Homeಕರ್ನಾಟಕಕನೇರಿ ಸ್ವಾಮಿಗೆ ಸುಪ್ರೀಂ ಛೀಮಾರಿ: "ನಿಮ್ಮನ್ನು ಗಡಿಪಾರು ಮಾಡಲೂ ಅಧಿಕಾರ ಇದೆ".

ಕನೇರಿ ಸ್ವಾಮಿಗೆ ಸುಪ್ರೀಂ ಛೀಮಾರಿ: “ನಿಮ್ಮನ್ನು ಗಡಿಪಾರು ಮಾಡಲೂ ಅಧಿಕಾರ ಇದೆ”.

- Advertisement -
- Advertisement -
ಇತ್ತೀಚೆಗಷ್ಟೆ ಕನೇರಿಯ ಕಾಡಸಿದ್ದೇಶ್ವರ ಸ್ವಾಮಿ ಮಾಡಿದ್ದ ದ್ವೇಷ ಭಾಷಣ ಕುರಿತು ಸಮಾಜದಲ್ಲಿ ತೀರ್ವ ವಿಮರ್ಶೆ ವ್ಯಕ್ತವಾಗಿತ್ತು. ಇದರ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿ ಜಿಲ್ಲಾಡಳತ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದ ಕಾಡಸಿದ್ದೇಶ್ವರ ಸ್ವಾಮಿಗೆ ಸುಪ್ರೀಂ ಕೋರ್ಟ್‌ ಛೀಮಾರಿ ಹಾಕಿ ಅರ್ಜಿಯನ್ನು ವಜಾಗೊಳಿಸಿದೆ.

ಲಿಂಗಾಯತ ಮಠಾಧಿಪತಿಗಳ ವಿರುದ್ಧ ಅವಹೇಳನಕಾರಿ ಮಾತುಗಳನ್ನು ಬಳಸಿ ಸಮಾಜದಲ್ಲಿ ಅಶಾಂತಿಗೆ ಕಾರಣವಾಗಿದ್ದಾರೆ ಎಂಬ ಕಾರಣಕ್ಕೆ ವಿಜಯಪುರ ಜಿಲ್ಲಾಧಿಕಾರಿ ಅವರು ಸ್ವಾಮೀಜಿ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ಹೇರಿದ್ದರು.  ಎಂಬ ಆರೋಪದ ಕಾರಣ ಸ್ವಾಮೀಜಿಯವರು ಡಿ. 14ರವರೆಗೆ ವಿಜಯಪುರ ಜಿಲ್ಲೆ ಪ್ರವೇಶಿಸ ಬಾರದು ಎಂದು ವಿಜಯಪುರ ಜಿಲ್ಲಾಧಿಕಾರಿ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಇತ್ತೀಚೆಗೆ ಎತ್ತಿ ಹಿಡಿದಿತ್ತು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಪಂಕಜ್‌ ಮಿತ್ತಲ್‌ ಹಾಗೂ ಪ್ರಸನ್ನ ಬಿ.ವರಾಳೆ ಪೀಠವು ಸ್ವಾಮೀಜಿ ಅವರನ್ನು ತರಾಟೆಗೆ ತೆಗೆದುಕೊಂಡಿತು.

‘ನೀವು ಜಿಲ್ಲೆಯಿಂದ ದೂರವಿದ್ದು ಆಧ್ಯಾತ್ಮಿಕ ವಿಷಯಗಳಲ್ಲಿ ತೊಡಗಿಸಿ ಕೊಳ್ಳಲು ಇದು ಒಂದು ಅವಕಾಶ. ನೀವು ಬೇರೆ ಯಾವುದಾದರೂ ಮಠದಲ್ಲಿ ಕುಳಿತು ಧ್ಯಾನ ಮಾಡಬೇಕು. ಈ ನಿರ್ದಿಷ್ಟ ಜಿಲ್ಲೆಗೆ ಹೋಗಲೇಬೇಕೆಂದು ನೀವೇಕೆ ಜಿಲ್ಲಾಡಳಿತಕಕ್ಕೆ ಒತ್ತಡ ಹೇರುತ್ತಿದ್ದೀರಿ’ ಎಂದು ಪೀಠವು ಸ್ವಾಮೀಜಿ ಅವರನ್ನು ಪ್ರಶ್ನಿಸಿತು. ‌

‘ಕೀಳು ಮಟ್ಟದ ಹೇಳಿಕೆ ನೀಡಿರುವ ನೀವು ಉತ್ತಮ ನಾಗರಿಕರಲ್ಲ’ ಎಂದು ಕನೇರಿ ಸ್ವಾಮಿಗೆ ಬಹಳ ಕಟುವಾಗಿ ಹೇಳಿತು.

‘ನೀವು ಧಾರ್ಮಿಕ ನಾಯಕ. ಮಾತನಾಡುವಾಗ ಬಹಳ ಜಾಗರೂಕರಾಗಿರ ಬೇಕು. ನಿಮ್ಮ ಇಂತಹ ಹೇಳಿಕೆಗಳನ್ನು ಒಪ್ಪಲು ಸಾಧ್ಯವಿಲ್ಲ. ಇನ್ನು ಮುಂದೆ ಕೋಮು ಭಾವನೆ ಕೆರಳಿಸುವ ಯಾವುದೇ ಹೇಳಿಕೆ ನೀಡಬೇಡಿ. ಹೈಕೋರ್ಟ್‌ ಆದೇಶದಲ್ಲಿ ತಪ್ಪೇನಿದೆ’ ಎಂದು ಪೀಠ ಪ್ರಶ್ನಿಸಿತು.

‘ಅವಹೇಳನಕಾರಿ ಭಾಷೆ ಬಳಸಿರುವುದು ವಾಕ್ ಸ್ವಾತಂತ್ರ್ಯದ ವ್ಯಾಪ್ತಿಗೆ ಬರುವುದಿಲ್ಲ. ನೀವು ಹೀಗೆಯೇ ವರ್ತಿಸುತ್ತಿದ್ದರೆ ಎಲ್ಲ ಜಿಲ್ಲಾಧಿಕಾರಿಗಳು ಇಂತಹ ಆದೇಶಗಳನ್ನು ಹೊರಡಿಸುತ್ತಾರೆ’ ಎಂದು ಪೀಠ ಸೂಚ್ಯವಾಗಿ ಹೇಳಿತು. ‘ಪ್ರಕರಣದ ವಾಸ್ತವಾಂಶ ಹಾಗೂ ಸನ್ನಿವೇಶ ಗಳನ್ನು ಗಮನಿಸಿದರೆ, ಹೈಕೋರ್ಟ್‌ ಆದೇಶವು ಸರಿಯಾಗಿದೆ ಎಂದು ಪೀಠವು ಹೇಳಿದೆ . ಡಿಸೆಂಬರ್‌ 14ರ ನಂತರ ಸ್ವಾಮೀಜಿ ಅವರು ಜಿಲ್ಲೆ ಪ್ರವೇಶಿಸ ಬಹುದು’ ಎಂದು ಪೀಠ ಸ್ಪಷ್ಟಪಡಿಸಿತು.

‘ನಿಮ್ಮನ್ನು ಗಡಿಪಾರು ಮಾಡಲೂ ಜಿಲ್ಲಾಡಳಿತಕ್ಕೆ ಅಧಿಕಾರ ಇದೆ’- ಸುಪ್ರೀಂ

ಸ್ವಾಮೀಜಿ ಅವರನ್ನು ಎಲ್ಲ ಜಿಲ್ಲೆಗಳಿಂದ ಗಡಿಪಾರು ಮಾಡಲು ರಾಜ್ಯದ ಅಧಿಕಾರಿಗಳು ಬಯಸುತ್ತಿದ್ದಾರೆ ಎಂದು ಅವರು ಆರೋಪಿಸಿದರು. ‘ನಿಮ್ಮ ಕೃತ್ಯಗಳು ಸಾರ್ವಜನಿಕ ಶಾಂತಿಗೆ ಭಂಗ ತರುತ್ತಿದ್ದರೆ, ಜಿಲ್ಲಾಧಿಕಾರಿ ಅಥವಾ ಆಯುಕ್ತರಿಗೆ ನಿಮ್ಮನ್ನು ಗಡಿಪಾರು ಮಾಡಲು ಅಧಿಕಾರವಿದೆ’ ಎಂದು ನ್ಯಾಯಪೀಠವು ಸ್ಪಷ್ಟಪಡಿಸಿತು. ‘ನೀವು ಜಿಲ್ಲೆಯನ್ನು ಪ್ರವೇಶಿಸಬೇಕು ಎಂದು ಏಕೆ ಒತ್ತಾಯಿ ಸುತ್ತೀರಿ? ಭಾರತವು ತುಂಬಾ ದೊಡ್ಡ ದೇಶ. ನೀವು ಬೇರೆಡೆಗೆ ಹೋಗಿ’ ಎಂದು ಅರ್ಜಿದಾರರ ಪರವಾಗಿ ಹಾಜರಿದ್ದ ಹಿರಿಯ ವಕೀಲ ರಾಘವೇಂದ್ರ ಶ್ರೀವಾಸ್ತವ ಅವರನ್ನು ಪೀಠ ಕೇಳಿತು.

ಕರ್ನಾಟಕ ಸರ್ಕಾರದ ಪರವಾಗಿ ಹಿರಿಯ ವಕೀಲ ವಿಕಾಸ್ ಸಿಂಗ್ ಮತ್ತು ಕರ್ನಾಟಕದ ಹೆಚ್ಚುವರಿ ಅಡ್ವೊಕೇಟ್ ಜನರಲ್ ನಿಶಾಂತ್ ಪಾಟೀಲ ಮತ್ತು ಅಮನ್ ಪನ್ವಾರ್ ಹಾಜರಾದರು.

ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

ಚಂದ್ರು ತರಹುಣಿಸೆ
ಚಂದ್ರು ತರಹುಣಿಸೆhttps://naanugauri.com/
ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್
- Advertisment -

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ. ಸರ್ಕಾರದ ಹೊಸ...