Homeಅಂತರಾಷ್ಟ್ರೀಯಸುಡಾನ್‌ನ ಅಲ್‌-ಪಾಶೆರ್ ನಿಯಂತ್ರಣಕ್ಕೆ ಪಡೆದ ಅರೆಸೈನಿಕ ಪಡೆ ಆರ್‌ಎಸ್‌ಎಫ್‌ : ವ್ಯಾಪಕ ಹಿಂಸಾಚಾರದ ವರದಿ

ಸುಡಾನ್‌ನ ಅಲ್‌-ಪಾಶೆರ್ ನಿಯಂತ್ರಣಕ್ಕೆ ಪಡೆದ ಅರೆಸೈನಿಕ ಪಡೆ ಆರ್‌ಎಸ್‌ಎಫ್‌ : ವ್ಯಾಪಕ ಹಿಂಸಾಚಾರದ ವರದಿ

- Advertisement -
- Advertisement -

ಸುಡಾನ್‌ನ ಉತ್ತರ ದಾರ್ಫರ್ ರಾಜ್ಯದ ರಾಜಧಾನಿ ಅಲ್- ಫಾಶೆರ್‌ ಅನ್ನು ರ‍್ಯಾಪಿಡ್ ಸಪೋರ್ಟ್ ಫೋರ್ಸಸ್ (ಆರ್‌ಎಸ್‌ಎಫ್) ಸಂಪೂರ್ಣವಾಗಿ ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆ ಎಂದು ವರದಿಯಾಗಿದೆ.

ಆರ್‌ಎಸ್‌ಎಫ್ ಸೂಡಾನ್‌ನ ಒಂದು ಶಕ್ತಿಶಾಲಿ ಪ್ಯಾರಾ ಮಿಲಿಟರಿ ದಳವಾಗಿದ್ದು, ಇದು ಸಾಮಾನ್ಯ ಸೇನೆಯಾದ ಸೂಡಾನೀಸ್ ಆರ್ಮ್ಡ್ ಫೋರ್ಸಸ್ (ಎಸ್‌ಎಎಫ್‌) ಗಿಂತ ಸಂಪೂರ್ಣವಾಗಿ ಭಿನ್ನವಾಗಿ ಕಾರ್ಯನಿರ್ವಹಿಸುತ್ತದೆ.

2003ರಲ್ಲಿ ದಾರ್ಫರ್‌ನಲ್ಲಿ ನಡೆದ ಜನಾಂಗೀಯ ದಬ್ಬಾಳಿಕೆಯ ಸಮಯದಲ್ಲಿ ಸರ್ಕಾರಿ ಬೆಂಬಲಿತ ಜಂಜಾವೀದ್ ಮಿಲೀಷ್ಯಾಗಳಿಂದ ಉಗಮವಾದ ಈ ಗುಂಪನ್ನು 2013ರಲ್ಲಿ ಔಪಚಾರಿಕವಾಗಿ ಆರ್‌ಎಸ್‌ಎಫ್‌ ಘೋಷಿಸಲಾಯಿತು.

ಇದರ ನಾಯಕ ಮೊಹಮ್ಮದ್ ಹಮದಾನ್ ದಗಾಲೋ (ಹೆಮೆದ್ತಿ) ಚಿನ್ನದ ಗಣಿಗಳು ಮತ್ತು ಯುಎಇ ಒಡಂಬಡಿಕೆಗಳ ಮೂಲಕ ಭಾರೀ ಆರ್ಥಿಕ ಶಕ್ತಿಯನ್ನು ಸಂಗ್ರಹಿಸಿದ್ದಾನೆ. 2023ರಲ್ಲಿ ಆರಂಭವಾದ ಸೂಡಾನ್ ಆಂತರಿಕ ಯುದ್ಧದಲ್ಲಿ ಆರ್‌ಎಸ್‌ಎಫ್‌ ಮತ್ತು ಸರ್ಕಾರಿ ಸೇನೆ ನಡುವೆ ಘೋರ ಸಂಘರ್ಷ ನಡೆಯುತ್ತಿದ್ದು, ಅಕ್ಟೋಬರ್ 26,2025ರಂದು ಅಲ್‌ ಫಾಶೆರ್ ನಗರವನ್ನು ವಶಪಡಿಸಿಕೊಂಡು ದಾರ್ಫರ್‌ನ ಐದೂ ರಾಜ್ಯಗಳನ್ನು ಆರ್‌ಎಸ್‌ಎಫ್‌ ಸಂಪೂರ್ಣವಾಗಿ ತನ್ನ ನಿಯಂತ್ರಣಕ್ಕೆ ತಂದುಕೊಂಡಿದೆ.

ಆರ್‌ಎಸ್‌ಎಫ್‌ ಮೇಲೆ ಜನಾಂಗೀಯ ಶುದ್ಧೀಕರಣ, ಅತ್ಯಾಚಾರ, ನಾಗರಿಕರ ಹತ್ಯೆ, ಆಹಾರ ಸರಬರಾಜಿಗೆ ತಡೆ ಮತ್ತು ಮಾನವೀಯತೆ ವಿರೋಧಿ ಕೃತ್ಯಗಳ ಆರೋಪಗಳಿವೆ. ಇದು ಸರ್ಕಾರಿ ಸೇನೆಯ ಭಾಗವಲ್ಲದಿದ್ದರೂ, ಹಿಂದೆ ಸರ್ಕಾರದ ಪರವಾಗಿ ಕಾರ್ಯನಿರ್ವಹಿಸುತ್ತಿತ್ತು. ಈಗ ಸಂಪೂರ್ಣ ದಂಗೆಗಾರ ಶಕ್ತಿಯಾಗಿ ಪರಿಣಮಿಸಿದೆ.

ಆರ್‌ಎಸ್‌ಎಫ್‌ ಅಲ್‌-ಪಾಶೆರ್‌ ಅನ್ನು ವಶಪಡಿಸಿಕೊಂಡ ಬಳಿಕ ದಾರ್ಫರ್‌ ಪ್ರದೇಶದಲ್ಲಿ ಭಯಾನಕ ಮಾನವೀಯ ಸಂಕಷ್ಟಗಳು ಮತ್ತು ರಾಜಕೀಯ ಬದಲಾವಣೆಗಳು ಸಂಭವಿಸಿವೆ ಎಂದು ವರದಿಯಾಗಿದೆ. ಸೂಡಾನ್ ಸೇನೆಯ ನಾಯಕ ಅಬ್ದುಲ್ ಫತ್ಹ್ ಅಲ್-ಬುರ್ಹಾನ್ ಅವರು ಅಕ್ಟೋಬರ್ 27ರಂದು ಸೇನೆಯನ್ನು ‘ಸುರಕ್ಷಿತ ಸ್ಥಳಗಳಿಗೆ’ ಕರೆಸಿಕೊಂಡಿರುವುದಾಗಿ ಘೋಷಿಸಿದ್ದಾರೆ.

ಆರ್‌ಎಸ್‌ಎಫ್‌ ದೇಶವನ್ನು ವಿಭಜಿಸುವ ಆಂತಕ ಶುರುವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಅಂತಾರಾಷ್ಟ್ರೀಯ ಮಾಧ್ಯಮಗಳಲ್ಲಿ ಪ್ರಸಾರವಾದ ವಿಡಿಯೋಗಳಲ್ಲಿ ಆರ್‌ಎಸ್‌ಎಫ್‌ನವರು ಕೈಯಲ್ಲಿ ಶಸ್ತ್ರಾಸ್ತ್ರಗಳನ್ನು ಹಿಡಿದುಕೊಂಡು ಘೋಷಣೆಗಳನ್ನು ಕೂಗುವ, ನಾಗರಿಕರು ಜೀವ ಉಳಿಸಿಕೊಳ್ಳಲು ಓಡುವ ಮತ್ತು ಆರ್‌ಎಸ್‌ಎಫ್‌ನವರು ಅವರನ್ನು ಹಿಡಿದು ಬೇಕಾಬಿಟ್ಟಿ ಹತ್ಯೆ ಮಾಡಿ ಸಂಭ್ರಮಿಸಿದ ಭಯಾನಕರ ದೃಶ್ಯಗಳಿವೆ.

ಆರ್‌ಎಸ್‌ಎಫ್‌ ಅಲ್‌-ಫಾಶೆರ್‌ ಅನ್ನು ವಶಪಡಿಸಿಕೊಂಡು ದಾರ್ಫರ್ ಅನ್ನು ನಿಯಂತ್ರಣಕ್ಕೆ ಪಡೆದ ಬಳಿಕ 2,000ಕ್ಕೂ ಹೆಚ್ಚು ನಾಗರಿಕರನ್ನು (ಮಹಿಳೆಯರು ಮತ್ತು ಮಕ್ಕಳು ಸೇರಿ) ನಿರ್ದಯವಾಗಿ ಕೊಂದಿದೆ ಎಂದು ಐರೋಪಾ ಸಂಸ್ಥೆಯ ಒಂದು ವರದಿಯ ಆರೋಪಿಸಿದೆ.

ಯೇಲ್ ಹ್ಯೂಮನಿಟೇರಿಯನ್ ರಿಸರ್ಚ್ ಲ್ಯಾಬ್‌ನ ಸ್ಯಾಟೆಲೈಟ್ ಚಿತ್ರಗಳು ದಾರ್ಫರ್‌ನಲ್ಲಿ ಶವಗಳ ರಾಶಿ ಮತ್ತು ಜನರು ಜೀವ ಉಳಿಸಿಕೊಳ್ಳು ಓಡುತ್ತಿರುವುದನ್ನು ತೋರಿಸಿವೆ ಎಂದು ವರದಿಯಾಗಿದೆ.

ವಿಶ್ವ ಸಂಸ್ಥೆ (ಯುಎನ್‌) ಮತ್ತು ಆಫ್ರಿಕನ್ ಯೂನಿಯನ್ (ಎಯು) ನಾಗರಿಕರ ರಕ್ಷಣೆ ಮತ್ತು ತಕ್ಷಣದ ಶಾಂತಿ ಘೋಷಣೆಗೆ ಕರೆ ನೀಡಿವೆ. ಯುಎನ್‌ ಅಧ್ಯಕ್ಷ ಅಂಟೊನಿಯೋ ಗುಟೆರೆಸ್ ಅಲ್- ಪಾಶೆರ್ ವಶಪಡಿಸಿಕೊಂಡ ಬಳಿಕದ ಬೆಳವಣಿಗಯನ್ನು ‘ಅತ್ಯಂತ ಭೀಕರ’ ಎಂದಿದ್ದಾರೆ.

ದಾರ್ಫರ್ ಗವರ್ನರ್ ಮಿನ್ನಿ ಅರ್ಕೋ ಮಿನಾವಿ ವಿದೇಶಿ ಗೌಪ್ಯ ಸೇವೆಗಳು (ಯುಎಇ ಸೇರಿ) ಆರ್‌ಎಸ್‌ಎಫ್‌ಗೆ ಸಹಾಯ ಮಾಡಿವೆ ಎಂದು ಆರೋಪಿಸಿದ್ದಾರೆ. ಅಮೆರಿಕದ ಕಾನೂನುಸಭಾ ಸದಸ್ಯರು ಯುಎಇಯನ್ನು ಹೊಣೆ ಮಾಡಲು ಆಗ್ರಹಿಸಿದ್ದಾರೆ.

ಸುಡಾನ್‌ನ ರಾಜಕೀಯ ಮತ್ತು ಮಾನವ ಹಕ್ಕು ಸಂಘಟನೆಗಳು ಮಾನವೀಯತೆ ಮೇಲಿನ ಈ ಭೀಕರ ಹಿಂಸಾಚಾರಕ್ಕೆ ಆರ್‌ಎಸ್‌ಎಫ್‌ ಮತ್ತು ಎಸ್‌ಎಎಫ್‌ ಇಬ್ಬರನ್ನೂ ಯುದ್ಧಪರಾಧದ ಹೊಣೆ ಮಾಡುವಂತೆ ಒತ್ತಾಯಿಸಿವೆ.

ಗಾಝಾ ಮೇಲೆ ‘ಪ್ರಬಲ ದಾಳಿ’ಗೆ ನೆತನ್ಯಾಹು ಆದೇಶ : 30 ಪ್ಯಾಲೆಸ್ತೀನಿಯರನ್ನು ಹತ್ಯೆಗೈದ ಇಸ್ರೇಲ್ ಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...