Homeಮುಖಪುಟಭೀಕರ ಅಪಘಾತದಲ್ಲಿ ಮೂವರು ಸಹೋದರಿಯರು ಸಾವು : ದುರಂತ ಸ್ಥಳದಲ್ಲಿ ಹೆತ್ತವರ ಆಕ್ರಂದನ

ಭೀಕರ ಅಪಘಾತದಲ್ಲಿ ಮೂವರು ಸಹೋದರಿಯರು ಸಾವು : ದುರಂತ ಸ್ಥಳದಲ್ಲಿ ಹೆತ್ತವರ ಆಕ್ರಂದನ

- Advertisement -
- Advertisement -

“ದಯವಿಟ್ಟು ನಮ್ಮ ಮಕ್ಕಳನ್ನು ವಾಪಸ್ ತಂದುಕೊಡಿ” ಎಂದು ತೆಲಂಗಾಣ ಅಪಘಾತದ ಸ್ಥಳದಲ್ಲಿ ನೆರೆದಿದ್ದ ಸಾವಿರಾರು ಜನರ ಮುಂದೆ ಮೂವರು ಹೆಣ್ಣು ಮಕ್ಕಳನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಹೃದಯ ವಿದ್ರಾವಕವಾಗಿತ್ತು ಎಂದು ವರದಿಗಳು ಹೇಳಿವೆ.

ಇಂದು (ನ.3, ಸೋಮವಾರ) ಬೆಳಿಗ್ಗೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾ ಮಂಡಲದ ಮಿರ್ಜಗೂಡ ಬಳಿ ಹೈದರಾಬಾದ್-ಬಿಜಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಲ್ಲಿಕಲ್ಲುಗಳನ್ನು ತುಂಬಿದ್ದ ಲಾರಿ ಮತ್ತು ಸಾರಿಗೆ ಸಂಸ್ಥೆಯ ಬಸ್‌ ನಡುವೆ ಭೀಕರ ಅಪಘಾತ ಸಂಭವಿಸಿದೆ.

ಈ ದುರಂತದಲ್ಲಿ ಸಾವನ್ನಪ್ಪಿದ 20 ಜನರಲ್ಲಿ ತನುಷಾ, ಸಾಯಿಪ್ರಿಯಾ ಮತ್ತು ನಂದಿನಿ ಎಂಬ ಮೂವರು ಸಹೋದರಿಯೂ ಸೇರಿದ್ದಾರೆ.

ಇವರ ತಾಯಿ ಅಂಬಿಕಾರ ಘಟನಾ ಸ್ಥಳದಲ್ಲಿ ಅರೆ ಪ್ರಜ್ಞಾವಸ್ಥೆಯಲ್ಲಿ ಬಿದ್ದಿದ್ದರು. “ಓ ದೇವರೆ..ನನ್ನ ಮಕ್ಕಳನ್ನು ವಾಪಸ್ ತಂದು ಕೊಡುವವರು ಯಾರು? ಅವರೇನು ತಪ್ಪು ಮಾಡಿದ್ದರು?” ಎಂಬ ತಾಯಿಯ ಆಕ್ರಂದನ ನೆರೆದಿದ್ದವರ ಕಣ್ಣಾಲಿಗಳನ್ನು ಒದ್ದೆಯಾಗಿಸಿತು ಎಂದು ವರದಿಗಳು ತಿಳಿಸಿವೆ.

ಮೂವರು ಸಹೋದರಿಯರು ಶುಕ್ರವಾರ (ಅ.31) ಹೈದರಾಬಾದ್‌ಗೆ ಹಿಂತಿರುಗಬೇಕಿತ್ತು, ಆದರೆ, ತಾಯಿ ಅಂಬಿಕಾ ವಾರಾಂತ್ಯದಲ್ಲಿ ಅವರನ್ನು ಮನೆಯಲ್ಲೇ ಇರಲು ಕೇಳಿಕೊಂಡಿದ್ದರು. ತನ್ನ ಹೆಣ್ಣುಮಕ್ಕಳೊಂದಿಗೆ ಕೆಲವು ದಿನಗಳನ್ನು ಕಳೆಯಬೇಕೆಂಬ ಆಸೆ ಆ ತಾಯಿಯದ್ದಾಗಿತ್ತು.

ಇಂದು ಬೆಳಿಗ್ಗೆ ಮಕ್ಕಳನ್ನು ಹೈದರಾಬಾದ್ ರೈಲು ಹತ್ತಿಸಲು ತಂದೆ ಯೆಲ್ಲಯ್ಯ ಸ್ಥಳೀಯ ರೈಲು ನಿಲ್ದಾಣಕ್ಕೆ ಕರೆದೊಯ್ದಿದ್ದರು. ಆದರೆ, ಅವರಿಗೆ ರೈಲು ತಪ್ಪಿತ್ತು. ಹಾಗಾಗಿ, ಮೂವರು ಸಹೋದರಿಯರು ಹೈದರಾಬಾದ್ ಬಸ್‌ ಹತ್ತಿದ್ದರು.

ಮಕ್ಕಳನ್ನು ಬಸ್‌ ಹತ್ತಿಸಿ ಯಲ್ಲಯ್ಯ ಮನೆಗೆ ಹಿಂದಿರುಗಿದ ಕೆಲವೇ ಹೊತ್ತಿನಲ್ಲಿ ಮೂವರ ಸಾವಿನ ಸುದ್ದಿ ಬರ ಸಿಡಿಲು ಬಡಿದಂತೆ ಬಂದಿದೆ. ಜೀವಂತ ಇದ್ದಾಗ ಒಬ್ಬರಿಗೊಬ್ಬರು ಬಹಳ ಅನ್ಯೋನ್ಯತೆಯಿಂದ ಇದ್ದ ಮೂವರು ಸಹೋದರಿಯರು ಸಾವಲ್ಲೂ ಒಂದಾದರು ಎಂದು ವರದಿಗಳು ಹೇಳಿವೆ.

ಮೃತ ಮೂವರು ಸಹೋದರಿಯರ ಊರು ರಂಗಾರೆಡ್ಡಿ ಜಿಲ್ಲೆಯ ಗಾಂಧಿನಗರದ ವಡ್ಡೇರಗಲ್ಲಿ. ಇವರು ಹೈದರಾಬಾದ್‌ನಲ್ಲಿ ಓದುತ್ತಿದ್ದರು. ತನುಷಾ ಎಂಬಿಎ ವ್ಯಾಸಂಗ ಮಾಡುತ್ತಿದ್ದರೆ, ಆಕೆಯ ಸಹೋದರಿ ಸಾಯಿ ಪ್ರಿಯಾ ಪದವಿ ಕೋರ್ಸ್‌ನ ಅಂತಿಮ ವರ್ಷದಲ್ಲಿದ್ದರು. ಇನ್ನೊಬ್ಬರು ನಂದಿನಿ ಪದವಿ ಕೋರ್ಸ್‌ನ ಮೊದಲ ವರ್ಷದಲ್ಲಿದ್ದರು. ಇವರೆಲ್ಲರ ಹಿರಿಯ ಸಹೋದರಿ ಅನುಷಾ ಅವರ ಮದುವೆ ಕೇವಲ 20 ದಿನಗಳ ಹಿಂದೆ, ಅಂದರೆ ಅಕ್ಟೋಬರ್ 17 ರಂದು ನಡೆದಿತ್ತು. ಆ ಮದುವೆ ನಿಮಿತ್ತ ಮೂವರು ಊರಿಗೆ ಹೋಗಿದ್ದರು.

ಬಸ್ ಅಪಘಾತದಲ್ಲಿ ಸಾವನ್ನಪ್ಪಿದ ಇನೊಬ್ಬರು ಹೆಣ್ಣು ಮಗಳು ಅಖಿಲಾ ರೆಡ್ಡಿಯ ತಾಯಿ ಕೂಡ ಘಟನಾ ಸ್ಥಳದಲ್ಲಿ ಆಕ್ರಂದನ ವ್ಯಕ್ತಪಡಿಸುತ್ತಿದ್ದರು. “ರಸ್ತೆ ಪ್ರಯಾಣದ ಬಗ್ಗೆ ನನಗೆ ಸದಾ ಭಯ ಇತ್ತು. ಇವತ್ತು ನನ್ನ ಮಗಳನ್ನು ಕಳೆದುಕೊಳ್ಳುವ ಮೂಲಕ ನನ್ನ ಆತಂಕ ನಿಜವಾಗಿದೆ” ಎಂದು ಅಖಿಲಾ ಅವರ ತಾಯಿ ಸುದ್ದಿಗಾರರಿಗೆ ನೋವಿನಲ್ಲಿ ಹೇಳಿದ್ದಾರೆ.

ಅಖಿಲಾ ರೆಡ್ಡಿ ಯಲಾಲ್ ಮಂಡಲದ ಲಕ್ಷ್ಮೀನಾರಾಯಣ ಪುರ ಗ್ರಾಮದವರು. ಹೈದರಾಬಾದ್‌ನಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿದ್ದರು.

ದುರಂತ ಘಟನೆಯಲ್ಲಿ ತಾಯಿ ಮತ್ತು ಆಕೆಯ ಮೂರು ತಿಂಗಳ ಕಂದಮ್ಮ ಸಾವನ್ನಪ್ಪಿರುವ ಮತ್ತೊಂದು ಹೃದಯ ವಿದ್ರಾವಕ ಫೋಟೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಜಲ್ಲಿಕಲ್ಲು ತುಂಬಿಕೊಂಡು ಹೈದರಾಬಾದ್ ಕಡೆಯಿಂದ ಬಿಜಾಪುರ ಕಡೆಗೆ ಹೋಗುತ್ತಿದ್ದ ಲಾರಿಯೊಂದು ತಾಂಡೂರ್‌ನಿಂದ ಹೈದರಾಬಾದ್ ಕಡೆಗೆ ತೆರಳುತ್ತಿದ್ದ ತೆಲಂಗಾಣ ಸಾರಿಗೆ ಸಂಸ್ಥೆಯ (ಟಿಜಿಎಸ್‌ಆರ್‌ಟಿಸಿ) ಬಸ್‌ಗೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಚೆವೆಲ್ಲಾ ಮಂಡಲದ ಮಿರ್ಜಗೂಡ ಬಳಿ ಹೈದರಾಬಾದ್-ಬಿಜಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ.

ವಾರದ ಹಿಂದೆ ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್‌ ಕರ್ನೂಲ್ ಜಿಲ್ಲೆಯಲ್ಲಿ ಬೆಂಕಿಗಾಹುತಿಯಾಗಿ 21 ಜನರು ಸಜೀವ ದಹನವಾಗಿದ್ದರು. ಹಲವರು ಗಾಯಗೊಂಡಿದ್ದರು. ಆ ಘಟನೆ ಕಣ್ಣಿಂದ ಮಾಸುವ ಮುನ್ನವೇ ತೆಲುಗು ನಾಡಿನಲ್ಲಿ ಮತ್ತೊಂದು ಭೀಕರ ದುರಂತ ಸಂಭವಿಸಿದೆ.

ತೆಲಂಗಾಣದ ರಂಗಾರೆಡ್ಡಿಯಲ್ಲಿ ಭೀಕರ ರಸ್ತೆ ಅಪಘಾತ : 20 ಜನರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...