Homeಮುಖಪುಟಪಾಟ್ನಾ | ಜನ ಸುರಾಜ್ ಪಕ್ಷದ ಕಾರ್ಯಕರ್ತನ ಹತ್ಯೆ ಪ್ರಕರಣ : ಜೆಡಿಯು ಅಭ್ಯರ್ಥಿಯ ಬಂಧನ

ಪಾಟ್ನಾ | ಜನ ಸುರಾಜ್ ಪಕ್ಷದ ಕಾರ್ಯಕರ್ತನ ಹತ್ಯೆ ಪ್ರಕರಣ : ಜೆಡಿಯು ಅಭ್ಯರ್ಥಿಯ ಬಂಧನ

- Advertisement -
- Advertisement -

ಗುರುವಾರ (ಅ.30) ನಡೆದ ಜನ ಸುರಾಜ್ ಕಾರ್ಯಕರ್ತ ದುಲಾರ್‌ಚಂದ್ ಯಾದವ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಟ್ನಾ ಪೊಲೀಸರು ಭಾನುವಾರ (ನ.2) ಮುಂಜಾನೆ ವಿವಾದಾತ್ಮಕ ಮಾಜಿ ಶಾಸಕ, ಮೊಕಾಮಾದ ಜೆಡಿಯು ಅಭ್ಯರ್ಥಿ ಅನಂತ್ ಸಿಂಗ್ ಅವರನ್ನು ಬಂಧಿಸಿದ್ದಾರೆ.

ಪಾಟ್ನಾ ಎಸ್‌ಎಸ್‌ಪಿ ನೇತೃತ್ವದಲ್ಲಿ ಬರ್ಹ್‌ನಲ್ಲಿರುವ ಸಿಂಗ್ ಅವರ ಮನೆಗೆ ತೆರಳಿದ ಪೊಲೀಸರು, ಅವರನ್ನು ಬಂಧಿಸಿದ್ದಾರೆ. ಯಾದವ್‌ ಹತ್ಯೆಯ ನಂತರ ಸಿಂಗ್ ಮೇಲೆ ಪೊಲೀಸರು ಕಣ್ಣಿಟ್ಟಿದ್ದರು. ಬಂಧನದ ಬಳಿಕ ವಿಚಾರಣೆಗಾಗಿ ಅವರನ್ನು ಪಾಟ್ನಾಕ್ಕೆ ಕರೆತರಲಾಗಿದೆ.

ಮಣಿಕಾಂತ್ ಠಾಕೂರ್ ಮತ್ತು ರಂಜೀತ್ ರಾಮ್ ಎಂಬ ಇನ್ನಿಬ್ಬರು ವ್ಯಕ್ತಿಗಳನ್ನೂ ಪೊಲೀಸರು ಬಂಧಿಸಿದ್ದಾರೆ. ಮೂವರನ್ನೂ ಶೀಘ್ರದಲ್ಲೇ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗುವುದು ಎಂದು ತಿಳಿಸಿದ್ದಾರೆ.

ಪಾಟ್ನಾ ಬಳಿಯ ಮೊಕಾಮಾದಲ್ಲಿ ಚುನಾವಣಾ ಪ್ರಚಾರದ ವೇಳೆ ಶ್ವಾಸಕೋಶಕ್ಕೆ ಗಂಭೀರ ಹಾನಿ ಮತ್ತು ಪಕ್ಕೆಲುಬು ಮುರಿತಕ್ಕೊಳಗಾಗಿ ಯಾದವ್ ನಿಧನರಾಗಿದ್ದರು. ಗುರುವಾರ ಜನ ಸುರಾಜ್ ಪಕ್ಷದ ಅಭ್ಯರ್ಥಿ ಪಿಯೂಷ್ ಪ್ರಿಯದರ್ಶಿ ಪರ ಪ್ರಚಾರ ನಡೆಸುತ್ತಿದ್ದಾಗ ಈ ಘಟನೆ ನಡೆದಿತ್ತು.

ಪಾಟ್ನಾ ಜಿಲ್ಲಾ ಮ್ಯಾಜಿಸ್ಟ್ರೇಟ್ ತ್ಯಾಗರಾಜನ್ ಎಸ್‌.ಎಂ ಅವರೊಂದಿಗೆ ತಡರಾತ್ರಿ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪಾಟ್ನಾ ಎಸ್‌ಎಸ್‌ಪಿ ಕಾರ್ತಿಕೇಯ ಶರ್ಮಾ, “ದುಲಾರ್ ಚಂದ್ ಯಾದವ್ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಅನಂತ್ ಸಿಂಗ್, ಮಣಿಕಾಂತ್ ಠಾಕೂರ್ ಮತ್ತು ರಂಜೀತ್ ರಾಮ್ ಎಂಬ ಮೂವರು ವ್ಯಕ್ತಿಗಳನ್ನು ಬಂಧಿಸಿದ್ದಾರೆ” ಎಂದು ಹೇಳಿದ್ದಾರೆ.

“ಮರಣೋತ್ತರ ವರದಿ ಮತ್ತು ಪ್ರಾಥಮಿಕ ತನಿಖೆಯು ಯಾದವ್ ಅವರದ್ದು ಕೊಲೆ ಎಂಬುವುದನ್ನು ದೃಢಪಡಿಸಿದೆ” ಎಂದು ತಿಳಿಸಿದ್ದಾರೆ.

“ಮೊಕಾಮಾದಲ್ಲಿ ಜನ ಸುರಾಜ್ ಪಕ್ಷದ ಅಭ್ಯರ್ಥಿ ಪಿಯೂಷ್ ಪ್ರಿಯದರ್ಶಿ ಮತ್ತು ಜೆಡಿಯು ಅಭ್ಯರ್ಥಿ ಅನಂತ್ ಸಿಂಗ್ ಅವರ ಬೆಂಬಲಿಗರ ನಡುವೆ ಘರ್ಷಣೆ ನಡೆದಿತ್ತು. ನಂತರ ಯಾದವ್ ಅವರ ಮೃತದೇಹ ಪತ್ತೆಯಾಗಿದೆ. ಘಟನೆ ಸಂಬಂಧ ಎರಡೂ ಕಡೆಯಿಂದ ಎಫ್‌ಐಆರ್‌ಗಳು ದಾಖಲಾಗಿದ್ದು, ತನಿಖೆಯ ಸಮಯದಲ್ಲಿ, ಘಟನೆ ನಡೆದಾಗ ಸಿಂಗ್ ಮತ್ತು ಅವರ ಸಹಚರರು ಸ್ಥಳದಲ್ಲಿದ್ದರು ಎಂಬುವುದು ಗೊತ್ತಾಗಿದೆ” ಎಂದು ಎಸ್‌ಎಸ್‌ಪಿ ಕಾರ್ತಿಕೇಯ ಶರ್ಮಾ ವಿವರಿಸಿದ್ದಾರೆ.

ಬಿಹಾರ ರಾಜಕೀಯದಲ್ಲಿ ಪ್ರಬಲ ವ್ಯಕ್ತಿ ಎಂದೇ ಗುರುತಿಸಿಕೊಂಡಿರುವ ಸಿಂಗ್‍ನನ್ನು ಇದೀಗ ಪೊಲೀಸರು ವಿಚಾರಣೆಗಾಗಿ ಕಸ್ಟಡಿಯಲ್ಲಿ ಇರಿಸಿಕೊಂಡಿದ್ದಾರೆ. ಭಾನುವಾರ ಮಧ್ಯಾಹ್ನ ನಡೆಯುವ ಪತ್ರಿಕಾಗೋಷ್ಠಿಯಲ್ಲಿ ಹೆಚ್ಚಿನ ವಿವರಗಳನ್ನು ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ಹಲವು ಬಾರಿ ಶಾಸಕರಾಗಿರುವ ಸಿಂಗ್ ಅವರ ಪತ್ನಿ ನೀಲಂ ದೇವಿ ಪ್ರಸ್ತುತ ಮೊಕಾಮಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಅವರ ವಿರುದ್ಧವೂ ಮಾದರಿ ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣ ದಾಖಲಿಸಲಾಗಿದೆ. ದೊಡ್ಡ ತಂಡಗಳಲ್ಲಿ ಅವರು ಓಡಾಡುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ.

ಮತಗಳ್ಳತನದ ವಿರುದ್ಧ ‘ಮಹಾ’ರ‍್ಯಾಲಿ : 4,500 ಮಂದಿ ಎರಡು ಬಾರಿ ಮತ ಚಲಾಯಿಸಿದ್ದಾರೆ ಎಂದ ರಾಜ್ ಠಾಕ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...