Homeಕರ್ನಾಟಕRSS ಪಥಸಂಚಲನವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ: ಪ್ರಿಯಾಂಕ್ ಖರ್ಗೆ

RSS ಪಥಸಂಚಲನವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ: ಪ್ರಿಯಾಂಕ್ ಖರ್ಗೆ

- Advertisement -
- Advertisement -

ಕಲಬುರಗಿ: RSS ಪಥಸಂಚಲನೆ ವಿಚಾರವನ್ನು ಪ್ರತಿಷ್ಠೆಯನ್ನಾಗಿ ತೆಗೆದುಕೊಂಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.  

ಕಲಬುರಗಿಯ ಐವಾನ್ – ಇ- ಶಾಹಿ ಅತಿಥಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅದೇ ದಿನದಂದು, ಅಲ್ಲೇ ಪಥಸಂಚಲಮಾಡುತ್ತೇವೆ ಎಂದು ಆರ್‌ಎಸ್‌ಎಸ್ ಹೇಳಿದೆ. ಈ ಬಗ್ಗೆ ಕೆಲವು ಸಂಘಟನೆಗಳು ಕೂಡಾ ಅದೇ ದಿನ, ತಾವೂ ಸಹ ಅಲ್ಲೇ ಪಥಸಂಚಲನ ಮಾಡುವುದಾಗಿ ಅರ್ಜಿ ಸಲ್ಲಿಸಿವೆ.‌ ಪ್ರಸ್ತುತ ಈ ವಿಚಾರ ಹೈಕೋರ್ಟ್‌ನಲ್ಲಿದೆ. ಈ ವಿಷಯದಲ್ಲಿ ನ್ಯಾಯಾಲಯ ನೀಡುವ ಆದೇಶವನ್ನು ಎಲ್ಲರೂ ಪಾಲಿಸಬೇಕಾಗುತ್ತದೆ’ ಎಂದಿದ್ದಾರೆ. 

RSS ನವರು ಕಲಬುರಗಿ ಸೇರಿದಂತೆ ಎಲ್ಲ ಕಡೆ ಮಾಹಿತಿ ನೀಡಿದ್ದಾರೆ ಹೊರತು ಅನುಮತಿ ಕೇಳಿಲ್ಲ. ಇವರು ಕೇಳಿದ ತಕ್ಷಣ ಭದ್ರತೆ ಕೊಡಲು ಪೊಲೀಸರಿಗೇನು ಕೆಲಸ ಇಲ್ಲವಾ? ಚಿತ್ತಾಪುರದಲ್ಲಿ ಅನುಮತಿ ನಿರಾಕರಿಸಿದ್ದರಿಂದ ಹೈಕೋರ್ಟ್‌ಗೆ ಹೋದರು. ಇತರರು ಕೂಡಾ ನಮಗೂ ಅನುಮತಿ ಕೊಡಿ ಎಂದರು. ನೋಂದಣಿಯಾಗದ ಒಂದು ಸಂಸ್ಥೆಯ ಕಾರ್ಯಕರ್ತರು ಕೈಯಲ್ಲಿ ದೊಣ್ಣೆ ಹಿಡಿದು ಪಥಸಂಚಲನ ಮಾಡಿದರೆ, ಸಾರ್ವಜನಿಕರಿಗೆ ಭೀತಿ ಆಗುವುದಿಲ್ಲವಾ? ಏನಾದರೂ ಹೆಚ್ಚು‌ಕಮ್ಮಿಯಾದರೆ ಯಾರು ಜವಾಬ್ದಾರರು?’ ಎಂದು ಪ್ರಶ್ನಿಸಿದರು.

‘ಲಾಠಿ ಹಿಡಿಯುವ ವಿಚಾರದಲ್ಲಿ‌ ಎಲ್ಲಾ ಕಡೆ ಏನೂ ತಕರಾರು ಇಲ್ಲ. ಚಿತ್ತಾಪುರದಲ್ಲಿ ಮಾತ್ರವೇ ಯಾಕೆ?’ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಚಿತ್ತಾಪುರದಲ್ಲಿ ಕಾನೂನು ಇದೆ. ಹಾಗೆ ಎಲ್ಲ‌ ಕಡೆಯೂ ಇದೆ. ಆದರೆ‌ ಚಿತ್ತಾಪುರ ಯುವಕರ ಭವಿಷ್ಯತ್ತಿನ ಪ್ರಶ್ನೆ ಬಂದಾಗ ಕಾನೂನು ಪ್ರಕಾರ ಕ್ರಮ ಜರುಗಿಸಲಾಗಿದೆ. ಈಗ ವಿಚಾರ ಹೈಕೋರ್ಟ್‌ನಲ್ಲಿದೆ. ನ್ಯಾಯಾಲಯ ಲಾಠಿ‌ ಹಿಡಿದು ಪಥಸಂಚಲನ ನಡೆಸಲು ಅನುಮತಿ ನೀಡಿದರೆ‌ ನಮ್ಮದೇನು ಅಭ್ಯಂತರವಿಲ್ಲ’ ಎಂದು ಉತ್ತರಿಸಿದ್ದಾರೆ.

ಈ ಎಲ್ಲ ಬೆಳವಣಿಗೆ ನಂತರ ತಮ್ಮನ್ನು ಟಾರ್ಗೆಟ್ ಮಾಡಲಾಗುತ್ತಿದೆಯಲ್ಲ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕ್, ‘ಮಾಡಲಿ ಬಿಡಿ. ಪ್ರಶ್ನೆ ಎತ್ತಿದ್ದು ನಾನೇ ತಾನೆ. ಬೇರೆಯವರ ಐಡಿಯಾಲಜಿ ಬಗ್ಗೆ ನಾನು ಹೇಳುವುದಿಲ್ಲ. ನನ್ನ ಐಡಿಯಾಲಜಿ, ಸಿಎಂ ಅವರ ಐಡಿಯಾಲಜಿ, ಖರ್ಗೆ ಸಾಹೇಬರ  ಐಡಿಯಾಲಜಿ, ರಾಹುಲ್ ಗಾಂಧಿಯವರ ಐಡಿಯಾಲಜಿ ಸರಿ‌ ಇದೆಯಲ್ಲ, ಅಷ್ಟು ಸಾಕು’ ಎಂದರು.

‘ಸೇಡಂ‌ನಲ್ಲಿ ಕಾನೂನು ಉಲ್ಲಂಘನೆ ಮಾಡಿ ಪಥ ಸಂಚಲನ ಮಾಡಿದ್ದಾರೆ. ಅದನ್ನು ಕೋರ್ಟ್ ಗಮನಕ್ಕೆ ತರಲಾಗುವುದು’ ಎಂದ ಸಚಿವರು, ‘ಎಲ್ಲವೂ ಪರಿಗಣನೆ ಆಗುತ್ತದೆ. ಅಂದಿನ ಶಾಂತಿ ಸಭೆಯಲ್ಲಿ ಆರ್‌ಎಸ್‌ಎಸ್ ಬದಲು ಬಿಜೆಪಿಯವರಿಗೇನು ಕೆಲಸ? ಅಶೋಕ ಪಾಟೀಲ ಯಾಕೆ ಅಂದಿನ ಶಾಂತಿ ಸಭೆಗೆ ಹೋಗಿಲ್ಲ? ಅವರ ಬದಲು ಬಿಜೆಪಿಯವರು ಯಾಕೆ ಹೋಗಿದ್ದರು? ಅವರು ಶಾಂತಿ ಸಭೆಗೆ ಬಂದಿದ್ದರೋ ಅಥವಾ ಶಾಂತಿ ಭಂಗ ಉಂಟು ಮಾಡಲು ಬಂದಿದ್ದರೋ?’ ಎಂದು ಪ್ರಶ್ನಿಸಿದರು.

‘ಆರ್‌ಎಸ್‌ಎಸ್ ನೋಂದಣಿ ಪತ್ರದ ವಿಚಾರ ಕುರಿತಂತೆ ಹೈಕೋರ್ಟ್‌ನಲ್ಲಿ ಸರಿಯಾದ ಸಮಯದಲ್ಲಿ ಪ್ರಶ್ನೆ ಮಾಡಲಾಗುವುದು. ಈಗ ಪಥಸಂಚಲನದ ವಿಚಾರ ಮಾತ್ರ ಬಂದಿದೆ. ಅನುಮತಿ‌ ಸಿಕ್ಕರೆ ನೋಂದಣಿ ವಿಚಾರದಲ್ಲಿಯೂ ಕಾನೂನು ಪ್ರಕಾರ ನೋಡಿಕೊಳ್ಳಲಾಗುವುದು’ ಎಂದು ಸಚಿವ ಪ್ರಿಯಾಂಕ್‌ ಹೇಳಿದರು.

‘ಸಾರ್ವಜನಿಕ ಸ್ಥಳಗಳ ಬಳಕೆಗೆ ಸಂಬಂಧಿಸಿದಂತೆ ಸರ್ಕಾರದ ಆದೇಶದ ನಂತರ, ಆರ್‌ಎಸ್‌ಎಸ್ ಹಾಗೂ ಬಿಜೆಪಿಯವರು ನನ್ನ ಮೇಲೆ‌ ಮುಗಿಬಿದ್ದರು. ಬಿಜೆಪಿಗೂ ಆರ್‌ಎಸ್‌ಎಸ್‌ಗೂ ಏನು ಸಂಬಂಧ? ನಾನು ಪತ್ರ ಬರೆದ ನಂತರ ಸಾವಿರಾರು ಕರೆಗಳು ಬಂದವು. ನಾನು ಇದನ್ನು ಪ್ರಚಾರಕ್ಕೆ ಮಾಡುತ್ತಿದ್ದೇನೆ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ನಾನು ಸರ್ಕಾರದಲ್ಲಿ‌ ಸಚಿವನಾಗಿದ್ದೇನೆ‌. ನನಗೆ ಯಾಕೆ ಪ್ರಚಾರ? ಒಬ್ಬ ಕಾಲ್ ಮಾಡಿ ನನಗೆ ಜೀವ ಬೆದರಿಕೆ ಹಾಕಿದ್ದಾನೆ. ನನ್ನ ಕುಟುಂಬ ವರ್ಗದವರನ್ನು ಕೂಡಾ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಇದನ್ನು ಬಿಜೆಪಿಯ ಯಾರೊಬ್ಬರೂ ಖಂಡಿಸಲಿಲ್ಲ. ಪೊಲೀಸರು ಸ್ವಯಂ ಪ್ರೇರಣೆಯಿಂದ ದೂರು ದಾಖಲಿಸಿಕೊಂಡು ಅವನನ್ನು ಬಂಧಿಸಿದ್ದಾರೆ. ನನಗೆ ಕರೆ ಮಾಡಿದ ವ್ಯಕ್ತಿ ತನ್ನ ಕಣಕಣದಲ್ಲಿಯೂ ಆರ್‌ಎಸ್‌ಎಸ್ ಇದೆ ಅಂದಿದ್ದಾನೆ. ಬಂಧಿತ ವ್ಯಕ್ತಿ ಬಡ ಕುಟುಂಬದವನು. ಆತನನ್ನು ಪ್ರಚೋದಿಸಿದವರು ಯಾರು? ಅವರಿಗೂ ಶಿಕ್ಷೆಯಾಗಬೇಕಲ್ಲವೇ?’ ಎಂದು ಪ್ರಶ್ನಿಸಿದರು.

‘ಬೇರೆ ಬೇರೆ ಕಡೆ ನಡೆದ ಪಥಸಂಚಲನದಲ್ಲಿ ಭಾಗಿಯಾದವರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಸರ್ವೀಸ್ ರೂಲ್ಸ್ ಪ್ರಕಾರ ಕ್ರಮ ಜರುಗಿಸಲಾಗುವುದು. ಕೇಂದ್ರ ಸರ್ಕಾರದ‌ ಆದೇಶ ರಾಜ್ಯ ಸರ್ಕಾರದ ನೌಕರರಿಗೂ ಅನ್ವಯವಾಗುತ್ತದೆ ಎಂದು‌ ಭಾವಿಸಿದ್ದಾರೆ. ಅದು ಹಾಗೆ ಆಗುವುದಿಲ್ಲ’ ಎಂದು ಎಚ್ಚರಿಸಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...