Homeಮುಖಪುಟತೀವ್ರ ವಿರೋಧದ ನಡುವೆಯೂ ಎರಡನೇ ಹಂತದ ಎಸ್‌ಐಆರ್‌ ಪ್ರಾರಂಭಿಸಿದ ಚುನಾವಣಾ ಆಯೋಗ

ತೀವ್ರ ವಿರೋಧದ ನಡುವೆಯೂ ಎರಡನೇ ಹಂತದ ಎಸ್‌ಐಆರ್‌ ಪ್ರಾರಂಭಿಸಿದ ಚುನಾವಣಾ ಆಯೋಗ

9 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಇಂದಿನಿಂದ ಮನೆ ಮನೆ ಗಣತಿ

- Advertisement -
- Advertisement -

ತಮಿಳುನಾಡಿನ ಆಡಳಿತರೂಢ ಡಿಎಂಕೆ ಸೇರಿದಂತೆ ವಿವಿಧ ಪಕ್ಷಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ನಡುವೆಯೇ ಮಂಗಳವಾರದಿಂದ (ನ.4, 2025) ಎರಡನೇ ಹಂತದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಪ್ರಾರಂಭಿಸಲು ಭಾರತೀಯ ಚುನಾವಣಾ ಆಯೋಗ (ಇಸಿಐ) ಮುಂದಾಗಿದೆ.

ವರದಿಗಳ ಪ್ರಕಾರ, 9 ರಾಜ್ಯಗಳಾದ ಛತ್ತೀಸ್‌ಗಢ, ಗೋವಾ, ಗುಜರಾತ್, ಕೇರಳ, ಮಧ್ಯಪ್ರದೇಶ, ರಾಜಸ್ಥಾನ, ತಮಿಳುನಾಡು, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳ ಹಾಗೂ 3 ಕೇಂದ್ರಾಡಳಿತ ಪ್ರದೇಶಗಳಾದ ಅಂಡಮಾನ್-ನಿಕೋಬಾರ್ ದ್ವೀಪಗಳು, ಲಕ್ಷದ್ವೀಪ ಮತ್ತು ಪುದುಚ್ಚೇರಿಗಳಲ್ಲಿ ಇಂದಿನಿಂದ ಮನೆ ಮನೆ ಗಣತಿ ಪ್ರಾರಂಭಗೊಳ್ಳಲಿದೆ.

ಸುಮಾರು 51 ಕೋಟಿ ಮತದಾರರು ಈ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಒಳಗೊಳ್ಳಲಿದ್ದಾರೆ. ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಕರಡು ಪಟ್ಟಿಯನ್ನು ಡಿಸೆಂಬರ್ 9, 2025ರಂದು ಮತ್ತು ಅಂತಿಮ ಪಟ್ಟಿಯನ್ನು ಫೆಬ್ರವರಿ 7, 2026 ರಂದು ಪ್ರಕಟಿಸಲು ಚುನಾವಣಾ ಆಯೋಗ ನಿರ್ಧರಿಸಿದೆ.

ತಮಿಳುನಾಡು, ಕೇರಳ ಮತ್ತು ಪಶ್ಚಿಮ ಬಂಗಾಳದ ಆಡಳಿತ ಪಕ್ಷಗಳು ಮತ್ತು ಅದರ ಮಿತ್ರ ಪಕ್ಷಗಳು ಎಸ್‌ಐಆರ್‌ ಅನ್ನು ತೀವ್ರವಾಗಿ ವಿರೋಧಿಸಿವೆ. ತಮಿಳುನಾಡಿನ ಆಡಳಿತರೂಢ ಡಿಎಂಕೆ ಸಿಎಂ ಎಂ.ಕೆ ಸ್ಟಾಲಿನ್ ನೇತೃತ್ವದಲ್ಲಿ ನವೆಂಬರ್ 2,2025ರಂದು ಎಸ್‌ಐಆರ್ ವಿರುದ್ದ ಸರ್ವಪಕ್ಷ ಸಭೆ ನಡೆಸಿದೆ. ಈ ಸಭೆಯಲ್ಲಿ 49 ಪಕ್ಷಗಳು ಭಾಗವಹಿಸಿತ್ತು.

ಡಿಎಂಕೆ ಈಗಾಗಲೇ ಎಸ್‌ಐಆರ್ ವಿರುದ್ದ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಕೇರಳ ಮತ್ತು ಪಶ್ಚಿಮ ಬಂಗಾಳದ ಆಡಳಿತ ಪಕ್ಷಗಳು ಕೋರ್ಟ್ ಮೊರೆ ಹೋಗಲು ನಿರ್ಧರಿಸಿವೆ.

ಗಮನಾರ್ಹವಾಗಿ, ತಮಿಳುನಾಡು, ಪುದುಚೇರಿ, ಕೇರಳ ಮತ್ತು ಪಶ್ಚಿಮ ಬಂಗಾಳದಲ್ಲಿ 2026ರಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.

ಮುಂದಿನ ವರ್ಷ ಅಸ್ಸಾಂನಲ್ಲೂ ವಿಧಾನಸಭೆ ಚುನಾವಣೆ ನಡೆಯಲಿದೆ. ಅಲ್ಲಿ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಪೌರತ್ವ ಪರಿಶೀಲನಾ ಕಾರ್ಯವು ಈಗಾಗಲೇ ನಡೆಯುತ್ತಿರುವುದರಿಂದ, ಪ್ರತ್ಯೇಕವಾಗಿ  ಮತದಾರರ ಪಟ್ಟಿ ಪರಿಷ್ಕರಣೆ ಮಾಡಲಾಗುವುದು ಎಂದು ಚುನಾವಣಾ ಆಯೋಗ ಹೇಳಿದೆ. ಅಸ್ಸಾಂ ರಾಜ್ಯವು ಪೌರತ್ವ ಕಾಯ್ದೆಯ ಒಂದು ವಿಶಿಷ್ಟ ನಿಬಂಧನೆಯ ಅಡಿಯಲ್ಲಿ ಬರುತ್ತದೆ.

“ಪೌರತ್ವ ಕಾಯ್ದೆಯಡಿಯಲ್ಲಿ, ಅಸ್ಸಾಂನಲ್ಲಿ ಪೌರತ್ವಕ್ಕಾಗಿ ಪ್ರತ್ಯೇಕ ನಿಬಂಧನೆಗಳಿವೆ. ಸುಪ್ರೀಂ ಕೋರ್ಟ್‌ನ ಮೇಲ್ವಿಚಾರಣೆಯಲ್ಲಿ ಪೌರತ್ವವನ್ನು ಪರಿಶೀಲಿಸುವ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಜೂನ್ 24ರ ಎಸ್‌ಐಆರ್ ಆದೇಶವು ಇಡೀ ದೇಶಕ್ಕೆ ಅನ್ವಯಿಸುತ್ತದೆ. ಆದರೂ, ಅದು ಅಸ್ಸಾಂಗೆ ಅನ್ವಯಿಸುವುದಿಲ್ಲ” ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅಕ್ಟೋಬರ್ 27ರಂದು ಎಸ್‌ಐಆರ್‌ನ ಎರಡನೇ ಹಂತವನ್ನು ಘೋಷಿಸುವಾಗ ಹೇಳಿದ್ದಾರೆ.

ಈಗ ನಡೆಯುತ್ತಿರುವುದು ಸ್ವಾತಂತ್ರ್ಯ ನಂತರದ 9ನೇ ಎಸ್‌ಐಆರ್ ಪ್ರಕ್ರಿಯೆಯಾಗಿದೆ. ಕೊನೆಯದಾಗಿ 2002-04 ರಲ್ಲಿ ಎಸ್‌ಐಆರ್ ನಡೆಸಲಾಗಿತ್ತು. ಈಗ ಎಸ್‌ಐಆರ್ ಘೋಷಣೆಯಾಗಿರುವ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 2002-04ರ ಮತದಾರರ ಪಟ್ಟಿಯನ್ನು ಮಾನದಂಡವಾಗಿ (ಕಟ್‌ ಆಫ್‌ ಆಗಿ) ಪರಿಗಣಿಸುವ ಸಾಧ್ಯತೆ ಇದೆ. ಏಕೆಂದರೆ, ಈ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಆ ವರ್ಷದಲ್ಲಿ ಕೊನೆಯ ಎಸ್‌ಐಆರ್ ನಡೆದಿತ್ತು. ಬಿಹಾರದ ಎಸ್‌ಐಆರ್ ವೇಳೆ 2003ರ ಪಟ್ಟಿಯನ್ನು ಪರಿಗಣಿಸಲಾಗಿತ್ತು.

ಬಿಹಾರದಲ್ಲಿ ಎಸ್‌ಐಆರ್ ವೇಳೆ ಮತದಾರರು ದಾಖಲೆಗಳನ್ನು ಸಲ್ಲಿಸಿ ತಮ್ಮ ಗುರುತನ್ನು ಸಾಬೀತುಪಡಿಸಬೇಕಿತ್ತು. ಆದರೆ, ಎರಡನೇ ಹಂತದ ಎಸ್‌ಐಆರ್‌ನಲ್ಲಿ ಗಣತಿ ಸಮಯದಲ್ಲಿ ದಾಖಲೆ ಸಲ್ಲಿಸುವ ಅಗತ್ಯ ಇಲ್ಲ. ಮತದಾರರ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಕಳುಹಿಸಿದರೆ ಮಾತ್ರ ದಾಖಲೆಗಳನ್ನು ಸಲ್ಲಿಸಬೇಕು ಎಂದು ವರದಿಗಳು ಹೇಳಿವೆ.

ಬಿಹಾರದ ಎಸ್‌ಐಆರ್‌ನಲ್ಲಿ ಮರಣ ಹೊಂದಿದವರು, ಶಾಶ್ವತವಾಗಿ ಸ್ಥಳಾಂತರಗೊಂಡವರು ಮತ್ತು ಎರಡೆರಡು ಬಾರಿ ನೋಂದಣಿಯಾದವರು ಎಂಬ ಕಾರಣಗಳನ್ನು ನೀಡಿ ಸುಮಾರು 68 ಲಕ್ಷ ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಇದನ್ನು ವಿರೋಧ ಪಕ್ಷಗಳು ತೀವ್ರವಾಗಿ ಖಂಡಿಸಿವೆ. ಚುನಾವಣಾ ಆಯೋಗ ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಪರೋಕ್ಷವಾಗಿ ಎನ್‌ಆರ್‌ಸಿ ಮಾಡುತ್ತಿದೆ ಎಂದು ಆರೋಪಿಸಿವೆ.

ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿ : ನ.6ಕ್ಕೆ ವಿಚಾರಣೆ ಮುಂದೂಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...