Homeಅಂತರಾಷ್ಟ್ರೀಯಸುಡಾನ್‌ನ ಅಲ್‌-ಪಾಶೆರ್ ನಿಯಂತ್ರಣಕ್ಕೆ ಪಡೆದ ಅರೆಸೈನಿಕ ಪಡೆ ಆರ್‌ಎಸ್‌ಎಫ್‌ : ವ್ಯಾಪಕ ಹಿಂಸಾಚಾರದ ವರದಿ

ಸುಡಾನ್‌ನ ಅಲ್‌-ಪಾಶೆರ್ ನಿಯಂತ್ರಣಕ್ಕೆ ಪಡೆದ ಅರೆಸೈನಿಕ ಪಡೆ ಆರ್‌ಎಸ್‌ಎಫ್‌ : ವ್ಯಾಪಕ ಹಿಂಸಾಚಾರದ ವರದಿ

- Advertisement -
- Advertisement -

ಸುಡಾನ್‌ನ ಉತ್ತರ ದಾರ್ಫರ್ ರಾಜ್ಯದ ರಾಜಧಾನಿ ಅಲ್- ಫಾಶೆರ್‌ ಅನ್ನು ರ‍್ಯಾಪಿಡ್ ಸಪೋರ್ಟ್ ಫೋರ್ಸಸ್ (ಆರ್‌ಎಸ್‌ಎಫ್) ಸಂಪೂರ್ಣವಾಗಿ ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆ ಎಂದು ವರದಿಯಾಗಿದೆ.

ಆರ್‌ಎಸ್‌ಎಫ್ ಸೂಡಾನ್‌ನ ಒಂದು ಶಕ್ತಿಶಾಲಿ ಪ್ಯಾರಾ ಮಿಲಿಟರಿ ದಳವಾಗಿದ್ದು, ಇದು ಸಾಮಾನ್ಯ ಸೇನೆಯಾದ ಸೂಡಾನೀಸ್ ಆರ್ಮ್ಡ್ ಫೋರ್ಸಸ್ (ಎಸ್‌ಎಎಫ್‌) ಗಿಂತ ಸಂಪೂರ್ಣವಾಗಿ ಭಿನ್ನವಾಗಿ ಕಾರ್ಯನಿರ್ವಹಿಸುತ್ತದೆ.

2003ರಲ್ಲಿ ದಾರ್ಫರ್‌ನಲ್ಲಿ ನಡೆದ ಜನಾಂಗೀಯ ದಬ್ಬಾಳಿಕೆಯ ಸಮಯದಲ್ಲಿ ಸರ್ಕಾರಿ ಬೆಂಬಲಿತ ಜಂಜಾವೀದ್ ಮಿಲೀಷ್ಯಾಗಳಿಂದ ಉಗಮವಾದ ಈ ಗುಂಪನ್ನು 2013ರಲ್ಲಿ ಔಪಚಾರಿಕವಾಗಿ ಆರ್‌ಎಸ್‌ಎಫ್‌ ಘೋಷಿಸಲಾಯಿತು.

ಇದರ ನಾಯಕ ಮೊಹಮ್ಮದ್ ಹಮದಾನ್ ದಗಾಲೋ (ಹೆಮೆದ್ತಿ) ಚಿನ್ನದ ಗಣಿಗಳು ಮತ್ತು ಯುಎಇ ಒಡಂಬಡಿಕೆಗಳ ಮೂಲಕ ಭಾರೀ ಆರ್ಥಿಕ ಶಕ್ತಿಯನ್ನು ಸಂಗ್ರಹಿಸಿದ್ದಾನೆ. 2023ರಲ್ಲಿ ಆರಂಭವಾದ ಸೂಡಾನ್ ಆಂತರಿಕ ಯುದ್ಧದಲ್ಲಿ ಆರ್‌ಎಸ್‌ಎಫ್‌ ಮತ್ತು ಸರ್ಕಾರಿ ಸೇನೆ ನಡುವೆ ಘೋರ ಸಂಘರ್ಷ ನಡೆಯುತ್ತಿದ್ದು, ಅಕ್ಟೋಬರ್ 26,2025ರಂದು ಅಲ್‌ ಫಾಶೆರ್ ನಗರವನ್ನು ವಶಪಡಿಸಿಕೊಂಡು ದಾರ್ಫರ್‌ನ ಐದೂ ರಾಜ್ಯಗಳನ್ನು ಆರ್‌ಎಸ್‌ಎಫ್‌ ಸಂಪೂರ್ಣವಾಗಿ ತನ್ನ ನಿಯಂತ್ರಣಕ್ಕೆ ತಂದುಕೊಂಡಿದೆ.

ಆರ್‌ಎಸ್‌ಎಫ್‌ ಮೇಲೆ ಜನಾಂಗೀಯ ಶುದ್ಧೀಕರಣ, ಅತ್ಯಾಚಾರ, ನಾಗರಿಕರ ಹತ್ಯೆ, ಆಹಾರ ಸರಬರಾಜಿಗೆ ತಡೆ ಮತ್ತು ಮಾನವೀಯತೆ ವಿರೋಧಿ ಕೃತ್ಯಗಳ ಆರೋಪಗಳಿವೆ. ಇದು ಸರ್ಕಾರಿ ಸೇನೆಯ ಭಾಗವಲ್ಲದಿದ್ದರೂ, ಹಿಂದೆ ಸರ್ಕಾರದ ಪರವಾಗಿ ಕಾರ್ಯನಿರ್ವಹಿಸುತ್ತಿತ್ತು. ಈಗ ಸಂಪೂರ್ಣ ದಂಗೆಗಾರ ಶಕ್ತಿಯಾಗಿ ಪರಿಣಮಿಸಿದೆ.

ಆರ್‌ಎಸ್‌ಎಫ್‌ ಅಲ್‌-ಪಾಶೆರ್‌ ಅನ್ನು ವಶಪಡಿಸಿಕೊಂಡ ಬಳಿಕ ದಾರ್ಫರ್‌ ಪ್ರದೇಶದಲ್ಲಿ ಭಯಾನಕ ಮಾನವೀಯ ಸಂಕಷ್ಟಗಳು ಮತ್ತು ರಾಜಕೀಯ ಬದಲಾವಣೆಗಳು ಸಂಭವಿಸಿವೆ ಎಂದು ವರದಿಯಾಗಿದೆ. ಸೂಡಾನ್ ಸೇನೆಯ ನಾಯಕ ಅಬ್ದುಲ್ ಫತ್ಹ್ ಅಲ್-ಬುರ್ಹಾನ್ ಅವರು ಅಕ್ಟೋಬರ್ 27ರಂದು ಸೇನೆಯನ್ನು ‘ಸುರಕ್ಷಿತ ಸ್ಥಳಗಳಿಗೆ’ ಕರೆಸಿಕೊಂಡಿರುವುದಾಗಿ ಘೋಷಿಸಿದ್ದಾರೆ.

ಆರ್‌ಎಸ್‌ಎಫ್‌ ದೇಶವನ್ನು ವಿಭಜಿಸುವ ಆಂತಕ ಶುರುವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಅಂತಾರಾಷ್ಟ್ರೀಯ ಮಾಧ್ಯಮಗಳಲ್ಲಿ ಪ್ರಸಾರವಾದ ವಿಡಿಯೋಗಳಲ್ಲಿ ಆರ್‌ಎಸ್‌ಎಫ್‌ನವರು ಕೈಯಲ್ಲಿ ಶಸ್ತ್ರಾಸ್ತ್ರಗಳನ್ನು ಹಿಡಿದುಕೊಂಡು ಘೋಷಣೆಗಳನ್ನು ಕೂಗುವ, ನಾಗರಿಕರು ಜೀವ ಉಳಿಸಿಕೊಳ್ಳಲು ಓಡುವ ಮತ್ತು ಆರ್‌ಎಸ್‌ಎಫ್‌ನವರು ಅವರನ್ನು ಹಿಡಿದು ಬೇಕಾಬಿಟ್ಟಿ ಹತ್ಯೆ ಮಾಡಿ ಸಂಭ್ರಮಿಸಿದ ಭಯಾನಕರ ದೃಶ್ಯಗಳಿವೆ.

ಆರ್‌ಎಸ್‌ಎಫ್‌ ಅಲ್‌-ಫಾಶೆರ್‌ ಅನ್ನು ವಶಪಡಿಸಿಕೊಂಡು ದಾರ್ಫರ್ ಅನ್ನು ನಿಯಂತ್ರಣಕ್ಕೆ ಪಡೆದ ಬಳಿಕ 2,000ಕ್ಕೂ ಹೆಚ್ಚು ನಾಗರಿಕರನ್ನು (ಮಹಿಳೆಯರು ಮತ್ತು ಮಕ್ಕಳು ಸೇರಿ) ನಿರ್ದಯವಾಗಿ ಕೊಂದಿದೆ ಎಂದು ಐರೋಪಾ ಸಂಸ್ಥೆಯ ಒಂದು ವರದಿಯ ಆರೋಪಿಸಿದೆ.

ಯೇಲ್ ಹ್ಯೂಮನಿಟೇರಿಯನ್ ರಿಸರ್ಚ್ ಲ್ಯಾಬ್‌ನ ಸ್ಯಾಟೆಲೈಟ್ ಚಿತ್ರಗಳು ದಾರ್ಫರ್‌ನಲ್ಲಿ ಶವಗಳ ರಾಶಿ ಮತ್ತು ಜನರು ಜೀವ ಉಳಿಸಿಕೊಳ್ಳು ಓಡುತ್ತಿರುವುದನ್ನು ತೋರಿಸಿವೆ ಎಂದು ವರದಿಯಾಗಿದೆ.

ವಿಶ್ವ ಸಂಸ್ಥೆ (ಯುಎನ್‌) ಮತ್ತು ಆಫ್ರಿಕನ್ ಯೂನಿಯನ್ (ಎಯು) ನಾಗರಿಕರ ರಕ್ಷಣೆ ಮತ್ತು ತಕ್ಷಣದ ಶಾಂತಿ ಘೋಷಣೆಗೆ ಕರೆ ನೀಡಿವೆ. ಯುಎನ್‌ ಅಧ್ಯಕ್ಷ ಅಂಟೊನಿಯೋ ಗುಟೆರೆಸ್ ಅಲ್- ಪಾಶೆರ್ ವಶಪಡಿಸಿಕೊಂಡ ಬಳಿಕದ ಬೆಳವಣಿಗಯನ್ನು ‘ಅತ್ಯಂತ ಭೀಕರ’ ಎಂದಿದ್ದಾರೆ.

ದಾರ್ಫರ್ ಗವರ್ನರ್ ಮಿನ್ನಿ ಅರ್ಕೋ ಮಿನಾವಿ ವಿದೇಶಿ ಗೌಪ್ಯ ಸೇವೆಗಳು (ಯುಎಇ ಸೇರಿ) ಆರ್‌ಎಸ್‌ಎಫ್‌ಗೆ ಸಹಾಯ ಮಾಡಿವೆ ಎಂದು ಆರೋಪಿಸಿದ್ದಾರೆ. ಅಮೆರಿಕದ ಕಾನೂನುಸಭಾ ಸದಸ್ಯರು ಯುಎಇಯನ್ನು ಹೊಣೆ ಮಾಡಲು ಆಗ್ರಹಿಸಿದ್ದಾರೆ.

ಸುಡಾನ್‌ನ ರಾಜಕೀಯ ಮತ್ತು ಮಾನವ ಹಕ್ಕು ಸಂಘಟನೆಗಳು ಮಾನವೀಯತೆ ಮೇಲಿನ ಈ ಭೀಕರ ಹಿಂಸಾಚಾರಕ್ಕೆ ಆರ್‌ಎಸ್‌ಎಫ್‌ ಮತ್ತು ಎಸ್‌ಎಎಫ್‌ ಇಬ್ಬರನ್ನೂ ಯುದ್ಧಪರಾಧದ ಹೊಣೆ ಮಾಡುವಂತೆ ಒತ್ತಾಯಿಸಿವೆ.

ಗಾಝಾ ಮೇಲೆ ‘ಪ್ರಬಲ ದಾಳಿ’ಗೆ ನೆತನ್ಯಾಹು ಆದೇಶ : 30 ಪ್ಯಾಲೆಸ್ತೀನಿಯರನ್ನು ಹತ್ಯೆಗೈದ ಇಸ್ರೇಲ್ ಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...