Homeಕರ್ನಾಟಕ'ನಲಿ ಕಲಿ' ಕಾರ್ಯಕ್ರಮ ಸ್ಥಗಿತಗೊಳಿಸಲು ಮುಂದಾದ ಸರ್ಕಾರ : ಶಿಕ್ಷಣ ತಜ್ಞರು ಏನಂದ್ರು?

‘ನಲಿ ಕಲಿ’ ಕಾರ್ಯಕ್ರಮ ಸ್ಥಗಿತಗೊಳಿಸಲು ಮುಂದಾದ ಸರ್ಕಾರ : ಶಿಕ್ಷಣ ತಜ್ಞರು ಏನಂದ್ರು?

- Advertisement -
- Advertisement -

ಒಂದರಿಂದ ಮೂರನೇ ತರಗತಿವರೆಗಿನ ಮಕ್ಕಳು ‘ಚಟುವಟಿಕೆ ಆಧಾರಿತ ಕಲಿಕೆ’ಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವ ಗುರಿಯನ್ನು ಹೊಂದಿರುವ ಹಾಗೂ ಒಂದು ಕಾಲದಲ್ಲಿ ‘ಪರಿವರ್ತಕ’ ಕಾರ್ಯಕ್ರಮ ಎಂದು ಪ್ರಚಾರ ಮಾಡಲಾಗಿದ್ದ ‘ನಲಿ ಕಲಿ’ ಉಪಕ್ರಮವನ್ನು ಸ್ಥಗಿತಗೊಳಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ ಎಂದು ವರದಿಯಾಗಿದೆ.

2009ರಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸಂಪೂರ್ಣವಾಗಿ ಜಾರಿಗೆ ಬಂದ ನಲಿ ಕಲಿ ಕಾರ್ಯಕ್ರಮ, ಒಂದರಿಂದ ಮೂರನೇ ತರಗತಿಯವರೆಗಿನ ವಿದ್ಯಾರ್ಥಿಗಳನ್ನು ಒಂದೇ ತರಗತಿ ಕೊಠಡಿಯಲ್ಲಿ ಒಟ್ಟುಗೂಡಿಸಿ ವಿವಿಧ ಚಟುವಟಿಕೆಗಳ ಮೂಲಕ ಕಲಿಕೆಯಲ್ಲಿ ತೊಡಗಿಸಿಳ್ಳುವಂತೆ ಮಾಡಲಾಗುತ್ತದೆ.

‘ನಲಿ ಕಲಿ’ 1995ರಲ್ಲಿ ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆ (ಎಚ್.ಡಿ ಕೋಟೆ) ತಾಲೂಕಿನಲ್ಲಿ ಯುನಿಸೆಫ್ ಸಹಾಯದೊಂದಿಗೆ ಪ್ರಾಯೋಗಿಕವಾಗಿ (ಪೈಲಟ್) ಆರಂಭವಾಯಿತು. ಆದಿವಾಸಿ ಮಕ್ಕಳಿಗೆ ಪ್ರಾಥಮಿಕ ಶಿಕ್ಷಣ ಕೊಡುವ ಉದ್ದೇಶದಿಂದ ರಿಷಿ ವ್ಯಾಲಿ ಇನ್‌ಸ್ಟಿಟ್ಯೂಟ್ ಆಫ್ ಎಜುಕೇಷನಲ್ ರಿಸೋರ್ಸಸ್ (RiVER) ಸಹಕಾರದೊಂದಿಗೆ ಇದನ್ನು ಜಾರಿಗೆ ತರಲಾಯಿತು. ನಂತರ 1998ರಲ್ಲಿ ರಾಯಚೂರು ಜಿಲ್ಲೆ ಸೇರಿದಂತೆ ಕೆಲವೆಡೆ ನಲಿ ಕಲಿ ಇನ್ನೊಂದು ಪ್ರಾಯೋಗಿಕ ಹಂತಕ್ಕೆ ಬಂತು.

2009ರಲ್ಲಿ ನಲಿ ಕಲಿ ರಾಜ್ಯದಾದ್ಯಂತ ಸಂಪೂರ್ಣವಾಗಿ ಜಾರಿಗೆ ಬಂತು. ಆದರೆ, ಇದು ಹೊಸ ಉಪಕ್ರಮದ ಆರಂಭವಾಗಿರಲಿಲ್ಲ. ಆಗಲೇ ನಡೆಯುತ್ತಿದ್ದ ಪ್ರಾಯೋಗಿಕ ಹಂತದಿಂದ ಪೂರ್ಣ ಅನುಷ್ಠಾನಕ್ಕೆ ಬದಲಾವಣೆ ಮಾಡಲಾಗಿತ್ತು.

ಇಂದು ಕರ್ನಾಟಕದ ಎಲ್ಲಾ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ (ಸುಮಾರು 40,000ಕ್ಕೂ ಹೆಚ್ಚು) ಕಡ್ಡಾಯವಾಗಿ ನಲಿ ಕಲಿ ಕಾರ್ಯಕ್ರಮ ಜಾರಿಯಲ್ಲಿದ್ದು, District Institute of Education and Training (DIET) ಮತ್ತು Directorate of State Educational Research and Training (DSERT)ಗಳ ಮೂಲಕ ನಿರ್ವಹಣೆಯಾಗುತ್ತಿದೆ.

‘ನಲಿ ಕಲಿ’ ಉಪಕ್ರಮ ಸ್ಥಗಿತಗೊಳಿಸಿದ ಬಳಿಕ, ಅದಕ್ಕೆ ಬಳಸಲಾಗುತ್ತಿರುವ ತರಗತಿ ಕೊಠಡಿಗಳನ್ನು ಹಂತ ಹಂತವಾಗಿ ಏಕ ತರಗತಿ ಕೊಠಡಿಗಳಾಗಿ ಪರಿವರ್ತಿಸಲಾಗುವುದು. ಮೊದಲ ಹಂತದಲ್ಲಿ, ದ್ವಿಭಾಷಾ ಮಾಧ್ಯಮದಲ್ಲಿ ಶಿಕ್ಷಣವನ್ನು ನೀಡುವ ಶಾಲೆಗಳು ಸೇರಿದಂತೆ 29,000 ಶಾಲೆಗಳಲ್ಲಿ ಕಾರ್ಯಕ್ರಮವನ್ನು ಸ್ಥಗಿತಗೊಳಿಸಲಾಗುವುದು” ಎಂದು ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಡೆಕ್ಕನ್ ಹೆರಾಲ್ಡ್ ಮಂಗಳವಾರ (ನ.4) ವರದಿ ಮಾಡಿದೆ.

ನಲಿ ಕಲಿಯಿಂದಾಗಿ ಮಕ್ಕಳು ಒಂದು ವಾಕ್ಯ ರಚಿಸಲು ಹೆಣಗಾಡುತ್ತಿದ್ದಾರೆ. ಇದು ಅವರು ಮುಂದಿನ ತರಗತಿಗಳಿಗೆ ಹೋದಂತೆ ಕಲಿಕೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. 2026-27ನೇ ಶೈಕ್ಷಣಿಕ ವರ್ಷದಿಂದ ಕಾರ್ಯಕ್ರಮವನ್ನು ಸ್ಥಗಿತಗೊಳಿಸುವುದು ಖಚಿತ. ಈ ಬಗ್ಗೆ ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸಲಾಗುವುದು ಎಂಬುವುದಾಗಿ ಮೂಲಗಳು ಹೇಳಿವೆ ಎಂದು ವರದಿ ತಿಳಿಸಿದೆ.

ನಲಿಕಲಿ ಕಾರ್ಯಕ್ರಮವನ್ನು ಸ್ಥಗಿತಗೊಳಿಸಲು ಸರ್ಕಾರ ಮುಂದಾಗಿರುವ ಕುರಿತು ಶಿಕ್ಷಣ ತಜ್ಞ ಹಾಗೂ ಚಿಂತಕ ಶ್ರೀಪಾದ್ ಭಟ್ ಅವರು ನಾನುಗೌರಿ.ಕಾಂ ಜೊತೆ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಆಡಳಿತದ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯದಿಂದ ನಲಿ ಕಲಿ ಉಪಕ್ರಮದ ಜಾರಿಯ ಕ್ರಮವೇ ಬದಲಾಗಿದೆ. ಹಾಗಾಗಿ, ಅದನ್ನು ಸ್ಥಗಿತಗೊಳಿಸುವುದೇ ಉತ್ತಮ ಎಂದಿದ್ದಾರೆ.

ಅನಿತಾ ಕೌಲ್ ಎಂಬ ಐಎಎಸ್ ಅಧಿಕಾರಿಯ ಮುತುವರ್ಜಿಯಿಂದ ಜಾರಿಗೆ ಬಂದ ಈ ಕಾರ್ಯಕ್ರಮದ ಉದ್ದೇಶ ಅತ್ಯುತ್ತಮವಾಗಿದೆ. ಪುಸ್ತಕಗಳ ಹೊರತಾಗಿ ಪ್ರಾಯೋಗಿಕವಾಗಿ ಮಕ್ಕಳಿಗೆ ಶಿಕ್ಷಣ ನೀಡುವ ಪ್ರಯತ್ನವನ್ನು ಇದರ ಮೂಲಕ ಮಾಡಲಾಗಿತ್ತು. ಆದರೆ, ಬರುಬರುತ್ತಾ ಆಡಳಿತದ (ಸರ್ಕಾರದ) ಬೇಜವಬ್ದಾರಿ ಹಾಗೂ ನಿರ್ಲಕ್ಷ್ಯದಿಂದ ಕಾರ್ಯಕ್ರಮ ಹಳ್ಳ ಹಿಡಿಯಿತು ಎಂದು ಹೇಳಿದ್ದಾರೆ.

ನಲಿ ಕಲಿ ಕಾರ್ಯಕ್ರಮ ಉತ್ತಮವಾಗಿದ್ದರೂ, ಅದನ್ನು ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಮಾತ್ರ ಜಾರಿಗೆ ತರಲಾಯಿತು. ಖಾಸಗಿ ಶಾಲೆಗಳಲ್ಲಿ ಅದು ಜಾರಿಗೆ ಬರಲಿಲ್ಲ. ಹಾಗಾಗಿ, ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಮಕ್ಕಳ ಕಲಿಕಾ ವಿಧಾನ ಬದಲಾಯಿತು. ಖಾಸಗಿ ಶಾಲೆಗಳ ಮಕ್ಕಳು ಪುಸ್ತಕ ಆಧಾರಿತ ಕಲಿಕಾ ವಿಧಾನದ ಮೂಲಕ ಮುಂದುವರಿಯುತ್ತಿದ್ದರೆ, ನಲಿಕಲಿಯ ಪ್ರಾಯೋಗಿಕ ಕಲಿಕೆ ಸರಿಯಾಗಿ ಜಾರಿಯಾಗದೆ ಸರ್ಕಾರಿ ಶಾಲೆಯ ಮಕ್ಕಳು ಹಿಂದುಳಿದರು. ಇದು ನಲಿಕಲಿ ಕಾರ್ಯಕ್ರಮದ ಬಗ್ಗೆ ಪೋಷಕರಲ್ಲೇ ಅಸಮಾಧಾನ ಮೂಡುವಂತೆ ಮಾಡಿತು ಎಂದಿದ್ದಾರೆ.

ನಲಿಕಲಿ ಕಾರ್ಯಕ್ರಮದಲ್ಲಿ 1ರಿಂದ 3ನೇ ತರಗತಿವರೆಗಿನ ಮಕ್ಕಳನ್ನು ಒಂದೇ ತರಗತಿ ಕೊಠಡಿಯಲ್ಲಿ ಕೂರಿಸಿ ಕಲಿಸುವ ವಿಧಾನವಿದೆ. ಇದನ್ನೇ ಲಾಭ ಮಾಡಿಕೊಂಡ ಸರ್ಕಾರ ಮೂರು ತರಗತಿಗಳಿಗೆ ಮೂವರು ಶಿಕ್ಷಕರನ್ನು ನೇಮಿಸುವ ಬದಲು, ಒಬ್ಬರೇ ಶಿಕ್ಷಕರನ್ನು ನೇಮಿಸಲು ಶುರು ಮಾಡಿತು. ಅದರಲ್ಲೂ ನಲಿಕಲಿ ತರಗತಿಗಳ ಬಗ್ಗೆ ನಿರ್ಲಕ್ಷ್ಯ ತೋರಿ ಅಥಿತಿ ಶಿಕ್ಷಕರನ್ನು ನೇಮಿಸಲು ಪ್ರಾರಂಭಿಸಿತು. ಆ ಅತಿಥಿ ಶಿಕ್ಷಕರಿಗೆ ನಲಿಕಲಿಯ ಮೂಲ ಉದ್ದೇಶವೇ ಗೊತ್ತಿರುವುದಿಲ್ಲ. ಇದರಿಂದ ಕಾರ್ಯಕ್ರಮದ ಉದ್ದೇಶವೇ ಬದಲಾಯಿತು ಎಂದು ಹೇಳಿದ್ದಾರೆ.

ಹೈದರಾಬಾದ್ ಕರ್ನಾಟಕದಲ್ಲಿ, ಅದರಲ್ಲೂ ರಾಯಚೂರಿನಂತಹ ಜಿಲ್ಲೆಗಳಲ್ಲಿ 1ರಿಂದ 3ನೇ ತರಗತಿ ಮಕ್ಕಳ ಸಂಖ್ಯೆ ಹೆಚ್ಚಿದ್ದರಿಂದ ಒಂದೇ ನಲಿಕಲಿ ತರಗತಿಯಲ್ಲಿ ಕೂರಿಸಿ ಅವರಿಗೆ ಪಾಠ ಮಾಡುವುದು ಸವಾಲಾಯಿತು. ಇದರಿಂದ ಮಕ್ಕಳು ಕಲಿಯಲು ಅಸಾಧ್ಯವಾಯಿತು. 1ನೇ ತರಗತಿ ಮತ್ತು 3ನೇ ತರಗತಿ ಮಕ್ಕಳ ನಡುವಿನ ವಯಸ್ಸಿನ ಅಂತರವೂ, ಅವರು ಒಂದೇ ತರಗತಿಯಲ್ಲಿ ಹೊಂದಿಕೊಳ್ಳುವುದಕ್ಕೆ ಅಡ್ಡಿಯಾಯಿತು. ಇವೆಲ್ಲವೂ ಕಾರ್ಯಕ್ರಮ ಹಳ್ಳ ಹಿಡಿಯಲು ಕಾರಣವಾಯಿತು ಎಂದು ತಿಳಿಸಿದ್ದಾರೆ.

ಉತ್ತಮ ಉದ್ದೇಶದಿಂದ ನಲಿಕಲಿ ಕಾರ್ಯಕ್ರಮ ಪ್ರಾರಂಭಿಸಿದ್ದರೂ, ಅದನ್ನು ಸರ್ಕಾರ ಜಾರಿ ಮಾಡಿದ ರೀತಿಯಿಂದ ಈಗ ಸಮಸ್ಯೆಗಳಿಂದ ತುಂಬಿಕೊಂಡಿದೆ. ಈಗಿನ ಪರಿಸ್ಥಿತಿಯನ್ನು ನೋಡಿದರೆ ನಲಿಕಲಿಯ ಮಕ್ಕಳು ಖಾಸಗಿ ಶಾಲೆಗಳ ಮಕ್ಕಳಿಗಿಂತ ಕಲಿಕೆಯಲ್ಲಿ ಹಿಂದುಳಿದಿರುವುದು ಸತ್ಯ. ಹೀಗಿರುವಾಗ ಈ ಕಾರ್ಯಕ್ರಮವನ್ನು ಕೈಬಿಟ್ಟು ಪ್ರತ್ಯೇಕ ತರಗತಿಗಳನ್ನು ನಡೆಸುವುದು ಒಳಿತು. ಸರ್ಕಾರ ಪ್ರತೀ ತರಗತಿಗೆ ಅಗತ್ಯ ಶಿಕ್ಷಕರನ್ನು ನೇಮಿಸಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವತ್ತ ಗಮನಹರಿಸಬೇಕು ಎಂದು ಶ್ರೀಪಾದ್ ಭಟ್ ಹೇಳಿದ್ದಾರೆ.

ಶಿಕ್ಷಣ ತಜ್ಞ ನಿರಂಜನಾರಾಧ್ಯ ಮಾತನಾಡಿ, “ಒಂದೇ ಕೊಠಡಿಯಲ್ಲಿ ಮೂರು ತರಗತಿಗಳ ಮಕ್ಕಳನ್ನು ಕೂರಿಸಿ ಪಾಠ ಹೇಳಿಕೊಡುವ ಕ್ರಮ ಅಷ್ಟೊಂದು ಸರಿಯಾಗಿಲ್ಲ. ಹಾಗಾಗಿ, ಸರ್ಕಾರ ನಲಿಕಲಿ ಕಾರ್ಯಕ್ರಮವನ್ನು ಸ್ಥಗಿತಗೊಳಿಸಲಿ. ಅದರ ಬದಲಾಗಿ ಪ್ರತ್ಯೇಕ ತರಗತಿಗಳನ್ನು ನಡೆಸಲಿ. ಅದಕ್ಕೆ ಅಗತ್ಯವಿರುವ ಶಿಕ್ಷಕರು ಮತ್ತು ಇತರ ವ್ಯವಸ್ಥೆಗಳನ್ನು ಒದಗಿಸಲಿ ಎಂದಿದ್ದಾರೆ.

ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಎಚ್.ವೈ ಮೇಟಿ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...