Homeಮುಖಪುಟ'ವಿಕ್ಟಿಮ್ ಕಾರ್ಡ್‌ ಬಳಸುತ್ತಿದ್ದಾರೆ' : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್‌ಗೆ ಜಾಮೀನಿಗೆ ವಿರೋಧ ವ್ಯಕ್ತಪಡಿಸಿದ ದೆಹಲಿ...

‘ವಿಕ್ಟಿಮ್ ಕಾರ್ಡ್‌ ಬಳಸುತ್ತಿದ್ದಾರೆ’ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್‌ಗೆ ಜಾಮೀನಿಗೆ ವಿರೋಧ ವ್ಯಕ್ತಪಡಿಸಿದ ದೆಹಲಿ ಪೊಲೀಸ್

- Advertisement -
- Advertisement -

ದೆಹಲಿ ಗಲಭೆ ಪ್ರಕರಣದಲ್ಲಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಮೀರಾನ್ ಹೈದರ್, ಗುಲ್ಫಿಶಾ ಫಾತಿಮಾ ಮತ್ತು ಶಿಫಾ ಉರ್ ರೆಹಮಾನ್ ಅವರಿಗೆ ಜಾಮೀನು ನೀಡುವುದನ್ನು ವಿರೋಧಿಸಿ ದೆಹಲಿ ಪೊಲೀಸರು ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ್ದಾರೆ.

ಅರ್ಜಿದಾರರು ದೀರ್ಘ ಜೈಲುವಾಸದ ಆಧಾರದ ಮೇಲೆ ‘ವಿಕ್ಟಿಮ್ ಕಾರ್ಡ್‌’ ಬಳಸಲು ಪ್ರಯತ್ನಿಸುತ್ತಿದ್ದಾರೆ. ವಿಚಾರಣೆ ವಿಳಂಬವಾಗಲು ಅವರೇ ಕಾರಣ ಎಂದು ಪೊಲೀಸರು ಹೇಳಿದ್ದಾರೆ.

ವಿಚಾರಣೆ ವಿಳಂಬದ ಆಧಾರದಲ್ಲಿ ಜಾಮೀನು ನೀಡಲು ಯಾವುದೇ ಕಾರಣಗಳಿಲ್ಲ. ವಿಚಾರಣೆ ಆರಂಭವಾಗುವುದನ್ನು ಅರ್ಜಿದಾರರು ಉದ್ದೇಶಪೂರ್ವಕವಾಗಿ ತಡೆಯುತ್ತಿದ್ದಾರೆ ಎಂದಿದ್ದಾರೆ.

ಅರ್ಜಿದಾರರ ಪ್ರಯತ್ನವು ಭಾರತಾದ್ಯಂತ ಸಶಸ್ತ್ರ ದಂಗೆಯನ್ನು ಪ್ರಚೋದಿಸುವುದಾಗಿತ್ತು

ಆರೋಪಿಗಳ ನಡವಳಿಕೆ, ಅವರ ವಿರುದ್ಧ ಲಭ್ಯವಿರುವ ನಿರಾಕರಿಸಲಾಗದ ಮತ್ತು ಸ್ಪಷ್ಟವಾದ ಸಾಕ್ಷ್ಯಗಳು ಅವರು ನ್ಯಾಯಾಲಯದಿಂದ ಯಾವುದೇ ಜಾಮೀನು ಪರಿಹಾರವನ್ನು ಪಡೆಯಲು ಅನರ್ಹರು ಎಂಬುವುದನ್ನು ಸೂಚಿಸುತ್ತದೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.

“ಅರ್ಜಿದಾರರು ರೂಪಿಸಿದ, ಪೋಷಿಸಿದ ಮತ್ತು ಕಾರ್ಯಗತಗೊಳಿಸಿದ ಪಿತೂರಿಯು ಕೋಮು ಸಾಮರಸ್ಯವನ್ನು ನಾಶಮಾಡುವ ಮೂಲಕ ದೇಶದ ಸಾರ್ವಭೌಮತ್ವ ಮತ್ತು ಸಮಗ್ರತೆಯ ಹೃದಯಭಾಗಕ್ಕೆ ಹೊಡೆತ ನೀಡುವುದಾಗಿತ್ತು. ಸಾರ್ವಜನಿಕ ಸುವ್ಯವಸ್ಥೆಯನ್ನು ಹಾಳು ಮಾಡುವುದು ಮಾತ್ರವಲ್ಲದೆ ಸಶಸ್ತ್ರ ದಂಗೆಯ ಮಟ್ಟಿಗೆ ಜನಸಮೂಹವನ್ನು ಪ್ರಚೋದಿಸುವುದಾಗಿತ್ತು” ಎಂದು ಪೊಲೀಸರ ಅಫಿಡವಿಟ್‌ನಲ್ಲಿಆರೋಪಿಸಲಾಗಿದೆ.

ನಾವು ಸಂಗ್ರಹಿಸಿದ ಸಾಕ್ಷ್ಯಗಳು ಅರ್ಜಿದಾರರು ಭಾರತಾದ್ಯಂತ ಇಂತಹ ಪಿತೂರಿಯನ್ನು ಕಾರ್ಯಗತಗೊಳಿಸಲು ಬಯಸಿದ್ದರು ಎಂದು ಸೂಚಿಸುತ್ತದೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಮೀರಾನ್ ಹೈದರ್, ಗುಲ್ಫಿಶಾ ಫಾತಿಮಾ ಮತ್ತು ಶಿಫಾ ಉರ್ ರೆಹಮಾನ್ ಸಲ್ಲಿಸಿದ್ದ ಅರ್ಜಿಗಳಿಗೆ ಪ್ರತಿಯಾಗಿ ಅಫಿಡವಿಟ್‌ಗಳನ್ನು ಸಲ್ಲಿಸಲು ಎರಡು ವಾರಗಳ ಕಾಲಾವಕಾಶ ನೀಡಬೇಕೆಂಬ ದೆಹಲಿ ಪೊಲೀಸರ ಮನವಿಯನ್ನು ಸುಪ್ರೀಂ ಕೋರ್ಟ್ ಅಕ್ಟೋಬರ್ 27ರಂದು ತಿರಸ್ಕರಿಸಿತ್ತು.

ಸಾಕಷ್ಟು ಸಮಯ ನೀಡಲಾಗಿದೆ ಎಂದು ಹೇಳಿದ್ದ ನ್ಯಾಯಮೂರ್ತಿ ಅರವಿಂದ್ ಕುಮಾರ್ ಮತ್ತು ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠ, ಪ್ರಕರಣದ ವಿಚಾರಣೆಯನ್ನು ಶುಕ್ರವಾರಕ್ಕೆ (ಅ.31) ಮುಂದೂಡಿ, ಈ ಮಧ್ಯೆ ಪ್ರತಿ ಅಫಿಡವಿಟ್ ಸಲ್ಲಿಸುವಂತೆ ದೆಹಲಿ ಪೊಲೀಸರಿಗೆ ಸೂಚಿಸಿತ್ತು. ಅದರಂತೆ ಜಾಮೀನಿಗೆ ವಿರೋಧ ವ್ಯಕ್ತಪಡಿಸಿ ಪೊಲೀಸರು ಅಫಿಡವಿಟ್ ಸಲ್ಲಿಸಿದ್ದಾರೆ.

ರವೀಂದ್ರನಾಥ ಟ್ಯಾಗೋರ್‌ರ ‘ಅಮರ್ ಸೋನಾರ್ ಬಾಂಗ್ಲಾ’ ಗೀತೆ ಹಾಡಿದ ಕಾಂಗ್ರೆಸ್ ಮುಖಂಡ: ಕ್ರಮಕ್ಕೆ ಸೂಚಿಸಿದ ಅಸ್ಸಾಂ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...