Homeಮುಖಪುಟರವೀಂದ್ರನಾಥ ಟ್ಯಾಗೋರ್‌ರ 'ಅಮರ್ ಸೋನಾರ್ ಬಾಂಗ್ಲಾ' ಗೀತೆ ಹಾಡಿದ ಕಾಂಗ್ರೆಸ್ ಮುಖಂಡ: ಕ್ರಮಕ್ಕೆ ಸೂಚಿಸಿದ ಅಸ್ಸಾಂ...

ರವೀಂದ್ರನಾಥ ಟ್ಯಾಗೋರ್‌ರ ‘ಅಮರ್ ಸೋನಾರ್ ಬಾಂಗ್ಲಾ’ ಗೀತೆ ಹಾಡಿದ ಕಾಂಗ್ರೆಸ್ ಮುಖಂಡ: ಕ್ರಮಕ್ಕೆ ಸೂಚಿಸಿದ ಅಸ್ಸಾಂ ಸಿಎಂ

- Advertisement -
- Advertisement -

ಅಸ್ಸಾಂನ ಶ್ರೀಭೂಮಿ ಜಿಲ್ಲೆಯಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಪಕ್ಷದ ಮುಖಂಡರೊಬ್ಬರು ನೋಬೆಲ್ ಪುರಸ್ಕೃತ ರವೀಂದ್ರನಾಥ ಟ್ಯಾಗೋರ್ ಅವರ ಪ್ರಸಿದ್ಧ ಗೀತೆ ‘ಅಮರ್ ಸೋನಾರ್ ಬಾಂಗ್ಲಾ’ (ನನ್ನ ಚಿನ್ನದ ಬಾಂಗ್ಲಾ) ಗೀತೆಯ ಎರಡು ಸಾಲುಗಳನ್ನು ಹಾಡಿರುವುದು ವಿವಾದಕ್ಕೆ ಕಾರಣವಾಗಿದೆ.

ಕಾಂಗ್ರೆಸ್ ನಾಯಕ ಬಾಂಗ್ಲಾದೇಶದ ರಾಷ್ಟ್ರಗೀತೆಯನ್ನು ಹಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿದ್ದು, ಬುಧವಾರ (ಅ.29) ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅವರು ಕಾನೂನು ಕ್ರಮಕ್ಕೆ ಸೂಚಿಸಿದ್ದಾರೆ.

ಇದಕ್ಕೆ ತಿರುಗೇಟು ಕೊಟ್ಟಿರುವ ಕಾಂಗ್ರೆಸ್, ಸಿಎಂ ನಿರ್ದೇಶನ ಆಡಳಿತಾರೂಢ ಬಿಜೆಪಿಯ ಅಜ್ಞಾನವನ್ನು ಬಿಂಬಿಸುತ್ತದೆ. ಬಿಜೆಪಿ ಬಂಗಾಳಿ ಸಂಸ್ಕೃತಿಯನ್ನು ಅವಮಾನಿಸಿದೆ ಎಂದು ಹೇಳಿದೆ.

ಶ್ರೀಭೂಮಿ ಜಿಲ್ಲಾ ಕಾಂಗ್ರೆಸ್ ಸೇವಾ ದಳದ ಸಭೆಯಲ್ಲಿ ಪಕ್ಷದ ಹಿರಿಯ ಸದಸ್ಯ ವಿಧುಭೂಷಣ್ ದಾಸ್ ಅವರು ‘ಅಮರ್ ಸೋನಾರ್ ಬಾಂಗ್ಲಾ’ದ ಎರಡು ಸಾಲುಗಳನ್ನು ಹಾಡಿದ್ದಾರೆ ಎನ್ನಲಾಗಿದೆ. ಈ ವಾರದ ಆರಂಭದಲ್ಲಿ ನಡೆದಿರುವ ಸಭೆಯ ವಿಡಿಯೋ ಈಗ ವೈರಲ್ ಆಗಿದ್ದು, ಬಿಜೆಪಿ ಅದನ್ನು ವಿವಾದಕ್ಕೆ ತಿರುಗಿಸಿದ ಬಳಿಕ ಸಿಎಂ ಕ್ರಮಕ್ಕೆ ಸೂಚಿಸಿದ್ದಾರೆ ಎಂದು ವರದಿಗಳು ಹೇಳಿವೆ.

ಕಾಂಗ್ರೆಸ್‌ನಿಂದ ಭಾರತ, ಭಾರತೀಯರಿಗೆ ಅವಮಾನ : ಸಿಎಂ ಶರ್ಮಾ

“ಎರಡು ದಿನಗಳ ಹಿಂದೆ ಶ್ರೀಭೂಮಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಭೆಯಲ್ಲಿ ಭಾರತದ ರಾಷ್ಟ್ರಗೀತೆಯ ಬದಲಿಗೆ ಬಾಂಗ್ಲಾದೇಶದ ರಾಷ್ಟ್ರಗೀತೆಯನ್ನು ಹಾಡಲಾಗಿದೆ. ಇದು ಭಾರತದ ಜನರಿಗೆ, ರಾಷ್ಟ್ರಗೀತೆಗೆ ಮಾಡಿದ ಅವಮಾನ. ಅಂತಿಮವಾಗಿ ಈಶಾನ್ಯ ಭಾರತವು ಬಾಂಗ್ಲಾದೇಶದ ಭಾಗವಾಗುತ್ತದೆ ಎಂಬ ಅಲ್ಲಿನ ನಾಯಕರ ಇತ್ತೀಚಿನ ಹೇಳಿಕೆಗೆ ಅನುಗುಣವಾಗಿ ಕಾಂಗ್ರೆಸ್‌ನವರು ನಡೆದುಕೊಂಡಿದ್ದಾರೆ” ಎಂದು ಬುಧವಾರ ನಡೆದ ಸಂಪುಟ ಸಭೆಯ ನಂತರ ಸಿಎಂ ಶರ್ಮಾ ಹೇಳಿದ್ದಾರೆ.

ಸಿಎಂ ಹೇಳಿಕೆಗೆ ತಿರುಗೇಟು ಕೊಟ್ಟಿರುವ ಅಸ್ಸಾಂ ಕಾಂಗ್ರೆಸ್ ಮುಖ್ಯಸ್ಥ ಗೌರವ್ ಗೊಗೊಯ್, “ಬಿಜೆಪಿಯ ಆರೋಪಗಳು ರವೀಂದ್ರನಾಥ ಟ್ಯಾಗೋರ್ ಹಾಗೂ ಬಂಗಾಳಿ ಭಾವನೆಗಳು ಮತ್ತು ಸಂಸ್ಕೃತಿಯ’ ಕುರಿತು ಅವರ ಅಜ್ಞಾನವನ್ನು ಸೂಚಿಸುತ್ತದೆ” ಎಂದಿದ್ದಾರೆ.

“ಇದು ರವೀಂದ್ರನಾಥ ಟ್ಯಾಗೋರ್ ರಚಿಸಿದ ಹಾಡು. ಇದು ಬಂಗಾಳಿ ಸಂಸ್ಕೃತಿಯ ಭಾವನೆಗಳನ್ನು ತಿಳಿಸುವ ಹಾಡು. ಬಿಜೆಪಿ ಸದಾ ಬಂಗಾಳಿ ಭಾಷೆ, ಬಂಗಾಳಿ ಸಂಸ್ಕೃತಿ ಮತ್ತು ಬಂಗಾಳದ ಜನರನ್ನು ಅವಮಾನಿಸುತ್ತಾ ಬಂದಿದೆ. ಅವರು ತಮ್ಮ ಅಜ್ಞಾನವನ್ನು ತೋರಿಸಿದ್ದಾರೆ. ರವೀಂದ್ರನಾಥ ಟ್ಯಾಗೋರ್ ಅವರ ಇತಿಹಾಸ ಮತ್ತು ಅವರ ತತ್ವಶಾಸ್ತ್ರದ ಬಗ್ಗೆ ಬಿಜೆಪಿಗರಿಗೆ ತಿಳಿದಿಲ್ಲ. ಬಂಗಾಳದ ಜನರು ಮತ್ತು ಭಾರತದ ವಿವಿಧ ಭಾಗಗಳಲ್ಲಿರುವ ಬಂಗಾಳಿ ಮಾತನಾಡುವ ಜನರನ್ನು ಬಿಜೆಪಿ ಮತಕ್ಕಾಗಿ ಮಾತ್ರ ಬಳಸುತ್ತದೆ. ಅವರ ಸಂಸ್ಕೃತಿ, ಭಾಷೆ ಮತ್ತು ಭಾವನೆಗಳನ್ನು ಅರ್ಥಮಾಡಿಕೊಳ್ಳುವುದಿಲ್ಲ” ಎಂದು ಹೇಳಿದ್ದಾರೆ.

ಅಸ್ಸಾಂನ ಶ್ರೀಭೂಮಿ ಜಿಲ್ಲೆಯು ಹೆಚ್ಚಾಗಿ ಬಂಗಾಳಿ ಭಾಷೆ ಮಾತನಾಡುವ ಜನರಿರುವ ಬರಾಕ್ ಕಣಿವೆಯಲ್ಲಿದೆ. ಇದು ಬಾಂಗ್ಲಾದೇಶದ ಗಡಿ ಪ್ರದೇಶವಾಗಿದೆ. 1947ರ ದೇಶ ವಿಭಜನೆ ಈ ಪ್ರದೇಶದ ಮೇಲೆ ಗಮನಾರ್ಹ ಪರಿಣಾಮ ಬೀರಿದೆ.

‘ಅಮರ್ ಸೋನಾರ್ ಬಾಂಗ್ಲಾ’ ಗೀತೆ

‘ಅಮರ್ ಸೋನಾರ್ ಬಾಂಗ್ಲಾ’ 1905ರಲ್ಲಿ ಬ್ರಿಟಿಷ್ ವೈಸ್‌ರಾಯ್ ಲಾರ್ಡ್ ಕರ್ಜನ್ ಬಂಗಾಳವನ್ನು ವಿಭಜನೆ ಮಾಡಿದ್ದನ್ನು ವಿರೋಧಿಸಿ ನಡೆದ ಸ್ವದೇಶಿ ಚಳವಳಿಯ ಸಮಯದಲ್ಲಿ ರವೀಂದ್ರನಾಥ ಟ್ಯಾಗೋರ್ ಅವರು ಬರೆದ ಮಹತ್ವದ ಗೀತೆಯಾಗಿದೆ.

ಲಾರ್ಡ್ ಕರ್ಜನ್ ಬಂಗಾಳವನ್ನು ಹಿಂದೂ ಬಹುಸಂಖ್ಯಾತ ಪಶ್ಚಿಮ ಮತ್ತು ಮುಸ್ಲಿಂ ಬಹುಸಂಖ್ಯಾತ ಪೂರ್ವ ಎಂದು ವಿಭಜಿಸಿದ್ದರು. ಇದನ್ನು ‘ಒಡೆದು ಆಳುವ’ ತಂತ್ರ ಎಂದು ವಿರೋಧಿಸಿ ಸ್ವದೇಶಿ ಚಳವಳಿ ಕಟ್ಟಲಾಗಿತ್ತು.

ಬಂಗಾಳದ ಏಕತೆ, ಹೆಮ್ಮೆ ಮತ್ತು ಪ್ರತಿರೋಧವನ್ನು ಪ್ರೇರೇಪಿಸಲು ಬರೆದ ಗೀತೆಯನ್ನು ಸೆಪ್ಟೆಂಬರ್ 1905 ರಲ್ಲಿ ಬಂಗಾಳಿ ಸಾಹಿತ್ಯ ಪತ್ರಿಕೆ ‘ಭಾರತಿ’ ಮೊದಲ ಬಾರಿಗೆ ಪ್ರಕಟಿಸಿತ್ತು. ಕಲ್ಕತ್ತಾದಲ್ಲಿ (ಕೋಲ್ಕತ್ತಾ) ನಡೆದ ಪ್ರತಿಭಟನಾ ಸಭೆಗಳಲ್ಲಿ ಈ ಗೀತೆಯನ್ನು ಹಾಡಲಾಗಿತ್ತು.

“ನಾನು ವಿಭಜನೆಯನ್ನು ಪ್ರತಿಭಟಿಸಲು ‘ಅಮರ್ ಸೋನಾರ್ ಬಾಂಗ್ಲಾ’ ಬರೆದೆ… ನಾನು ಬಂಗಾಳವನ್ನು ನನ್ನ ತಾಯಿಯಾಗಿ, ಚಿನ್ನವಾಗಿ ಮತ್ತು ಸುಂದರವಾಗಿ ನೋಡಿದೆ” ಎಂದು ಸ್ವತಃ ಟ್ಯಾಗೋರ್ ಅವರು ಈ ಗೀತೆ ಕುರಿತು ಹೇಳಿದ್ದರು.

ಬಂಗಾಳಿ ಸಾಂಸ್ಕೃತಿಕ ಗುರುತು ಮತ್ತು ವಸಾಹತುಶಾಹಿ ವಿರೋಧಿ ಪ್ರತಿರೋಧದ ಸಂಕೇತವಾದ ಈ ಗೀತೆಯನ್ನು ಭಾರತದ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಬಂಗಾಳದಾದ್ಯಂತ ಶಾಲೆಗಳು, ಪ್ರತಿಭಟನಾ ಸಭೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಹಾಡಲಾಗಿತ್ತು.

ಬಾಂಗ್ಲಾದೇಶ ರಾಷ್ಟ್ರಗೀತೆ-1971

ಮಾರ್ಚ್–ಡಿಸೆಂಬರ್ 1971ರಲ್ಲಿ ಪೂರ್ವ ಪಾಕಿಸ್ತಾನ ಪಶ್ಚಿಮ ಪಾಕಿಸ್ತಾನದಿಂದ ಬಾಂಗ್ಲಾದೇಶವನ್ನು ಸ್ವತಂತ್ರಗೊಳಿಸಲು ‘ಬಾಂಗ್ಲಾದೇಶ ವಿಮೋಚನಾ’ ಹೋರಾಟ ನಡೆಯಿತು.

ಬಾಂಗ್ಲಾದೇಶ ಸ್ವತಂತ್ರ ರಾಷ್ಟ್ರವಾಗಿ ಪಾಕಿಸ್ತಾನದಿಂದ ವಿಮೋಚನೆಗೊಂಡ ಬಳಿಕ, ಅಂದರೆ 13 ಜನವರಿ 1972ರಲ್ಲಿ ಬಾಂಗ್ಲಾದೇಶದ ಮೊದಲ ಗಣರಾಜ್ಯೋತ್ಸವ ಸಮಾರಂಭದಲ್ಲಿ ‘ಅಮರ್ ಸೋನಾರ್ ಬಾಂಗ್ಲಾ’ ಗೀತೆಯನ್ನು ಮೊದಲ ಬಾರಿಗೆ ಕೇಳಿಸಲಾಗಿತ್ತು. ಬಳಿಕ 1972ರಲ್ಲಿ ಗೀತೆಯ ಮೊದಲ ಹತ್ತು ಸಾಲುಗಳು ಅಧಿಕೃತವಾಗಿ ಬಾಂಗ್ಲಾದೇಶದ ರಾಷ್ಟ್ರಗೀತೆಯ ಭಾಗವಾದವು.

‘ಥರ್ಡ್‌ ಕ್ಲಾಸ್‌ ವಂಚಕನಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ’: ಅಸ್ಸಾಂ ಸಿಎಂಗೆ ಪ್ರಿಯಾಂಕ್ ಖರ್ಗೆ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...