Homeಮುಖಪುಟವಿಶ್ವಕಪ್ ಸೆಮಿಫೈನಲ್ ಗೆಲುವಿನ ನಂತರ ಜೀಸಸ್‌ಗೆ ಧನ್ಯವಾದ; ಆನ್‌ಲೈನ್‌ ದ್ವೇಷಕ್ಕೆ ಗುರಿಯಾದ ಜೆಮಿಮಾ ರೊಡ್ರಿಗಸ್

ವಿಶ್ವಕಪ್ ಸೆಮಿಫೈನಲ್ ಗೆಲುವಿನ ನಂತರ ಜೀಸಸ್‌ಗೆ ಧನ್ಯವಾದ; ಆನ್‌ಲೈನ್‌ ದ್ವೇಷಕ್ಕೆ ಗುರಿಯಾದ ಜೆಮಿಮಾ ರೊಡ್ರಿಗಸ್

- Advertisement -
- Advertisement -

ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಗಮನಾರ್ಹ ಅಜೇಯ ಶತಕದೊಂದಿಗೆ ಭಾರತವನ್ನು ಮೊದಲ ಐಸಿಸಿ ಮಹಿಳಾ ವಿಶ್ವಕಪ್ ಪ್ರಶಸ್ತಿಗೆ ಮುನ್ನಡೆಸಿದ ಭಾರತೀಯ ಕ್ರಿಕೆಟ್‌ ತಾರೆ ಜೆಮಿಮಾ ರೊಡ್ರಿಗಸ್, ಪಂದ್ಯದ ನಂತರದ ಭಾಷಣದಲ್ಲಿ ಸಾರ್ವಜನಿಕವಾಗಿ ಯೇಸುವಿಗೆ ಧನ್ಯವಾದ ಹೇಳಿದ ನಂತರ ಬಲಪಂಥೀಯ ಸಾಮಾಜಿಕ ಮಾಧ್ಯಮ ಬಳಕೆದಾರರಿಂದ ಆನ್‌ಲೈನ್ ದ್ವೇಷಕ್ಕೆ ಗುರಿಯಾಗಿದ್ದಾರೆ.

ಪ್ಲೇಯರ್ ಆಪ್‌ ದಿ ಮ್ಯಾಚ್ ಪ್ರಶಸ್ತಿಗೆ ಭಾಜನರಾದ 25 ವರ್ಷದ ಬ್ಯಾಟರ್, ಸೆಮಿಫೈನಲ್ ಗೆಲುವಿನ ನಂತರ ತನ್ನ ಧಾರ್ಮಿಕ ನಂಬಿಕೆಗೆ ಕೃತಜ್ಞತೆ ಸಲ್ಲಿಸಿದರು. “ನಾನು ಯೇಸುವಿಗೆ ಧನ್ಯವಾದ ಹೇಳಲು ಬಯಸುತ್ತೇನೆ; ಇದನ್ನು ನಾನೇ ಮಾಡಲು ಸಾಧ್ಯವಾಗಲಿಲ್ಲ” ಎಂದು ಅವರು ಪಂದ್ಯದ ಬಳಿಕ ನಡೆದ ಸಮಾರಂಭದಲ್ಲಿ ಹೇಳಿದರು. “ಆಟ ಆಡುವಾಗ ನಾನು ಬೈಬಲ್‌ ಗ್ರಂಥವನ್ನು ಉಲ್ಲೇಖಿಸುತ್ತಿದ್ದೆ, ಸ್ಥಿರವಾಗಿ ನಿಲ್ಲಲು ಮತ್ತು ದೇವರು ನನಗಾಗಿ ಹೋರಾಡುತ್ತಾನೆ” ಎಂದು ಹೇಳಿದ್ದರು.

ಜೆಮಿಮಾ ಅವರ ವೈಯಕ್ತಿಕ ನಂಬಿಕೆಗಳನ್ನು ಪ್ರತಿಬಿಂಬಿಸುವ ಹೇಳಿಕೆಗಳಿಗೆ ಆನ್‌ಲೈನ್‌ನಲ್ಲಿ ಬಲಪಂಥೀಯವಾದಿ ಬಳಕೆದಾರರಿಂದ ನಿಂದನೆ ಎದುರಿಸುವಂತಾಗಿದೆ. “ಅವರು ಕ್ರಿಶ್ಚಿಯನ್ ಧರ್ಮವನ್ನು ಪ್ರಚಾರ ಮಾಡುತ್ತಿದ್ದಾರೆ, ಮತಾಂತರಗಳಲ್ಲಿ ತೊಡಗಿದ್ದಾರೆ” ಎಂದು ಆರೋಪಿಸಿದರು.

ಹಲವಾರು ಬಲಪಂಥೀಯ ಖಾತೆಗಳಲ್ಲಿ, ಜೆಮಿಮಾ ಅವರು ತಮ್ಮ ತಂದೆ ಇವಾನ್ ರಾಡ್ರಿಗಸ್ ಅವರೊಂದಿಗೆ ಚರ್ಚ್ ಕಾರ್ಯಕ್ರಮಗಳಿಗೆ ಹಾಜರಾಗುತ್ತಿರುವ ಹಳೆಯ ವೀಡಿಯೊಗಳನ್ನು ಈಗ ವೈರಲ್ ಮಾಡಲಾಗುತ್ತಿದೆ. ಅವರು ಸಮುದಾಯ ಸಂಪರ್ಕದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

“ಜೆಮಿಮಾ ರಾಡ್ರಿಗಸ್ ಕ್ರಿಕೆಟ್ ಅನ್ನು ಸಾಮೂಹಿಕ ಮತಾಂತರಕ್ಕೆ ಸಾಧನವಾಗಿ ಬಳಸಿದ್ದಾರೆ. ಧಾರ್ಮಿಕ ಮತಾಂತರಕ್ಕಾಗಿ ಅಂತಹ ನಾಟಕ ಮಾಡಿದ ಒಬ್ಬ ಭಾರತೀಯನನ್ನು ನನಗೆ ತೋರಿಸಿ” ಎಂದು ಒಬ್ಬ ಬಳಕೆದಾರರು ಬರೆದಿದ್ದಾರೆ. ಮತ್ತೊಬ್ಬರು ಅವರನ್ನು ‘ಪಾಕಿಸ್ತಾನಿ ಕ್ರಿಕೆಟಿಗ ಮೊಹಮ್ಮದ್ ರಿಜ್ವಾನ್ ಅವರ  ಪ್ರತಿ’ ಎಂದು ಕರೆದು ಅಪಹಾಸ್ಯ ಮಾಡಿದ್ದಾರೆ. ಹಿಂದೂ ಆಟಗಾರರು ವಿಜಯಗಳ ನಂತರ ‘ಭಗವಾನ್ ಅಥವಾ ಭಗವದ್ಗೀತೆಯನ್ನು ಎಂದಿಗೂ ಪ್ರಾರ್ಥಿಸುವುದಿಲ್ಲ’ ಎಂದು ಆರೋಪಿಸಿದ್ದಾರೆ.

ಕೆಲವು ಬಳಕೆದಾರರು ರಾಡ್ರಿಗಸ್ ಕ್ರಿಶ್ಚಿಯನ್ ಪ್ರಾರ್ಥನಾ ಸೇವೆಯಲ್ಲಿ ಭಾಗವಹಿಸುತ್ತಿರುವ ಹಳೆಯ ವೀಡಿಯೊವನ್ನು ಸಹ ಹಂಚಿಕೊಂಡಿದ್ದಾರೆ. ಅವಹೇಳನಕಾರಿ ಶೀರ್ಷಿಕೆ ನೀಡಿದ್ದು, “ಅಕ್ಕಿ ಚೀಲ ಮತಾಂತರ” ದಂತಹ ನಿಂದನಾತ್ಮಕ ಪದ ಬಳಸಿದ್ದಾರೆ. ಭಾರತದ ವಿಶ್ವಕಪ್ ಗೆಲುವಿನ ನಂತರ ಕೆಲವರು ಅವರ ನಂಬಿಕೆಯನ್ನು ಅಪಹಾಸ್ಯ ಮಾಡಿದ್ದಾರೆ. ‘ಯೇಸು ಫೈನಲ್‌ನಲ್ಲಿ ಸಹಾಯ ಮಾಡಲು ಬರಲಿಲ್ಲ’ ಎಂದು ವ್ಯಂಗ್ಯವಾಡಿದ್ದಾರೆ.

ಆನ್‌ಲೈನ್ ಪ್ರತಿಕ್ರಿಯೆಯ ಹೊರತಾಗಿಯೂ, ರಾಡ್ರಿಗಸ್ ಅವರ ಆಟವು ಭಾರತದ ಅಭಿಯಾನದ ಪ್ರಮುಖ ಅಂಶಗಳಲ್ಲಿ ಒಂದಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಅವರ ಅಜೇಯ ಶತಕವು ಭಾರತವನ್ನು ಫೈನಲ್‌ಗೆ ಕೊಂಡೊಯ್ಯುವಲ್ಲಿ ನಿರ್ಣಾಯಕ ಪಾತ್ರ ವಹಿಸಿತು, ಅಲ್ಲಿ ಅವರು ದಕ್ಷಿಣ ಆಫ್ರಿಕಾವನ್ನು 52 ರನ್‌ಗಳಿಂದ ಸೋಲಿಸಿ ತಮ್ಮ ಮೊದಲ ಐಸಿಸಿ ಮಹಿಳಾ ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದರು.

299 ರನ್‌ಗಳ ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ, ಲಾರಾ ವೋಲ್ವಾರ್ಡ್ ಅವರ ಹೋರಾಟದ ಶತಕದ ಹೊರತಾಗಿಯೂ 246 ರನ್‌ಗಳಿಗೆ ಆಲೌಟ್ ಆಯಿತು.

ಉತ್ತರ ಪ್ರದೇಶ| ದಲಿತ ಸಮುದಾಯದ ಕೃಷಿ ಕಾರ್ಮಿಕನನ್ನು ಥಳಿಸಿ ಕೊಂದ ಭೂಮಾಲೀಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...