Homeಕರ್ನಾಟಕಅಲೆಮಾರಿಗಳ ಮೀಸಲಾತಿ ಹೋರಾಟ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಸಕಾರಾತ್ಮಕ ಭರವಸೆ

ಅಲೆಮಾರಿಗಳ ಮೀಸಲಾತಿ ಹೋರಾಟ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಸಕಾರಾತ್ಮಕ ಭರವಸೆ

- Advertisement -
- Advertisement -

ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ಶೇ.1 ಮೀಸಲಾತಿ ನೀಡುವ ವಿಚಾರದ ಬಗ್ಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯರವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ, ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಸರ್ಕಾರ ಸಕಾರಾತ್ಮಕ ಭರವಸೆ ನಿಡಿದೆ ಎಂದು ಕರ್ನಾಟಕ ‘ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ’ ತಿಳಿಸಿದೆ.

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿಯೋಗದ ವತಿಯಿಂದ ಮೂರು ವಿಚಾರಗಳನ್ನು ಮಂಡಿಸಲಾಗಿದೆ. ಡಾ. ನಾಗಮೋಹನ್‌ದಾಸ್‌ ವರದಿ ಶಿಫಾರಸ್ಸಿನಂತೆ ಎ ಕೆಟಗರಿಯಲ್ಲಿ ಶೇ. 1 ಮೀಸಲಾತಿ ಜಾರಿ ಮಾಡುವುದು, 59 ಅಲೆಮಾರಿ ಜಾತಿಗಳಿಗೆ ಪ್ರತ್ಯೇಕ ನಿಗಮವನ್ನು ಸ್ಥಾಪನೆ ಮತ್ತು ದೊಡ್ಡ ಪ್ರಮಾಣದಲ್ಲಿ ಕಡಗಡೆಗಣನೆಗೆ ಒಳಗಾಗಿರುವ ಸಮುದಾಯವನ್ನು ಸಮಗ್ರ ರೀತಿಯಲ್ಲಿ ಮೇಲೆತ್ತುವ ಸಲುವಾಗಿ ವಿಶೇಷ ಆರ್ಥಿಕ ಪ್ಯಾಕೇಜ್‌ ಅನ್ನು ನೀಡಬೇಕು ಸಮಿತಿಯ ಸರ್ಕಾರವನ್ನು ಒತ್ತಾಯಿಸಿತು.

ಈಗ ಸೃಷ್ಠಿಯಾಗಿರುವ ಇಕ್ಕಟ್ಟಿಗೆ ಕಾರಣಗಳೇನು ಮತ್ತು ಅದಕ್ಕೆ ಪರಿಹಾರಗಳೇನು ಎನ್ನುವುದರ ಕುರಿತೂ ಸರ್ಕಾರದ ಮುಂದೆ ನಿಯೋಗದ ವತಿಯಿಂದ ಅಸ್ಫೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟದ ಪರವಾಗಿ ಮುಖಂಡರಾದ ಶೇಷಪ್ಪರ ಮತ್ತು ಅಲೆಮಾರಿ ಸಮುದಾಯಗಳ ಪರವಾಗಿ ಗಟ್ಟಿಯಾಗಿ ನಿಂತು ಹೋರಾಟ ಮಾಡುತ್ತಿರುವ ಸಮಾಜಿಕ ಹೋರಾಟಗಾರರಾದ ನೂರ್‌ ಶ್ರೀಧರ್‌ ಅವರು ವಿಷಯ ಮಂಡಿಸಿದರು.

ಮೂರು ವಿಚಾರಗಳನ್ನು ಕುಲಂಕುಶವಾಗಿ ಆಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಎಚ್‌.ಸಿ ಮಹಾದೇವಪ್ಪ, “ಅಸ್ಫೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟವನ್ನು ಅಭಿನಂದಿಸಿ ಧನ್ಯವಾದಗಳನ್ನು ಸಲ್ಲಿಸುತ್ತೇವೆ. ಇಷ್ಟೆಲ್ಲಾ ನಡೆದಿದ್ದರೂ ನೀವು ಬಹಳ ಜವಾಬ್ದಾರಿಯಿಂದ ಹೋರಾಟವನ್ನು ನಡೆಸಿಕೊಂಡು ಬಂದಿದ್ದೀರಿ, ಸಮಸ್ಯೆನ್ನು ಪರಿಹರಿಸುವ ಸೂಕ್ತ ಮಾರ್ಗೋಪಾಯಗಳನ್ನು ಹುಡುಕಿ ಸರ್ಕಾರಕ್ಕೂ ಸಲಹೆ ಕೊಡುತ್ತಿದ್ದೀರಿ, ನೀವು ಬಹಳ ತಾಳ್ಮೆ ಮತ್ತು ಸಂಯಮದಿಂದ ಈ ಹೋರಾಟವನ್ನು ನಡೆಸಿಕೊಂಡು ಬಂದಿದ್ದೀರಿ. ಅದಕ್ಕಾಗಿ ಸಮುದಾಯದವರಿಗೂ ಮತ್ತು ಸಮಿತಿಗೂ ಧನ್ಯವಾದಗಳು” ಎಂದರು.

“ನೀವು ಇಟ್ಟಿರುವ ಮೂರೂ ಹಕ್ಕೊತ್ತಾಯಗಳಿಗೆ ನಮ್ಮ ತಾತ್ವಿಕವಾದ ಒಪ್ಪಿಗೆ ಇದೆ. ನೀವು ಹೇಳಿದಹಾಗೆ ಖಂಡಿತವಾಗಿ ಪ್ರತ್ಯೇಕ ನಿಗಮವನ್ನು ಮಾಡಬಹುದು ಮತ್ತು ವಿಶೇಷ ಆರ್ಥಿಕ ಪ್ಯಾಕೇಜ್‌ ಅನ್ನು ನೀಡಬಹುದು; ನೀಡಲೇಬೇಕು ಅದು ನಮ್ಮ ಕರ್ತವ್ಯ ಅದನ್ನು ನಾವು ಖಂಡಿತ ಮಾಡುತ್ತೇವು. ಈಗ ಆಗಿರುವ ಒಳ ಮೀಸಲಾತಿ ವರ್ಗೀಕರಣವೂ ನಾವು ಸಂತಸದಿಂದ ಮಾಡಿದ್ದಲ್ಲ, ಈ ಸಮಸ್ಯೆನ್ನು ಬಗೆಹರಿಸಲು ಒಂದು ಇಕ್ಕಟ್ಟಿನ ಸಂದರ್ಭದಲ್ಲಿ ನಾವು ಮಾಡಿದ ತಾತ್ಕಾಲಿಕ ತೀರ್ಮಾನವಾಗಿತ್ತು. ಅದನ್ನು ಶಾಶ್ವತ ಆಯೋಗದ ಮುಂದೆ ಇಟ್ಟು ಚರ್ಚಿಸಿ ಸೂಕ್ತವಾದ ಬದಲಾವಣೆ ಮಾಡಬೇಕು ಎನ್ನುವುದು ಸರ್ಕಾರದ ನಿಲುವಾಗಿತ್ತು. ಈಗ ನೀವು ಹೇಳಿದಂತೆ ಶೇ.1ರಷ್ಟು ಪ್ರತ್ಯೇಕ ಮೀಸಲಾತಿ ವಿಚಾರವನ್ನು ಹೇಗೆ ಬಗೆಹರಿಸಬೇಕು ಎನ್ನುವ ಮಾರ್ಗೋಪಾಯಗಳನ್ನು ಸೂಚಿಸಿದ್ದೀರಿ, ಇವೆಲ್ಲವನ್ನು ಗಮನದಲ್ಲಿಟ್ಟುಕೊಂಡು ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳಲು ನಮಗೆ ಸ್ವಲ್ಪ ಕಾಲಾವಕಾಶ ಬೇಕು. ಸರ್ಕಾರದ ಮೇಲೆ ವಿಶ್ವಾಸ ಇಡಿ” ಎಂದು ನಿಯೋಗಕ್ಕೆ ಮನವಿ ಮನಾಡಿದರು.

“ಸರ್ಕಾರದ ನಿಲುವನ್ನು ಸ್ವಾಗತಿಸುತ್ತೇವೆ. ಆದರೆ, ಈ ಕೆಲಸ ಬಹಳ ತ್ವರಿತವಾಗಿ ಆಗಬೇಕು. ಈಗಿರುವ ಬಾಕಿ ಉದ್ಯೋಗಗಳನ್ನು ಭರ್ತಿ ಮಾಡಿ ನಂತರದಲ್ಲಿ ಇದನ್ನು ಜಾರಿ ಮಾಡಿದರೆ ಇದಕ್ಕೆ ಅರ್ಥ ಬರುವುದಿಲ್ಲ. ಇರುವ ಉದ್ಯೋಗಗಳು ಖಾಲಿಯಾಗಿರುತ್ತದೆ ಆಗ ಸಮುದಾಯಕ್ಕೆ ಏನು ಸಿಗುವುದಿಲ್ಲ. ಒಳಮೀಸಲಾತಿ ಜಾರಿಗೊಳಿಸುವುದಕ್ಕಿಂತ ಮೊದಲು ಅಲೆಮಾರಿಗಳಿಗೆ ಶೇ.1 ಮೀಸಲಾತಿ ಸಿಗಬೇಕು” ಎಂದು ನಿಯೋಗ ವಾದವನ್ನು ಸಿಎಂ ಮುಂದಿಟ್ಟರು.

ಸಭೆಯಲ್ಲಿ ಹಾಜರಿದ್ದ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮಾತನಾಡಿ, “ಖಂಡಿತವಾಗಿಯೂ ನಿಮ್ಮ ಆತಂಕವನ್ನು ಗಮನದಲ್ಲಿಟ್ಟುಕೊಂಡು ರೆಕ್ರ್ಯೂಟ್ಮೆಂಟ್ ಆಗೋದಕ್ಕಿಂತ ಮೊದಲೇ ಸಮಸ್ಯೆ ಬಗೆಹರಿಸಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತದೆ” ಎಂದರು.

ಮತ್ತೊಮ್ಮೆ ಮಾತನಾಡಿದ ಮುಖ್ಯಮಂತ್ರಿಗಳು, “ದಯವಿಟ್ಟು ಸರ್ಕಾರದ ಮೇಲೆ ವಿಶ್ವಾಸ ಇಡಿ, ಹೈಕೋರ್ಟ್ ನಲ್ಲಿ ಹಾಕಿರುವ ಮೊಕದ್ದಮೆ ವಾಪಸ್ ಪಡೆದುಕೊಳ್ಳಿ, ನಾವು ಖಂಡಿತವಾಗಿಯೂ ಸಮುದಾಯವನ್ನು ಕೈ ಬಿಡದೆ ಸಮಸ್ಯೆ ಬಗೆಹರಿಸುತ್ತೇವೆ” ಎಂದು ಹೇಳಿದರು.

“ನಾವು ಇದನ್ನು ಸಕಾರಾತ್ಮಕವಾಗಿ ಪರಿಗಣಿಸುತ್ತೇವೆ. ಆದರೆ ಸರ್ಕಾರದಿಂದ ನಮಗೆ ಸ್ಪಷ್ಟವಾದ ಖಚಿತವಾದ ಆದೇಶ ಬರಬೇಕು. ಅಲ್ಲಿಯತನಕ ನೀವು ಯಾವುದೇ ರೀತಿಯ ಉದ್ಯೋಗ ಭರ್ತಿ ಮಾಡಬಾರದು” ಎಂದು ಹೋರಾಟಗಾರರು ತಿಳಿಸಿದರು.

ಕೋರ್ಟಿನಲ್ಲಿ ಈ ಪ್ರಕರಣವನ್ನು ಹಿಂಪಡೆದುಕೊಳ್ಳಬೇಕಾ? ಎಂದು ಚರ್ಚೆ ಮಾಡುವುದಕ್ಕೆ ಸಮಿತಿ ನಮ್ಮ ಸಂಬಂಧ ಪಟ್ಟ ವಕೀಲರು ಮತ್ತು ಸರ್ಕಾರಿ ವಕೀಲರು ಇವರಿಬ್ಬರ ಮಧ್ಯೆ ಸಮಲೋಚನೆ ಮಾಡಿ ಮ್ಯೂಚುಯಲ್ ಕಮಿಟ್ಮೆಂಟ್ ಮೇಲೆ ಈ ಸಮಸ್ಯೆಯನ್ನು ಶೇಕಡ ಒಂದರಷ್ಟು ಮೀಸಲಾತಿ ಕೊಡುವುದು ಜಾರಿಯಾಗಬೇಕು. ಮತ್ತೊಂದು ಕಡೆ ಕಾನೂನು ತೊಡಕನ್ನು ನಿವಾರಣೆ ಮಾಡಬೇಕು. ಅದಕ್ಕೆ ಇರುವಂತಹ ಸರಿಯಾದ ಮಾರ್ಗವೇನು? ಎನ್ನುವುದರ ಬಗ್ಗೆ ಸರ್ಕಾರಿ ವಕೀಲರ ಜೊತೆಗೂ ಚರ್ಚೆ ಮಾಡಿ, ಅಂತಿಮ ತೀರ್ಮಾನವನ್ನು ತೆಗೆದುಕೊಳ್ಳಬೇಕು ಎಂದು ಸಮಿತಿ ತೀರ್ಮಾನ ಮಾಡಿದೆ.

ಒಟ್ಟಿನಲ್ಲಿ ಇದು ಅಲೆಮಾರಿ ಸಮುದಾಯಕ್ಕೆ ದಕ್ಕ ಅತಿ ದೊಡ್ಡ ವಿಜಯವಾಗಿದೆ. ಚದುರು ಹೋಗಿದ್ದ ಸಮುದಾಯ ಒಟ್ಟುಗೂಡಿ ದೊಡ್ಡ ಹೋರಾಟ ಮಾಡಿ, ಡೆಲ್ಲಿ ತನಕ ಹೋಗಿ ಮತ್ತೆ ಬಂದು ಸರ್ಕಾರಕ್ಕೆ ಮನವರಿಕೆ ಮಾಡುವುದರಲ್ಲಿ ಸಮುದಾಯ ಯಶಸ್ವಿಗೊಂಡಿದೆ. ಇದಕ್ಕಾಗಿ ದುಡಿದ ಸಮುದಾಯದ ಎಲ್ಲರಿಗೂ, ಸಮುದಾಯದ ಪರವಾಗಿ ಕೆಲಸ ಮಾಡಿದ ಇತರೆ ಒಳ ಮೀಸಲಾತಿ ಹೋರಾಟಗಾರರಿಗೂ, ಜನಪರ ಚಿಂತಕರಿಗೂ, ಕಲಾವಿದರು ಸಾಹಿತಿಗರಿಗೂ, ಮಾಧ್ಯಮದವರಿಗೂ ವಿಶೇಷ ಧನ್ಯವಾದಗಳನ್ನು ಹೇಳಬಯಸುತ್ತದೆ ಅಲೆಮಾರಿ ಮೀಸಲಾತಿ ಹೋರಾಟ ಸಮಿತಿ ತಿಳಿಸಿದೆ.

ಇದರ ಮೂಲಕ ಫ್ರೀಡಂಪಾರ್ಕನಲ್ಲಿ ನಡೆಯುತ್ತಿದ್ದ ಧರಣಿ ಸತ್ಯಾಗ್ರಹವನ್ನು ಅಂತ್ಯಗೊಳಿಸುತ್ತೇವೆ. ಸರಕಾರ ಕೊಟ್ಟ ಮಾತಿನಂತೆ ಉದ್ಯೋಗ ಭರ್ತಿಯನ್ನು ಪ್ರಾರಂಭ ಮಾಡುವುದಕ್ಕೂ ಮೊದಲು ಶೀಘ್ರವಾಗಿ ಸಮಸ್ಯೆ ಬಗೆಹರಿಸುತ್ತದೆಂದು ನಂಬುತ್ತೇವೆ. ಕನಿಷ್ಠ ಚಳಿಗಾಳಿ ಅಧಿವೇಶನಕ್ಕಿಂದ ಮೊದಲು ಈ ಸಮಸ್ಯೆಗೆ ಸರ್ಕಾರ ಪರಿಹಾರ ತೆಗೆದುಕೊಳ್ಳುತ್ತದೆ ಎನ್ನುವ ವಿಶ್ವಾಸವಿದೆ. ಒಂದು ವೇಳೆ ನಮ್ಮ ನಿರೀಕ್ಷೆಗೂ ಮೀರಿ ಮತ್ತೆ ನಮ್ಮ ಸಮಸ್ಯೆ ಬಗೆಹರಿಸದೆ ಉದ್ಯೋಗ ಬರ್ತಿ ಮಾಡಲು ಸರ್ಕಾರ ಮುಂದಾದರೆ ಖಂಡಿತವಾಗಿಯೂ ನಮ್ಮ ಹಕ್ಕಿಗಾಗಿ ನಮ್ಮ ಸಮುದಾಯ ಮತ್ತೆ ಬೇದಿಗೆ ಇಳಿಯುವುದು ಖಚಿತವೆಂದು ಈ ಮೂಲಕ ಸ್ಪಷ್ಟಪಡಿಸುತ್ತಿದ್ದೇವೆ.

RSS ಪಥಸಂಚಲನವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ: ಪ್ರಿಯಾಂಕ್ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...