Homeಕರ್ನಾಟಕಆಹಾರ-ಆರೋಗ್ಯ ಮತ್ತು ಸುರಕ್ಷತೆಗೆ ಮಾನದಂಡ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಆಹಾರ-ಆರೋಗ್ಯ ಮತ್ತು ಸುರಕ್ಷತೆಗೆ ಮಾನದಂಡ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

- Advertisement -
- Advertisement -

ಬೀದಿ ಬದಿ ವ್ಯಾಪಾರಿಗಳು ಹಾಗೂ ದೊಡ್ಡ-ದೊಡ್ಡ ರೆಸ್ಟೋರೆಂಟ್‌ಗಳು ಆರೋಗ್ಯ ಮತ್ತು ಸುರಕ್ಷತಾ ಮಾನದಂಡ ನಿಯಮಗಳನ್ನು ಚಾಚೂ ತಪ್ಪದೆ ಪಾಲಿಸಬೇಕು ಜೊತೆಗೆ, ನಿಯಮಗಳ ಕಟ್ಟುನಿಟ್ಟಿನ ಅನುಷ್ಠಾನದ ಬಗ್ಗೆ ನಿಗಾ ಇರಿಸುವುದಕ್ಕೆ ಸೂಕ್ತ ಕಾರ್ಯ ವಿಧಾನವೊಂದನ್ನು ರೂಪಿಸಬೇಕು’ ಎಂದು ಕರ್ನಾಟಕ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ಮಹತ್ವದ ನಿರ್ದೇಶನ ನೀಡಿದೆ. 

ದೊಡ್ಡ ರೆಸ್ಟೋರೆಂಟ್ ಆಗಿರಲಿ, ಸಣ್ಣ ರೆಸ್ಟೋರೆಂಟ್ ಆಗಿರಲಿ, ಆಹಾರ ಟ್ರಕ್ ಆಗಿರಲಿ ಅಥವಾ ಬೀದಿಯಲ್ಲಿ ಮಾರಾಟ ಮಾಡುವ ಸ್ಥಳವಾಗಲಿ, ಸೇವನೆಯ ಪ್ರತಿಯೊಂದು ಹಂತದಲ್ಲೂ ಆಹಾರ ಮತ್ತು ಆರೋಗ್ಯದ ಗುಣಮಟ್ಟವನ್ನು ಕಾಪಾಡಿಕೊಳ್ಳಲು ಪ್ರತ್ಯೇಕತೆಯನ್ನು ಅನುಸರಿಸಬೇಕು” ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ, ಕರ್ನಾಟಕ ಪ್ರದೇಶ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳ ಸಂಘ ಮತ್ತು ಬೃಹತ್ ಬೆಂಗಳೂರು ಹೋಟೆಲ್‌ಗಳ ಸಂಘ ಸಲ್ಲಿಸಿದ ಅರ್ಜಿಯನ್ನು ವಿಲೇವಾರಿ ಮಾಡುವಾಗ ಹೇಳಿದ್ದಾರೆ.  

‘ಕರ್ನಾಟಕ ಪ್ರದೇಶ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳ ಸಂಘ’ ದ ಗೌರವ ಕಾರ್ಯದರ್ಶಿ ನಾಗರಾಜ ಧನ್ಯ ಮತ್ತು ‘ಬೃಹತ್ ಬೆಂಗಳೂರು ಹೋಟೆಲ್‌ ಗಳ ಸಂಘ’ದ ಅಧ್ಯಕ್ಷ ಕೆ.ಎನ್. ವಾಸುದೇವ ಅಡಿಗ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ತೀರ್ಪು ನೀಡಿದೆ.

‘ಮನುಷ್ಯರ ಆರೋಗ್ಯಕ್ಕೆ ಎದುರಾಗುವ ಅಪಾಯಗಳ ಬಗ್ಗೆ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಕಾಯ್ದೆ-2006ರ ನಿಯಮಗಳ ಅಡಿಯಲ್ಲಿ ಸಣ್ಣ, ಮಧ್ಯಮ ಮತ್ತು ಬೃಹತ್ ರೆಸ್ಟೋರೆಂಟ್‌ಗಳಿಗೆ ತ್ರಿಪಕ್ಷೀಯ ಮಾರ್ಗಸೂಚಿಯೊಂದನ್ನು ರೂಪಿಸಬೇಕು’ ಎಂದೂ ನ್ಯಾಯಪೀಠ ಇದೇ ವೇಳೆ ಸರ್ಕಾರಕ್ಕೆ ಖಡಕ್ ತಾಕೀತು ಮಾಡಿದೆ.

‘ಅರ್ಜಿದಾರರು ಆಕ್ಷೇಪಿಸಿರುವ ನಿಬಂಧನೆಗಳನ್ನು ಅಸಂವಿಧಾನಿಕ ಎಂದು ನಿರ್ಣಯಿಸಿ ಅವುಗಳನ್ನು ರದ್ದುಗೊಳಿಸಲು ಯಾವುದೇ ಕಾರಣಗಳಿಲ್ಲ’ ಎಂದು ಸ್ಪಷ್ಟಪಡಿಸಿದೆ.

‘ಆಹಾರ ಸುರಕ್ಷತೆ ದೃಷ್ಟಿಯಿಂದ ನಿಯಮಗಳನ್ನು ರೂಪಿಸಿ, ಸೂಕ್ತ ಮಾರ್ಗಸೂಚಿಗಳನ್ನು ಹೊರಡಿಸಬೇಕು’ ಎಂದು ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೆ ನಿರ್ದೇಶನ ನೀಡಿತ್ತು. ಈ ಸಂಬಂಧ ಆಹಾರ ಸುರಕ್ಷಾ ಆಯುಕ್ತರು 2012ರ ಮಾರ್ಚ್ 13ರಂದು ಅಧಿಸೂಚನೆ ಹೊರಡಿಸಿದ್ದರು.

‘ಈ ಅಧಿಸೂಚನೆಯನ್ನು ರದ್ದುಪಡಿಸಬೇಕು’ ಎಂದು ಕೋರಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು. ‘ಆಹಾರ ಸುರಕ್ಷತೆ ಮತ್ತು ಮಾನದಂಡಗಳ ನಿಯಂತ್ರಣ, (ಪ್ಯಾಕೇಜಿಂಗ್ ಮತ್ತು ಲೇಬಲಿಂಗ್) ನಿಯಮಗಳು-2011, ಆಹಾರ ಸುರಕ್ಷತೆ ಮತ್ತು ಮಾನದಂಡಗಳು, ಆಹಾರ ಉತ್ಪನ್ನಗಳ ಮಾನದಂಡಗಳು ಮತ್ತು ಆಹಾರ ಸೇರ್ಪಡೆಗಳ ನಿಯಮಗಳು-2011 ಮತ್ತು ಆಹಾರ ಸುರಕ್ಷತೆ ಮತ್ತು ಪ್ರಮಾಣಿತ ಕಾಯ್ದೆ-2006ರ 50 ರಿಂದ 65 ರವರೆಗಿನ‌ ಕಲಂಗಳು ಅಸಾಂವಿಧಾನಿಕ’ ಎಂದು ಅರ್ಜಿದಾರರು ಆಕ್ಷೇಪಿಸಿದ್ದರು.

‘ಮಾನದಂಡಗಳನ್ನು ಅನ್ವಯಿಸಲು ನಮಗೆ ಸಾಧ್ಯವಿಲ್ಲ’ ಎಂದು ಅರ್ಜಿದಾರರಾದ ಹೋಟೆಲ್ ಸಂಘಗಳು ಪ್ರತಿಪಾದಿಸಿದ್ದವು.

ಈ ವಿಚಾರಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿರುವ ನ್ಯಾಯಮೂರ್ತಿ ನಾಗಪ್ರಸನ್ನ ಅವರು ಪ್ರಪಂಚದಾದ್ಯಂತ ವಿವಿಧ ದೇಶಗಳು ಅನುಸರಿಸುತ್ತಿರುವ ಆಹಾರ ಸುರಕ್ಷತಾ ಪದ್ಧತಿಗಳು ಮತ್ತು ಶಾಸನಗಳನ್ನು ನ್ಯಾಯಾಲಯವು ಪರಿಶೀಲಿಸಿದೆ ಮತ್ತು ಆಹಾರ ಸುರಕ್ಷತೆಯು ಸಾರ್ವಜನಿಕ ಆಡಳಿತದ ಅನಿವಾರ್ಯ ಆಧಾರಸ್ತಂಭವಾಗಿದೆ ಎಂದು ಹೇಳಿದ್ದಾರೆ. 

“ಪ್ರಪಂಚದಾದ್ಯಂತ ಇದೇ ರೀತಿಯ ಆಹಾರ ಸುರಕ್ಷತಾ ನಿಯಮವನ್ನು ಅನುಸರಿಸಿದರೆ, ಅರ್ಜಿದಾರರು ಅಥವಾ ಅವರ ಸದಸ್ಯರು ಅದನ್ನು ಅನುಸರಿಸುವುದಿಲ್ಲ ಎಂದು ಹೇಳಲಾಗುವುದಿಲ್ಲ” ಎಂದು ನ್ಯಾಯಮೂರ್ತಿ ನಾಗಪ್ರಸನ್ನ ಹೇಳಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...