Homeಕರ್ನಾಟಕಅಲೆಮಾರಿಗಳ ಮೀಸಲಾತಿ ಹೋರಾಟ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಸಕಾರಾತ್ಮಕ ಭರವಸೆ

ಅಲೆಮಾರಿಗಳ ಮೀಸಲಾತಿ ಹೋರಾಟ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಸಕಾರಾತ್ಮಕ ಭರವಸೆ

- Advertisement -
- Advertisement -

ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ಶೇ.1 ಮೀಸಲಾತಿ ನೀಡುವ ವಿಚಾರದ ಬಗ್ಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯರವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ, ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಸರ್ಕಾರ ಸಕಾರಾತ್ಮಕ ಭರವಸೆ ನಿಡಿದೆ ಎಂದು ಕರ್ನಾಟಕ ‘ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ’ ತಿಳಿಸಿದೆ.

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿಯೋಗದ ವತಿಯಿಂದ ಮೂರು ವಿಚಾರಗಳನ್ನು ಮಂಡಿಸಲಾಗಿದೆ. ಡಾ. ನಾಗಮೋಹನ್‌ದಾಸ್‌ ವರದಿ ಶಿಫಾರಸ್ಸಿನಂತೆ ಎ ಕೆಟಗರಿಯಲ್ಲಿ ಶೇ. 1 ಮೀಸಲಾತಿ ಜಾರಿ ಮಾಡುವುದು, 59 ಅಲೆಮಾರಿ ಜಾತಿಗಳಿಗೆ ಪ್ರತ್ಯೇಕ ನಿಗಮವನ್ನು ಸ್ಥಾಪನೆ ಮತ್ತು ದೊಡ್ಡ ಪ್ರಮಾಣದಲ್ಲಿ ಕಡಗಡೆಗಣನೆಗೆ ಒಳಗಾಗಿರುವ ಸಮುದಾಯವನ್ನು ಸಮಗ್ರ ರೀತಿಯಲ್ಲಿ ಮೇಲೆತ್ತುವ ಸಲುವಾಗಿ ವಿಶೇಷ ಆರ್ಥಿಕ ಪ್ಯಾಕೇಜ್‌ ಅನ್ನು ನೀಡಬೇಕು ಸಮಿತಿಯ ಸರ್ಕಾರವನ್ನು ಒತ್ತಾಯಿಸಿತು.

ಈಗ ಸೃಷ್ಠಿಯಾಗಿರುವ ಇಕ್ಕಟ್ಟಿಗೆ ಕಾರಣಗಳೇನು ಮತ್ತು ಅದಕ್ಕೆ ಪರಿಹಾರಗಳೇನು ಎನ್ನುವುದರ ಕುರಿತೂ ಸರ್ಕಾರದ ಮುಂದೆ ನಿಯೋಗದ ವತಿಯಿಂದ ಅಸ್ಫೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟದ ಪರವಾಗಿ ಮುಖಂಡರಾದ ಶೇಷಪ್ಪರ ಮತ್ತು ಅಲೆಮಾರಿ ಸಮುದಾಯಗಳ ಪರವಾಗಿ ಗಟ್ಟಿಯಾಗಿ ನಿಂತು ಹೋರಾಟ ಮಾಡುತ್ತಿರುವ ಸಮಾಜಿಕ ಹೋರಾಟಗಾರರಾದ ನೂರ್‌ ಶ್ರೀಧರ್‌ ಅವರು ವಿಷಯ ಮಂಡಿಸಿದರು.

ಮೂರು ವಿಚಾರಗಳನ್ನು ಕುಲಂಕುಶವಾಗಿ ಆಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಎಚ್‌.ಸಿ ಮಹಾದೇವಪ್ಪ, “ಅಸ್ಫೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟವನ್ನು ಅಭಿನಂದಿಸಿ ಧನ್ಯವಾದಗಳನ್ನು ಸಲ್ಲಿಸುತ್ತೇವೆ. ಇಷ್ಟೆಲ್ಲಾ ನಡೆದಿದ್ದರೂ ನೀವು ಬಹಳ ಜವಾಬ್ದಾರಿಯಿಂದ ಹೋರಾಟವನ್ನು ನಡೆಸಿಕೊಂಡು ಬಂದಿದ್ದೀರಿ, ಸಮಸ್ಯೆನ್ನು ಪರಿಹರಿಸುವ ಸೂಕ್ತ ಮಾರ್ಗೋಪಾಯಗಳನ್ನು ಹುಡುಕಿ ಸರ್ಕಾರಕ್ಕೂ ಸಲಹೆ ಕೊಡುತ್ತಿದ್ದೀರಿ, ನೀವು ಬಹಳ ತಾಳ್ಮೆ ಮತ್ತು ಸಂಯಮದಿಂದ ಈ ಹೋರಾಟವನ್ನು ನಡೆಸಿಕೊಂಡು ಬಂದಿದ್ದೀರಿ. ಅದಕ್ಕಾಗಿ ಸಮುದಾಯದವರಿಗೂ ಮತ್ತು ಸಮಿತಿಗೂ ಧನ್ಯವಾದಗಳು” ಎಂದರು.

“ನೀವು ಇಟ್ಟಿರುವ ಮೂರೂ ಹಕ್ಕೊತ್ತಾಯಗಳಿಗೆ ನಮ್ಮ ತಾತ್ವಿಕವಾದ ಒಪ್ಪಿಗೆ ಇದೆ. ನೀವು ಹೇಳಿದಹಾಗೆ ಖಂಡಿತವಾಗಿ ಪ್ರತ್ಯೇಕ ನಿಗಮವನ್ನು ಮಾಡಬಹುದು ಮತ್ತು ವಿಶೇಷ ಆರ್ಥಿಕ ಪ್ಯಾಕೇಜ್‌ ಅನ್ನು ನೀಡಬಹುದು; ನೀಡಲೇಬೇಕು ಅದು ನಮ್ಮ ಕರ್ತವ್ಯ ಅದನ್ನು ನಾವು ಖಂಡಿತ ಮಾಡುತ್ತೇವು. ಈಗ ಆಗಿರುವ ಒಳ ಮೀಸಲಾತಿ ವರ್ಗೀಕರಣವೂ ನಾವು ಸಂತಸದಿಂದ ಮಾಡಿದ್ದಲ್ಲ, ಈ ಸಮಸ್ಯೆನ್ನು ಬಗೆಹರಿಸಲು ಒಂದು ಇಕ್ಕಟ್ಟಿನ ಸಂದರ್ಭದಲ್ಲಿ ನಾವು ಮಾಡಿದ ತಾತ್ಕಾಲಿಕ ತೀರ್ಮಾನವಾಗಿತ್ತು. ಅದನ್ನು ಶಾಶ್ವತ ಆಯೋಗದ ಮುಂದೆ ಇಟ್ಟು ಚರ್ಚಿಸಿ ಸೂಕ್ತವಾದ ಬದಲಾವಣೆ ಮಾಡಬೇಕು ಎನ್ನುವುದು ಸರ್ಕಾರದ ನಿಲುವಾಗಿತ್ತು. ಈಗ ನೀವು ಹೇಳಿದಂತೆ ಶೇ.1ರಷ್ಟು ಪ್ರತ್ಯೇಕ ಮೀಸಲಾತಿ ವಿಚಾರವನ್ನು ಹೇಗೆ ಬಗೆಹರಿಸಬೇಕು ಎನ್ನುವ ಮಾರ್ಗೋಪಾಯಗಳನ್ನು ಸೂಚಿಸಿದ್ದೀರಿ, ಇವೆಲ್ಲವನ್ನು ಗಮನದಲ್ಲಿಟ್ಟುಕೊಂಡು ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳಲು ನಮಗೆ ಸ್ವಲ್ಪ ಕಾಲಾವಕಾಶ ಬೇಕು. ಸರ್ಕಾರದ ಮೇಲೆ ವಿಶ್ವಾಸ ಇಡಿ” ಎಂದು ನಿಯೋಗಕ್ಕೆ ಮನವಿ ಮನಾಡಿದರು.

“ಸರ್ಕಾರದ ನಿಲುವನ್ನು ಸ್ವಾಗತಿಸುತ್ತೇವೆ. ಆದರೆ, ಈ ಕೆಲಸ ಬಹಳ ತ್ವರಿತವಾಗಿ ಆಗಬೇಕು. ಈಗಿರುವ ಬಾಕಿ ಉದ್ಯೋಗಗಳನ್ನು ಭರ್ತಿ ಮಾಡಿ ನಂತರದಲ್ಲಿ ಇದನ್ನು ಜಾರಿ ಮಾಡಿದರೆ ಇದಕ್ಕೆ ಅರ್ಥ ಬರುವುದಿಲ್ಲ. ಇರುವ ಉದ್ಯೋಗಗಳು ಖಾಲಿಯಾಗಿರುತ್ತದೆ ಆಗ ಸಮುದಾಯಕ್ಕೆ ಏನು ಸಿಗುವುದಿಲ್ಲ. ಒಳಮೀಸಲಾತಿ ಜಾರಿಗೊಳಿಸುವುದಕ್ಕಿಂತ ಮೊದಲು ಅಲೆಮಾರಿಗಳಿಗೆ ಶೇ.1 ಮೀಸಲಾತಿ ಸಿಗಬೇಕು” ಎಂದು ನಿಯೋಗ ವಾದವನ್ನು ಸಿಎಂ ಮುಂದಿಟ್ಟರು.

ಸಭೆಯಲ್ಲಿ ಹಾಜರಿದ್ದ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮಾತನಾಡಿ, “ಖಂಡಿತವಾಗಿಯೂ ನಿಮ್ಮ ಆತಂಕವನ್ನು ಗಮನದಲ್ಲಿಟ್ಟುಕೊಂಡು ರೆಕ್ರ್ಯೂಟ್ಮೆಂಟ್ ಆಗೋದಕ್ಕಿಂತ ಮೊದಲೇ ಸಮಸ್ಯೆ ಬಗೆಹರಿಸಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತದೆ” ಎಂದರು.

ಮತ್ತೊಮ್ಮೆ ಮಾತನಾಡಿದ ಮುಖ್ಯಮಂತ್ರಿಗಳು, “ದಯವಿಟ್ಟು ಸರ್ಕಾರದ ಮೇಲೆ ವಿಶ್ವಾಸ ಇಡಿ, ಹೈಕೋರ್ಟ್ ನಲ್ಲಿ ಹಾಕಿರುವ ಮೊಕದ್ದಮೆ ವಾಪಸ್ ಪಡೆದುಕೊಳ್ಳಿ, ನಾವು ಖಂಡಿತವಾಗಿಯೂ ಸಮುದಾಯವನ್ನು ಕೈ ಬಿಡದೆ ಸಮಸ್ಯೆ ಬಗೆಹರಿಸುತ್ತೇವೆ” ಎಂದು ಹೇಳಿದರು.

“ನಾವು ಇದನ್ನು ಸಕಾರಾತ್ಮಕವಾಗಿ ಪರಿಗಣಿಸುತ್ತೇವೆ. ಆದರೆ ಸರ್ಕಾರದಿಂದ ನಮಗೆ ಸ್ಪಷ್ಟವಾದ ಖಚಿತವಾದ ಆದೇಶ ಬರಬೇಕು. ಅಲ್ಲಿಯತನಕ ನೀವು ಯಾವುದೇ ರೀತಿಯ ಉದ್ಯೋಗ ಭರ್ತಿ ಮಾಡಬಾರದು” ಎಂದು ಹೋರಾಟಗಾರರು ತಿಳಿಸಿದರು.

ಕೋರ್ಟಿನಲ್ಲಿ ಈ ಪ್ರಕರಣವನ್ನು ಹಿಂಪಡೆದುಕೊಳ್ಳಬೇಕಾ? ಎಂದು ಚರ್ಚೆ ಮಾಡುವುದಕ್ಕೆ ಸಮಿತಿ ನಮ್ಮ ಸಂಬಂಧ ಪಟ್ಟ ವಕೀಲರು ಮತ್ತು ಸರ್ಕಾರಿ ವಕೀಲರು ಇವರಿಬ್ಬರ ಮಧ್ಯೆ ಸಮಲೋಚನೆ ಮಾಡಿ ಮ್ಯೂಚುಯಲ್ ಕಮಿಟ್ಮೆಂಟ್ ಮೇಲೆ ಈ ಸಮಸ್ಯೆಯನ್ನು ಶೇಕಡ ಒಂದರಷ್ಟು ಮೀಸಲಾತಿ ಕೊಡುವುದು ಜಾರಿಯಾಗಬೇಕು. ಮತ್ತೊಂದು ಕಡೆ ಕಾನೂನು ತೊಡಕನ್ನು ನಿವಾರಣೆ ಮಾಡಬೇಕು. ಅದಕ್ಕೆ ಇರುವಂತಹ ಸರಿಯಾದ ಮಾರ್ಗವೇನು? ಎನ್ನುವುದರ ಬಗ್ಗೆ ಸರ್ಕಾರಿ ವಕೀಲರ ಜೊತೆಗೂ ಚರ್ಚೆ ಮಾಡಿ, ಅಂತಿಮ ತೀರ್ಮಾನವನ್ನು ತೆಗೆದುಕೊಳ್ಳಬೇಕು ಎಂದು ಸಮಿತಿ ತೀರ್ಮಾನ ಮಾಡಿದೆ.

ಒಟ್ಟಿನಲ್ಲಿ ಇದು ಅಲೆಮಾರಿ ಸಮುದಾಯಕ್ಕೆ ದಕ್ಕ ಅತಿ ದೊಡ್ಡ ವಿಜಯವಾಗಿದೆ. ಚದುರು ಹೋಗಿದ್ದ ಸಮುದಾಯ ಒಟ್ಟುಗೂಡಿ ದೊಡ್ಡ ಹೋರಾಟ ಮಾಡಿ, ಡೆಲ್ಲಿ ತನಕ ಹೋಗಿ ಮತ್ತೆ ಬಂದು ಸರ್ಕಾರಕ್ಕೆ ಮನವರಿಕೆ ಮಾಡುವುದರಲ್ಲಿ ಸಮುದಾಯ ಯಶಸ್ವಿಗೊಂಡಿದೆ. ಇದಕ್ಕಾಗಿ ದುಡಿದ ಸಮುದಾಯದ ಎಲ್ಲರಿಗೂ, ಸಮುದಾಯದ ಪರವಾಗಿ ಕೆಲಸ ಮಾಡಿದ ಇತರೆ ಒಳ ಮೀಸಲಾತಿ ಹೋರಾಟಗಾರರಿಗೂ, ಜನಪರ ಚಿಂತಕರಿಗೂ, ಕಲಾವಿದರು ಸಾಹಿತಿಗರಿಗೂ, ಮಾಧ್ಯಮದವರಿಗೂ ವಿಶೇಷ ಧನ್ಯವಾದಗಳನ್ನು ಹೇಳಬಯಸುತ್ತದೆ ಅಲೆಮಾರಿ ಮೀಸಲಾತಿ ಹೋರಾಟ ಸಮಿತಿ ತಿಳಿಸಿದೆ.

ಇದರ ಮೂಲಕ ಫ್ರೀಡಂಪಾರ್ಕನಲ್ಲಿ ನಡೆಯುತ್ತಿದ್ದ ಧರಣಿ ಸತ್ಯಾಗ್ರಹವನ್ನು ಅಂತ್ಯಗೊಳಿಸುತ್ತೇವೆ. ಸರಕಾರ ಕೊಟ್ಟ ಮಾತಿನಂತೆ ಉದ್ಯೋಗ ಭರ್ತಿಯನ್ನು ಪ್ರಾರಂಭ ಮಾಡುವುದಕ್ಕೂ ಮೊದಲು ಶೀಘ್ರವಾಗಿ ಸಮಸ್ಯೆ ಬಗೆಹರಿಸುತ್ತದೆಂದು ನಂಬುತ್ತೇವೆ. ಕನಿಷ್ಠ ಚಳಿಗಾಳಿ ಅಧಿವೇಶನಕ್ಕಿಂದ ಮೊದಲು ಈ ಸಮಸ್ಯೆಗೆ ಸರ್ಕಾರ ಪರಿಹಾರ ತೆಗೆದುಕೊಳ್ಳುತ್ತದೆ ಎನ್ನುವ ವಿಶ್ವಾಸವಿದೆ. ಒಂದು ವೇಳೆ ನಮ್ಮ ನಿರೀಕ್ಷೆಗೂ ಮೀರಿ ಮತ್ತೆ ನಮ್ಮ ಸಮಸ್ಯೆ ಬಗೆಹರಿಸದೆ ಉದ್ಯೋಗ ಬರ್ತಿ ಮಾಡಲು ಸರ್ಕಾರ ಮುಂದಾದರೆ ಖಂಡಿತವಾಗಿಯೂ ನಮ್ಮ ಹಕ್ಕಿಗಾಗಿ ನಮ್ಮ ಸಮುದಾಯ ಮತ್ತೆ ಬೇದಿಗೆ ಇಳಿಯುವುದು ಖಚಿತವೆಂದು ಈ ಮೂಲಕ ಸ್ಪಷ್ಟಪಡಿಸುತ್ತಿದ್ದೇವೆ.

RSS ಪಥಸಂಚಲನವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ: ಪ್ರಿಯಾಂಕ್ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...