Homeಮುಖಪುಟಭೀಕರ ಅಪಘಾತದಲ್ಲಿ ಮೂವರು ಸಹೋದರಿಯರು ಸಾವು : ದುರಂತ ಸ್ಥಳದಲ್ಲಿ ಹೆತ್ತವರ ಆಕ್ರಂದನ

ಭೀಕರ ಅಪಘಾತದಲ್ಲಿ ಮೂವರು ಸಹೋದರಿಯರು ಸಾವು : ದುರಂತ ಸ್ಥಳದಲ್ಲಿ ಹೆತ್ತವರ ಆಕ್ರಂದನ

- Advertisement -
- Advertisement -

“ದಯವಿಟ್ಟು ನಮ್ಮ ಮಕ್ಕಳನ್ನು ವಾಪಸ್ ತಂದುಕೊಡಿ” ಎಂದು ತೆಲಂಗಾಣ ಅಪಘಾತದ ಸ್ಥಳದಲ್ಲಿ ನೆರೆದಿದ್ದ ಸಾವಿರಾರು ಜನರ ಮುಂದೆ ಮೂವರು ಹೆಣ್ಣು ಮಕ್ಕಳನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಹೃದಯ ವಿದ್ರಾವಕವಾಗಿತ್ತು ಎಂದು ವರದಿಗಳು ಹೇಳಿವೆ.

ಇಂದು (ನ.3, ಸೋಮವಾರ) ಬೆಳಿಗ್ಗೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾ ಮಂಡಲದ ಮಿರ್ಜಗೂಡ ಬಳಿ ಹೈದರಾಬಾದ್-ಬಿಜಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಲ್ಲಿಕಲ್ಲುಗಳನ್ನು ತುಂಬಿದ್ದ ಲಾರಿ ಮತ್ತು ಸಾರಿಗೆ ಸಂಸ್ಥೆಯ ಬಸ್‌ ನಡುವೆ ಭೀಕರ ಅಪಘಾತ ಸಂಭವಿಸಿದೆ.

ಈ ದುರಂತದಲ್ಲಿ ಸಾವನ್ನಪ್ಪಿದ 20 ಜನರಲ್ಲಿ ತನುಷಾ, ಸಾಯಿಪ್ರಿಯಾ ಮತ್ತು ನಂದಿನಿ ಎಂಬ ಮೂವರು ಸಹೋದರಿಯೂ ಸೇರಿದ್ದಾರೆ.

ಇವರ ತಾಯಿ ಅಂಬಿಕಾರ ಘಟನಾ ಸ್ಥಳದಲ್ಲಿ ಅರೆ ಪ್ರಜ್ಞಾವಸ್ಥೆಯಲ್ಲಿ ಬಿದ್ದಿದ್ದರು. “ಓ ದೇವರೆ..ನನ್ನ ಮಕ್ಕಳನ್ನು ವಾಪಸ್ ತಂದು ಕೊಡುವವರು ಯಾರು? ಅವರೇನು ತಪ್ಪು ಮಾಡಿದ್ದರು?” ಎಂಬ ತಾಯಿಯ ಆಕ್ರಂದನ ನೆರೆದಿದ್ದವರ ಕಣ್ಣಾಲಿಗಳನ್ನು ಒದ್ದೆಯಾಗಿಸಿತು ಎಂದು ವರದಿಗಳು ತಿಳಿಸಿವೆ.

ಮೂವರು ಸಹೋದರಿಯರು ಶುಕ್ರವಾರ (ಅ.31) ಹೈದರಾಬಾದ್‌ಗೆ ಹಿಂತಿರುಗಬೇಕಿತ್ತು, ಆದರೆ, ತಾಯಿ ಅಂಬಿಕಾ ವಾರಾಂತ್ಯದಲ್ಲಿ ಅವರನ್ನು ಮನೆಯಲ್ಲೇ ಇರಲು ಕೇಳಿಕೊಂಡಿದ್ದರು. ತನ್ನ ಹೆಣ್ಣುಮಕ್ಕಳೊಂದಿಗೆ ಕೆಲವು ದಿನಗಳನ್ನು ಕಳೆಯಬೇಕೆಂಬ ಆಸೆ ಆ ತಾಯಿಯದ್ದಾಗಿತ್ತು.

ಇಂದು ಬೆಳಿಗ್ಗೆ ಮಕ್ಕಳನ್ನು ಹೈದರಾಬಾದ್ ರೈಲು ಹತ್ತಿಸಲು ತಂದೆ ಯೆಲ್ಲಯ್ಯ ಸ್ಥಳೀಯ ರೈಲು ನಿಲ್ದಾಣಕ್ಕೆ ಕರೆದೊಯ್ದಿದ್ದರು. ಆದರೆ, ಅವರಿಗೆ ರೈಲು ತಪ್ಪಿತ್ತು. ಹಾಗಾಗಿ, ಮೂವರು ಸಹೋದರಿಯರು ಹೈದರಾಬಾದ್ ಬಸ್‌ ಹತ್ತಿದ್ದರು.

ಮಕ್ಕಳನ್ನು ಬಸ್‌ ಹತ್ತಿಸಿ ಯಲ್ಲಯ್ಯ ಮನೆಗೆ ಹಿಂದಿರುಗಿದ ಕೆಲವೇ ಹೊತ್ತಿನಲ್ಲಿ ಮೂವರ ಸಾವಿನ ಸುದ್ದಿ ಬರ ಸಿಡಿಲು ಬಡಿದಂತೆ ಬಂದಿದೆ. ಜೀವಂತ ಇದ್ದಾಗ ಒಬ್ಬರಿಗೊಬ್ಬರು ಬಹಳ ಅನ್ಯೋನ್ಯತೆಯಿಂದ ಇದ್ದ ಮೂವರು ಸಹೋದರಿಯರು ಸಾವಲ್ಲೂ ಒಂದಾದರು ಎಂದು ವರದಿಗಳು ಹೇಳಿವೆ.

ಮೃತ ಮೂವರು ಸಹೋದರಿಯರ ಊರು ರಂಗಾರೆಡ್ಡಿ ಜಿಲ್ಲೆಯ ಗಾಂಧಿನಗರದ ವಡ್ಡೇರಗಲ್ಲಿ. ಇವರು ಹೈದರಾಬಾದ್‌ನಲ್ಲಿ ಓದುತ್ತಿದ್ದರು. ತನುಷಾ ಎಂಬಿಎ ವ್ಯಾಸಂಗ ಮಾಡುತ್ತಿದ್ದರೆ, ಆಕೆಯ ಸಹೋದರಿ ಸಾಯಿ ಪ್ರಿಯಾ ಪದವಿ ಕೋರ್ಸ್‌ನ ಅಂತಿಮ ವರ್ಷದಲ್ಲಿದ್ದರು. ಇನ್ನೊಬ್ಬರು ನಂದಿನಿ ಪದವಿ ಕೋರ್ಸ್‌ನ ಮೊದಲ ವರ್ಷದಲ್ಲಿದ್ದರು. ಇವರೆಲ್ಲರ ಹಿರಿಯ ಸಹೋದರಿ ಅನುಷಾ ಅವರ ಮದುವೆ ಕೇವಲ 20 ದಿನಗಳ ಹಿಂದೆ, ಅಂದರೆ ಅಕ್ಟೋಬರ್ 17 ರಂದು ನಡೆದಿತ್ತು. ಆ ಮದುವೆ ನಿಮಿತ್ತ ಮೂವರು ಊರಿಗೆ ಹೋಗಿದ್ದರು.

ಬಸ್ ಅಪಘಾತದಲ್ಲಿ ಸಾವನ್ನಪ್ಪಿದ ಇನೊಬ್ಬರು ಹೆಣ್ಣು ಮಗಳು ಅಖಿಲಾ ರೆಡ್ಡಿಯ ತಾಯಿ ಕೂಡ ಘಟನಾ ಸ್ಥಳದಲ್ಲಿ ಆಕ್ರಂದನ ವ್ಯಕ್ತಪಡಿಸುತ್ತಿದ್ದರು. “ರಸ್ತೆ ಪ್ರಯಾಣದ ಬಗ್ಗೆ ನನಗೆ ಸದಾ ಭಯ ಇತ್ತು. ಇವತ್ತು ನನ್ನ ಮಗಳನ್ನು ಕಳೆದುಕೊಳ್ಳುವ ಮೂಲಕ ನನ್ನ ಆತಂಕ ನಿಜವಾಗಿದೆ” ಎಂದು ಅಖಿಲಾ ಅವರ ತಾಯಿ ಸುದ್ದಿಗಾರರಿಗೆ ನೋವಿನಲ್ಲಿ ಹೇಳಿದ್ದಾರೆ.

ಅಖಿಲಾ ರೆಡ್ಡಿ ಯಲಾಲ್ ಮಂಡಲದ ಲಕ್ಷ್ಮೀನಾರಾಯಣ ಪುರ ಗ್ರಾಮದವರು. ಹೈದರಾಬಾದ್‌ನಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿದ್ದರು.

ದುರಂತ ಘಟನೆಯಲ್ಲಿ ತಾಯಿ ಮತ್ತು ಆಕೆಯ ಮೂರು ತಿಂಗಳ ಕಂದಮ್ಮ ಸಾವನ್ನಪ್ಪಿರುವ ಮತ್ತೊಂದು ಹೃದಯ ವಿದ್ರಾವಕ ಫೋಟೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಜಲ್ಲಿಕಲ್ಲು ತುಂಬಿಕೊಂಡು ಹೈದರಾಬಾದ್ ಕಡೆಯಿಂದ ಬಿಜಾಪುರ ಕಡೆಗೆ ಹೋಗುತ್ತಿದ್ದ ಲಾರಿಯೊಂದು ತಾಂಡೂರ್‌ನಿಂದ ಹೈದರಾಬಾದ್ ಕಡೆಗೆ ತೆರಳುತ್ತಿದ್ದ ತೆಲಂಗಾಣ ಸಾರಿಗೆ ಸಂಸ್ಥೆಯ (ಟಿಜಿಎಸ್‌ಆರ್‌ಟಿಸಿ) ಬಸ್‌ಗೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಚೆವೆಲ್ಲಾ ಮಂಡಲದ ಮಿರ್ಜಗೂಡ ಬಳಿ ಹೈದರಾಬಾದ್-ಬಿಜಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ.

ವಾರದ ಹಿಂದೆ ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್‌ ಕರ್ನೂಲ್ ಜಿಲ್ಲೆಯಲ್ಲಿ ಬೆಂಕಿಗಾಹುತಿಯಾಗಿ 21 ಜನರು ಸಜೀವ ದಹನವಾಗಿದ್ದರು. ಹಲವರು ಗಾಯಗೊಂಡಿದ್ದರು. ಆ ಘಟನೆ ಕಣ್ಣಿಂದ ಮಾಸುವ ಮುನ್ನವೇ ತೆಲುಗು ನಾಡಿನಲ್ಲಿ ಮತ್ತೊಂದು ಭೀಕರ ದುರಂತ ಸಂಭವಿಸಿದೆ.

ತೆಲಂಗಾಣದ ರಂಗಾರೆಡ್ಡಿಯಲ್ಲಿ ಭೀಕರ ರಸ್ತೆ ಅಪಘಾತ : 20 ಜನರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...