Homeಕರ್ನಾಟಕಕನ್ನಡ ರಾಜ್ಯೋತ್ಸವ ಆಚರಿಸಲಿರುವ ಬಿಎಚ್‌ಇಎಲ್‌ ಆಡಳಿತ ಮಂಡಳಿ : ಉದ್ಯೋಗಿಗಳ ಅರ್ಜಿ ಇತ್ಯರ್ಥಪಡಿಸಿದ ಹೈಕೋರ್ಟ್

ಕನ್ನಡ ರಾಜ್ಯೋತ್ಸವ ಆಚರಿಸಲಿರುವ ಬಿಎಚ್‌ಇಎಲ್‌ ಆಡಳಿತ ಮಂಡಳಿ : ಉದ್ಯೋಗಿಗಳ ಅರ್ಜಿ ಇತ್ಯರ್ಥಪಡಿಸಿದ ಹೈಕೋರ್ಟ್

- Advertisement -
- Advertisement -

ಬೆಂಗಳೂರು ಕ್ಯಾಂಪಸ್‌ನಲ್ಲಿ ಶನಿವಾರ (ನ.1) ಕನ್ನಡ ರಾಜ್ಯೋತ್ಸವ ಆಚರಿಸಲಾಗುವುದು ಎಂದು ಭಾರತ್‌ ಹೆವಿ ಎಲೆಕ್ಟ್ರಿಕಲ್ಸ್‌ ಲಿಮಿಟೆಡ್‌ (ಬಿಎಚ್‌ಇಎಲ್‌) ಶುಕ್ರವಾರ (ಅ.31) ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದೆ. ಈ ಹಿನ್ನೆಲೆ ಬಿಎಚ್‌ಇಎಲ್‌ ಉದ್ಯೋಗಿಗಳು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಇತ್ಯರ್ಥಪಡಿಸಿದೆ.

ಬೆಂಗಳೂರಿನ ಬಿಎಚ್‌ಇಎಲ್ ಆವರಣದಲ್ಲಿ 70ನೇ ಕನ್ನಡ ರಾಜ್ಯೋತ್ಸವ ಆಚರಿಸಲು ಅನುಮತಿ ನೀಡುವಂತೆ ಬಿಎಚ್‌ಇಎಲ್ ಆಡಳಿತ ಮಂಡಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಬಿಎಚ್‌ಇಎಲ್‌ ನೌಕರರ ‘ಕರ್ನಾಟಕ ಸಂಘ’ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಈ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿದೆ.

ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, “ಅರ್ಜಿದಾರ ಸಂಘವು ಹೊಸ ಚುನಾಯಿತ ಮಂಡಳಿಯನ್ನು ಹೊಂದಿದ್ದು, ವಿರೋಧಿ ಸಂಘಟನೆಯೊಂದಿಗೆ ಸೇರಿಕೊಂಡು ಬಿಎಚ್‌ಇಎಲ್‌ ಆಡಳಿತವು ಕನ್ನಡ ರಾಜ್ಯೋತ್ಸವ ಆಚರಿಸಲು ಅನುಮತಿ ನಿರಾಕರಿಸುತ್ತಿದೆ” ಎಂದು ಆರೋಪಿಸಿದ್ದರು.

ಬಿಎಚ್‌ಇಎಲ್‌ ಪರ ವಕೀಲರು, “ಎರಡು ಸಂಘಟನೆಗಳು ರಾಜ್ಯೋತ್ಸವ ಆಚರಿಸಲು ತಿಕ್ಕಾಟ ನಡೆಸುತ್ತಿದ್ದು, ಇದಕ್ಕಾಗಿ ಆಡಳಿತ ಮಂಡಳಿಯೇ ರಾಜ್ಯೋತ್ಸವ ಆಚರಿಸಲು ನಿರ್ಧರಿಸಿದೆ” ಎಂದು ತಿಳಿಸಿದ್ದರು.

ವಾದ-ಪ್ರತಿವಾದ ಆಲಿಸಿದ ಪೀಠವು, “ನಾಳೆ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತದೆ. ಯಾರು ರಾಜ್ಯೋತ್ಸವ ನಡೆಸುತ್ತಾರೆ ಎಂಬುದು ಪ್ರಶ್ನೆಯಲ್ಲ. ಆಡಳಿತ ಮಂಡಳಿಯೇ ರಾಜ್ಯೋತ್ಸವ ಆಚರಿಸುತ್ತದೆ. ಇದರಿಂದ ನಿಮಗೆ ಸಮಸ್ಯೆ ಏನು?” ಎಂದು ಅರ್ಜಿದಾರರನ್ನು ಪ್ರಶ್ನಿಸಿದೆ. ಅಂತಿಮವಾಗಿ ಅರ್ಜಿ ಇತ್ಯರ್ಥಪಡಿಸಿದೆ.

“ಸಂಸ್ಥೆಯೇ ರಾಜ್ಯೋತ್ಸವ ಆಚರಿಸಲು ಮುಂದಾಗಿರುವಾಗ ಬಿಎಚ್‌ಇಎಲ್‌ನ ಎಲ್ಲಾ ಉದ್ಯೋಗಿಗಳೂ ಅದರಲ್ಲಿ ಭಾಗವಹಿಸಬೇಕು. ಯಾವ ಸಂಘ ಅಥವಾ ಸಂಸ್ಥೆ ರಾಜ್ಯೋತ್ಸವ ನಡೆಸುತ್ತದೆ ಎಂಬುದು ವಿಚಾರವೇ ಅಲ್ಲ. ಸಂಸ್ಥೆಯೇ ರಾಜ್ಯೋತ್ಸವ ನಡೆಸಲು ಮುಂದಾಗಿರುವುದರಿಂದ ಅರ್ಜಿದಾರರಿಗೆ ಯಾವುದೇ ಅಹವಾಲು ಇರುವಂತಿಲ್ಲ. ಎಲ್ಲಾ ಉದ್ಯೋಗಿಗಳ ಕುಟುಂಬಸ್ಥರು ರಾಜ್ಯೋತ್ಸವದಲ್ಲಿ ಭಾಗವಹಿಸಬಹುದು ಎಂದು ಸಂಸ್ಥೆ ಹೇಳಿದೆ” ಎಂದು ನ್ಯಾಯಾಲಯ ಹೇಳಿದೆ.

ಅಲೆಮಾರಿಗಳ ಮೀಸಲಾತಿ ಹೋರಾಟ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಸಕಾರಾತ್ಮಕ ಭರವಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...