Homeಮುಖಪುಟಎಸ್‌ಐಆರ್‌ಗೆ ತೀವ್ರ ವಿರೋಧ : ಕೋಲ್ಕತ್ತಾದಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಿದ ಮಮತಾ ಬ್ಯಾನರ್ಜಿ

ಎಸ್‌ಐಆರ್‌ಗೆ ತೀವ್ರ ವಿರೋಧ : ಕೋಲ್ಕತ್ತಾದಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಿದ ಮಮತಾ ಬ್ಯಾನರ್ಜಿ

- Advertisement -
- Advertisement -

ಭಾರತೀಯ ಚುನಾವಣಾ ಆಯೋಗ ಕೈಗೊಂಡಿರುವ ಎರಡನೇ ಹಂತದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವಿರುದ್ದದ ಪ್ರತಿಭಟನೆಗಳು ಸದ್ದಿಲ್ಲದೆ ಕಾವು ಪಡೆದುಕೊಳ್ಳುತ್ತಿವೆ.

ಇತ್ತ ತಮಿಳುನಾಡಿನ ಆಡಳಿತರೂಢ ಡಿಎಂಕೆ ಪಕ್ಷ ಎಸ್‌ಐಆರ್‌ ವಿರುದ್ದ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರೆ, ಅತ್ತ ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬೀದಿಗಿಳಿದು ಹೋರಾಟ ಆರಂಭಿಸಿದ್ದಾರೆ.

ಇಂದು (ನ.4) ತಮ್ಮ ಸೋದರಳಿಯ ಮತ್ತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರೊಂದಿಗೆ ಕೋಲ್ಕತ್ತಾದ ರೆಡ್ ರೋಡ್‌ನಲ್ಲಿರುವ ಬಿ.ಆರ್. ಅಂಬೇಡ್ಕರ್ ಪ್ರತಿಮೆಯಿಂದ ರವೀಂದ್ರನಾಥ ಟ್ಯಾಗೋರ್ ಅವರ ಪೂರ್ವಜರ ಮನೆಯಾದ ಜೋರಾಸಂಕೊ ಠಾಕೂರ್ ಬಾರಿವರೆಗೆ 3.8 ಕಿಮೀ ರ‍್ಯಾಲಿಯನ್ನು ಮಮತಾ ಬ್ಯಾನರ್ಜಿ ನಡೆಸಿದ್ದಾರೆ.

ಈ ಪ್ರತಿಭಟನಾ ರ‍್ಯಾಲಿಯಲ್ಲಿ ಟಿಎಂಸಿ ಪಕ್ಷದ ಹಲವು ನಾಯಕರು ಮತ್ತು ಭಾರೀ ಸಂಖ್ಯೆಯಲ್ಲಿ ಬೆಂಬಲಿಗರು ಪಾಲ್ಗೊಂಡಿದ್ದರು.

ರ‍್ಯಾಲಿ ಬಳಿಕ ಮಾತನಾಡಿದ ಮಮತಾ ಬ್ಯಾನರ್ಜಿ, “ಎಸ್ಐಆರ್ ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಜೊತೆಗೂಡಿ ‘ಸದ್ದಿಲ್ಲದೆ, ಅದೃಶ್ಯವಾಗಿ ನಡೆಸುತ್ತಿರುವ ಮತಗಳ್ಳತನ’ ಎಂದು ಆರೋಪಿಸಿದ್ದಾರೆ.

ಅನೇಕ ಅಸಂಘಟಿತ ವಲಯದ ಕಾರ್ಮಿಕರು ಮತದಾರರ ಪಟ್ಟಿಯಿಂದ ತಮ್ಮ ಹೆಸರು ತೆಗೆದು ಹಾಕುವ ಆತಂಕದಲ್ಲಿದ್ದಾರೆ. ಬಂಗಾಳಿ ಭಾಷೆ ಮಾತನಾಡಿದ ತಕ್ಷಣ ಯಾರೂ ಬಾಂಗ್ಲಾದೇಶಿ ಆಗುವುದಿಲ್ಲ. ಹಿಂದಿ ಅಥವಾ ಪಂಜಾಬಿಯಲ್ಲಿ ಮಾತನಾಡುವವರು ಪಾಕಿಸ್ತಾನಿ ಆಗುವುದಿಲ್ಲ. ಬಂಗಾಳಿ ಭಾಷೆಯಲ್ಲಿ ಮಾತನಾಡುವವರನ್ನು ಬಾಂಗ್ಲಾದೇಶಿ ಎಂದು ಬ್ರಾಂಡ್ ಮಾಡಲಾಗುತ್ತಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಳ್ಳದ ಮೂರ್ಖರು ಆ ರೀತಿ ಆರೋಪ ಮಾಡುತ್ತಿದ್ದಾರೆ. ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಬಿಜೆಪಿ ಎಲ್ಲಿತ್ತು? ಅದಕ್ಕಾಗಿಯೇ ಅವರಿಗೆ ಸ್ವಾತಂತ್ರ್ಯ ಪೂರ್ವದಲ್ಲಿ ಭಾರತ, ಪಾಕಿಸ್ತಾನ, ಬಾಂಗ್ಲಾದೇಶ ಒಂದೇ ಆಗಿತ್ತು ಎಂಬುವುದು ಗೊತ್ತಿಲ್ಲ” ಎಂದಿದ್ದಾರೆ.

ಬಿಜೆಪಿ ಒಂದು ಲೂಟಿಕೋರ ಪಕ್ಷ. ಅವರು ಹಲವಾರು ಸಂಸ್ಥೆಗಳನ್ನು ತಮ್ಮ ಸ್ವಾರ್ಥಕ್ಕೆ ಬಳಸಿಕೊಂಡಿದ್ದಾರೆ, ನಕಲಿ ಸುದ್ದಿ ಮತ್ತು ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ. ಆದರೆ, ಭವಿಷ್ಯದಲ್ಲಿ ಅವರು ಅಧಿಕಾರಕ್ಕೆ ಬರುವುದಿಲ್ಲ ಎಂದು ಹೇಳಿದ್ದಾರೆ.

ಅಭಿಷೇಕ್ ಬ್ಯಾನರ್ಜಿ ಮಾತನಾಡಿ, ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಎರಡು ದಿನಗಳಲ್ಲಿ ಇಷ್ಟು ದೊಡ್ಡ ರ್ಯಾಲಿಯನ್ನು ಏರ್ಪಡಿಸಲು ಸಾಧ್ಯವಾದರೆ, ನಾವು ದೆಹಲಿಗೆ ಪ್ರತಿಭಟನೆಗೆ ಹೋದರೆ ನಮ್ಮ ಜನಸಂದಣಿ ಎಷ್ಟಿರುತ್ತದೆ ಎಂದು ಬಿಜೆಪಿ ಯೋಚಿಸಬೇಕು. ನಾವು ದೆಹಲಿಯ ಜಮೀನ್ದಾರರಿಗೆ ತಲೆಬಾಗುವುದಿಲ್ಲ ಎಂದಿದ್ದಾರೆ.

ಎಸ್‌ಐಆರ್ ಪ್ರಕ್ರಿಯೆಯ ಬಗೆಗಿನ ಭಯವು ಈಗಾಗಲೇ ಹಲವಾರು ಜೀವಗಳನ್ನು ಬಲಿ ಪಡೆದಿದೆ. ಕಳೆದ ಏಳು ದಿನಗಳಲ್ಲಿ, ಎಸ್‌ಐಆರ್ ಭಯದಿಂದ ಸಾವನ್ನಪ್ಪಿದವರ ಕುಟುಂಬ ಸದಸ್ಯರು ಇಂದಿನ ರ್ಯಾಲಿಯಲ್ಲಿ ನಮ್ಮೊಂದಿಗೆ ಇದ್ದಾರೆ. ಪ್ರಾಣ ಕಳೆದುಕೊಂಡ ಏಳು ಜನರೂ ತಮ್ಮ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಭಯದಲ್ಲಿದ್ದರು ಎಂದು ಅಭಿಷೇಕ್ ಬ್ಯಾನರ್ಜಿ ಹೇಳಿದ್ದಾರೆ.

ಮತದಾರರ ಪಟ್ಟಿಯಿಂದ ಹೆಸರು ಅಳಿಸದಂತೆ ಬಿಜೆಪಿಗೆ ಎಚ್ಚರಿಕೆ ನೀಡಿದ ಅಭಿನಷೇಕ್ ಬ್ಯಾನರ್ಜಿ, ಒಬ್ಬನೇ ಒಬ್ಬ ಕಾನೂನುಬದ್ಧ ಮತದಾರ ತನ್ನ ಹೆಸರನ್ನು ಕಳೆದುಕೊಂಡರೆ, ಟಿಎಂಸಿ ದೆಹಲಿಯಲ್ಲಿ ಬಂಗಾಳದ ಜನರ ಶಕ್ತಿಯನ್ನು ತೋರಿಸುತ್ತದೆ ಎಂದಿದ್ದಾರೆ. ಕೇಂದ್ರವು ಸಿಎಎ ಶಿಬಿರಗಳನ್ನು ಸ್ಥಾಪಿಸುವ ಮೂಲಕ ನಾಟಕ ಮಾಡುತ್ತಿದೆ ಎಂದು ಆರೋಪಿಸಿದ ಅವರು, ನೀವು ಅವರ ಬಲೆಗೆ ಬಿದ್ದರೆ, ಎನ್‌ಆರ್‌ಸಿಯಿಂದಾಗಿ ಅಸ್ಸಾಂನಲ್ಲಿ 12 ಲಕ್ಷ ಹಿಂದೂ ಬಂಗಾಳಿಗಳು ತಮ್ಮ ಮತದಾನದ ಹಕ್ಕನ್ನು ಕಳೆದುಕೊಂಡಂತೆ ನೀವು ಎಲ್ಲವನ್ನೂ ಕಳೆದುಕೊಳ್ಳುತ್ತೀರಿ ಎಂದು ಜನರನ್ನು ಎಚ್ಚರಿಸಿದ್ದಾರೆ.

ದೆಹಲಿಯಲ್ಲಿ ಬೃಹತ್ ಪ್ರತಿಭಟನೆಗೆ ಸಿದ್ಧರಾಗಿರಿ ಎಂದು ಕರೆಕೊಟ್ಟ ಅವರು, ಪ್ರಧಾನಿ ಮೋದಿ ತಮ್ಮ ಇಚ್ಛೆಯಂತೆ ಸಾಮಾನ್ಯ ಜನರಿಗೆ ನಿಯಮಗಳನ್ನು ನಿರ್ದೇಶಿಸುತ್ತಿದ್ದಾರೆ, ಅದು ನೋಟು ರದ್ದತಿಯಾಗಿರಲಿ ಅಥವಾ ಪೌರತ್ವಕ್ಕಾಗಿ ದಾಖಲೆಗಳನ್ನು ಕೇಳುವುದಾಗಿರಲಿ ಎಂದು ಹೇಳಿದ್ದಾರೆ.

ತೀವ್ರ ವಿರೋಧದ ನಡುವೆಯೂ ಎರಡನೇ ಹಂತದ ಎಸ್‌ಐಆರ್‌ ಪ್ರಾರಂಭಿಸಿದ ಚುನಾವಣಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...