Homeಕರ್ನಾಟಕವರ್ತೂರು ಪೊಲೀಸರಿಂದ ಮಹಿಳೆ ಮೇಲೆ ಹಲ್ಲೆ ಆರೋಪ : ವರದಿ ಕೇಳಿದ ಗೃಹ ಸಚಿವ ಪರಮೇಶ್ವರ್

ವರ್ತೂರು ಪೊಲೀಸರಿಂದ ಮಹಿಳೆ ಮೇಲೆ ಹಲ್ಲೆ ಆರೋಪ : ವರದಿ ಕೇಳಿದ ಗೃಹ ಸಚಿವ ಪರಮೇಶ್ವರ್

- Advertisement -
- Advertisement -

ಪಶ್ಚಿಮ ಬಂಗಾಳ ಮೂಲದ ಮನೆ ಕೆಲಸದ ಮಹಿಳೆ ಮೇಲೆ ಬೆಂಗಳೂರಿನ ವರ್ತೂರು ಠಾಣೆ ಪೊಲೀಸರು ತೀವ್ರವಾಗಿ ಹಲ್ಲೆ ನಡೆಸಿರುವ ಕುರಿತು ವರದಿ ಕೇಳಿರುವುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.

ಮಂಗಳವಾರ (ನ.4) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರಕರಣ ನನ್ನ ಗಮನಕ್ಕೆ ಬಂದಿದೆ. ಮಹಿಳಾ ಪೊಲೀಸರು ಹೊಡೆದಿದ್ದಾರೆ ಎಂಬ ವಿಷಯ ಗೊತ್ತಾಗಿದೆ. ಈ ಬಗ್ಗೆ ವಿವರವಾದ ವರದಿ ಕೊಡುವಂತೆ ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದೇನೆ. ವರದಿ ಬಂದ ಬಳಿಕ ಮುಂದಿನ ಕ್ರಮದ ಬಗ್ಗೆ ತೀರ್ಮಾನಿಸುತ್ತೇವೆ” ಎಂದಿದ್ದಾರೆ.

ಏನಿದು ಪ್ರಕರಣ? ಬೆಂಗಳೂರಿನ ಬಳಗೆರೆಯ ಕಾರ್ಮಿಕರ ಶೆಡ್‌ನಲ್ಲಿ ವಾಸವಿದ್ದ ಪಶ್ಚಿಮ ಬಂಗಾಳ ಮೂಲದ ಮಹಿಳೆ ಸುಂದರಿ ಬೀಬಿ ಮತ್ತು ಆಕೆಯ ಪತಿ ಮೇಲೆ ಅಕ್ಟೋಬರ್ 30ರಂದು ವರ್ತೂರು ಪೊಲೀಸ್ ಠಾಣೆಯ ನಾಲ್ವರು ಪುರುಷ ಹಾಗೂ ಮೂವರು ಮಹಿಳಾ ಸಿಬ್ಬಂದಿ ಲಾಠಿಯಿಂದ ಮನಸೋ ಇಚ್ಚೆ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಅಕ್ಟೋಬರ್ 30ರಂದು ಬೆಳಿಗ್ಗೆ 9ಗಂಟೆಯ ಹೊತ್ತಿಗೆ ಮಹಿಳೆ ಮನೆ ಕೆಲಸ ಮಾಡುತ್ತಿದ್ದ ಶೋಭಾ ಫ್ಲ್ಯಾಟ್‌ನಿಂದ ವರ್ತೂರು ಠಾಣೆಯ ಪೊಲೀಸರು ಕರೆದೊಯ್ದಿದ್ದರು. ಫ್ಲ್ಯಾಟ್‌ನಲ್ಲಿ ವಾಸವಿರುವ ಟೆಕ್ಕಿ ದಂಪತಿ ಅವರ 5 ಲಕ್ಷ ರೂ ಬೆಲೆ ಬಾಳುವ ವಜ್ರದ ಉಂಗುರವನ್ನು ಸುಂದರಿ ಬೀಬಿ ಕದ್ದಿದ್ದಾರೆ ಎಂದು ಆರೋಪಿಸಿದ್ದರು. ಠಾಣೆಗೆ ಕರೆದೊಯ್ದ ಪೊಲೀಸರು ಅಮಾನವೀಯವಾಗಿ ಥಳಿಸಿದ್ದಾರೆ. ಈ ವಿಷಯ ತಿಳಿದು ಆಕೆಯ ಪತಿ ಸಹಾಯಕ್ಕೆ ಧಾವಿಸಿದ್ದರು. ಪೊಲೀಸರು ಅವರನ್ನೂ ಕೂಡಿ ಹಾಕಿ ಥಳಿಸಿದ್ದಾರೆ ಎಂದು ವರದಿಯಾಗಿದೆ.

ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪೊಲೀಸರು ನಿರಂತರ ಹಲ್ಲೆ ಮಾಡಿದ್ದಾರೆ. ಸಂಜೆ ಕಲೀಮುಲ್ಲಾ ಎಂಬ ಸಾಮಾಜಿಕ ಕಾರ್ಯಕರ್ತ ಕರೆ ಮಾಡಿ ವಿಚಾರಿಸಿದ ಬಳಿಕ ಪೊಲೀಸರು ಹಲ್ಲೆ ನಿಲ್ಲಿಸಿ ಲಾಠಿ ಬಚ್ಚಿಟ್ಟಿದ್ದರು. ಬಳಿಕ ರಾತ್ರಿ 7 ಗಂಟೆಯವರೆಗೆ ಠಾಣೆಯಲ್ಲೇ ಕೂರಿಸಿಕೊಂಡು, ಹಲ್ಲೆಯ ವಿಚಾರವನ್ನು ಎಲ್ಲೂ ಹೇಳದಂತೆ ಬೆದರಿಸಿ ಕಳುಹಿಸಿದ್ದಾರೆ ಎಂದು ವರದಿ ತಿಳಿಸಿದೆ.

ಸುಂದರಿ ಬೀಬಿ ದಂಪತಿಗೆ ನಾಲ್ವರು ಮಕ್ಕಳಿದ್ದಾರೆ. ಅವರನ್ನು ಪಶ್ಚಿಮ ಬಂಗಾಳದಲ್ಲೇ ಬಿಟ್ಟು ಕೆಲಸ ಮಾಡಲು ಬೆಂಗಳೂರಿಗೆ ಬಂದಿದ್ದರು. ಗಂಡ ಬಿಬಿಎಂಪಿ ಕಸದ ಲಾರಿಯಲ್ಲಿ ಕೆಲಸ ಮಾಡುತ್ತಿದ್ದರೆ, ಹೆಂಡತಿ ಮನೆ ಕೆಲಸ ಮಾಡುತ್ತಿದ್ದರು. ಕಳೆದ 3 ತಿಂಗಳಿನಿಂದ ಸುಂದರಿ ಬೀಬಿ ವರ್ತೂರಿನ ಶೋಭಾ ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್‌ಗೆ ಕೆಲಸಕ್ಕೆ ಹೋಗುತ್ತಿದ್ದರು.

ಅಕ್ಟೋಬರ್ 30ರಂದು ಬೆಳಿಗ್ಗೆ ಸುಂದರಿ ಬಾಲ್ಕನಿಯಲ್ಲಿ ಕಸ ಗುಡಿಸುತ್ತಿದ್ದಾಗ, ಅಲ್ಲಿ ಬಿದ್ದಿದ್ದ 100 ರೂ. ನೋಟನ್ನು ತೆಗೆದುಕೊಂಡಿದ್ದರು. ಈ ವೇಳೆ ಅಲ್ಲಿಗೆ ಬಂದ ಫ್ಲ್ಯಾಟ್ ಮಾಲೀಕರು, ಸುಂದರಿಯ ಕೈ ಹಿಡಿದುಕೊಂಡು ಕಳ್ಳಿ ಎಂದು ನಿಂದಿಸಿದ್ದರು. ಅಲ್ಲದೆ, ಈ ಹಿಂದೆಯೂ ಫ್ಲ್ಯಾಟ್‌ನಲ್ಲಿ ವಜ್ರದ ಉಂಗುರ ಕದ್ದಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಪೊಲೀಸರು ಕರೆದೊಯ್ದು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಸಂತ್ರಸ್ತೆ ನೀಡಿದ ದೂರು ಆಧರಿಸಿ ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಕೆ.ಪರಶುರಾಮ್ ನೇತೃತ್ವದಲ್ಲಿ ಪೊಲೀಸರ ಆಂತರಿಕ ತನಿಖೆ ಆರಂಭವಾಗಿದೆ. “ಮನೆಗೆಲಸದ ಮಹಿಳೆಯನ್ನು ಠಾಣೆಗೆ ಕರೆಸಿ ಹಲ್ಲೆ ನಡೆಸಿದ ಆರೋಪದ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಡಿಸಿಪಿಗೆ ಸೂಚಿಸಲಾಗಿದೆ. ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು” ಎಂದು ಪಶ್ಚಿಮ ವಿಭಾಗದ ಜಂಟಿ ಪೊಲೀಸ್ ಆಯುಕ್ತ ರಮೇಶ್‌ ಬಾನೋತ್ ತಿಳಿಸಿದ್ದಾರೆ.

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ವೈಟ್‌ಫೀಲ್ಡ್ ವಿಭಾಗದ ಡಿಸಿಪಿಗೆ ಪತ್ರ ಬರೆದಿದ್ದು, ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದಾರೆ ಎಂದು ವರದಿಯಾಗಿದೆ.

ಸುಂದರಿ ಬೀಬಿಯ ಪತಿಯು ವರ್ತೂರು ಪೊಲೀಸರ ದೌರ್ಜನ್ಯದ ಬಗ್ಗೆ ಪಶ್ಚಿಮ ಬಂಗಾಳ ವಲಸೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಮಂಡಳಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಸಮೀರುಲ್ಲಾ ಅವರಿಗೆ ದೂರವಾಣಿ ಮೂಲಕ ಮಾಹಿತಿ ನೀಡಿದ್ದರು. ಈ ಮೂಲಕ ವಿಷಯ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಕಚೇರಿಗೂ ತಲುಪಿಸಿದೆ. ಅಲ್ಲಿನ ಅಧಿಕಾರಿಗಳು ಈ ಘಟನೆ ಸಂಬಂಧ ಬೆಂಗಳೂರು ಪೊಲೀಸರಿಂದ ಸ್ಪಷ್ಟೀಕರಣ ಕೋರಿದ್ದಾರೆ ವರದಿಗಳು ಹೇಳಿವೆ.

ಪೊಲೀಸರು ಮಹಿಳೆಯ ಖಾಸಗಿ ಅಂಗಕ್ಕೆ ಥಳಿಸಿ ಕ್ರೌರ್ಯ ಮೆರೆದಿದ್ದಾರೆ. ಇದರಿಂದ ಆಕೆ ಮೂತ್ರ ವಿಸರ್ಜನೆ ಮಾಡಲೂ ಆಗದೆ ನರಕಯಾತನೆ ಅನುಭವಿಸುತ್ತಿದ್ದಾರೆ. ಬೌರಿಂಗ್ ಆಸ್ಪತ್ರೆಯ ಎಂಎಲ್​​ಸಿ ರಿಪೋರ್ಟ್​ನಲ್ಲಿ ಗಾಯದ ಭೀಕರತೆ ಬಗ್ಗೆ ಉಲ್ಲೇಖಿಸಲಾಗಿದೆ. ಸದ್ಯ ವೈದ್ಯರ ಚಿಕಿತ್ಸೆ ನಂತರ ಮಹಿಳೆ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ.

‘ನಲಿ ಕಲಿ’ ಕಾರ್ಯಕ್ರಮ ಸ್ಥಗಿತಗೊಳಿಸಲು ಮುಂದಾದ ಸರ್ಕಾರ : ಶಿಕ್ಷಣ ತಜ್ಞರು ಏನಂದ್ರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...