Homeಅಂತರಾಷ್ಟ್ರೀಯಇತಿಹಾಸ ಸೃಷ್ಟಿಸಿದ ಝೊಹ್ರಾನ್ ಮಮ್ದಾನಿ : ನ್ಯೂಯಾರ್ಕ್‌ನ ನೂತನ ಮೇಯರ್ ಆಗಿ ಆಯ್ಕೆ

ಇತಿಹಾಸ ಸೃಷ್ಟಿಸಿದ ಝೊಹ್ರಾನ್ ಮಮ್ದಾನಿ : ನ್ಯೂಯಾರ್ಕ್‌ನ ನೂತನ ಮೇಯರ್ ಆಗಿ ಆಯ್ಕೆ

- Advertisement -
- Advertisement -

ನ್ಯೂಯಾರ್ಕ್ ನಗರದ ಮೇಯರ್ ಚುನಾವಣೆಯಲ್ಲಿ ಭಾರತೀಯ ಮೂಲದ ಎಡಪಂಥೀಯ ಸಮಾಜವಾದಿ, 34 ವರ್ಷದ ಝೊಹ್ರಾನ್ ಕ್ವಾಮೆ ಮಮ್ದಾನಿ ಜಯಗಳಿಸಿದ್ದಾರೆ. ಈ ಮೂಲಕ ಅಮೆರಿಕದ ಅತಿದೊಡ್ಡ ನಗರದ ಮೊದಲ ಮುಸ್ಲಿಂ ಮೇಯರ್ ಆಗಿ ಇತಿಹಾಸ ಸೃಷ್ಟಿಸಿದ್ದಾರೆ.

ಮಂಗಳವಾರ (ನವೆಂಬರ್ 4, 2025) ನಡೆದ ಚುನಾವಣೆಯಲ್ಲಿ ಒಟ್ಟು 20 ಲಕ್ಷ ಮತಗಳು ಚಲಾವಣೆಯಾಗಿದ್ದು, ಅದರಲ್ಲಿ ಅತಿ ಹೆಚ್ಚು, ಅಂದರೆ ಶೇಕಡ 50ರಷ್ಟು ಅಥವಾ 10 ಲಕ್ಷ ಮತಗಳನ್ನು ಪಡೆಯುವ ಮೂಲಕ ಮಮ್ದಾನಿ ಗೆಲುವು ಸಾಧಿಸಿದ್ದಾರೆ.

ಅವರ ಪ್ರತಿಸ್ಪರ್ಧಿಗಳಾದ ಸ್ವತಂತ್ರ ಅಭ್ಯರ್ಥಿ ಆಂಡ್ರ್ಯೂ ಕ್ಯೂಮೋ ಪರ ಶೇಕಡ 40ರಷ್ಟು ಅಥವಾ 8 ಲಕ್ಷ ಮತಗಳು ಚಲಾವಣೆಯಾಗಿವೆ. ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಕರ್ಟಿಸ್ ಸ್ಲಿವಾ ಪರ ಕೇವಲ 10 ಶೇಕಡ ಜನರು ಮಾತ್ರ ಮತ ಹಾಕಿದ್ದಾರೆ. ಇನ್ನು ಭ್ರಷ್ಟಾಚಾರದ ಆರೋಪ ಹೊತ್ತು ಮೇಯರ್ ಸ್ಥಾನದಿಂದ ನಿರ್ಗಮಿಸಿದ್ದ ಸ್ವತಂತ್ರ ಅಭ್ಯರ್ಥಿ ಎರಿಕ್ ಆಡಮ್ಸ್ ಈ ಬಾರಿ ಚುನಾವಣೆಯಿಂದ ಹೊರಗುಳಿದಿದ್ದರು.

2025ರ ಜೂನ್‌ನಲ್ಲಿ ಎಲ್ಲಾ ಪಕ್ಷಗಳ ಒಳಗೆ ಯಾರು ಅಭ್ಯರ್ಥಿಯಾಗಬೇಕು ಎಂಬ ಪ್ರಾಥಮಿಕ ಚುನಾವಣೆ ನಡೆದಿತ್ತು. ಡೆಮಾಕ್ರಟಿಕ್ ಪಕ್ಷದಲ್ಲಿ ಆಂಡ್ರ್ಯೂ ಕ್ಯೂಮೋ ವಿರುದ್ದ ಮಮ್ದಾನಿ ಗೆದ್ದಿದ್ದರು. ನವೆಂಬರ್ 4ರಂದು ಸಾರ್ವತ್ರಿಕ ಚುನಾವಣೆ (ಜನರಲ್ ಎಲೆಕ್ಷನ್) ನಡೆದಿದೆ. ಇದರಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಕ್ಯೂಮೋ ಅವರನ್ನು ಮತ್ತೆ ಸೋಲಿಸಿ ಮಮ್ದಾನಿ ಗೆಲುವಿನ ನಗೆ ಬೀರಿದ್ದಾರೆ.

ಈ ಬಾರಿ ಚಲಾವಣೆಯಾದ 20 ಲಕ್ಷ ಮತಗಳು ಕಳೆದ 40 ವರ್ಷಗಳಲ್ಲಿ ಅತ್ಯಧಿಕ ಎಂದು ವರದಿಗಳು ಹೇಳಿವೆ. ಶೇಕಡ 80ರಷ್ಟು ಮತಗಳು ಎಣಿಕೆಯಾದ ಬಳಿಕ, ಮಮ್ದಾನಿ ಗೆಲುವಿನ ಕುರಿತು ಅಂತಾರಾಷ್ಟ್ರೀಯ ಮಾಧ್ಯಮಗಳಾದ ಎನ್‌ಬಿಸಿ, ಸಿಎನ್‌ಎನ್‌ ಮತ್ತು ಪೊಲಿಟಿಕೋ ವರದಿ ಮಾಡಿವೆ.

ಪ್ರಾಥಮಿಕ ಚುನಾವಣೆಯಲ್ಲಿ ಗೆಲುವು ಸಾಧಿಸಿ ಮಮ್ದಾನಿ ಡೆಮಾಕ್ರಟಿಕ್ ಪಕ್ಷದ ಮೇಯರ್ ಅಭ್ಯರ್ಥಿಯಾಗಿ ಆಯ್ಕೆಯಾದಾಗ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಟೀಕಿಸಿದ್ದರು. ಮಮ್ದಾನಿ ‘ಶೇ.100ರಷ್ಟು ಕಮ್ಯೂನಿಸ್ಟ್ ಹುಚ್ಚ’ ಎಂದು‌ ಜರೆದಿದ್ದರು.

ಅಮೆರಿಕದ ಕಾಂಗ್ರೆಸ್ (ಸಂಸತ್‌) ಸದಸ್ಯೆ ಅಲೆಕ್ಸಾಂಡ್ರಿಯಾ ಒಕಾಸಿಯೊ-ಕೊರ್ಟೆಝ್ (ಎಒಸಿ) ಮತ್ತು ಸೆನೆಟರ್ ಚಕ್ ಶುಮರ್ ಸೇರಿದಂತೆ, ಮಮ್ದಾನಿ‌ ಅವರನ್ನು ಬೆಂಬಲಿಸಿದ ಇತರ ಪ್ರಗತಿಪರ ನಾಯಕರ ವಿರುದ್ದವೂ ಟ್ರಂಪ್‌ ಕಿಡಿಕಾರಿದ್ದರು.

“ಶೇ.100ರಷ್ಟು ಕಮ್ಯೂನಿಸ್ಟ್ ಹುಚ್ಚರಾದ ಝೊಹ್ರಾನ್ ಮಮ್ದಾನಿ‌ ಅವರನ್ನು ನ್ಯೂಯಾರ್ಕ್‌ ನಗರದ ಮೇಯರ್‌ ಅಭ್ಯರ್ಥಿಯ ಪ್ರಾಥಮಿಕ ಚುನಾವಣೆಯಲ್ಲಿ ಆಯ್ಕೆ ಮಾಡುವ ಮೂಲಕ, ಡೆಮೋಕ್ರಾಟ್‌ಗಳು ತಮ್ಮ ನಿಜ ಬಣ್ಣ ಬಯಲು ಮಾಡಿದ್ದಾರೆ ” ಎಂದು ಟ್ರಂಪ್‌ ತಮ್ಮ ಟ್ರುಥ್ ಸೋಶಿಯಲ್‌ ಮಿಡಿಯಾದಲ್ಲಿ ಪೋಸ್ಟ್‌ ಮಾಡಿದ್ದರು.

“ಮಮ್ದಾನಿ ಭಯಾನಕವಾಗಿ ಕಾಣುತ್ತಾರೆ, ಅವರ ಧ್ವನಿ ಗಡಸುತನದಿಂದ ಕೂಡಿದೆ, ಅವರು ತುಂಬಾ ಬುದ್ಧಿವಂತರಲ್ಲ. ಆದರೆ, ಡೆಮೊಕ್ರಾಟ್‌ಗಳು ಇಂತಹವರನ್ನು ಬೆಂಬಲಿಸುತ್ತಿದ್ದಾರೆ” ಎಂದು ಟ್ರಂಪ್‌ ತೀವ್ರ ಅಸಮಾಧಾನ ಹೊರಹಾಕಿದ್ದರು.

ಭಾರತದ ಪ್ರಖ್ಯಾತ ಸಿನಿಮಾ ನಿರ್ಮಾಪಕಿ ಮೀರಾ ನಾಯರ್ ಮತ್ತು ಭಾರತೀಯ ಮೂಲದ ಉಗಾಂಡಾದ ಮಾರ್ಕ್ಸ್‌ವಾದಿ ವಿದ್ವಾಂಸ ಮಹಮೂದ್ ಮಮ್ದಾನಿ ಅವರ ಮಗನಾಗಿರುವ ಝೊಹ್ರಾನ್ ಮಮ್ದಾನಿ, 1991ರಲ್ಲಿ ಆಫ್ರಿಕಾದ ಉಗಾಂಡದಲ್ಲಿ ಜನಿಸಿದವರು. ನಂತರ ಅವರು ಅಮೆರಿಕದ ನ್ಯೂಯಾರ್ಕ್ ನಗರದಲ್ಲಾಗಿದೆ ಬೆಳೆದದ್ದು.

ಮಮ್ದಾನಿ ಅವರ ರಾಜಕೀಯ ಜೀವನ 2018ರಲ್ಲಿ ಆರಂಭವಾಯಿತು. ಆದರೆ, ಆ ವರ್ಷ ನ್ಯೂಯಾರ್ಕ್ ರಾಜ್ಯ ಸಭೆಯ ಪ್ರಾಥಮಿಕ ಚುನಾವಣೆಯಲ್ಲಿ ಅವರು ಸೋತರು. 2020ರಲ್ಲಿ ಡೆಮಾಕ್ರಟಿಕ್ ಸೋಷಲಿಸ್ಟ್ಸ್ ಆಫ್ ಅಮೆರಿಕ (ಡಿಎಸ್‌ಎ) ಬೆಂಬಲದೊಂದಿಗೆ ಅದೇ ಕ್ಷೇತ್ರದಿಂದ ಮತ್ತೊಮ್ಮೆ ಸ್ಪರ್ಧಿಸಿ, ಪ್ರಾಥಮಿಕ ಚುನಾವಣೆಯಲ್ಲಿ ಶೇಕಡ 55ರಷ್ಟು ಮತ ಪಡೆದು ಗೆದ್ದರು. ನಂತರ ಸಾರ್ವತ್ರಿಕ ಚುನಾವಣೆಯಲ್ಲಿ (ಜನರಲ್ ಎಲೆಕ್ಷನ್‌) ಶೇಕಡ 80ಕ್ಕಿಂತ ಹೆಚ್ಚು ಮತಗಳನ್ನು ಪಡೆದು ಗೆಲ್ಲುವ ಮೂಲಕ ಕ್ವೀನ್ಸ್‌ನ 36ನೇ ಜಿಲ್ಲೆಯ ವಿಧಾನಸಭಾ ಸದಸ್ಯರಾದರು.

2024ರ ಡಿಸೆಂಬರ್‌ನಲ್ಲಿ ಮೇಯರ್ ಚುನಾವಣೆಗೆ ಪ್ರಚಾರ ಆರಂಭಿಸಿದ ಮಮ್ದಾನಿ, ಜೂನ್ 2025ರ ಪ್ರಾಥಮಿಕ ಚುನಾವಣೆಯಲ್ಲಿ ಹಿಂದಿನ ಗವರ್ನರ್ ಆಂಡ್ರ್ಯೂ ಕ್ಯೂಮೋವನ್ನು ಶೇಕಡ 52ರಷ್ಟು ಮತಗಳ ಅಂತರದಿಂದ ಸೋಲಿಸಿದರು. ನವೆಂಬರ್ 4, 2025ರ ಸಾರ್ವವತ್ರಿಕ ಚುನಾವಣೆಯಲ್ಲಿ ಶೇಕಡ 50.2ರಷ್ಟು ಮತಗಳನ್ನು ಪಡೆದು ಕ್ಯೂಮೋವನ್ನು ಮತ್ತೆ ಸೋಲಿಸಿ, ನ್ಯೂಯಾರ್ಕ್‌ ನಗರದ ಮೊದಲ ಮುಸ್ಲಿಂ ಮತ್ತು 100 ವರ್ಷಗಳಲ್ಲಿ ಅತ್ಯಂತ ಕಿರಿಯ ಮೇಯರ್ ಆದರು.

2026ರ ಜನವರಿ 1ರಂದು ಅಧಿಕಾರ ಸ್ವೀಕರಿಸಲಿರುವ ಮಮ್ದಾನಿ, ತಳಹಂತದ ಧನಸಹಾಯ, ಯುವಕರ ಬೆಂಬಲ ಮತ್ತು ಟಿಕ್‌ ಟಾಕ್-ಆಧಾರಿತ ಪ್ರಚಾರದೊಂದಿಗೆ ಸೋಷಲಿಸ್ಟ್ ರಾಜಕಾರಣದ ಹೊಸ ಮುಖವಾಗಿ ಹೊರಹೊಮ್ಮಿದ್ದಾರೆ.

ಎಸ್‌ಐಆರ್‌ಗೆ ತೀವ್ರ ವಿರೋಧ : ಕೋಲ್ಕತ್ತಾದಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಿದ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...