Homeಕರ್ನಾಟಕತುಂಬಾಡಿ ರಾಮಯ್ಯ, ರಾಜೇಂದ್ರ ಚೆನ್ನಿ, ಎಚ್.ಎಲ್. ಪುಷ್ಪ, ರಹಮತ್ ತರೀಕೆರೆ, ಪ್ರಕಾಶ್ ರಾಜ್ ಸೇರಿದಂತೆ 70...

ತುಂಬಾಡಿ ರಾಮಯ್ಯ, ರಾಜೇಂದ್ರ ಚೆನ್ನಿ, ಎಚ್.ಎಲ್. ಪುಷ್ಪ, ರಹಮತ್ ತರೀಕೆರೆ, ಪ್ರಕಾಶ್ ರಾಜ್ ಸೇರಿದಂತೆ 70 ಜನರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ

- Advertisement -
- Advertisement -

ಬೆಂಗಳೂರು: ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವಂತ ಗಣ್ಯರಿಗೆ 2025ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗಿದೆ. 70ನೇ ರಾಜ್ಯೋತ್ಸವ ಆಚರಣೆಯ ಅಂಗವಾಗಿ 70 ಮಂದಿಗೆ 2025ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗಿದೆ.

ಈ ಕುರಿತಂತೆ ರಾಜ್ಯ ಸರ್ಕಾರ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಮೊದಲ‌ ಬಾರಿಗೆ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಕರೆಯದೆ ಒಟ್ಟು 70 ಮಂದಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.‌ ಈ ಪೈಕಿ‌ ಕೆಲವರು ಸ್ವಯಂ ಮನವಿ ನೀಡಿದ್ರು, ಅಂತಹವರು ಪ್ರಶಸ್ತಿಗೆ ಅರ್ಹರಿದ್ದ ಕಾರಣ‌‌ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದಿದೆ.

ಪ್ರಶಸ್ತಿ ನೀಡಿಕೆಯಲ್ಲಿ ಜಿಲ್ಲಾವಾರು, ಸಾಮಾಜಿಕ ಪರಿಪಾಲನೆಯಡಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.‌ ಆಯ್ಕೆ ಸಲಹಾ ಸಮಿತಿ ಸದಸ್ಯರು ಶಿಫಾರಸ್ಸು ಮಾಡಿದ್ದವರನ್ನು ಬಹುತೇಕ‌‌ ಆಯ್ಕೆ ಮಾಡಲಾಗಿದ್ದು,‌ ನಾಲ್ಕೈದು‌ ಬಾರಿ‌ ಸಭೆ ನಡೆಸಿದ ಸದಸ್ಯರು ಅರ್ಹರನ್ನು ‌ಆಯ್ಕೆ ಮಾಡಲು ಸಹಕರಿಸಿದ್ದಕ್ಕೆ‌ ಧನ್ಯವಾದಗಳನ್ನು ಸಚಿವ ಶಿವರಾಜ ತಂಡರಗಿ ತಿಳಿಸಿದ್ದಾರೆ.

ಪ್ರಶಸ್ತಿ ನೀಡಿಕೆ‌ ಇತಿಹಾಸದಲ್ಲೇ ಮೊದಲ ಬಾರಿಗೆ ಸಮಗಾರ ಹರಳಯ್ಯ ಸಮುದಾಯಕ್ಕೆ ಸೇರಿದ ಇಬ್ಬರು ಪ್ರತಿಭೆಗಳನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮೊದಲೇ ನಿರ್ಧರಿಸಿದಂತೆ‌ ಈ ಬಾರಿ‌ ಯಾವುದೇ ಸಂಘ-ಸಂಸ್ಥೆಗಳಿಗೆ ಪ್ರಶಸ್ತಿ ನೀಡಿಲ್ಲ. 12 ಮಂದಿ‌ ಮಹಿಳೆಯರಿಗೆ ಈ ಬಾರಿ ಪ್ರಶಸ್ತಿ ಆಯ್ಕೆ‌‌ ಮಾಡಲಾಗಿದೆ ಎಂದಿದ್ದಾರೆ.

ಹೀಗಿದೆ 2025ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿ

ಸಾಹಿತ್ಯ

ಪ್ರೊ. ರಾಜೇಂದ್ರ ಚೆನ್ನಿ, ಶಿವಮೊಗ್ಗ
ತುಂಬಾಡಿ ರಾಮಯ್ಯ, ತುಮಕೂರು
ಪ್ರೊ ಅರ್ ಸುನಂದಮ್ಮ, ಚಿಕ್ಕಬಳ್ಳಾಪುರ
ಡಾ.ಎಚ್.ಎಲ್ ಪುಷ್ಪ, ತುಮಕೂರು
ರಹಮತ್ ತರೀಕೆರೆ, ಚಿಕ್ಕಮಗಳೂರು
ಹ.ಮ. ಪೂಜಾರ, ವಿಜಯಪುರ

ಜಾನಪದ

ಬಸಪ್ಪ ಭರಮಪ್ಪ ಚೌಡ್ಕಿ, ಕೊಪ್ಪಳ
ಬಿ. ಟಾಕಪ್ಪ ಕಣ್ಣೂರು, ಶಿವಮೊಗ್ಗ
ಸನ್ನಿಂಗಪ್ಪ ಸತ್ತೆಪ್ಪ ಮುಶೆನ್ನಗೋಳ, ಬೆಳಗಾವಿ
ಹನುಮಂತಪ್ಪ, ಮಾರಪ್ಪ, ಚೀಳಂಗಿ, ಚಿತ್ರದುರ್ಗ
ಎಂ. ತೋಪಣ್ಣ, ಕೋಲಾರ
ಸೋಮಣ್ಣ ದುಂಡಪ್ಪ ಧನಗೊಂಡ, ವಿಜಯಪುರ
ಸಿಂಧು ಗುಜರನ್, ದಕ್ಷಿಣ ಕನ್ನಡ
ಎಲ್. ಮಹದೇವಪ್ಪ ಉಡಿಗಾಲ, ಮೈಸೂರು

ಸಂಗೀತ

ದೇವೆಂದ್ರಕುಮಾರ ಪತ್ತಾರ್, ಕೊಪ್ಪಳ
ಮಡಿವಾಳಯ್ಯ ಸಾಲಿ, ಬೀದರ್

ನೃತ್ಯ

ಪ್ರೊ. ಕೆ. ರಾಮಮೂರ್ತಿ ರಾವ್, ಮೈಸೂರು

ಚಲನಚಿತ್ರ /ಕಿರುತೆರೆ

ಪ್ರಕಾಶ್ ರಾಜ್, ದಕ್ಷಿಣ ಕನ್ನಡ
ವಿಜಯಲಕ್ಷ್ಮೀ ಸಿಂಗ್, ಕೊಡಗು

ಆಡಳಿತ

ಹೆಚ್. ಸಿದ್ದಯ್ಯ ಭಾ.ಆ.ಸೇ(ನಿ), ಬೆಂಗಳೂರು ದಕ್ಷಿಣ (ರಾಮನಗರ)

ಹೆಚ್. ಸಿದ್ದಯ್ಯ ಭಾ.ಆ.ಸೇ(ನಿ), ಬೆಂಗಳೂರು ದಕ್ಷಿಣ (ರಾಮನಗರ)

ವೈದ್ಯಕೀಯ

ಡಾ. ಆಲಮ್ಮ ಮಾರಣ್ಣ, ತುಮಕೂರು
ಡಾ. ಜಯರಂಗನಾಥ್, ಬೆಂಗಳೂರು ಗ್ರಾಮಾಂತರ

ಸಮಾಜ ಸೇವೆ

ಸೂಲಗಿತ್ತಿ ಈರಮ್ಮ, ವಿಜಯನಗರ
ಫಕ್ಕೀರಿ, ಬೆಂಗಳೂರು ಗ್ರಾಮಾಂತರ
ಕೋರಿನ್ ಆಂಟೊನಿಯಟ್ ರಸ್ಕೀನಾ, ದಕ್ಷಿಣ ಕನ್ನಡ
ಡಾ. ಎನ್. ಸೀತಾರಾಮ ಶೆಟ್ಟಿ, ಉಡುಪಿ
ಕೋಣಂದೂರು ಲಿಂಗಪ್ಪ, ಶಿವಮೊಗ್ಗ

ಉಮೇಶ ಪಂಬದ, ದಕ್ಷಿಣ ಕನ್ನಡ
ಡಾ. ರವೀಂದ್ರ ಕೋರಿಶೆಟ್ಟಿರ್, ಧಾರವಾಡ
ಕೆ.ದಿನೇಶ್, ಬೆಂಗಳೂರು
ಶಾಂತರಾಜು, ತುಮಕೂರು
ಜಾಫರ್ ಮೊಹಿಯುದ್ದೀನ್, ರಾಯಚೂರು
ಪೆನ್ನ ಓಬಳಯ್ಯ, ಬೆಂಗಳೂರು ಗ್ರಾಮಾಂತರ
ಶಾಂತಿ ಬಾಯಿ, ಬಳ್ಳಾರಿ
ಪುಂಡಲೀಕ ಶಾಸ್ತ್ರೀ(ಬುಡಬುಡಕೆ), ಬೆಳಗಾವಿ

ಹೊರನಾಡು/ ಹೊರದೇಶ

ಜಕರಿಯ ಬಜಪೆ (ಸೌದಿ), ಹೊರನಾಡು/ ಹೊರದೇಶ
ಪಿ ವಿ ಶೆಟ್ಟಿ (ಮುಂಬೈ), ಹೊರನಾಡು/ ಹೊರದೇಶ

ಪರಿಸರ

ರಾಮೇಗೌಡ, ಚಾಮರಾಜನಗರ
ಮಲ್ಲಿಕಾರ್ಜುನ ನಿಂಗಪ್ಪ, ಯಾದಗಿರಿ

ಕೃಷಿ

ಡಾ.ಎಸ್.ವಿ.ಹಿತ್ತಲಮನಿ, ಹಾವೇರಿ
ಎಂ ಸಿ ರಂಗಸ್ವಾಮಿ, ಹಾಸನ

ಮಾಧ್ಯಮ

ಕೆ.ಸುಬ್ರಮಣ್ಯ, ಬೆಂಗಳೂರು
ಅಂಶಿ ಪ್ರಸನ್ನಕುಮಾರ್, ಮೈಸೂರು
ಬಿ.ಎಂ ಹನೀಫ್, ದಕ್ಷಿಣ ಕನ್ನಡ
ಎಂ ಸಿದ್ಧರಾಜು, ಮಂಡ್ಯ

ವಿಜ್ಞಾನ ಮತ್ತು ತಂತ್ರಜ್ಞಾನ

ರಾಮಯ್ಯ, ಚಿಕ್ಕಬಳ್ಳಾಪುರ
ಏರ್ ಮಾರ್ಷಲ್ ಫೀಲೀಫ್ ರಾಜಕುಮಾರ್, ದಾವಣಗೆರೆ
ಡಾ. ಆರ್. ವಿ ನಾಡಗೌಡ, ಗದಗ

ರಾಜ್ಯೋತ್ಸವ ಪ್ರಶಸ್ತಿಯು 25 ಗ್ರಾಂ ಚಿನ್ನದ ಪದಕ ಹಾಗೂ ಐದು ಲಕ್ಷ ನಗದನ್ನು ಒಳಗೊಂಡಿದೆ. ನವೆಂಬರ್.1ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಂಜೆ 6 ಗಂಟೆಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂದು ಬೆಳಗ್ಗೆ 8.30ಗಂಟೆಗೆ ಭುವನೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...