Homeಕರ್ನಾಟಕ'ನಲಿ ಕಲಿ' ಕಾರ್ಯಕ್ರಮ ಸ್ಥಗಿತಗೊಳಿಸಲು ಮುಂದಾದ ಸರ್ಕಾರ : ಶಿಕ್ಷಣ ತಜ್ಞರು ಏನಂದ್ರು?

‘ನಲಿ ಕಲಿ’ ಕಾರ್ಯಕ್ರಮ ಸ್ಥಗಿತಗೊಳಿಸಲು ಮುಂದಾದ ಸರ್ಕಾರ : ಶಿಕ್ಷಣ ತಜ್ಞರು ಏನಂದ್ರು?

- Advertisement -
- Advertisement -

ಒಂದರಿಂದ ಮೂರನೇ ತರಗತಿವರೆಗಿನ ಮಕ್ಕಳು ‘ಚಟುವಟಿಕೆ ಆಧಾರಿತ ಕಲಿಕೆ’ಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವ ಗುರಿಯನ್ನು ಹೊಂದಿರುವ ಹಾಗೂ ಒಂದು ಕಾಲದಲ್ಲಿ ‘ಪರಿವರ್ತಕ’ ಕಾರ್ಯಕ್ರಮ ಎಂದು ಪ್ರಚಾರ ಮಾಡಲಾಗಿದ್ದ ‘ನಲಿ ಕಲಿ’ ಉಪಕ್ರಮವನ್ನು ಸ್ಥಗಿತಗೊಳಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ ಎಂದು ವರದಿಯಾಗಿದೆ.

2009ರಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸಂಪೂರ್ಣವಾಗಿ ಜಾರಿಗೆ ಬಂದ ನಲಿ ಕಲಿ ಕಾರ್ಯಕ್ರಮ, ಒಂದರಿಂದ ಮೂರನೇ ತರಗತಿಯವರೆಗಿನ ವಿದ್ಯಾರ್ಥಿಗಳನ್ನು ಒಂದೇ ತರಗತಿ ಕೊಠಡಿಯಲ್ಲಿ ಒಟ್ಟುಗೂಡಿಸಿ ವಿವಿಧ ಚಟುವಟಿಕೆಗಳ ಮೂಲಕ ಕಲಿಕೆಯಲ್ಲಿ ತೊಡಗಿಸಿಳ್ಳುವಂತೆ ಮಾಡಲಾಗುತ್ತದೆ.

‘ನಲಿ ಕಲಿ’ 1995ರಲ್ಲಿ ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆ (ಎಚ್.ಡಿ ಕೋಟೆ) ತಾಲೂಕಿನಲ್ಲಿ ಯುನಿಸೆಫ್ ಸಹಾಯದೊಂದಿಗೆ ಪ್ರಾಯೋಗಿಕವಾಗಿ (ಪೈಲಟ್) ಆರಂಭವಾಯಿತು. ಆದಿವಾಸಿ ಮಕ್ಕಳಿಗೆ ಪ್ರಾಥಮಿಕ ಶಿಕ್ಷಣ ಕೊಡುವ ಉದ್ದೇಶದಿಂದ ರಿಷಿ ವ್ಯಾಲಿ ಇನ್‌ಸ್ಟಿಟ್ಯೂಟ್ ಆಫ್ ಎಜುಕೇಷನಲ್ ರಿಸೋರ್ಸಸ್ (RiVER) ಸಹಕಾರದೊಂದಿಗೆ ಇದನ್ನು ಜಾರಿಗೆ ತರಲಾಯಿತು. ನಂತರ 1998ರಲ್ಲಿ ರಾಯಚೂರು ಜಿಲ್ಲೆ ಸೇರಿದಂತೆ ಕೆಲವೆಡೆ ನಲಿ ಕಲಿ ಇನ್ನೊಂದು ಪ್ರಾಯೋಗಿಕ ಹಂತಕ್ಕೆ ಬಂತು.

2009ರಲ್ಲಿ ನಲಿ ಕಲಿ ರಾಜ್ಯದಾದ್ಯಂತ ಸಂಪೂರ್ಣವಾಗಿ ಜಾರಿಗೆ ಬಂತು. ಆದರೆ, ಇದು ಹೊಸ ಉಪಕ್ರಮದ ಆರಂಭವಾಗಿರಲಿಲ್ಲ. ಆಗಲೇ ನಡೆಯುತ್ತಿದ್ದ ಪ್ರಾಯೋಗಿಕ ಹಂತದಿಂದ ಪೂರ್ಣ ಅನುಷ್ಠಾನಕ್ಕೆ ಬದಲಾವಣೆ ಮಾಡಲಾಗಿತ್ತು.

ಇಂದು ಕರ್ನಾಟಕದ ಎಲ್ಲಾ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ (ಸುಮಾರು 40,000ಕ್ಕೂ ಹೆಚ್ಚು) ಕಡ್ಡಾಯವಾಗಿ ನಲಿ ಕಲಿ ಕಾರ್ಯಕ್ರಮ ಜಾರಿಯಲ್ಲಿದ್ದು, District Institute of Education and Training (DIET) ಮತ್ತು Directorate of State Educational Research and Training (DSERT)ಗಳ ಮೂಲಕ ನಿರ್ವಹಣೆಯಾಗುತ್ತಿದೆ.

‘ನಲಿ ಕಲಿ’ ಉಪಕ್ರಮ ಸ್ಥಗಿತಗೊಳಿಸಿದ ಬಳಿಕ, ಅದಕ್ಕೆ ಬಳಸಲಾಗುತ್ತಿರುವ ತರಗತಿ ಕೊಠಡಿಗಳನ್ನು ಹಂತ ಹಂತವಾಗಿ ಏಕ ತರಗತಿ ಕೊಠಡಿಗಳಾಗಿ ಪರಿವರ್ತಿಸಲಾಗುವುದು. ಮೊದಲ ಹಂತದಲ್ಲಿ, ದ್ವಿಭಾಷಾ ಮಾಧ್ಯಮದಲ್ಲಿ ಶಿಕ್ಷಣವನ್ನು ನೀಡುವ ಶಾಲೆಗಳು ಸೇರಿದಂತೆ 29,000 ಶಾಲೆಗಳಲ್ಲಿ ಕಾರ್ಯಕ್ರಮವನ್ನು ಸ್ಥಗಿತಗೊಳಿಸಲಾಗುವುದು” ಎಂದು ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಡೆಕ್ಕನ್ ಹೆರಾಲ್ಡ್ ಮಂಗಳವಾರ (ನ.4) ವರದಿ ಮಾಡಿದೆ.

ನಲಿ ಕಲಿಯಿಂದಾಗಿ ಮಕ್ಕಳು ಒಂದು ವಾಕ್ಯ ರಚಿಸಲು ಹೆಣಗಾಡುತ್ತಿದ್ದಾರೆ. ಇದು ಅವರು ಮುಂದಿನ ತರಗತಿಗಳಿಗೆ ಹೋದಂತೆ ಕಲಿಕೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. 2026-27ನೇ ಶೈಕ್ಷಣಿಕ ವರ್ಷದಿಂದ ಕಾರ್ಯಕ್ರಮವನ್ನು ಸ್ಥಗಿತಗೊಳಿಸುವುದು ಖಚಿತ. ಈ ಬಗ್ಗೆ ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸಲಾಗುವುದು ಎಂಬುವುದಾಗಿ ಮೂಲಗಳು ಹೇಳಿವೆ ಎಂದು ವರದಿ ತಿಳಿಸಿದೆ.

ನಲಿಕಲಿ ಕಾರ್ಯಕ್ರಮವನ್ನು ಸ್ಥಗಿತಗೊಳಿಸಲು ಸರ್ಕಾರ ಮುಂದಾಗಿರುವ ಕುರಿತು ಶಿಕ್ಷಣ ತಜ್ಞ ಹಾಗೂ ಚಿಂತಕ ಶ್ರೀಪಾದ್ ಭಟ್ ಅವರು ನಾನುಗೌರಿ.ಕಾಂ ಜೊತೆ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಆಡಳಿತದ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯದಿಂದ ನಲಿ ಕಲಿ ಉಪಕ್ರಮದ ಜಾರಿಯ ಕ್ರಮವೇ ಬದಲಾಗಿದೆ. ಹಾಗಾಗಿ, ಅದನ್ನು ಸ್ಥಗಿತಗೊಳಿಸುವುದೇ ಉತ್ತಮ ಎಂದಿದ್ದಾರೆ.

ಅನಿತಾ ಕೌಲ್ ಎಂಬ ಐಎಎಸ್ ಅಧಿಕಾರಿಯ ಮುತುವರ್ಜಿಯಿಂದ ಜಾರಿಗೆ ಬಂದ ಈ ಕಾರ್ಯಕ್ರಮದ ಉದ್ದೇಶ ಅತ್ಯುತ್ತಮವಾಗಿದೆ. ಪುಸ್ತಕಗಳ ಹೊರತಾಗಿ ಪ್ರಾಯೋಗಿಕವಾಗಿ ಮಕ್ಕಳಿಗೆ ಶಿಕ್ಷಣ ನೀಡುವ ಪ್ರಯತ್ನವನ್ನು ಇದರ ಮೂಲಕ ಮಾಡಲಾಗಿತ್ತು. ಆದರೆ, ಬರುಬರುತ್ತಾ ಆಡಳಿತದ (ಸರ್ಕಾರದ) ಬೇಜವಬ್ದಾರಿ ಹಾಗೂ ನಿರ್ಲಕ್ಷ್ಯದಿಂದ ಕಾರ್ಯಕ್ರಮ ಹಳ್ಳ ಹಿಡಿಯಿತು ಎಂದು ಹೇಳಿದ್ದಾರೆ.

ನಲಿ ಕಲಿ ಕಾರ್ಯಕ್ರಮ ಉತ್ತಮವಾಗಿದ್ದರೂ, ಅದನ್ನು ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಮಾತ್ರ ಜಾರಿಗೆ ತರಲಾಯಿತು. ಖಾಸಗಿ ಶಾಲೆಗಳಲ್ಲಿ ಅದು ಜಾರಿಗೆ ಬರಲಿಲ್ಲ. ಹಾಗಾಗಿ, ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಮಕ್ಕಳ ಕಲಿಕಾ ವಿಧಾನ ಬದಲಾಯಿತು. ಖಾಸಗಿ ಶಾಲೆಗಳ ಮಕ್ಕಳು ಪುಸ್ತಕ ಆಧಾರಿತ ಕಲಿಕಾ ವಿಧಾನದ ಮೂಲಕ ಮುಂದುವರಿಯುತ್ತಿದ್ದರೆ, ನಲಿಕಲಿಯ ಪ್ರಾಯೋಗಿಕ ಕಲಿಕೆ ಸರಿಯಾಗಿ ಜಾರಿಯಾಗದೆ ಸರ್ಕಾರಿ ಶಾಲೆಯ ಮಕ್ಕಳು ಹಿಂದುಳಿದರು. ಇದು ನಲಿಕಲಿ ಕಾರ್ಯಕ್ರಮದ ಬಗ್ಗೆ ಪೋಷಕರಲ್ಲೇ ಅಸಮಾಧಾನ ಮೂಡುವಂತೆ ಮಾಡಿತು ಎಂದಿದ್ದಾರೆ.

ನಲಿಕಲಿ ಕಾರ್ಯಕ್ರಮದಲ್ಲಿ 1ರಿಂದ 3ನೇ ತರಗತಿವರೆಗಿನ ಮಕ್ಕಳನ್ನು ಒಂದೇ ತರಗತಿ ಕೊಠಡಿಯಲ್ಲಿ ಕೂರಿಸಿ ಕಲಿಸುವ ವಿಧಾನವಿದೆ. ಇದನ್ನೇ ಲಾಭ ಮಾಡಿಕೊಂಡ ಸರ್ಕಾರ ಮೂರು ತರಗತಿಗಳಿಗೆ ಮೂವರು ಶಿಕ್ಷಕರನ್ನು ನೇಮಿಸುವ ಬದಲು, ಒಬ್ಬರೇ ಶಿಕ್ಷಕರನ್ನು ನೇಮಿಸಲು ಶುರು ಮಾಡಿತು. ಅದರಲ್ಲೂ ನಲಿಕಲಿ ತರಗತಿಗಳ ಬಗ್ಗೆ ನಿರ್ಲಕ್ಷ್ಯ ತೋರಿ ಅಥಿತಿ ಶಿಕ್ಷಕರನ್ನು ನೇಮಿಸಲು ಪ್ರಾರಂಭಿಸಿತು. ಆ ಅತಿಥಿ ಶಿಕ್ಷಕರಿಗೆ ನಲಿಕಲಿಯ ಮೂಲ ಉದ್ದೇಶವೇ ಗೊತ್ತಿರುವುದಿಲ್ಲ. ಇದರಿಂದ ಕಾರ್ಯಕ್ರಮದ ಉದ್ದೇಶವೇ ಬದಲಾಯಿತು ಎಂದು ಹೇಳಿದ್ದಾರೆ.

ಹೈದರಾಬಾದ್ ಕರ್ನಾಟಕದಲ್ಲಿ, ಅದರಲ್ಲೂ ರಾಯಚೂರಿನಂತಹ ಜಿಲ್ಲೆಗಳಲ್ಲಿ 1ರಿಂದ 3ನೇ ತರಗತಿ ಮಕ್ಕಳ ಸಂಖ್ಯೆ ಹೆಚ್ಚಿದ್ದರಿಂದ ಒಂದೇ ನಲಿಕಲಿ ತರಗತಿಯಲ್ಲಿ ಕೂರಿಸಿ ಅವರಿಗೆ ಪಾಠ ಮಾಡುವುದು ಸವಾಲಾಯಿತು. ಇದರಿಂದ ಮಕ್ಕಳು ಕಲಿಯಲು ಅಸಾಧ್ಯವಾಯಿತು. 1ನೇ ತರಗತಿ ಮತ್ತು 3ನೇ ತರಗತಿ ಮಕ್ಕಳ ನಡುವಿನ ವಯಸ್ಸಿನ ಅಂತರವೂ, ಅವರು ಒಂದೇ ತರಗತಿಯಲ್ಲಿ ಹೊಂದಿಕೊಳ್ಳುವುದಕ್ಕೆ ಅಡ್ಡಿಯಾಯಿತು. ಇವೆಲ್ಲವೂ ಕಾರ್ಯಕ್ರಮ ಹಳ್ಳ ಹಿಡಿಯಲು ಕಾರಣವಾಯಿತು ಎಂದು ತಿಳಿಸಿದ್ದಾರೆ.

ಉತ್ತಮ ಉದ್ದೇಶದಿಂದ ನಲಿಕಲಿ ಕಾರ್ಯಕ್ರಮ ಪ್ರಾರಂಭಿಸಿದ್ದರೂ, ಅದನ್ನು ಸರ್ಕಾರ ಜಾರಿ ಮಾಡಿದ ರೀತಿಯಿಂದ ಈಗ ಸಮಸ್ಯೆಗಳಿಂದ ತುಂಬಿಕೊಂಡಿದೆ. ಈಗಿನ ಪರಿಸ್ಥಿತಿಯನ್ನು ನೋಡಿದರೆ ನಲಿಕಲಿಯ ಮಕ್ಕಳು ಖಾಸಗಿ ಶಾಲೆಗಳ ಮಕ್ಕಳಿಗಿಂತ ಕಲಿಕೆಯಲ್ಲಿ ಹಿಂದುಳಿದಿರುವುದು ಸತ್ಯ. ಹೀಗಿರುವಾಗ ಈ ಕಾರ್ಯಕ್ರಮವನ್ನು ಕೈಬಿಟ್ಟು ಪ್ರತ್ಯೇಕ ತರಗತಿಗಳನ್ನು ನಡೆಸುವುದು ಒಳಿತು. ಸರ್ಕಾರ ಪ್ರತೀ ತರಗತಿಗೆ ಅಗತ್ಯ ಶಿಕ್ಷಕರನ್ನು ನೇಮಿಸಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವತ್ತ ಗಮನಹರಿಸಬೇಕು ಎಂದು ಶ್ರೀಪಾದ್ ಭಟ್ ಹೇಳಿದ್ದಾರೆ.

ಶಿಕ್ಷಣ ತಜ್ಞ ನಿರಂಜನಾರಾಧ್ಯ ಮಾತನಾಡಿ, “ಒಂದೇ ಕೊಠಡಿಯಲ್ಲಿ ಮೂರು ತರಗತಿಗಳ ಮಕ್ಕಳನ್ನು ಕೂರಿಸಿ ಪಾಠ ಹೇಳಿಕೊಡುವ ಕ್ರಮ ಅಷ್ಟೊಂದು ಸರಿಯಾಗಿಲ್ಲ. ಹಾಗಾಗಿ, ಸರ್ಕಾರ ನಲಿಕಲಿ ಕಾರ್ಯಕ್ರಮವನ್ನು ಸ್ಥಗಿತಗೊಳಿಸಲಿ. ಅದರ ಬದಲಾಗಿ ಪ್ರತ್ಯೇಕ ತರಗತಿಗಳನ್ನು ನಡೆಸಲಿ. ಅದಕ್ಕೆ ಅಗತ್ಯವಿರುವ ಶಿಕ್ಷಕರು ಮತ್ತು ಇತರ ವ್ಯವಸ್ಥೆಗಳನ್ನು ಒದಗಿಸಲಿ ಎಂದಿದ್ದಾರೆ.

ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಎಚ್.ವೈ ಮೇಟಿ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...