Homeಮುಖಪುಟಹರಿಯಾಣ ಮತಗಳ್ಳತನ : ರಾಹುಲ್ ಗಾಂಧಿ ಮಾಡಿರುವ ಪ್ರಮುಖ ಆರೋಪಗಳೇನು?

ಹರಿಯಾಣ ಮತಗಳ್ಳತನ : ರಾಹುಲ್ ಗಾಂಧಿ ಮಾಡಿರುವ ಪ್ರಮುಖ ಆರೋಪಗಳೇನು?

- Advertisement -
- Advertisement -

ಕಾಂಗ್ರೆಸ್ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು ನವದೆಹಲಿಯ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಕಚೇರಿಯಲ್ಲಿ ಬುಧವಾರ (ನವೆಂಬರ್ 5, 2025) ಮಹತ್ವದ ಪತ್ರಿಕಾಗೋಷ್ಠಿ ನಡೆಸಿದ್ದು, 2024ರ ಅಕ್ಟೋಬರ್ ತಿಂಗಳಲ್ಲಿ ನಡೆದ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ದೊಡ್ಡ ಮಟ್ಟದ ‘ಮತಗಳ್ಳತನ’ ನಡೆದಿದೆ ಎಂದು ಆರೋಪ ಮಾಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ‘ಹೆಚ್‌ ಫೈಲ್ಸ್’ (ಹರಿಯಾಣ ಫೈಲ್ಸ್ ) ಎಂಬ ಶೀರ್ಷಿಕೆಯಲ್ಲಿ ತಮ್ಮ ಆರೋಪಕ್ಕೆ ಸಂಬಂಧಿಸಿದ ದಾಖಲೆಗಳನ್ನು ರಾಹುಲ್ ಗಾಂಧಿ ಬಿಡುಗಡೆ ಮಾಡಿದ್ದಾರೆ. ಡಿಜಿಟಲ್ ರೂಪದಲ್ಲಿ ವಿವರಣೆ ಕೊಟ್ಟಿದ್ದಾರೆ.

2024ರಲ್ಲಿ ಹರಿಯಾಣದಲ್ಲಿ ನಡೆದಿರುವುದು ಚುನಾವಣೆ ಅಲ್ಲ, ಬಿಜೆಪಿ ಮತ್ತು ಭಾರತೀಯ ಚುನಾವಣಾ ಆಯೋಗ (ಇಸಿಐ) ಜಂಟಿಯಾಗಿ ನಡೆಸಿದ ‘ಮತಗಳ್ಳತನ’. ಬಿಜೆಪಿ ಕಾಂಗ್ರೆಸ್ ವಿರುದ್ದ ಅಲ್ಪ ಮತದಿಂದ ಗೆದ್ದಿದ್ದರೂ, ದೊಡ್ಡ ಮಟ್ಟದ ವಂಚನೆ ನಡೆದಿದೆ. ಇದಕ್ಕಾಗಿ ‘ಕೇಂದ್ರೀಕೃತ ಕಾರ್ಯಾಚರಣೆ’ ನಡೆಸಲಾಗಿದೆ. ಮುಂಬವರುವ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಇದೇ ರೀತಿ ನಡೆಯಬಹುದು ಎಂದು ರಾಹುಲ್ ಗಾಂಧಿ ಎಚ್ಚರಿಕೆ ನೀಡಿದ್ದಾರೆ.

ಹರಿಯಾಣ ವಿಧಾನಸಭೆ ಚುನಾವಣೆಯ ಮತದಾನದ ಬಳಿಕ ಎಕ್ಸಿಟ್ ಪೋಲ್‌ಗಳು ಮತ್ತು ಒಪೀನಿಯನ್ ಪೋಲ್‌ಗಳು ಕಾಂಗ್ರೆಸ್‌ ಭರ್ಜರಿ ಜಯಗಳಿಸುವ ಮುನ್ಸೂಚನೆ ನೀಡಿತ್ತು. ಆದರೆ, ನಾವು ಕೇವಲ 8 ಪ್ರಮುಖ ಸ್ಥಾನಗಳಲ್ಲಿ 22,779 ಮತಗಳಿಂದ ಸೋತೆವು. ನಕಲಿ ಮತಗಳು ಮತ್ತು ವಂಚನೆಯ ಮೂಲಕ ಫಲಿತಾಂಶವನ್ನು ತಿರುಗಿಸಲಾಯಿತು ಎಂದು ಆರೋಪಿಸಿದ್ದಾರೆ. “ಜೆನ್‌ ಝೀ’ ಮತದಾರರೇ ನಿಮ್ಮ ಭವಿಷ್ಯವನ್ನು ಕದಿಯಲಾಗುತ್ತಿದೆ” ಎಂದು ಎಚ್ಚರಿಸಿದ್ದಾರೆ.

ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಒಟ್ಟು 25,41,144 ನಕಲಿ ಮತಗಳು ಚಲಾವಣೆಯಾಗಿವೆ. ಇದು ಹರಿಯಾಣದ ಒಟ್ಟು 2 ಕೋಟಿ ಮತದಾರರಲ್ಲಿ 12.5 ಶೇಕಡ ಆಗಿದೆ. ಎಂಟರಲ್ಲಿ ಒಂದು ನಕಲಿ ಮತ ಚಲಾವಣೆಯಾಗಿದೆ. ಮತದಾರರ ಪಟ್ಟಿ, ಮಾಹಿತಿ, ಫೋಟೋ ಮತ್ತು ಸಂಖ್ಯೆಗಳು ‘ನನ್ನ ಆರೋಪಗಳಿಗೆ ಅಲ್ಲಗಳೆಯಲಾಗದ ಸಾಕ್ಷಿಗಳಾಗಿವೆ’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಒಟ್ಟು 5.21 ಲಕ್ಷ ಹೆಸರುಗಳು ಮತದಾರರ ಪಟ್ಟಿಯಲ್ಲಿ ಒಂದಕ್ಕಿಂತ ಹೆಚ್ಚು ಬಾರಿ ಇದೆ. 1.24 ಲಕ್ಷ ಒಂದೇ ಫೋಟೋ ಇದೆ. ಸಾವಿರಾರು ಬಿಜೆಪಿ ಕಾರ್ಯಕರ್ತರು ಹರಿಯಾಣ ಮತ್ತು ಉತ್ತರ ಪ್ರದೇಶದಲ್ಲಿ ಎರಡೂ ಕಡೆ ಮತ ಹಾಕಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಅಸ್ಥಿತ್ವದಲ್ಲಿಯೇ ಇಲ್ಲದ 93,174 ಮತದಾರರ ವಿಳಾಸಗಳು ಪಟ್ಟಿಯಲ್ಲಿವೆ. ಮನೆ ಇಲ್ಲದವರ ಮನೆ ಸಂಖ್ಯೆ ಶೂನ್ಯ ಆಗಿರುತ್ತದೆ. ಆದರೆ, ಇಲ್ಲಿ ಮನೆ ಇಲ್ಲದವರು ಎಂದು ಉಲ್ಲೇಖಿಸಿ ನಕಲಿ ವಿಳಾಸಗಳನ್ನು ಸೇರಿಸಲಾಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಪರಿಶೀಲನೆ ಇಲ್ಲದೆ 19.26 ಲಕ್ಷ ಮತದಾರರನ್ನು ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ. ಒಬ್ಬ ಮತದಾರ 2 ಬೂತ್‌ಗಳಲ್ಲಿ 223 ಬಾರಿ ಕಾಣಿಸಿಕೊಂಡಿದ್ದಾರೆ. ಫಾರ್ಮ್ 6 (ಹೊಸ ಮತದಾರ ಸೇರ್ಪಡೆ) ಮತ್ತು ಫಾರ್ಮ್ 7 (ಅಳಿಸುವಿಕೆ) ದುರುಪಯೋಗವಾಗಿದೆ. ಇತರ ರಾಜ್ಯಗಳಿಂದ ನಕಲಿ ಲಾಗಿನ್‌ಗಳ ಮೂಲಕ ಕಾಂಗ್ರೆಸ್ ಮತಗಳನ್ನು ಅಳಿಸಲಾಗಿದೆ. ಪ್ರತ್ಯೇಕವಾಗಿ ಲೆಕ್ಕವಿಲ್ಲ, ಆದರೂ ಈ ಸಂಖ್ಯೆ 25 ಲಕ್ಷದ ಒಳಗೆಯಿದೆ ಎಂದು ವಿವರಿಸಿದ್ದಾರೆ.

ಬ್ರೆಝಿಲ್‌ನ ಮಾಡೆಲ್ ಒಬ್ಬರ ಫೋಟೋ. ಸೀಮಾ, ಸ್ವೀಟಿ, ಸರಸ್ವತಿ, ರಶ್ಮಿ, ವಿಮಲಾ ಮುಂತಾದ ವಿಭಿನ್ನ ಹೆಸರುಗಳಲ್ಲಿ ಹರಿಯಾಣದ ಮತದಾರರ ಪಟ್ಟಿಯಲ್ಲಿ ಹಲವು ಬಾರಿ ಕಾಣಿಸಿಕೊಂಡಿದೆ. ಇವರು ಹರಿಯಾಣದ 10 ವಿಭಿನ್ನ ಬೂತ್‌ಗಳಲ್ಲಿ 22 ಬಾರಿ ಮತ ಚಲಾಯಿಸಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಇತಿಹಾಸದಲ್ಲಿ ಮೊದಲ ಬಾರಿಗೆ ಅಂಚೆ ಮತಗಳು (ಸರ್ಕಾರಿ ನೌಕರರಿಂದ) ಭಾರೀ ಪ್ರಮಾಣದಲ್ಲಿ ಬಿಜೆಪಿಗೆ ಬಿದ್ದಿವೆ. ಇದು ಮತ್ತು ಬೂತ್ ಮತಗಳ ನಡುವೆ ದೊಡ್ಡ ವ್ಯತ್ಯಾಸ ಕಂಡು ಬಂದಿದೆ ಎಂದಿದ್ದಾರೆ.

ಚುನಾವಣಾ ಆಯೋಗ ಸಿಸಿಟಿವಿ ದೃಶ್ಯಗಳನ್ನು ನಾಶ ಮಾಡಿದೆ. ಡಿಜಿಟಲ್ ಮತದಾರ ಪಟ್ಟಿಗಳನ್ನು ಬಿಡುಗಡೆ ಮಾಡಿಲ್ಲ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಷಾ ಅವರೊಂದಿಗೆ ಸೇರಿ ಭಾರತೀಯ ಪ್ರಜಾಪ್ರಭುತ್ವವನ್ನು ನಾಶ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಮತಗಳ್ಳತನ ಕುರಿತು ಸ್ವತಂತ್ರ ತನಿಖೆ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ. ಚುನಾವಣಾ ಆಯೋಗ ಡೇಟಾವನ್ನು ಸಾರ್ವಜನಿಕ ಆಡಿಟ್‌ಗೆ ಬಿಡುಗಡೆ ಮಾಡುವಂತೆ ಮತ್ತು ಮತಗಳ್ಳತನದಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಚುನಾವಣಾ ಆಯೋಗ ಈ ಹಿಂದಿನಂತೆ ರಾಹುಲ್ ಗಾಂಧಿಯ ಆರೋಪಗಳನ್ನು ಆಧಾರರಹಿತ ಎಂದು ತಿರಸ್ಕರಿಸಿದೆ. ಯಾವುದೇ ಅಕ್ರಮದ ಬಗ್ಗೆ ಸಾಕ್ಷ್ಯ ಸಿಕ್ಕಿಲ್ಲ ಎಂದಿದೆ.

ಬ್ರೆಝಿಲ್ ಮಾಡೆಲ್ ಹರಿಯಾಣದಲ್ಲಿ 22 ಬಾರಿ ಮತ ಚಲಾಯಿಸಿದ್ದಾರೆ : ರಾಹುಲ್ ಗಾಂಧಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...