Homeಮುಖಪುಟದಲಿತ ಟೆಕ್ಕಿ ಕೆವಿನ್ ಅಮಾನವೀಯ ಹತ್ಯೆ ಪ್ರಕರಣ; ಆರೋಪಿ ಪೊಲೀಸ್‌ ಅಧಿಕಾರಿಗೆ ಜಾಮೀನು ನಿರಾಕರಣೆ

ದಲಿತ ಟೆಕ್ಕಿ ಕೆವಿನ್ ಅಮಾನವೀಯ ಹತ್ಯೆ ಪ್ರಕರಣ; ಆರೋಪಿ ಪೊಲೀಸ್‌ ಅಧಿಕಾರಿಗೆ ಜಾಮೀನು ನಿರಾಕರಣೆ

- Advertisement -
- Advertisement -

ಜುಲೈ 30 ರಂದು ತಮಿಳುನಾಡಿನ ತಿರುನಲ್ವೇಲಿಯಲ್ಲಿ ನಡೆದಿದ್ದ ದಲಿತ ಟೆಕ್ಕಿ ಕೆವಿನ್ ಅವರ ಅಮಾನವೀಯ ಹತ್ಯೆ ಪ್ರಕರಣದಲ್ಲಿ ವಿವರವಾದ ಚಾರ್ಜ್‌ಶೀಟ್ ಸಲ್ಲಿಸಿರುವ ಕ್ರೈಂ ಬ್ರಾಂಚ್-ಸಿಐಡಿ (ಸಿಬಿಸಿಐಡಿ), 23 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್ ಅನ್ನು ಅವನ ಗೆಳತಿಯ ಸಹೋದರನೇ ಕೊಂದು ಹಾಕಿದ್ದಾನೆ ಎಂದು ಪುನರುಚ್ಚರಿಸಿದೆ.

ಆರೋಪಿ ಸುರ್ಜಿತ್, ತನ್ನ ವೈದ್ಯ ಸಹೋದರಿಯೊಂದಿಗಿನ ಸಂಬಂಧವನ್ನು ವಿರೋಧಿಸಿ ಕೆವಿನ್ ಮೇಲೆ ಕುಡುಗೋಲಿನಿಂದ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಸಿಬಿಸಿಐಡಿ ಮುಖ್ಯಸ್ಥ ಟಿ.ಎಸ್. ಅನ್ಬು ಅವರು ಚಾರ್ಜ್‌ಶೀಟ್‌ನಲ್ಲಿ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ಆಗಿರುವ ಸುರ್ಜಿತ್ ಅವರ ತಂದೆ ಸರವಣನ್, ಪೊಲೀಸ್ ಅಧಿಕಾರಿಯೂ ಆಗಿರುವ ತಾಯಿ ಕೃಷ್ಣಕುಮಾರಿ ಮತ್ತು ಸಂಬಂಧಿ ಜೈಪಾಲ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಹೆಸರಿಸಿದ್ದಾರೆ ಎಂದು ಹೇಳಿದ್ದಾರೆ. ಅಕ್ಟೋಬರ್ 22 ರಂದು ನ್ಯಾಯಾಲಯಕ್ಕೆ ಸಲ್ಲಿಸಲಾದ ಅಂತಿಮ ವರದಿಯ ಭಾಗವಾಗಿ ತನಿಖಾ ಸಂಸ್ಥೆ 69 ಸಾಕ್ಷಿಗಳನ್ನು ಪರೀಕ್ಷಿಸಿದೆ, 37 ಪೋಷಕ ದಾಖಲೆಗಳನ್ನು ಸಲ್ಲಿಸಿದೆ.

ತಿರುನಲ್ವೇಲಿ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಸರವಣನ್ ಅವರ ಜಾಮೀನು ಅರ್ಜಿಯನ್ನು ಮೂರನೇ ಬಾರಿಗೆ ತಿರಸ್ಕರಿಸಿದೆ. ಕೃಷ್ಣಕುಮಾರಿ ತನ್ನ ಪತಿಯನ್ನು ಬಿಡುಗಡೆ ಮಾಡಿದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು, ಬಹಿರಂಗ ಮತ್ತು ಉದ್ದೇಶಪೂರ್ವಕ ಮರ್ಯಾದೆಗೇಡು ಹತ್ಯೆ ಎಂದು ವಿವರಿಸಿದ ಪ್ರಕರಣದಲ್ಲಿ ನಡೆಯುತ್ತಿರುವ ತನಿಖೆಗೆ ಅಡ್ಡಿಯಾಗಬಹುದು ಎಂದು ನ್ಯಾಯಾಧೀಶರು ಹೇಳಿದರು.

ಕವಿನ್ ಅವರ ಐಫೋನ್ ಮುಖ ಗುರುತಿಸುವಿಕೆಯೊಂದಿಗೆ ಲಾಕ್ ಆಗಿರುವುದನ್ನು ನ್ಯಾಯಾಲಯ ಗಮನಿಸಿದೆ. ಫೋನ್ ಲಾಕ್ ತೆಗೆದ ಬಳಿಕ ನಂತರ ಹೆಚ್ಚಿನ ಡಿಜಿಟಲ್ ಫೋರೆನ್ಸಿಕ್ ಪರೀಕ್ಷೆಗಳನ್ನು ನಡೆಸಬೇಕಾಗಬಹುದು ಎಂದು ತನಿಖಾಧಿಕಾರಿಗಳು ವಾದಿಸಿದ್ದಾರೆ.

ತೂತುಕುಡಿ ಜಿಲ್ಲೆಯ ಆರುಮುಗಮಂಗಲಂನ ಸಾಫ್ಟ್‌ವೇರ್ ಎಂಜಿನಿಯರ್ ಕೆವಿನ್, ಚೆನ್ನೈ ಮೂಲದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ಜುಲೈನಲ್ಲಿ ತನ್ನ ಅಜ್ಜನ ಚಿಕಿತ್ಸೆಗಾಗಿ ತನ್ನ ಗೆಳತಿ ವೈದ್ಯೆಯಾಗಿ ಕೆಲಸ ಮಾಡುತ್ತಿದ್ದ ತಿರುನಲ್ವೇಲಿಯ ಆಸ್ಪತ್ರೆಗೆ ಹೋಗಿದ್ದರು. ಆರೋಪಿ ಸುರ್ಜಿತ್, ಕೆವಿನ್ ಅವರನ್ನು ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಹೋಗಿ ಕೊಲೆ ಮಾಡಿದ್ದ.

ದಲಿತ ಗುಂಪುಗಳು ಮತ್ತು ಮಾನವ ಹಕ್ಕುಗಳ ಕಾರ್ಯಕರ್ತರು ನ್ಯಾಯಕ್ಕಾಗಿ ಆಗ್ರಹಿಸಿ ಕಠಿಣ ಕಾನೂನುಗಳ ಜಾರಿಗೆ ಒತ್ತಾಯಿಸಿದ್ದರಿಂದ ಈ ಕೊಲೆ ತಮಿಳುನಾಡಿನಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು.

ತಮಿಳುನಾಡು ಸರ್ಕಾರವು ಮರ್ಯಾದೆಗೇಡು ಹತ್ಯೆಗಳ ವಿರುದ್ಧ ವಿಶೇಷ ಕಾನೂನನ್ನು ತರುವ ಯೋಜನೆಯನ್ನು ಘೋಷಿಸಿತು. ಅಂತಹ ಅಪರಾಧಗಳನ್ನು ಅಧ್ಯಯನ ಮಾಡಲು ಮತ್ತು ತಡೆಗಟ್ಟುವ ಕ್ರಮಗಳನ್ನು ಶಿಫಾರಸು ಮಾಡಲು ಆಯೋಗವನ್ನು ರಚಿಸಲಾಗುತ್ತಿದೆ.

ಮಧ್ಯಪ್ರದೇಶ| ದಲಿತ ಯುವಕನನ್ನು ಕಸದ ತೊಟ್ಟಿಗೆ ಹಾಕಿ ಬೆಂಕಿ ಹಚ್ಚಿದ ದುಷ್ಕರ್ಮಿಗಳು; ಮಗನನ್ನು ರಕ್ಷಿಸಿದ ತಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ. ಸರ್ಕಾರದ ಹೊಸ...

ಬೆಂಗಳೂರು ಚಲೋ: ಧರಣಿ ಸ್ಥಳಕ್ಕೆ ಬಾರದ ಸಚಿವರು, ಕೋಪಗೊಂಡು ರಸ್ತೆಗಿಳಿದ ಪ್ರತಿಭಟನಾಕಾರರು

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೃಹತ್ 'ಬೆಂಗಳೂರು ಚಲೋ' ಬುಧವಾರ (ನವೆಂಬರ್ 26) ಫ್ರೀಡಂ...

ಹಿಂಸಾಚಾರಕ್ಕೆ ತಿರುಗಿದ ವಿದ್ಯಾರ್ಥಿಗಳ ಪ್ರತಿಭಟನೆ: ವಿಐಟಿ ಭೋಪಾಲ್ ವಿವಿ ಕ್ಯಾಂಪಸ್ ಧ್ವಂಸ, ವಾಹನಗಳಿಗೆ ಬೆಂಕಿ

ಇಂದೋರ್-ಭೋಪಾಲ್ ಹೆದ್ದಾರಿಯಲ್ಲಿರುವ ಸೆಹೋರ್ ಜಿಲ್ಲೆಯ ವಿಐಟಿ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ತಡರಾತ್ರಿ ನಡೆದ ಪ್ರತಿಭಟನೆ ದೊಡ್ಡ ಪ್ರಮಾಣದ ಹಿಂಸಾಚಾರಕ್ಕೆ ತಿರುಗಿದ್ದು, ಕೋಪಗೊಂಡ ವಿದ್ಯಾರ್ಥಿಗಳು ಹಲವಾರು ವಾಹನಗಳಿಗೆ ಬೆಂಕಿ ಹಚ್ಚಿ ಕ್ಯಾಂಪಸ್ ಆಸ್ತಿಗೆ ಹಾನಿ ಮಾಡಿದ್ದಾರೆ...