Homeಮುಖಪುಟಎಸ್‌ಐಆರ್‌ಗೆ ತೀವ್ರ ವಿರೋಧ : ಕೋಲ್ಕತ್ತಾದಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಿದ ಮಮತಾ ಬ್ಯಾನರ್ಜಿ

ಎಸ್‌ಐಆರ್‌ಗೆ ತೀವ್ರ ವಿರೋಧ : ಕೋಲ್ಕತ್ತಾದಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಿದ ಮಮತಾ ಬ್ಯಾನರ್ಜಿ

- Advertisement -
- Advertisement -

ಭಾರತೀಯ ಚುನಾವಣಾ ಆಯೋಗ ಕೈಗೊಂಡಿರುವ ಎರಡನೇ ಹಂತದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವಿರುದ್ದದ ಪ್ರತಿಭಟನೆಗಳು ಸದ್ದಿಲ್ಲದೆ ಕಾವು ಪಡೆದುಕೊಳ್ಳುತ್ತಿವೆ.

ಇತ್ತ ತಮಿಳುನಾಡಿನ ಆಡಳಿತರೂಢ ಡಿಎಂಕೆ ಪಕ್ಷ ಎಸ್‌ಐಆರ್‌ ವಿರುದ್ದ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರೆ, ಅತ್ತ ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬೀದಿಗಿಳಿದು ಹೋರಾಟ ಆರಂಭಿಸಿದ್ದಾರೆ.

ಇಂದು (ನ.4) ತಮ್ಮ ಸೋದರಳಿಯ ಮತ್ತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರೊಂದಿಗೆ ಕೋಲ್ಕತ್ತಾದ ರೆಡ್ ರೋಡ್‌ನಲ್ಲಿರುವ ಬಿ.ಆರ್. ಅಂಬೇಡ್ಕರ್ ಪ್ರತಿಮೆಯಿಂದ ರವೀಂದ್ರನಾಥ ಟ್ಯಾಗೋರ್ ಅವರ ಪೂರ್ವಜರ ಮನೆಯಾದ ಜೋರಾಸಂಕೊ ಠಾಕೂರ್ ಬಾರಿವರೆಗೆ 3.8 ಕಿಮೀ ರ‍್ಯಾಲಿಯನ್ನು ಮಮತಾ ಬ್ಯಾನರ್ಜಿ ನಡೆಸಿದ್ದಾರೆ.

ಈ ಪ್ರತಿಭಟನಾ ರ‍್ಯಾಲಿಯಲ್ಲಿ ಟಿಎಂಸಿ ಪಕ್ಷದ ಹಲವು ನಾಯಕರು ಮತ್ತು ಭಾರೀ ಸಂಖ್ಯೆಯಲ್ಲಿ ಬೆಂಬಲಿಗರು ಪಾಲ್ಗೊಂಡಿದ್ದರು.

ರ‍್ಯಾಲಿ ಬಳಿಕ ಮಾತನಾಡಿದ ಮಮತಾ ಬ್ಯಾನರ್ಜಿ, “ಎಸ್ಐಆರ್ ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಜೊತೆಗೂಡಿ ‘ಸದ್ದಿಲ್ಲದೆ, ಅದೃಶ್ಯವಾಗಿ ನಡೆಸುತ್ತಿರುವ ಮತಗಳ್ಳತನ’ ಎಂದು ಆರೋಪಿಸಿದ್ದಾರೆ.

ಅನೇಕ ಅಸಂಘಟಿತ ವಲಯದ ಕಾರ್ಮಿಕರು ಮತದಾರರ ಪಟ್ಟಿಯಿಂದ ತಮ್ಮ ಹೆಸರು ತೆಗೆದು ಹಾಕುವ ಆತಂಕದಲ್ಲಿದ್ದಾರೆ. ಬಂಗಾಳಿ ಭಾಷೆ ಮಾತನಾಡಿದ ತಕ್ಷಣ ಯಾರೂ ಬಾಂಗ್ಲಾದೇಶಿ ಆಗುವುದಿಲ್ಲ. ಹಿಂದಿ ಅಥವಾ ಪಂಜಾಬಿಯಲ್ಲಿ ಮಾತನಾಡುವವರು ಪಾಕಿಸ್ತಾನಿ ಆಗುವುದಿಲ್ಲ. ಬಂಗಾಳಿ ಭಾಷೆಯಲ್ಲಿ ಮಾತನಾಡುವವರನ್ನು ಬಾಂಗ್ಲಾದೇಶಿ ಎಂದು ಬ್ರಾಂಡ್ ಮಾಡಲಾಗುತ್ತಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಳ್ಳದ ಮೂರ್ಖರು ಆ ರೀತಿ ಆರೋಪ ಮಾಡುತ್ತಿದ್ದಾರೆ. ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಬಿಜೆಪಿ ಎಲ್ಲಿತ್ತು? ಅದಕ್ಕಾಗಿಯೇ ಅವರಿಗೆ ಸ್ವಾತಂತ್ರ್ಯ ಪೂರ್ವದಲ್ಲಿ ಭಾರತ, ಪಾಕಿಸ್ತಾನ, ಬಾಂಗ್ಲಾದೇಶ ಒಂದೇ ಆಗಿತ್ತು ಎಂಬುವುದು ಗೊತ್ತಿಲ್ಲ” ಎಂದಿದ್ದಾರೆ.

ಬಿಜೆಪಿ ಒಂದು ಲೂಟಿಕೋರ ಪಕ್ಷ. ಅವರು ಹಲವಾರು ಸಂಸ್ಥೆಗಳನ್ನು ತಮ್ಮ ಸ್ವಾರ್ಥಕ್ಕೆ ಬಳಸಿಕೊಂಡಿದ್ದಾರೆ, ನಕಲಿ ಸುದ್ದಿ ಮತ್ತು ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ. ಆದರೆ, ಭವಿಷ್ಯದಲ್ಲಿ ಅವರು ಅಧಿಕಾರಕ್ಕೆ ಬರುವುದಿಲ್ಲ ಎಂದು ಹೇಳಿದ್ದಾರೆ.

ಅಭಿಷೇಕ್ ಬ್ಯಾನರ್ಜಿ ಮಾತನಾಡಿ, ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಎರಡು ದಿನಗಳಲ್ಲಿ ಇಷ್ಟು ದೊಡ್ಡ ರ್ಯಾಲಿಯನ್ನು ಏರ್ಪಡಿಸಲು ಸಾಧ್ಯವಾದರೆ, ನಾವು ದೆಹಲಿಗೆ ಪ್ರತಿಭಟನೆಗೆ ಹೋದರೆ ನಮ್ಮ ಜನಸಂದಣಿ ಎಷ್ಟಿರುತ್ತದೆ ಎಂದು ಬಿಜೆಪಿ ಯೋಚಿಸಬೇಕು. ನಾವು ದೆಹಲಿಯ ಜಮೀನ್ದಾರರಿಗೆ ತಲೆಬಾಗುವುದಿಲ್ಲ ಎಂದಿದ್ದಾರೆ.

ಎಸ್‌ಐಆರ್ ಪ್ರಕ್ರಿಯೆಯ ಬಗೆಗಿನ ಭಯವು ಈಗಾಗಲೇ ಹಲವಾರು ಜೀವಗಳನ್ನು ಬಲಿ ಪಡೆದಿದೆ. ಕಳೆದ ಏಳು ದಿನಗಳಲ್ಲಿ, ಎಸ್‌ಐಆರ್ ಭಯದಿಂದ ಸಾವನ್ನಪ್ಪಿದವರ ಕುಟುಂಬ ಸದಸ್ಯರು ಇಂದಿನ ರ್ಯಾಲಿಯಲ್ಲಿ ನಮ್ಮೊಂದಿಗೆ ಇದ್ದಾರೆ. ಪ್ರಾಣ ಕಳೆದುಕೊಂಡ ಏಳು ಜನರೂ ತಮ್ಮ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಭಯದಲ್ಲಿದ್ದರು ಎಂದು ಅಭಿಷೇಕ್ ಬ್ಯಾನರ್ಜಿ ಹೇಳಿದ್ದಾರೆ.

ಮತದಾರರ ಪಟ್ಟಿಯಿಂದ ಹೆಸರು ಅಳಿಸದಂತೆ ಬಿಜೆಪಿಗೆ ಎಚ್ಚರಿಕೆ ನೀಡಿದ ಅಭಿನಷೇಕ್ ಬ್ಯಾನರ್ಜಿ, ಒಬ್ಬನೇ ಒಬ್ಬ ಕಾನೂನುಬದ್ಧ ಮತದಾರ ತನ್ನ ಹೆಸರನ್ನು ಕಳೆದುಕೊಂಡರೆ, ಟಿಎಂಸಿ ದೆಹಲಿಯಲ್ಲಿ ಬಂಗಾಳದ ಜನರ ಶಕ್ತಿಯನ್ನು ತೋರಿಸುತ್ತದೆ ಎಂದಿದ್ದಾರೆ. ಕೇಂದ್ರವು ಸಿಎಎ ಶಿಬಿರಗಳನ್ನು ಸ್ಥಾಪಿಸುವ ಮೂಲಕ ನಾಟಕ ಮಾಡುತ್ತಿದೆ ಎಂದು ಆರೋಪಿಸಿದ ಅವರು, ನೀವು ಅವರ ಬಲೆಗೆ ಬಿದ್ದರೆ, ಎನ್‌ಆರ್‌ಸಿಯಿಂದಾಗಿ ಅಸ್ಸಾಂನಲ್ಲಿ 12 ಲಕ್ಷ ಹಿಂದೂ ಬಂಗಾಳಿಗಳು ತಮ್ಮ ಮತದಾನದ ಹಕ್ಕನ್ನು ಕಳೆದುಕೊಂಡಂತೆ ನೀವು ಎಲ್ಲವನ್ನೂ ಕಳೆದುಕೊಳ್ಳುತ್ತೀರಿ ಎಂದು ಜನರನ್ನು ಎಚ್ಚರಿಸಿದ್ದಾರೆ.

ದೆಹಲಿಯಲ್ಲಿ ಬೃಹತ್ ಪ್ರತಿಭಟನೆಗೆ ಸಿದ್ಧರಾಗಿರಿ ಎಂದು ಕರೆಕೊಟ್ಟ ಅವರು, ಪ್ರಧಾನಿ ಮೋದಿ ತಮ್ಮ ಇಚ್ಛೆಯಂತೆ ಸಾಮಾನ್ಯ ಜನರಿಗೆ ನಿಯಮಗಳನ್ನು ನಿರ್ದೇಶಿಸುತ್ತಿದ್ದಾರೆ, ಅದು ನೋಟು ರದ್ದತಿಯಾಗಿರಲಿ ಅಥವಾ ಪೌರತ್ವಕ್ಕಾಗಿ ದಾಖಲೆಗಳನ್ನು ಕೇಳುವುದಾಗಿರಲಿ ಎಂದು ಹೇಳಿದ್ದಾರೆ.

ತೀವ್ರ ವಿರೋಧದ ನಡುವೆಯೂ ಎರಡನೇ ಹಂತದ ಎಸ್‌ಐಆರ್‌ ಪ್ರಾರಂಭಿಸಿದ ಚುನಾವಣಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...