Homeಮುಖಪುಟವಿಶ್ವಕಪ್ ಸೆಮಿಫೈನಲ್ ಗೆಲುವಿನ ನಂತರ ಜೀಸಸ್‌ಗೆ ಧನ್ಯವಾದ; ಆನ್‌ಲೈನ್‌ ದ್ವೇಷಕ್ಕೆ ಗುರಿಯಾದ ಜೆಮಿಮಾ ರೊಡ್ರಿಗಸ್

ವಿಶ್ವಕಪ್ ಸೆಮಿಫೈನಲ್ ಗೆಲುವಿನ ನಂತರ ಜೀಸಸ್‌ಗೆ ಧನ್ಯವಾದ; ಆನ್‌ಲೈನ್‌ ದ್ವೇಷಕ್ಕೆ ಗುರಿಯಾದ ಜೆಮಿಮಾ ರೊಡ್ರಿಗಸ್

- Advertisement -
- Advertisement -

ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಗಮನಾರ್ಹ ಅಜೇಯ ಶತಕದೊಂದಿಗೆ ಭಾರತವನ್ನು ಮೊದಲ ಐಸಿಸಿ ಮಹಿಳಾ ವಿಶ್ವಕಪ್ ಪ್ರಶಸ್ತಿಗೆ ಮುನ್ನಡೆಸಿದ ಭಾರತೀಯ ಕ್ರಿಕೆಟ್‌ ತಾರೆ ಜೆಮಿಮಾ ರೊಡ್ರಿಗಸ್, ಪಂದ್ಯದ ನಂತರದ ಭಾಷಣದಲ್ಲಿ ಸಾರ್ವಜನಿಕವಾಗಿ ಯೇಸುವಿಗೆ ಧನ್ಯವಾದ ಹೇಳಿದ ನಂತರ ಬಲಪಂಥೀಯ ಸಾಮಾಜಿಕ ಮಾಧ್ಯಮ ಬಳಕೆದಾರರಿಂದ ಆನ್‌ಲೈನ್ ದ್ವೇಷಕ್ಕೆ ಗುರಿಯಾಗಿದ್ದಾರೆ.

ಪ್ಲೇಯರ್ ಆಪ್‌ ದಿ ಮ್ಯಾಚ್ ಪ್ರಶಸ್ತಿಗೆ ಭಾಜನರಾದ 25 ವರ್ಷದ ಬ್ಯಾಟರ್, ಸೆಮಿಫೈನಲ್ ಗೆಲುವಿನ ನಂತರ ತನ್ನ ಧಾರ್ಮಿಕ ನಂಬಿಕೆಗೆ ಕೃತಜ್ಞತೆ ಸಲ್ಲಿಸಿದರು. “ನಾನು ಯೇಸುವಿಗೆ ಧನ್ಯವಾದ ಹೇಳಲು ಬಯಸುತ್ತೇನೆ; ಇದನ್ನು ನಾನೇ ಮಾಡಲು ಸಾಧ್ಯವಾಗಲಿಲ್ಲ” ಎಂದು ಅವರು ಪಂದ್ಯದ ಬಳಿಕ ನಡೆದ ಸಮಾರಂಭದಲ್ಲಿ ಹೇಳಿದರು. “ಆಟ ಆಡುವಾಗ ನಾನು ಬೈಬಲ್‌ ಗ್ರಂಥವನ್ನು ಉಲ್ಲೇಖಿಸುತ್ತಿದ್ದೆ, ಸ್ಥಿರವಾಗಿ ನಿಲ್ಲಲು ಮತ್ತು ದೇವರು ನನಗಾಗಿ ಹೋರಾಡುತ್ತಾನೆ” ಎಂದು ಹೇಳಿದ್ದರು.

ಜೆಮಿಮಾ ಅವರ ವೈಯಕ್ತಿಕ ನಂಬಿಕೆಗಳನ್ನು ಪ್ರತಿಬಿಂಬಿಸುವ ಹೇಳಿಕೆಗಳಿಗೆ ಆನ್‌ಲೈನ್‌ನಲ್ಲಿ ಬಲಪಂಥೀಯವಾದಿ ಬಳಕೆದಾರರಿಂದ ನಿಂದನೆ ಎದುರಿಸುವಂತಾಗಿದೆ. “ಅವರು ಕ್ರಿಶ್ಚಿಯನ್ ಧರ್ಮವನ್ನು ಪ್ರಚಾರ ಮಾಡುತ್ತಿದ್ದಾರೆ, ಮತಾಂತರಗಳಲ್ಲಿ ತೊಡಗಿದ್ದಾರೆ” ಎಂದು ಆರೋಪಿಸಿದರು.

ಹಲವಾರು ಬಲಪಂಥೀಯ ಖಾತೆಗಳಲ್ಲಿ, ಜೆಮಿಮಾ ಅವರು ತಮ್ಮ ತಂದೆ ಇವಾನ್ ರಾಡ್ರಿಗಸ್ ಅವರೊಂದಿಗೆ ಚರ್ಚ್ ಕಾರ್ಯಕ್ರಮಗಳಿಗೆ ಹಾಜರಾಗುತ್ತಿರುವ ಹಳೆಯ ವೀಡಿಯೊಗಳನ್ನು ಈಗ ವೈರಲ್ ಮಾಡಲಾಗುತ್ತಿದೆ. ಅವರು ಸಮುದಾಯ ಸಂಪರ್ಕದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

“ಜೆಮಿಮಾ ರಾಡ್ರಿಗಸ್ ಕ್ರಿಕೆಟ್ ಅನ್ನು ಸಾಮೂಹಿಕ ಮತಾಂತರಕ್ಕೆ ಸಾಧನವಾಗಿ ಬಳಸಿದ್ದಾರೆ. ಧಾರ್ಮಿಕ ಮತಾಂತರಕ್ಕಾಗಿ ಅಂತಹ ನಾಟಕ ಮಾಡಿದ ಒಬ್ಬ ಭಾರತೀಯನನ್ನು ನನಗೆ ತೋರಿಸಿ” ಎಂದು ಒಬ್ಬ ಬಳಕೆದಾರರು ಬರೆದಿದ್ದಾರೆ. ಮತ್ತೊಬ್ಬರು ಅವರನ್ನು ‘ಪಾಕಿಸ್ತಾನಿ ಕ್ರಿಕೆಟಿಗ ಮೊಹಮ್ಮದ್ ರಿಜ್ವಾನ್ ಅವರ  ಪ್ರತಿ’ ಎಂದು ಕರೆದು ಅಪಹಾಸ್ಯ ಮಾಡಿದ್ದಾರೆ. ಹಿಂದೂ ಆಟಗಾರರು ವಿಜಯಗಳ ನಂತರ ‘ಭಗವಾನ್ ಅಥವಾ ಭಗವದ್ಗೀತೆಯನ್ನು ಎಂದಿಗೂ ಪ್ರಾರ್ಥಿಸುವುದಿಲ್ಲ’ ಎಂದು ಆರೋಪಿಸಿದ್ದಾರೆ.

ಕೆಲವು ಬಳಕೆದಾರರು ರಾಡ್ರಿಗಸ್ ಕ್ರಿಶ್ಚಿಯನ್ ಪ್ರಾರ್ಥನಾ ಸೇವೆಯಲ್ಲಿ ಭಾಗವಹಿಸುತ್ತಿರುವ ಹಳೆಯ ವೀಡಿಯೊವನ್ನು ಸಹ ಹಂಚಿಕೊಂಡಿದ್ದಾರೆ. ಅವಹೇಳನಕಾರಿ ಶೀರ್ಷಿಕೆ ನೀಡಿದ್ದು, “ಅಕ್ಕಿ ಚೀಲ ಮತಾಂತರ” ದಂತಹ ನಿಂದನಾತ್ಮಕ ಪದ ಬಳಸಿದ್ದಾರೆ. ಭಾರತದ ವಿಶ್ವಕಪ್ ಗೆಲುವಿನ ನಂತರ ಕೆಲವರು ಅವರ ನಂಬಿಕೆಯನ್ನು ಅಪಹಾಸ್ಯ ಮಾಡಿದ್ದಾರೆ. ‘ಯೇಸು ಫೈನಲ್‌ನಲ್ಲಿ ಸಹಾಯ ಮಾಡಲು ಬರಲಿಲ್ಲ’ ಎಂದು ವ್ಯಂಗ್ಯವಾಡಿದ್ದಾರೆ.

ಆನ್‌ಲೈನ್ ಪ್ರತಿಕ್ರಿಯೆಯ ಹೊರತಾಗಿಯೂ, ರಾಡ್ರಿಗಸ್ ಅವರ ಆಟವು ಭಾರತದ ಅಭಿಯಾನದ ಪ್ರಮುಖ ಅಂಶಗಳಲ್ಲಿ ಒಂದಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಅವರ ಅಜೇಯ ಶತಕವು ಭಾರತವನ್ನು ಫೈನಲ್‌ಗೆ ಕೊಂಡೊಯ್ಯುವಲ್ಲಿ ನಿರ್ಣಾಯಕ ಪಾತ್ರ ವಹಿಸಿತು, ಅಲ್ಲಿ ಅವರು ದಕ್ಷಿಣ ಆಫ್ರಿಕಾವನ್ನು 52 ರನ್‌ಗಳಿಂದ ಸೋಲಿಸಿ ತಮ್ಮ ಮೊದಲ ಐಸಿಸಿ ಮಹಿಳಾ ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದರು.

299 ರನ್‌ಗಳ ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ, ಲಾರಾ ವೋಲ್ವಾರ್ಡ್ ಅವರ ಹೋರಾಟದ ಶತಕದ ಹೊರತಾಗಿಯೂ 246 ರನ್‌ಗಳಿಗೆ ಆಲೌಟ್ ಆಯಿತು.

ಉತ್ತರ ಪ್ರದೇಶ| ದಲಿತ ಸಮುದಾಯದ ಕೃಷಿ ಕಾರ್ಮಿಕನನ್ನು ಥಳಿಸಿ ಕೊಂದ ಭೂಮಾಲೀಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...