಬದುಕುತ್ತಿರುವ 26,125 ಆಶಾ ಕಾರ್ಯರ್ತೆಯರು ಅತ್ಯಂತ ಬಡವರಲ್ಲಿ ಸೇರಿದ್ದಾರೆ. ನಾವು ದುಃಖದಲ್ಲಿ ಬದುಕುತ್ತಿರುವಾಗ ಕೇರಳವನ್ನು ತೀವ್ರ ಬಡತನ ಮುಕ್ತ ಎಂದು ಘೋಷಿಸಲು ಸಾಧ್ಯವಿಲ್ಲ. ಹಾಗಾಗಿ, ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ನಟರು ಉದ್ದೇಶಪೂರ್ವಕವಾಗಿ ಆ ಸುಳ್ಳನ್ನು ಪ್ರಚಾರ ಮಾಡುವ ಭಾಗವಾಗುತ್ತಾರೆ. ಆದ್ದರಿಂದ, ಪ್ರೀತಿ ಮತ್ತು ಗೌರವದಿಂದ ಕೇರಳದ ಬಡ ಆಶಾ ಕಾರ್ಯಕರ್ತೆಯರಾದ ನಾವು ಸರ್ಕಾರದ ಬಡತನ ಮುಕ್ತ ಘೋಷಣೆ ಸಮಾರಂಭದಿಂದ ಹಿಂದೆ ಸರಿಯುವಂತೆ ವಿನಮ್ರವಾಗಿ ವಿನಂತಿಸುತ್ತೇವೆ” ಎಂದು ಆಶಾ ಕಾರ್ಯಕರ್ತೆಯ ಒಕ್ಕೂಟ ಬಹಿರಂಗ ಪತ್ರದಲ್ಲಿ ಹೇಳಿದೆ.

ನವೆಂಬರ್ 1ರಂದು ಕೇರಳವನ್ನು ತೀವ್ರ ಬಡತನದಿಂದ ಮುಕ್ತಗೊಂಡ ದೇಶದ ಮೊದಲ ರಾಜ್ಯವೆಂದು ಅಧಿಕೃತವಾಗಿ ಘೋಷಿಸಲು ಸರ್ಕಾರ ಸಿದ್ದತೆ ನಡೆಸಿದೆ. ತಿರುವನಂತಪುರದ ಸೆಂಟ್ರಲ್ ಕ್ರೀಡಾಂಗಣದಲ್ಲಿ ಕೇರಳ ಪಿರವಿ ದಿನಾಚರಣೆಯ (ರಾಜ್ಯೋತ್ಸವ) ಜೊತೆಗೆ ಈ ಕಾರ್ಯಕ್ರಮ ನಡೆಯಲಿದೆ. ರಾಜ್ಯ ಸರ್ಕಾರವು ನಟರಾದ ಮೋಹನ್ ಲಾಲ್ ಮತ್ತು ಮಮ್ಮುಟ್ಟಿ ಹಾಗೂ ನಟ-ರಾಜಕಾರಣಿ ಕಮಲ್ ಹಾಸನ್ ಅವರಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದೆ.

ಸರ್ಕಾರದ ಕಾರ್ಯಕ್ರಮದಲ್ಲಿ ಭಾಗವಹಿಸುವ ಬದಲು ನಮ್ಮ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಎಂದು ಆಶಾ ಕಾರ್ಯಕರ್ತೆಯರು ತಮ್ಮ ಬಹಿರಂಗ ಪತ್ರದಲ್ಲಿ ನಟರಿಗೆ ಮನವಿ ಮಾಡಿದ್ದಾರೆ.

“ದಯವಿಟ್ಟು ನಮ್ಮನ್ನು ಭೇಟಿ ಮಾಡಿ, ಸಚಿವಾಲಯದ ಮುಂದೆ ಇರುವ ಆಶಾ ಯೋಧರೇ ಮೂರು ಹೊತ್ತು ಊಟ ಮಾಡಲು ಸಾಧ್ಯವಾಗದವರು, ಮಕ್ಕಳಿಗೆ ಶಿಕ್ಷಣ ನೀಡಲು ಸಾಧ್ಯವಾಗದವರು, ಗಂಭೀರ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯಲು ಸಾಧ್ಯವಾಗದವರು, ಸಾಲದಲ್ಲಿ ಮುಳುಗಿರುವವರು. ನಮ್ಮ ಅಲ್ಪ ವೇತನವನ್ನು ಹೆಚ್ಚಿಸದೆ ಕೇರಳವನ್ನು ತೀವ್ರ ಬಡತನದಿಂದ ಮುಕ್ತಗೊಳಿಸಲಾಗಿದೆ ಎಂದು ಘೋಷಿಸುವುದು ದೊಡ್ಡ ಸುಳ್ಳು, ಸರ್ಕಾರದ ವಂಚನೆ” ಎಂದು ಪತ್ರದಲ್ಲಿ ಹೇಳಲಾಗಿದೆ.

ಕೇರಳ ಆಶಾ ಆರೋಗ್ಯ ಕಾರ್ಯಕರ್ತರ ಸಂಘ (ಕೆಎಹೆಚ್‌ಡಬ್ಲ್ಯುಎ) ನೇತೃತ್ವದಲ್ಲಿ ಆಶಾ ಕಾರ್ಯಕರ್ತರು ಈ ವರ್ಷದ ಆರಂಭದಿಂದಲೂ ರಾಜ್ಯ ಸಚಿವಾಲಯದ ಹೊರಗೆ ಧರಣಿ ನಡೆಸುತ್ತಿದ್ದಾರೆ. ಅವರ ಬೇಡಿಕೆಗಳಲ್ಲಿ ಗೌರವಧನ ಹೆಚ್ಚಳ ಮತ್ತು ನಿವೃತ್ತಿ ನಂತರದ ಸೌಲಭ್ಯಗಳು ಸೇರಿವೆ.

ಅಕ್ಟೋಬರ್ ಮೂರನೇ ವಾರದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಕೇರಳಕ್ಕೆ ನಾಲ್ಕು ದಿನಗಳ ಭೇಟಿ ನೀಡಿದ್ದಾಗ ಅಶಾಗಳು ತಮ್ಮ ಹೋರಾಟವನ್ನು ತೀವ್ರಗೊಳಿಸಿದ್ದರು. ಅವರು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆಯತ್ತ ಮೆರವಣಿಗೆ ಕೈಗೊಂಡಿದ್ದರು. ಈ ವೇಳೆ ಪೊಲೀಸರೊಂದಿಗೆ ಘರ್ಷಣೆ ನಡೆದು, ಅನೇಕ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿ ಬಿಡುಗಡೆಗೊಳಿಸಿದ್ದರು.

ಬಿಹಾರ ವಿಧಾನಸಭೆ ಚುನಾವಣೆ : ಮಹಾಘಟಬಂಧನ್ ಪ್ರಣಾಳಿಕೆ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...