Homeಮುಖಪುಟಗಾಝಿಯಾಬಾದ್ : ಮುಸ್ಲಿಂ ಬಾಲಕಿ, ಆಕೆಯ ಕುಟುಂಬದ ಮೇಲೆ ಹಿಂದುತ್ವ ಗುಂಪುಗಳಿಂದ ಹಲ್ಲೆ

ಗಾಝಿಯಾಬಾದ್ : ಮುಸ್ಲಿಂ ಬಾಲಕಿ, ಆಕೆಯ ಕುಟುಂಬದ ಮೇಲೆ ಹಿಂದುತ್ವ ಗುಂಪುಗಳಿಂದ ಹಲ್ಲೆ

- Advertisement -
- Advertisement -

ಉತ್ತರ ಪ್ರದೇಶದ ಗಾಝಿಯಾಬಾದ್‌ನಲ್ಲಿ ಮುಸ್ಲಿಂ ಹುಡುಗಿಯೊಬ್ಬಳು ಗೋಮಾಂಸ ತಿನ್ನುತ್ತೇನೆ ಎಂದು ಹೇಳುತ್ತಿರುವ ವಿಡಿಯೋ ವೈರಲ್ ಆದ ನಂತರ, ಬಜರಂಗದಳ ಮತ್ತು ಹಿಂದೂ ರಕ್ಷಾ ದಳದ ಸದಸ್ಯರ ಗುಂಪೊಂದು ಆಕೆಯ ಕುಟುಂಬದ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದೆ ಎಂದು ವರದಿಯಾಗಿದೆ.

ಹಿಂದುತ್ವವಾದಿ ದಕ್ಷ ಚೌಧರಿ ನೇತೃತ್ವದಲ್ಲಿ ಪ್ರಕಾಶ್ ಸಿಂಗ್, ಅನ್ನು, ಅಕ್ಕು, ಅಮಿತ್ ಮತ್ತು ಅಭಿಷೇಕ್ ಎಂಬವರ ಗುಂಪು ಕಳೆದ ವಾರದ ಕೊನೆಯಲ್ಲಿ ಗಾಝಿಯಾಬಾದ್‌ನ ಗ್ರಾಮೀಣ ಪ್ರದೇಶದ ತುಳಸಿ ನಿಕೇತನ ಪ್ರದೇಶದಲ್ಲಿ ಬಾಲಕಿಯ ಮನೆಗೆ ನುಗ್ಗಿ ಹಲ್ಲೆ ಮಾಡಿದೆ ಎಂದು ಮಕ್ತೂಬ್ ಮೀಡಿಯಾ ವರದಿ ಮಾಡಿದೆ.

ದಾಳಿ ನಡೆಸಿದ ದುಷ್ಕರ್ಮಿಗಳು ‘ಇಸ್ಲಾಮೋಫೋಬಿಕ್’ ಘೋಷಣೆಗಳನ್ನು ಕೂಗಿದ್ದಾರೆ. ಬಾಲಕಿಯ ಮನೆಗೆ ಹಾನಿ ಮಾಡಲು ಯತ್ನಿಸಿದ್ದಾರೆ. ಆಕೆಯ ತಾಯಿಯನ್ನು ಅತ್ಯಂತ ಕೆಟ್ಟದ್ದಾಗಿ ನಿಂದಿಸಿದ್ದಾರೆ ಎಂದು ವರದಿ ವಿವರಿಸಿದೆ.

ದಾಳಿಯಲ್ಲಿ ಭಾಗಿಯಾದ ಪ್ರಮುಖ ಆರೋಪಿ ದಕ್ಷ ಚೌಧರಿ ವಿರುದ್ಧ ಈಗಾಗಲೇ ಜೆಎನ್‌ಯುಎಸ್‌ಯು ಮಾಜಿ ನಾಯಕ ಕನ್ಹಯ್ಯಾ ಕುಮಾರ್‌ಗೆ ಕಪಾಳಮೋಕ್ಷ, ರೋಹಿಂಗ್ಯಾ ಮುಸ್ಲಿಂ ನಿರಾಶ್ರಿತರನ್ನು ಥಳಿಸುವುದು ಮತ್ತು ಗಾಝಿಯಾಬಾದ್‌ನ ಮಸೀದಿಯೊಳಗೆ ಶೂ ಧರಿಸಿ ಕಾನೂನು ಸುವ್ಯವಸ್ಥೆಯನ್ನು ಹಾಳು ಮಾಡಲು ಪ್ರಯತ್ನಿಸುವುದು ಸೇರಿದಂತೆ ಹಲವಾರು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.

ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಮಟ್ಟದ ಫಾಲೋವರ್ಸ್ ಹೊಂದಿರುವ ದಕ್ಷ ಚೌಧರಿ ವಿರುದ್ಧ ಹಲವಾರು ಎಫ್‌ಐಆರ್‌ಗಳು ದಾಖಲಾಗಿದ್ದರೂ, ಆತ ಮುಕ್ತವಾಗಿ ಓಡಾಡುತ್ತಿದ್ದಾನೆ. ಮುಸ್ಲಿಂ ದ್ವೇಷ ಹಬ್ಬಿಸಲು ತಂಡವನ್ನು ಕಟ್ಟಿಕೊಂಡಿದ್ದಾನೆ. ಬಹಿರಂಗವಾಗಿ ಮುಸ್ಲಿಮರ ವಿರುದ್ದ ಹಿಂಸಾಚಾರಕ್ಕೆ ಕರೆ ಕೊಡುತ್ತಿದ್ದಾನೆ ಎಂದು ವರದಿಗಳು ಹೇಳುತ್ತವೆ.

ಬಾಲಕಿ ಮತ್ತು ಆಕೆಯ ಕುಟುಂಬದ ಮೇಲೆ ದಾಳಿ ಮಾಡಿದ ಈ ಘಟನೆ ಸಂಬಂಧ ದಕ್ಷ ಚೌಧರಿ, ಅನ್ನು ಚೌಧರಿ, ಅಕ್ಕು ಪಂಡಿತ್, ಅಮಿತ್ ಠಾಕೂರ್ ಮತ್ತು ಇತರರ ವಿರುದ್ಧ ತೀಲಾ ಮೋಡ್ ಪೊಲೀಸ್ ಠಾಣೆಯಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

“ಅನ್ನು ಮತ್ತು ಅಮಿತ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, ಪ್ರಮುಖ ಆರೋಪಿ ದಕ್ಷ ಮತ್ತು ಇತರರು ತಲೆಮರೆಸಿಕೊಂಡಿದ್ದಾರೆ” ಎಂದು ಗಾಝಿಯಾಬಾದ್‌ನ ಶಾಲಿಮಾರ್ ಗಾರ್ಡನ್‌ನ ಎಸಿಪಿ ಅತುಲ್ ಕುಮಾರ್ ಸಿಂಗ್ ಹೇಳಿದ್ದಾಗಿ ಮಕ್ತೂಬ್‌ ಮೀಡಿಯಾ ವರದಿ ಮಾಡಿದೆ.

ದಕ್ಷ ಚೌಧರಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ ಎಂದು ಎಸಿಪಿ ಹೇಳಿದ್ದಾರೆ. ಆದರೆ, ಆತ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷದ ಪೋಸ್ಟ್‌ಗಳನ್ನು ಹಾಕುವುದನ್ನು ಮುಂದುವರಿಸಿದ್ದಾನೆ. “ಬಾಲಕಿ ಮತ್ತು ಆಕೆಯ ಕುಟುಂಬದ ಮೇಲೆ ಹಲ್ಲೆ ಮಾಡಿರುವ ಬಗ್ಗೆ ತನಗೆ ಯಾವುದೇ ವಿಷಾದವಿಲ್ಲ. ಸನಾತನ ಧರ್ಮಕ್ಕಾಗಿ ಹೋರಾಡುವುದನ್ನು ಮುಂದುವರಿಸುತ್ತೇನೆ” ಎಂಬುವುದಾಗಿ ಹೇಳಿದ್ದಾನೆ ಎಂದು ವರದಿ ತಿಳಿಸಿದೆ.

ಘಟನೆಯ ನಂತರ, ಮುಸ್ಲಿಮರ ವಿರುದ್ಧ ದ್ವೇಷ ಭಾಷಣಗಳಿಗೆ ಹೆಸರುವಾಸಿಯಾದ ಹಿಂದೂ ರಕ್ಷಾ ದಳದ ಮುಖ್ಯಸ್ಥೆ ಪಿಂಕಿ ಚೌಧರಿ ದ್ವೇಷ ಅಭಿಯಾನಕ್ಕೆ ಕೈ ಜೋಡಿಸಿದ್ದಾರೆ.

ಹಲವಾರು ವಿಡಿಯೋಗಳನ್ನು ಹಂಚಿಕೊಂಡಿರುವ ಪಿಂಕಿ, ಮುಸ್ಲಿಂ ಬಾಲಕಿಯ ಬಂಧನಕ್ಕೆ ಮತ್ತು ಆಕೆಯ ಕುಟುಂಬದ ಮನೆಯನ್ನು ಬುಲ್ಡೋಜರ್ ಮೂಲಕ ನೆಲಸಮ ಮಾಡುವಂತೆ ಆಗ್ರಹಿಸಿದ್ದಾರೆ. “ನಾವು ಸನಾತನ ಧರ್ಮಕ್ಕಾಗಿ ಪೂರ್ಣ ಶಕ್ತಿಯಿಂದ ಹೋರಾಡುತ್ತಿದ್ದೇವೆ. ಏನು ಬೇಕಾದರೂ ಆಗಬಹುದು, ನಾವು ಯಾವುದೇ ಮಟ್ಟಕ್ಕೆ ಹೋಗಬಹುದು” ಎಂದು ತನ್ನ ವಿಡಿಯೋ ಒಂದರಲ್ಲಿ ಪಿಂಕಿ ಹೇಳಿದ್ದಾರೆ.

ದಕ್ಷ ಚೌಧರಿ ಸ್ವತಃ ಪೋಸ್ಟ್ ಮಾಡಿರುವ ಮತ್ತೊಂದು ವಿಡಿಯೋದಲ್ಲಿ ಹುಡುಗಿಯನ್ನು ಥಳಿಸಿ ಪೊಲೀಸರ ಸಮ್ಮುಖದಲ್ಲಿ ಕ್ಷಮೆಯಾಚಿಸುವಂತೆ ಒತ್ತಾಯಿಸಿರುವುದು ಇದೆ ಎಂದು ಮಕ್ತೂಬ್ ಮೀಡಿಯಾ ಹೇಳಿದೆ.

ಪಾಟ್ನಾ | ಜನ ಸುರಾಜ್ ಪಕ್ಷದ ಕಾರ್ಯಕರ್ತನ ಹತ್ಯೆ ಪ್ರಕರಣ : ಜೆಡಿಯು ಅಭ್ಯರ್ಥಿಯ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...