Homeಮುಖಪುಟಗಾಝಿಯಾಬಾದ್ : ಮುಸ್ಲಿಂ ಬಾಲಕಿ, ಆಕೆಯ ಕುಟುಂಬದ ಮೇಲೆ ಹಿಂದುತ್ವ ಗುಂಪುಗಳಿಂದ ಹಲ್ಲೆ

ಗಾಝಿಯಾಬಾದ್ : ಮುಸ್ಲಿಂ ಬಾಲಕಿ, ಆಕೆಯ ಕುಟುಂಬದ ಮೇಲೆ ಹಿಂದುತ್ವ ಗುಂಪುಗಳಿಂದ ಹಲ್ಲೆ

- Advertisement -
- Advertisement -

ಉತ್ತರ ಪ್ರದೇಶದ ಗಾಝಿಯಾಬಾದ್‌ನಲ್ಲಿ ಮುಸ್ಲಿಂ ಹುಡುಗಿಯೊಬ್ಬಳು ಗೋಮಾಂಸ ತಿನ್ನುತ್ತೇನೆ ಎಂದು ಹೇಳುತ್ತಿರುವ ವಿಡಿಯೋ ವೈರಲ್ ಆದ ನಂತರ, ಬಜರಂಗದಳ ಮತ್ತು ಹಿಂದೂ ರಕ್ಷಾ ದಳದ ಸದಸ್ಯರ ಗುಂಪೊಂದು ಆಕೆಯ ಕುಟುಂಬದ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದೆ ಎಂದು ವರದಿಯಾಗಿದೆ.

ಹಿಂದುತ್ವವಾದಿ ದಕ್ಷ ಚೌಧರಿ ನೇತೃತ್ವದಲ್ಲಿ ಪ್ರಕಾಶ್ ಸಿಂಗ್, ಅನ್ನು, ಅಕ್ಕು, ಅಮಿತ್ ಮತ್ತು ಅಭಿಷೇಕ್ ಎಂಬವರ ಗುಂಪು ಕಳೆದ ವಾರದ ಕೊನೆಯಲ್ಲಿ ಗಾಝಿಯಾಬಾದ್‌ನ ಗ್ರಾಮೀಣ ಪ್ರದೇಶದ ತುಳಸಿ ನಿಕೇತನ ಪ್ರದೇಶದಲ್ಲಿ ಬಾಲಕಿಯ ಮನೆಗೆ ನುಗ್ಗಿ ಹಲ್ಲೆ ಮಾಡಿದೆ ಎಂದು ಮಕ್ತೂಬ್ ಮೀಡಿಯಾ ವರದಿ ಮಾಡಿದೆ.

ದಾಳಿ ನಡೆಸಿದ ದುಷ್ಕರ್ಮಿಗಳು ‘ಇಸ್ಲಾಮೋಫೋಬಿಕ್’ ಘೋಷಣೆಗಳನ್ನು ಕೂಗಿದ್ದಾರೆ. ಬಾಲಕಿಯ ಮನೆಗೆ ಹಾನಿ ಮಾಡಲು ಯತ್ನಿಸಿದ್ದಾರೆ. ಆಕೆಯ ತಾಯಿಯನ್ನು ಅತ್ಯಂತ ಕೆಟ್ಟದ್ದಾಗಿ ನಿಂದಿಸಿದ್ದಾರೆ ಎಂದು ವರದಿ ವಿವರಿಸಿದೆ.

ದಾಳಿಯಲ್ಲಿ ಭಾಗಿಯಾದ ಪ್ರಮುಖ ಆರೋಪಿ ದಕ್ಷ ಚೌಧರಿ ವಿರುದ್ಧ ಈಗಾಗಲೇ ಜೆಎನ್‌ಯುಎಸ್‌ಯು ಮಾಜಿ ನಾಯಕ ಕನ್ಹಯ್ಯಾ ಕುಮಾರ್‌ಗೆ ಕಪಾಳಮೋಕ್ಷ, ರೋಹಿಂಗ್ಯಾ ಮುಸ್ಲಿಂ ನಿರಾಶ್ರಿತರನ್ನು ಥಳಿಸುವುದು ಮತ್ತು ಗಾಝಿಯಾಬಾದ್‌ನ ಮಸೀದಿಯೊಳಗೆ ಶೂ ಧರಿಸಿ ಕಾನೂನು ಸುವ್ಯವಸ್ಥೆಯನ್ನು ಹಾಳು ಮಾಡಲು ಪ್ರಯತ್ನಿಸುವುದು ಸೇರಿದಂತೆ ಹಲವಾರು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.

ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಮಟ್ಟದ ಫಾಲೋವರ್ಸ್ ಹೊಂದಿರುವ ದಕ್ಷ ಚೌಧರಿ ವಿರುದ್ಧ ಹಲವಾರು ಎಫ್‌ಐಆರ್‌ಗಳು ದಾಖಲಾಗಿದ್ದರೂ, ಆತ ಮುಕ್ತವಾಗಿ ಓಡಾಡುತ್ತಿದ್ದಾನೆ. ಮುಸ್ಲಿಂ ದ್ವೇಷ ಹಬ್ಬಿಸಲು ತಂಡವನ್ನು ಕಟ್ಟಿಕೊಂಡಿದ್ದಾನೆ. ಬಹಿರಂಗವಾಗಿ ಮುಸ್ಲಿಮರ ವಿರುದ್ದ ಹಿಂಸಾಚಾರಕ್ಕೆ ಕರೆ ಕೊಡುತ್ತಿದ್ದಾನೆ ಎಂದು ವರದಿಗಳು ಹೇಳುತ್ತವೆ.

ಬಾಲಕಿ ಮತ್ತು ಆಕೆಯ ಕುಟುಂಬದ ಮೇಲೆ ದಾಳಿ ಮಾಡಿದ ಈ ಘಟನೆ ಸಂಬಂಧ ದಕ್ಷ ಚೌಧರಿ, ಅನ್ನು ಚೌಧರಿ, ಅಕ್ಕು ಪಂಡಿತ್, ಅಮಿತ್ ಠಾಕೂರ್ ಮತ್ತು ಇತರರ ವಿರುದ್ಧ ತೀಲಾ ಮೋಡ್ ಪೊಲೀಸ್ ಠಾಣೆಯಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

“ಅನ್ನು ಮತ್ತು ಅಮಿತ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, ಪ್ರಮುಖ ಆರೋಪಿ ದಕ್ಷ ಮತ್ತು ಇತರರು ತಲೆಮರೆಸಿಕೊಂಡಿದ್ದಾರೆ” ಎಂದು ಗಾಝಿಯಾಬಾದ್‌ನ ಶಾಲಿಮಾರ್ ಗಾರ್ಡನ್‌ನ ಎಸಿಪಿ ಅತುಲ್ ಕುಮಾರ್ ಸಿಂಗ್ ಹೇಳಿದ್ದಾಗಿ ಮಕ್ತೂಬ್‌ ಮೀಡಿಯಾ ವರದಿ ಮಾಡಿದೆ.

ದಕ್ಷ ಚೌಧರಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ ಎಂದು ಎಸಿಪಿ ಹೇಳಿದ್ದಾರೆ. ಆದರೆ, ಆತ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷದ ಪೋಸ್ಟ್‌ಗಳನ್ನು ಹಾಕುವುದನ್ನು ಮುಂದುವರಿಸಿದ್ದಾನೆ. “ಬಾಲಕಿ ಮತ್ತು ಆಕೆಯ ಕುಟುಂಬದ ಮೇಲೆ ಹಲ್ಲೆ ಮಾಡಿರುವ ಬಗ್ಗೆ ತನಗೆ ಯಾವುದೇ ವಿಷಾದವಿಲ್ಲ. ಸನಾತನ ಧರ್ಮಕ್ಕಾಗಿ ಹೋರಾಡುವುದನ್ನು ಮುಂದುವರಿಸುತ್ತೇನೆ” ಎಂಬುವುದಾಗಿ ಹೇಳಿದ್ದಾನೆ ಎಂದು ವರದಿ ತಿಳಿಸಿದೆ.

ಘಟನೆಯ ನಂತರ, ಮುಸ್ಲಿಮರ ವಿರುದ್ಧ ದ್ವೇಷ ಭಾಷಣಗಳಿಗೆ ಹೆಸರುವಾಸಿಯಾದ ಹಿಂದೂ ರಕ್ಷಾ ದಳದ ಮುಖ್ಯಸ್ಥೆ ಪಿಂಕಿ ಚೌಧರಿ ದ್ವೇಷ ಅಭಿಯಾನಕ್ಕೆ ಕೈ ಜೋಡಿಸಿದ್ದಾರೆ.

ಹಲವಾರು ವಿಡಿಯೋಗಳನ್ನು ಹಂಚಿಕೊಂಡಿರುವ ಪಿಂಕಿ, ಮುಸ್ಲಿಂ ಬಾಲಕಿಯ ಬಂಧನಕ್ಕೆ ಮತ್ತು ಆಕೆಯ ಕುಟುಂಬದ ಮನೆಯನ್ನು ಬುಲ್ಡೋಜರ್ ಮೂಲಕ ನೆಲಸಮ ಮಾಡುವಂತೆ ಆಗ್ರಹಿಸಿದ್ದಾರೆ. “ನಾವು ಸನಾತನ ಧರ್ಮಕ್ಕಾಗಿ ಪೂರ್ಣ ಶಕ್ತಿಯಿಂದ ಹೋರಾಡುತ್ತಿದ್ದೇವೆ. ಏನು ಬೇಕಾದರೂ ಆಗಬಹುದು, ನಾವು ಯಾವುದೇ ಮಟ್ಟಕ್ಕೆ ಹೋಗಬಹುದು” ಎಂದು ತನ್ನ ವಿಡಿಯೋ ಒಂದರಲ್ಲಿ ಪಿಂಕಿ ಹೇಳಿದ್ದಾರೆ.

ದಕ್ಷ ಚೌಧರಿ ಸ್ವತಃ ಪೋಸ್ಟ್ ಮಾಡಿರುವ ಮತ್ತೊಂದು ವಿಡಿಯೋದಲ್ಲಿ ಹುಡುಗಿಯನ್ನು ಥಳಿಸಿ ಪೊಲೀಸರ ಸಮ್ಮುಖದಲ್ಲಿ ಕ್ಷಮೆಯಾಚಿಸುವಂತೆ ಒತ್ತಾಯಿಸಿರುವುದು ಇದೆ ಎಂದು ಮಕ್ತೂಬ್ ಮೀಡಿಯಾ ಹೇಳಿದೆ.

ಪಾಟ್ನಾ | ಜನ ಸುರಾಜ್ ಪಕ್ಷದ ಕಾರ್ಯಕರ್ತನ ಹತ್ಯೆ ಪ್ರಕರಣ : ಜೆಡಿಯು ಅಭ್ಯರ್ಥಿಯ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕರ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು ನಡೆದಿರುವ (ಮಾ.18) ನಡೆದಿದೆ ಎನ್ನಲಾದ ಈ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...